Homeಅಂಕಣಗಳುನಿಮಗೆ ಭೀಮ್ ಆರ್ಮಿ ಗೊತ್ತಿರಬಹುದು; ಭೀಮ್ ಪಾಠಶಾಲಾ?

ನಿಮಗೆ ಭೀಮ್ ಆರ್ಮಿ ಗೊತ್ತಿರಬಹುದು; ಭೀಮ್ ಪಾಠಶಾಲಾ?

- Advertisement -
- Advertisement -

ಚಂದ್ರಶೇಖರ್ ಆಜಾದ್ ‘ರಾವಣ್’, ಯಾವುದೇ ಬಾಲಿವುಡ್ ಹೀರೋಗೂ ಕಡಿಮೆಯಿಲ್ಲದಂತೆ ಸಂಚಲನ ಮೂಡಿಸಿರುವ ಹೆಸರುಗಳಲ್ಲೊಂದು. ಈವರೆಗೆ ರಾಮಾಯಣದ ರಾವಣನ ಪೌರಾಣಿಕ ಪಾತ್ರವನ್ನು ಬಿಟ್ಟು ಆ ಹೆಸರಿನ ಇನ್ಯಾವ ವ್ಯಕ್ತಿಯ ಬಗ್ಗೆಯೂ ಗೊತ್ತಿಲ್ಲದವರೂ ಕೂಡಾ, ಕಳೆದ ಕೆಲವು ದಿನಗಳಲ್ಲಿ ಮಾಧ್ಯಮಗಳು ಪದೇ ಪದೇ ಪ್ರಸ್ತಾಪಿಸಿದ ಈ ಹೆಸರಿನ ವ್ಯಕ್ತಿಯ ಬಗ್ಗೆ ಕುತೂಹಲದಿಂದ ಪರಿಶೀಲಿಸುವಂತಾಯಿತು. ವಿವರಗಳನ್ನು ಕೆದಕಿದವರಿಗೆ ಕಂಡಿದ್ದು ಚಂದ್ರಶೇಖರ್ ಅಥವಾ ರಾವಣ್ ಎಂಬ ಪಶ್ಚಿಮ ಉತ್ತರ ಪ್ರದೇಶದ ದಲಿತ ಯುವ ವಕೀಲನೊಬ್ಬನು ಹೊಸ ತಲೆಮಾರನ್ನು ಪ್ರಭಾವಿಸಿದ ರೀತಿ; ವಿಶೇಷವಾಗಿ ಈತ, ವಿನಯ್ ರತನ್‍ಸಿಂಗ್ ಎಂಬ ಮತ್ತೊಬ್ಬ ದಲಿತ ಯುವ ವಕೀಲನೊಂದಿಗೆ ಸೇರಿ ಕಟ್ಟಿದ ‘ಭೀಮ್ ಆರ್ಮಿ’ ತಂಡವು ದಲಿತ ಯುವಕರಲ್ಲಿ ಮಿಲಿಟೆನ್ಸಿಯನ್ನು ಹುಟ್ಟುಹಾಕಿ ಯಾರಿಗೂ ತಲೆಬಾಗಿ ಬದುಕಬೇಡಿ ಎಂಬ ಸಂದೇಶ; ನಂತರ ಆಜಾದ್ ಮೇಲೆ ಸುಳ್ಳು ಕೇಸುಗಳನ್ನು ಜಡಿದು ಜೈಲುಪಾಲು ಮಾಡಿ ಇವೆಲ್ಲವನ್ನೂ ಹತ್ತಿಕ್ಕಲು ಉತ್ತರ ಪ್ರದೇಶದ ಸರ್ಕಾರ ನಡೆಸಿದ ವಿಫಲ ಯತ್ನ ಮತ್ತು ನಂತರ ಅನಿವಾರ್ಯವಾಗಿ ಈ ಸೆಪ್ಟೆಂಬರ್ 13ರ ಮಧ್ಯರಾತ್ರಿ ಚಂದ್ರಶೇಖರ್ ಆಜಾದ್ ರ  ಬಿಡುಗಡೆ!

ಇವೆಲ್ಲವೂ ಕೇವಲ 30ರ ಆಸುಪಾಸಿನಲ್ಲಿರುವ, ದಲಿತರ ಪರವಾದ ಖಚಿತವಾದ ರಾಜಕೀಯ ನಿಲುವುಗಳನ್ನುಳ್ಳ, ಪ್ರಖರ ವಾಗ್ಮಿಯೂ ಹೋರಾಟಗಾರನೂ ಆದ ಈ ಯುವಕನನ್ನು ಭಾರತದ ಬಹುಪಾಲು ದಲಿತ ಮತ್ತು ಚಿಂತನಶೀಲ ಯುವಕರ ಕಣ್ಮಣಿಯಾಗಿಸಿದೆ. ತಮ್ಮ ಸಮುದಾಯವನ್ನು ಸುದೀರ್ಘ ಕಾಲದಿಂದ ಕಾಡುತ್ತಾ ಬಂದಿರುವ ಉತ್ತರ ಪ್ರದೇಶದ ಬಲಾಢ್ಯ ಠಾಕೂರ್ ಸಮುದಾಯದ ರೀತಿಯಂತೆ ಉದ್ದೇಶಪೂರ್ವಕವಾಗಿಯೇ ಮೇಲೆತ್ತಿ ತಿರುಗಿಸಿದ ಮೀಸೆಯನ್ನೂ, ಬಲಗೈಗೆ ಧರಿಸುವ ದಪ್ಪ ಕಡಗವನ್ನೂ ತಮ್ಮ ವಿಶಿಷ್ಟ (ಸಿಗ್ನೇಚರ್) ಶೈಲಿಯಾಗಿಸಿಕೊಂಡಿರುವ ಭೀಮ್ ಆರ್ಮಿಯ ಹೋರಾಟಗಾರರು ಸದ್ಯಕ್ಕೆ ಸಮಾನತೆಯನ್ನು ಕನಸುವ ಯುವಕರ ಫ್ಯಾಶನ್ ಐಕಾನ್‍ಗಳು ಕೂಡಾ ಹೌದು!

ಚಂದ್ರಶೇಖರ್ ಆಜಾದ್ ‘ರಾವಣ್’ ಭೀಮ್ ಆರ್ಮಿಯನ್ನು ಆರಂಭಿಸಿದ್ದು 2015ರ ಜುಲೈನಲ್ಲಿ. ‘ರಾವಣ್’ ಎಂಬುದು ಖಳನಾಯಕರಂತೆ ಬಿಂಬಿಸಲ್ಪಟ್ಟ ಈ ದೇಶದ ಮೂಲನಿವಾಸಿ ಹೋರಾಟಗಾರರ ನಿಜವಾದ ಇತಿಹಾಸವನ್ನು ಎತ್ತಿತೋರುವುದಕ್ಕಾಗಿ ಬೇಕೆಂದೇ ಇಟ್ಟುಕೊಂಡ ಹೆಸರು. ಠಾಕೂರರ ಉಸಿರುಕಟ್ಟಿಸುವ ದಮನ ದಬ್ಬಾಳಿಕೆಗಳ ನಡುವೆ ತಲೆಯೆತ್ತಲು ಹೆಣಗುತ್ತಿದ್ದ ಸಹರಾನ್‍ಪುರದ ದಲಿತ ಸಮುದಾಯದೊಳಕ್ಕೆ ಅಂಬೇಡ್ಕರ್ ಚಿಂತನೆಗಳೊಂದಿಗೆ ಅವರ ತಂಡ ನುಗ್ಗಿತು. ಅತ್ಯಂತ ಸಣ್ಣ ಅವಧಿಯಲ್ಲಿ ಜನಬೆಂಬಲವನ್ನೂ, ಜನಪ್ರಿಯತೆಯನ್ನೂ ಗಳಿಸಿದ ಆಜಾದ್ ರ ಮಿಂಚಿನ ವೇಗವು ದಲಿತ ಸಮುದಾಯದಲ್ಲಿ ಐಕ್ಯತೆಯನ್ನು ತಂದಿತ್ತು. ಇದು ಬಲಾಢ್ಯ ಸಮುದಾಯಗಳ ಫ್ಯೂಡಲ್ ದೊರೆಗಳ ಮತ್ತು ಉತ್ತರ ಪ್ರದೇಶದ ಸರಕಾರಗಳ (ಈಗಿನ ಮತ್ತು ಹಿಂದಿನ) ನಿದ್ದೆ ಕೆಡಿಸಿತ್ತು. ಆದ್ದರಿಂದಲೇ, ಸುಮಾರು 24 ಗಂಭೀರ ದೋಷಾರೋಪಗಳನ್ನು ಅವರ ಮೇಲೆ ಹೊರಿಸಿತು. ಅದು ಸಾಲದೆಂದು ದೇಶದ ಭದ್ರತೆಗೇ ಅಪಾಯವಾಗುವಂತಹ ಕೆಲಸ ಮಾಡಿದ್ದಾನೆಂದು ಆರೋಪಿಸುತ್ತಾ ‘ರಾಷ್ಟ್ರೀಯ ಭದ್ರತಾ ಕಾಯ್ದೆ’ಯ ಅತಿ ಗಂಭೀರ ಆರೋಪಗಳನ್ನೂ ಬಳಸಿ 2017ರಲ್ಲಿ ಅವರನ್ನು ಜೈಲಿಗೆ ದಬ್ಬಲಾಯಿತು.

ಆದರೆ, ಈ ಸುದ್ದಿಗಳ ನಡುವೆ ಭೀಮ್ ಆರ್ಮಿಯು ತನ್ನ ಹುಟ್ಟಿನೊಂದಿಗೇನೆ ಆರಂಭಿಸಿದ ‘ಭೀಮ್ ಪಾಠ್‍ಶಾಲಾ’ಗಳ ಯಶಸ್ಸಿನ ಕಥೆ ಸ್ವಲ್ಪ ಮಸುಕಾದಂತಾಗಿದೆ. ಮೊಟ್ಟಮೊದಲ ಭೀಮ್ ಪಾಠ್‍ಶಾಲಾ 2015ರಲ್ಲಿ ಸಹರನ್‍ಪುರದ ಫತೇಪುರ್ ಭಾಡೋ ಗ್ರಾಮದಲ್ಲಿ ಆರಂಭವಾಯಿತು. ಭೀಮ್ ಆರ್ಮಿ (ಈ ಸಂಘಟನೆಯ ಪೂರ್ಣ ಹೆಸರು ‘ಭೀಮ್ ಆರ್ಮಿ ಭಾರತ್ ಏಕ್ತಾ ಮಿಶನ್’)ಯ ಸಂಸ್ಥಾಪಕರಾದ ಆಜಾದ್ ಮತ್ತು ವಿನಯ್ ರತನ್‍ರಿಗೆ ಮತ್ತು ಅವರ ಜೊತೆಗಾರರಿಗೆ ಇಂತಹ ಶಾಲೆಗಳ ಅಗತ್ಯವೇನೆಂಬುದು ನಿಚ್ಚಳವಾಗಿ ತಿಳಿದಿತ್ತು.
‘ಯಾವುದೇ ಮಗುವಿನ ಸರ್ವತೋಮುಖ ಬೆಳವಣಿಗೆಗೆ ಮೊದಲ ಹತ್ತು ವರ್ಷಗಳಲ್ಲಿ ಆ ಮಗು ಏನು ಕಲಿಯುತ್ತದೆಂಬುದು ಬಹಳ ಮುಖ್ಯ. ಆದರೆ ಉತ್ತರ ಪ್ರದೇಶದ ಸರ್ಕಾರಿ ಶಾಲೆಗಳು ಅಸಹನೀಯವಾದ ಸ್ಥಿತಿಯಲ್ಲಿವೆ. ಬಹುಪಾಲು ದಲಿತ ಸಮುದಾಯ ಖಾಸಗಿ ಶಾಲೆಗಳ ದುಬಾರಿ ಶುಲ್ಕವನ್ನು ಭರಿಸುವ ಸ್ಥಿತಿಯಲ್ಲಿಲ್ಲ; ಒಂದು ವೇಳೆ ಹಾಗೆ ಖಾಸಗಿ ಶಾಲೆಗಳಿಗೆ ಕಳಿಸಿದರೂ ಜಾತಿಯ ಕಾರಣದಿಂದಾಗಿ ಅಲ್ಲಿ ಅವರಿಗೆ ಸಮಾನ ಗೌರವ ಅಥವಾ ಕಲಿಕೆ ಸಿಗುವುದಿಲ್ಲವೆಂಬುದು ಗೊತ್ತೇ ಇದೆ. ಬಾಬಾಸಾಹೇಬರು ಶಿಕ್ಷಣಕ್ಕೆ ಪ್ರಮುಖ ಸ್ಥಾನ ಕೊಟ್ಟಿದ್ದು ಸುಮ್ಮನೇ ಅಲ್ಲ. ಅದಕ್ಕಾಗಿಯೇ ನಮ್ಮ ಸಂಘಟನೆಯ ಮೊದಲ ಮತ್ತು ಆದ್ಯತೆಯ ಕೆಲಸವಾಗಿ ನಾವು ಆರಂಭಿಸಿದ್ದು ಉಚಿತವಾಗಿ ಉತ್ತಮ ಕಲಿಕೆಯನ್ನು ರೂಪಿಸುವ ‘ಭೀಮ್ ಪಾಠ್‍ಶಾಲಾ’ಗಳನ್ನು’ ಎನ್ನುತ್ತಾರೆ ಸಿಂಗ್.

ಈ ಶಾಲೆಗಳಲ್ಲಿ ಮಕ್ಕಳು ಪಠ್ಯ ವಿಷಯಗಳಾದ ಗಣಿತ, ವಿಜ್ಞಾನ, ಇಂಗ್ಲೀಷ್ ಮೊದಲಾದವುಗಳ ಜೊತೆಗೆ, ಇತಿಹಾಸದ ಪುಟಗಳಲ್ಲಿ ಹೂತುಹೋಗಿರುವ ದಲಿತ ಸಮುದಾಯದ ಚರಿತ್ರೆಯನ್ನೂ, ಶೋಷಿತರ ವಿಮೋಚನೆಗಾಗಿ ಶ್ರಮಿಸಿದ ಮಹಾನ್ ವ್ಯಕ್ತಿಗಳ ಜೀವನ ಚಿತ್ರಣಗಳನ್ನೂ, ಅಂಬೇಡ್ಕರ್‍ರವರ ಚಿಂತನೆಗಳನ್ನೂ ಕಲಿಯುತ್ತಾರೆ. ಆರಂಭದಲ್ಲಿ ಸಹರನ್‍ಪುರದ ಸುತ್ತಲಿನ ಪ್ರದೇಶದಲ್ಲಷ್ಟೇ ಸಂಜೆಯ ಕೋಚಿಂಗ್ ತರಗತಿಗಳಾಗಿ 2 ಗಂಟೆಗಳ ಕಾಲ ನಡೆಯುತ್ತಿದ್ದ ಈ ಶಾಲೆಗಳು ಬಹಳ ವೇಗವಾಗಿ ಮೀರಟ್, ಮುಜಫ್ಫರ್‍ನಗರ್, ಆಗ್ರಾ ಮೊದಲಾದೆಡೆಗಳಿಗೂ ವ್ಯಾಪಿಸಿದವು. ಇಂದು ಸುಮಾರು 350ರಷ್ಟು ‘ಭೀಮ್ ಪಾಠ್‍ಶಾಲಾ’ಗಳು ಕಾರ್ಯನಿರ್ವಹಿಸುತ್ತಿದ್ದು ಸಾವಿರದ ಸಂಖ್ಯೆಯನ್ನು ಮುಟ್ಟುವ ದಿಕ್ಕಿನಲ್ಲಿ ಮುನ್ನಡೆಯುತ್ತಿವೆ.

ಮೊದಲ ಶಾಲೆ ಫತೇಪುರದಲ್ಲಿ ಆರಂಭವಾಗುತ್ತಿದ್ದಂತೆ ಬುಢಖೇರಾದ ದಲಿತ ಯುವಕರಿಗೆ ತಮ್ಮಲ್ಲೂ ಇಂತಹ ಶಾಲೆ ಬೇಕೆಂದೆನಿಸಿತು. ನಿವೃತ್ತ ಶಿಕ್ಷಕ ಕನ್ವರ್ ಪಾಲ್ ಸಿಂಗ್‍ರವರ ಮನೆಯೆದುರಿನ ಖಾಲಿ ಬಯಲೇ ಶಾಲಾ ಆವರಣವಾದರೆ ಆಗಷ್ಟೇ 10ನೇ ತರಗತಿ ಮುಗಿಸಿದ್ದ 15 ವರ್ಷದ ಸಿಂಗ್‍ರವರ ಕಿರಿಯ ಪುತ್ರಿ ನಿಶಾ ಆ ಭೀಮ್ ಶಾಲೆಯ ಮೊದಲ ಬೋಧಕಿಯಾದಳು. ಮೊದಲ ದಿನ 30 ಇದ್ದ ಮಕ್ಕಳ ಸಂಖ್ಯೆ ಕೇವಲ 2 ವಾರಗಳಲ್ಲಿ 100ರ ಸಂಖ್ಯೆಯನ್ನೂ ದಾಟಿ ಹಿಗ್ಗುತ್ತಾ ಹೋಗಿ ಶಾಲೆಯನ್ನು ಅಂಬೇಡ್ಕರ್ ಭವನಕ್ಕೆ ಸ್ಥಳಾಂತರಿಸಬೇಕಾದ ಅನಿವಾರ್ಯತೆ ಸೃಷ್ಟಿಸಿತು. ಈಗ ಶಾಲೆಯಲ್ಲಿ 200ಕ್ಕೂ ಹೆಚ್ಚು ಮಕ್ಕಳು 1-4 ಹಾಗೂ 5-9ರವರೆಗಿನ ವಿಭಾಗಗಳಲ್ಲಿ ನಿರಂತರ ಕಲಿಕೆಯಲ್ಲಿದ್ದಾರೆ.

ಇದೇ ಶಾಲೆಯ ಹಿರಿಯ ವಿದ್ಯಾರ್ಥಿನಿ ರಚನಾ, ತನ್ನ ಔಪಚಾರಿಕ ಖಾಸಗಿ ಶಾಲೆಯಲ್ಲಿ ಅತ್ಯುತ್ತಮ ಅಂಕಗಳೊಂದಿಗೆ ತರಗತಿಗೆ ಮೊದಲ ಸ್ಥಾನ ಗಳಿಸಿ ಆಜಾದ್ ರವರಿಂದ ಬಹುಮಾನ ಪಡೆದಿರುವುದನ್ನು ಬಹಳ ಹೆಮ್ಮೆಯಿಂದ ಹೇಳಿಕೊಳ್ಳುತ್ತಾಳೆ. ರಚನಾ ಕೂಲಿಕಾರ್ಮಿಕರಾದ ತನ್ನ ತಂದೆತಾಯಿಯರ 7 ಮಂದಿ ಮಕ್ಕಳಲ್ಲಿ ಒಬ್ಬಳು. ‘ಭೀಮ್ ಆರ್ಮಿಯೊಂದಿಗೆ ಗುರುತಿಸಿಕೊಂಡಿರುವುದರಿಂದ ನಾವು ದಲಿತ ಹೆಣ್ಣುಮಕ್ಕಳು ಇಂದು ಲೈಂಗಿಕ ದೌರ್ಜನ್ಯಗಳ ಭೀತಿಯಿಲ್ಲದೆ ಸೈಕಲ್ ತುಳಿದುಕೊಂಡು ಶಾಲೆಗೆ ಹೋಗಲು ಸಾಧ್ಯವಾಗುತ್ತಿದೆ. ನಾನು ಜೀವಶಾಸ್ತ್ರ ಕಲಿತು ಮುಂದೆ ವೈದ್ಯೆಯಾಗಬೇಕು, ನೊಂದವರಿಗಾಗಿ ಉಚಿತ ಚಿಕಿತ್ಸಾಲಯಗಳನ್ನು ತೆರೆಯಬೇಕು’ ಎಂಬ ಕನಸು ಕಾಣುವುದು ರಚನಾಗೆ ಈಗ ಸಾಧ್ಯವಾಗಿದೆ. ಆಕೆಯು ಭೀಮಶಾಲೆಯ ಮತ್ತೊಬ್ಬ ಸ್ವಯಂಸೇವಕ ಬೋಧಕಿ!

ಈ ಅನೌಪಚಾರಿಕ ಶಾಲೆಗಳು ದಲಿತ ಸ್ವಾಭಿಮಾನದ, ಅರಿವಿನ ಮತ್ತು ಐಕ್ಯತೆಯ ಪ್ರತೀಕಗಳಾಗಿ ಛಾಪು ಮೂಡಿಸುತ್ತಾ ವಿಸ್ತರಣೆಗೊಳ್ಳುತ್ತಲೇ ಹೋಗುತ್ತಿವೆ.
ಶೋಷಿತರ ಸ್ವಾಭಿಮಾನದ ಚಳವಳಿಗಳಿಗೆ ಶಿಕ್ಷಣವು ಕೇವಲ ಅನ್ನದ ಮಾರ್ಗ ಮಾತ್ರವಲ್ಲ; ಸಮಾಜ ಪರಿವರ್ತನೆಯ ಮಾರ್ಗ. ಶೋಷಿತ ಸಮುದಾಯಗಳು ತಮ್ಮದೇ ಆದ ಸಾಮಾಜಿಕ ಸಾಂಸ್ಕøತಿಕ ಗುರುತನ್ನು ಗಳಿಸಿಕೊಳ್ಳುವ ಮತ್ತು ಉಳಿಸಿಕೊಳ್ಳುವ ಮಾರ್ಗ. ಆದ್ದರಿಂದಲೇ ರಷ್ಯಾ ಕ್ರಾಂತಿಯ ನಂತರ ಲೆನಿನ್ ತಮ್ಮ ಭಾಷಣವೊಂದರಲ್ಲಿ “ರಷ್ಯಾದ ದುಡಿಯುವ ಜನತೆಯ ಶೇ.90ಕ್ಕಿಂತ ಹೆಚ್ಚು ಮಂದಿ ಶಿಕ್ಷಣ ಪಡೆದಿಲ್ಲ; ಆದರೆ, ಬಂಡವಾಳಶಾಹಿಗಳ ಮೇಲೆ ವಿಜಯ ಸಾಧಿಸಲು ತಮಗೆ ಅದು ಬೇಕೇಬೇಕು ಎಂಬುದನ್ನು ಅರಿತಿದ್ದಾರೆ. ಇಲ್ಲಿ ಶಿಕ್ಷಣ ಕೇವಲ ಅಕ್ಷರ ಜ್ಞಾನವಲ್ಲ, ಹೊಸ ಮಾನವರ ಹುಟ್ಟು” ಎನ್ನುತ್ತಾರೆ. ಇದೇ ಮಾದರಿಯಲ್ಲಿ ಭೀಮ್ ಪಾಠಶಾಲೆಯ ಪ್ರಯೋಗ ಏಕಕಾಲದಲ್ಲಿ ರಚನಾತ್ಮಕವಾದದ್ದೂ ಹಾಗೂ ಅತ್ಯಂತ ರಾಜಕೀಯವಾದದ್ದೂ ಹೌದು.

ಛತ್ತೀಸ್‍ಗಢದಲ್ಲಿ ಹೋರಾಟ ಮತ್ತು ರಚನಾತ್ಮಕ ಕೆಲಸಗಳು ಜೊತೆಜೊತೆಯಾಗಿ ಸಾಗಬೇಕಿರುವ ಕುರಿತು ಛತ್ತೀಸ್‍ಗಡ ಮುಕ್ತಿ ಮೋರ್ಚಾದ ಸಂಸ್ಥಾಪಕ ಶಂಕರ್ ಗುಹಾ ನಿಯೋಗಿ ‘ಸಂಘರ್ಷ್ ಔರ್ ನಿರ್ಮಾಣ್’ ಎಂದು ಸೂತ್ರೀಕರಿಸಿದ್ದರು. ಶಹೀದ್ ಶಾಲೆಗಳು ಮತ್ತು ಶಹೀದ್ ಆಸ್ಪತ್ರೆಗಳು ಇಂದಿಗೂ ಮಾದರಿ ಸಂಸ್ಥೆಗಳಾಗಿವೆ. ಮಹಾರಾಷ್ಟ್ರದಲ್ಲಿ ಅನೂಪ್ ವಾರ್ಧಾರವರು ನಡೆಸುತ್ತಿರುವ ನಳಂದ ಅಕಾಡೆಮಿಯ ಪ್ರಯೋಗದ ಕುರಿತು, ಅವರ ಸಂದರ್ಶನದ ಮೂಲಕ ಓದುಗರಿಗೆ ‘ಪತ್ರಿಕೆ’ ತಿಳಿಸಿತ್ತು.

ಬಹುಶಃ ಸಂಘರ್ಷ್ ಔರ್ ನಿರ್ಮಾಣ್‍ಗಳು ಇಂದು ಹಿಂದೆಂದಿಗಿಂತಲೂ ಹೆಚ್ಚು ಪ್ರಸ್ತುತವಾಗಿವೆ. ಈ ತಲೆಮಾರಿನ ಯುವಜನರನ್ನು ಒಳಗೊಂಡು, ಮಕ್ಕಳು ಕುಟುಂಬ ಎಲ್ಲರನ್ನೂ ಜೊತೆಗೊಯ್ಯಬಲ್ಲ ಹೋರಾಟದ ಮಾದರಿಗಳು ಹೆಚ್ಚೆಚ್ಚು ಜನರನ್ನೂ ತಲುಪುತ್ತವೆ ಹಾಗೂ ಇದರ ಪ್ರಭಾವ ಹಾಗೂ ಪರಿಣಾಮ ದೂರಗಾಮಿಯಾದದ್ದೂ ಆಗಿರುತ್ತದೆ. ಇದನ್ನು ಭೀಮ್‍ಆರ್ಮಿ ತಂಡವು ಚೆನ್ನಾಗಿಯೇ ಮನಗಂಡಿದೆ. ಅವರಿಗೊಂದು ಜೈಭೀಮ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...