Homeಮುಖಪುಟಮಕ್ಕಳನ್ನು ಹೆರುವುದು ನೀವು, ಸರ್ಕಾರ ವೆಚ್ಚ ಭರಿಸಬೇಕಾ?: ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆ

ಮಕ್ಕಳನ್ನು ಹೆರುವುದು ನೀವು, ಸರ್ಕಾರ ವೆಚ್ಚ ಭರಿಸಬೇಕಾ?: ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಉತ್ತರ ಪ್ರದೇಶ ಸರ್ಕಾರ ಕಳೆದ ನವರಾತ್ರಿಯಿಂದ ಮಹಿಳೆಯರಿಗಾಗಿ ಮಿಷನ್ ಶಕ್ತಿ ಅಭಿಯಾನವನ್ನು ನಡೆಸುತ್ತಿದೆ. ಮಹಿಳಾ ಸಬಲೀಕರಣಕ್ಕೆ ಸಹಾಯಕವಾಗಲಿದೆ ಎಂದು ಹೇಳುತ್ತ ಹಲವಾರು ಕಾರ್ಯಕ್ರಮಗಳನ್ನು ನಡೆಸುತ್ತಿದೆ. ಆದರೆ ಇತ್ತ ಆಡಳಿತರೂಢ ಬಿಜೆಪಿ ಶಾಸಕ ರಮೇಶ್ ದಿವಾಕರ್, ಮಹಿಳೆಯರ ಬಗ್ಗೆ ನಾಲಿಗೆ ಹರಿಯಬಿಟ್ಟಿದ್ದುಮ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಶಾಲಾ ಶುಲ್ಕ ಮನ್ನಾ ಮಾಡಿ ಎಂದು ಮನವಿ ಮಾಡಲು ಹೋಗಿದ್ದ ಮಹಿಳೆಯರ ಬಗ್ಗೆ ಬಿಜೆಪಿ ಶಾಸಕ ರಮೇಶ್ ದಿವಾಕರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಕೆಲವು ಮಹಿಳೆಯರು ತಮ್ಮ ಮಕ್ಕಳ ಶುಲ್ಕವನ್ನು ಮನ್ನಾ ಮಾಡಲು ಶಾಸಕರ ಬಳಿಗೆ ಹೋಗಿದ್ದರು. ಆಗ “ನೀವು ಮಕ್ಕಳನ್ನು ಹೆರುತ್ತೀರಿ… ನಿಮ್ಮ ಮಕ್ಕಳ ಶುಲ್ಕವನ್ನು ಸರ್ಕಾರ ಭರಿಸಬೇಕೆ” ಎಂದು ಕೀಳುಮಟ್ಟದಲ್ಲಿ ಮಾತನಾಡಿದ್ದಾರೆ.

ಉತ್ತರ ಪ್ರದೇಶದ ಔರೈಯ ಎಂಬಲ್ಲಿ ಮಹಿಳೆಯರು ತಮ್ಮ ಮಕ್ಕಳ ಶಿಕ್ಷಣದ ಶುಲ್ಕ ಮನ್ನಾ ಮಾಡುವಂತೆ ತಮ್ಮ ಮನವಿಯನ್ನು ಬಿಜೆಪಿ ಶಾಸಕ ರಮೇಶ್ ದಿವಾಕರ್ ಅವರ ಮುಂದಿಡುತ್ತಾರೆ. ಈ ಸಂದರ್ಭದಲ್ಲಿ ತಮ್ಮ ಎಲ್ಲೆ ಮೀರಿ ಶಾಸಕರು ಮಹಿಳೆಯರ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ: “ಮಗಳು ಬೇರೊಬ್ಬರ ಸ್ವತ್ತು, ಕಳುಹಿಸಿ ಕೊಡಲಾಗುವುದು”: ವಿವಾದಾತ್ಮಕ ಟ್ವೀಟ್‌ಗೆ ಸ್ಪಷ್ಟನೆ ನೀಡಿದ ಸಚಿವ

ಶಾಸಕರು ಮತ್ತು ಮಹಿಳೆಯರ ನಡುವಿನ ಮಾತುಕತೆಯನ್ನು ಕೆಲವರು ವಿಡಿಯೋ ಚಿತ್ರಿಕರಣ ಮಾಡಿಕೊಂಡಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಈ ವಿಡಿಯೋ ವೈರಲ್ ಆದ ನಂತರ ಶಾಸಕರ ಹೇಳಿಕೆ ಜನರ ಗಮನಕ್ಕೆ ಬಂದಿದೆ. ಶಾಸಕ ರಮೇಶ್ ದಿವಾಕರ್‌ ವರ್ತನೆಗೆ ಜನರು ಆಕ್ರೋಶ ಹೊರಹಾಕಿದ್ದಾರೆ.

ಇಷ್ಟಕ್ಕೆ ಸುಮ್ಮನಾಗದ ಶಾಸಕ ರಮೇಶ್ ದಿವಾಕರ್‌ ಮಹಿಳೆಯರಿಗೆ ಬಿಟ್ಟಿ ಸಲಹೆಗಳನ್ನು ನೀಡಿದ್ದಾರೆ. ಮಕ್ಕಳನ್ನು ಖಾಸಗಿ ಶಾಲೆಗಳಿಂದ ಬಿಡಿಸಿ ಸರ್ಕಾರಿ ಶಾಲೆಗಳಿಗೆ ಕಳುಹಿಸಲು ತಿಳಿಸಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಉಚಿತ ಶಿಕ್ಷಣ ದೊರೆಯುತ್ತದೆ ಅಲ್ಲಿಗೆ ಕಳುಹಿಸಿ ಎಂದಿದ್ದಾರೆ.

ಮಹಿಳೆಯರು ಕೂಡ ನಾವು ನಿಮಗೆ ಮತ ನೀಡಿ ಆಯ್ಕೆ ಮಾಡಿದ್ದೇವೆ. ನಿಮ್ಮ ಮಾತುಗಳು ಸರಿಯಾಗಿಲ್ಲ ಎಂದು ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸರ್ಕಾರಿ ಶಾಲೆಗಳನ್ನು ಮೊದಲು ಚೆನ್ನಾಗಿ ಮಾಡಿ, ನಂತರ ನಮಗೆ ಸಲಹೆ ನೀಡಿ ಎಂದು ಆಗ್ರಹಿಸಿದ್ದಾರೆ. ಸದ್ಯಕ್ಕೆ ಈ ಬಗ್ಗೆ ಶಾಸಕರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಅವರ ಈ ವಿಡಿಯೋ ವೈರಲ್ ಆಗುತ್ತಿದೆ.

ಉತ್ತರ ಪ್ರದೇಶದ ಸರ್ಕಾರಿ ಶಾಲೆಗಳ ಬಗ್ಗೆ ಕಳೆದ ಡಿಸೆಂಬರ್‌ ತಿಂಗಳಲ್ಲಿ ಆಮ್ ಆದ್ಮಿ ಪಾರ್ಟಿ  #SelfieWithSarkaariSchool ಅಭಿಯಾನ ಆರಂಭಿಸಿ, ಉತ್ತರ ಪ್ರದೇಶದ ಶಾಲೆಗಳ ಚಿತ್ರಣವನ್ನು ಬಯಲಿಗೆಳೆದಿತ್ತು. ಉತ್ತರ ಪ್ರದೇಶದ ಪಾಳುಬಿದ್ದ ಶಾಲೆಗಳು, ದನದ ಕೊಟ್ಟಿಗೆಗಳಾಗಿರುವ ಶಾಲೆಗಳು, ಸ್ವಚ್ಛತೆ ಮಾಯವಾಗಿರುವ, ಸುಣ್ಣ-ಬಣ್ಣ ಕಾಣದೇ ಅದೇಷ್ಟೋ ವರ್ಷಗಳಾಗಿರುವ ಶಾಲೆಗಳ ಚಿತ್ರಗಳನ್ನು ಈ ಅಭಿಯಾನದಲ್ಲಿ ಹಂಚಿಕೊಳ್ಳಲಾಗಿತ್ತು.


ಇದನ್ನೂ ಓದಿ: ಗುಜರಾತ್ ಮಾಡೆಲ್: ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು & ಕೊಬ್ಬುತ್ತಿರುವ ಉದ್ಯಮಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...