Homeಅಂಕಣಗಳುನಿಮಗೆ ಭೀಮ್ ಆರ್ಮಿ ಗೊತ್ತಿರಬಹುದು; ಭೀಮ್ ಪಾಠಶಾಲಾ?

ನಿಮಗೆ ಭೀಮ್ ಆರ್ಮಿ ಗೊತ್ತಿರಬಹುದು; ಭೀಮ್ ಪಾಠಶಾಲಾ?

- Advertisement -
- Advertisement -

ಚಂದ್ರಶೇಖರ್ ಆಜಾದ್ ‘ರಾವಣ್’, ಯಾವುದೇ ಬಾಲಿವುಡ್ ಹೀರೋಗೂ ಕಡಿಮೆಯಿಲ್ಲದಂತೆ ಸಂಚಲನ ಮೂಡಿಸಿರುವ ಹೆಸರುಗಳಲ್ಲೊಂದು. ಈವರೆಗೆ ರಾಮಾಯಣದ ರಾವಣನ ಪೌರಾಣಿಕ ಪಾತ್ರವನ್ನು ಬಿಟ್ಟು ಆ ಹೆಸರಿನ ಇನ್ಯಾವ ವ್ಯಕ್ತಿಯ ಬಗ್ಗೆಯೂ ಗೊತ್ತಿಲ್ಲದವರೂ ಕೂಡಾ, ಕಳೆದ ಕೆಲವು ದಿನಗಳಲ್ಲಿ ಮಾಧ್ಯಮಗಳು ಪದೇ ಪದೇ ಪ್ರಸ್ತಾಪಿಸಿದ ಈ ಹೆಸರಿನ ವ್ಯಕ್ತಿಯ ಬಗ್ಗೆ ಕುತೂಹಲದಿಂದ ಪರಿಶೀಲಿಸುವಂತಾಯಿತು. ವಿವರಗಳನ್ನು ಕೆದಕಿದವರಿಗೆ ಕಂಡಿದ್ದು ಚಂದ್ರಶೇಖರ್ ಅಥವಾ ರಾವಣ್ ಎಂಬ ಪಶ್ಚಿಮ ಉತ್ತರ ಪ್ರದೇಶದ ದಲಿತ ಯುವ ವಕೀಲನೊಬ್ಬನು ಹೊಸ ತಲೆಮಾರನ್ನು ಪ್ರಭಾವಿಸಿದ ರೀತಿ; ವಿಶೇಷವಾಗಿ ಈತ, ವಿನಯ್ ರತನ್‍ಸಿಂಗ್ ಎಂಬ ಮತ್ತೊಬ್ಬ ದಲಿತ ಯುವ ವಕೀಲನೊಂದಿಗೆ ಸೇರಿ ಕಟ್ಟಿದ ‘ಭೀಮ್ ಆರ್ಮಿ’ ತಂಡವು ದಲಿತ ಯುವಕರಲ್ಲಿ ಮಿಲಿಟೆನ್ಸಿಯನ್ನು ಹುಟ್ಟುಹಾಕಿ ಯಾರಿಗೂ ತಲೆಬಾಗಿ ಬದುಕಬೇಡಿ ಎಂಬ ಸಂದೇಶ; ನಂತರ ಆಜಾದ್ ಮೇಲೆ ಸುಳ್ಳು ಕೇಸುಗಳನ್ನು ಜಡಿದು ಜೈಲುಪಾಲು ಮಾಡಿ ಇವೆಲ್ಲವನ್ನೂ ಹತ್ತಿಕ್ಕಲು ಉತ್ತರ ಪ್ರದೇಶದ ಸರ್ಕಾರ ನಡೆಸಿದ ವಿಫಲ ಯತ್ನ ಮತ್ತು ನಂತರ ಅನಿವಾರ್ಯವಾಗಿ ಈ ಸೆಪ್ಟೆಂಬರ್ 13ರ ಮಧ್ಯರಾತ್ರಿ ಚಂದ್ರಶೇಖರ್ ಆಜಾದ್ ರ  ಬಿಡುಗಡೆ!

ಇವೆಲ್ಲವೂ ಕೇವಲ 30ರ ಆಸುಪಾಸಿನಲ್ಲಿರುವ, ದಲಿತರ ಪರವಾದ ಖಚಿತವಾದ ರಾಜಕೀಯ ನಿಲುವುಗಳನ್ನುಳ್ಳ, ಪ್ರಖರ ವಾಗ್ಮಿಯೂ ಹೋರಾಟಗಾರನೂ ಆದ ಈ ಯುವಕನನ್ನು ಭಾರತದ ಬಹುಪಾಲು ದಲಿತ ಮತ್ತು ಚಿಂತನಶೀಲ ಯುವಕರ ಕಣ್ಮಣಿಯಾಗಿಸಿದೆ. ತಮ್ಮ ಸಮುದಾಯವನ್ನು ಸುದೀರ್ಘ ಕಾಲದಿಂದ ಕಾಡುತ್ತಾ ಬಂದಿರುವ ಉತ್ತರ ಪ್ರದೇಶದ ಬಲಾಢ್ಯ ಠಾಕೂರ್ ಸಮುದಾಯದ ರೀತಿಯಂತೆ ಉದ್ದೇಶಪೂರ್ವಕವಾಗಿಯೇ ಮೇಲೆತ್ತಿ ತಿರುಗಿಸಿದ ಮೀಸೆಯನ್ನೂ, ಬಲಗೈಗೆ ಧರಿಸುವ ದಪ್ಪ ಕಡಗವನ್ನೂ ತಮ್ಮ ವಿಶಿಷ್ಟ (ಸಿಗ್ನೇಚರ್) ಶೈಲಿಯಾಗಿಸಿಕೊಂಡಿರುವ ಭೀಮ್ ಆರ್ಮಿಯ ಹೋರಾಟಗಾರರು ಸದ್ಯಕ್ಕೆ ಸಮಾನತೆಯನ್ನು ಕನಸುವ ಯುವಕರ ಫ್ಯಾಶನ್ ಐಕಾನ್‍ಗಳು ಕೂಡಾ ಹೌದು!

ಚಂದ್ರಶೇಖರ್ ಆಜಾದ್ ‘ರಾವಣ್’ ಭೀಮ್ ಆರ್ಮಿಯನ್ನು ಆರಂಭಿಸಿದ್ದು 2015ರ ಜುಲೈನಲ್ಲಿ. ‘ರಾವಣ್’ ಎಂಬುದು ಖಳನಾಯಕರಂತೆ ಬಿಂಬಿಸಲ್ಪಟ್ಟ ಈ ದೇಶದ ಮೂಲನಿವಾಸಿ ಹೋರಾಟಗಾರರ ನಿಜವಾದ ಇತಿಹಾಸವನ್ನು ಎತ್ತಿತೋರುವುದಕ್ಕಾಗಿ ಬೇಕೆಂದೇ ಇಟ್ಟುಕೊಂಡ ಹೆಸರು. ಠಾಕೂರರ ಉಸಿರುಕಟ್ಟಿಸುವ ದಮನ ದಬ್ಬಾಳಿಕೆಗಳ ನಡುವೆ ತಲೆಯೆತ್ತಲು ಹೆಣಗುತ್ತಿದ್ದ ಸಹರಾನ್‍ಪುರದ ದಲಿತ ಸಮುದಾಯದೊಳಕ್ಕೆ ಅಂಬೇಡ್ಕರ್ ಚಿಂತನೆಗಳೊಂದಿಗೆ ಅವರ ತಂಡ ನುಗ್ಗಿತು. ಅತ್ಯಂತ ಸಣ್ಣ ಅವಧಿಯಲ್ಲಿ ಜನಬೆಂಬಲವನ್ನೂ, ಜನಪ್ರಿಯತೆಯನ್ನೂ ಗಳಿಸಿದ ಆಜಾದ್ ರ ಮಿಂಚಿನ ವೇಗವು ದಲಿತ ಸಮುದಾಯದಲ್ಲಿ ಐಕ್ಯತೆಯನ್ನು ತಂದಿತ್ತು. ಇದು ಬಲಾಢ್ಯ ಸಮುದಾಯಗಳ ಫ್ಯೂಡಲ್ ದೊರೆಗಳ ಮತ್ತು ಉತ್ತರ ಪ್ರದೇಶದ ಸರಕಾರಗಳ (ಈಗಿನ ಮತ್ತು ಹಿಂದಿನ) ನಿದ್ದೆ ಕೆಡಿಸಿತ್ತು. ಆದ್ದರಿಂದಲೇ, ಸುಮಾರು 24 ಗಂಭೀರ ದೋಷಾರೋಪಗಳನ್ನು ಅವರ ಮೇಲೆ ಹೊರಿಸಿತು. ಅದು ಸಾಲದೆಂದು ದೇಶದ ಭದ್ರತೆಗೇ ಅಪಾಯವಾಗುವಂತಹ ಕೆಲಸ ಮಾಡಿದ್ದಾನೆಂದು ಆರೋಪಿಸುತ್ತಾ ‘ರಾಷ್ಟ್ರೀಯ ಭದ್ರತಾ ಕಾಯ್ದೆ’ಯ ಅತಿ ಗಂಭೀರ ಆರೋಪಗಳನ್ನೂ ಬಳಸಿ 2017ರಲ್ಲಿ ಅವರನ್ನು ಜೈಲಿಗೆ ದಬ್ಬಲಾಯಿತು.

ಆದರೆ, ಈ ಸುದ್ದಿಗಳ ನಡುವೆ ಭೀಮ್ ಆರ್ಮಿಯು ತನ್ನ ಹುಟ್ಟಿನೊಂದಿಗೇನೆ ಆರಂಭಿಸಿದ ‘ಭೀಮ್ ಪಾಠ್‍ಶಾಲಾ’ಗಳ ಯಶಸ್ಸಿನ ಕಥೆ ಸ್ವಲ್ಪ ಮಸುಕಾದಂತಾಗಿದೆ. ಮೊಟ್ಟಮೊದಲ ಭೀಮ್ ಪಾಠ್‍ಶಾಲಾ 2015ರಲ್ಲಿ ಸಹರನ್‍ಪುರದ ಫತೇಪುರ್ ಭಾಡೋ ಗ್ರಾಮದಲ್ಲಿ ಆರಂಭವಾಯಿತು. ಭೀಮ್ ಆರ್ಮಿ (ಈ ಸಂಘಟನೆಯ ಪೂರ್ಣ ಹೆಸರು ‘ಭೀಮ್ ಆರ್ಮಿ ಭಾರತ್ ಏಕ್ತಾ ಮಿಶನ್’)ಯ ಸಂಸ್ಥಾಪಕರಾದ ಆಜಾದ್ ಮತ್ತು ವಿನಯ್ ರತನ್‍ರಿಗೆ ಮತ್ತು ಅವರ ಜೊತೆಗಾರರಿಗೆ ಇಂತಹ ಶಾಲೆಗಳ ಅಗತ್ಯವೇನೆಂಬುದು ನಿಚ್ಚಳವಾಗಿ ತಿಳಿದಿತ್ತು.
‘ಯಾವುದೇ ಮಗುವಿನ ಸರ್ವತೋಮುಖ ಬೆಳವಣಿಗೆಗೆ ಮೊದಲ ಹತ್ತು ವರ್ಷಗಳಲ್ಲಿ ಆ ಮಗು ಏನು ಕಲಿಯುತ್ತದೆಂಬುದು ಬಹಳ ಮುಖ್ಯ. ಆದರೆ ಉತ್ತರ ಪ್ರದೇಶದ ಸರ್ಕಾರಿ ಶಾಲೆಗಳು ಅಸಹನೀಯವಾದ ಸ್ಥಿತಿಯಲ್ಲಿವೆ. ಬಹುಪಾಲು ದಲಿತ ಸಮುದಾಯ ಖಾಸಗಿ ಶಾಲೆಗಳ ದುಬಾರಿ ಶುಲ್ಕವನ್ನು ಭರಿಸುವ ಸ್ಥಿತಿಯಲ್ಲಿಲ್ಲ; ಒಂದು ವೇಳೆ ಹಾಗೆ ಖಾಸಗಿ ಶಾಲೆಗಳಿಗೆ ಕಳಿಸಿದರೂ ಜಾತಿಯ ಕಾರಣದಿಂದಾಗಿ ಅಲ್ಲಿ ಅವರಿಗೆ ಸಮಾನ ಗೌರವ ಅಥವಾ ಕಲಿಕೆ ಸಿಗುವುದಿಲ್ಲವೆಂಬುದು ಗೊತ್ತೇ ಇದೆ. ಬಾಬಾಸಾಹೇಬರು ಶಿಕ್ಷಣಕ್ಕೆ ಪ್ರಮುಖ ಸ್ಥಾನ ಕೊಟ್ಟಿದ್ದು ಸುಮ್ಮನೇ ಅಲ್ಲ. ಅದಕ್ಕಾಗಿಯೇ ನಮ್ಮ ಸಂಘಟನೆಯ ಮೊದಲ ಮತ್ತು ಆದ್ಯತೆಯ ಕೆಲಸವಾಗಿ ನಾವು ಆರಂಭಿಸಿದ್ದು ಉಚಿತವಾಗಿ ಉತ್ತಮ ಕಲಿಕೆಯನ್ನು ರೂಪಿಸುವ ‘ಭೀಮ್ ಪಾಠ್‍ಶಾಲಾ’ಗಳನ್ನು’ ಎನ್ನುತ್ತಾರೆ ಸಿಂಗ್.

ಈ ಶಾಲೆಗಳಲ್ಲಿ ಮಕ್ಕಳು ಪಠ್ಯ ವಿಷಯಗಳಾದ ಗಣಿತ, ವಿಜ್ಞಾನ, ಇಂಗ್ಲೀಷ್ ಮೊದಲಾದವುಗಳ ಜೊತೆಗೆ, ಇತಿಹಾಸದ ಪುಟಗಳಲ್ಲಿ ಹೂತುಹೋಗಿರುವ ದಲಿತ ಸಮುದಾಯದ ಚರಿತ್ರೆಯನ್ನೂ, ಶೋಷಿತರ ವಿಮೋಚನೆಗಾಗಿ ಶ್ರಮಿಸಿದ ಮಹಾನ್ ವ್ಯಕ್ತಿಗಳ ಜೀವನ ಚಿತ್ರಣಗಳನ್ನೂ, ಅಂಬೇಡ್ಕರ್‍ರವರ ಚಿಂತನೆಗಳನ್ನೂ ಕಲಿಯುತ್ತಾರೆ. ಆರಂಭದಲ್ಲಿ ಸಹರನ್‍ಪುರದ ಸುತ್ತಲಿನ ಪ್ರದೇಶದಲ್ಲಷ್ಟೇ ಸಂಜೆಯ ಕೋಚಿಂಗ್ ತರಗತಿಗಳಾಗಿ 2 ಗಂಟೆಗಳ ಕಾಲ ನಡೆಯುತ್ತಿದ್ದ ಈ ಶಾಲೆಗಳು ಬಹಳ ವೇಗವಾಗಿ ಮೀರಟ್, ಮುಜಫ್ಫರ್‍ನಗರ್, ಆಗ್ರಾ ಮೊದಲಾದೆಡೆಗಳಿಗೂ ವ್ಯಾಪಿಸಿದವು. ಇಂದು ಸುಮಾರು 350ರಷ್ಟು ‘ಭೀಮ್ ಪಾಠ್‍ಶಾಲಾ’ಗಳು ಕಾರ್ಯನಿರ್ವಹಿಸುತ್ತಿದ್ದು ಸಾವಿರದ ಸಂಖ್ಯೆಯನ್ನು ಮುಟ್ಟುವ ದಿಕ್ಕಿನಲ್ಲಿ ಮುನ್ನಡೆಯುತ್ತಿವೆ.

ಮೊದಲ ಶಾಲೆ ಫತೇಪುರದಲ್ಲಿ ಆರಂಭವಾಗುತ್ತಿದ್ದಂತೆ ಬುಢಖೇರಾದ ದಲಿತ ಯುವಕರಿಗೆ ತಮ್ಮಲ್ಲೂ ಇಂತಹ ಶಾಲೆ ಬೇಕೆಂದೆನಿಸಿತು. ನಿವೃತ್ತ ಶಿಕ್ಷಕ ಕನ್ವರ್ ಪಾಲ್ ಸಿಂಗ್‍ರವರ ಮನೆಯೆದುರಿನ ಖಾಲಿ ಬಯಲೇ ಶಾಲಾ ಆವರಣವಾದರೆ ಆಗಷ್ಟೇ 10ನೇ ತರಗತಿ ಮುಗಿಸಿದ್ದ 15 ವರ್ಷದ ಸಿಂಗ್‍ರವರ ಕಿರಿಯ ಪುತ್ರಿ ನಿಶಾ ಆ ಭೀಮ್ ಶಾಲೆಯ ಮೊದಲ ಬೋಧಕಿಯಾದಳು. ಮೊದಲ ದಿನ 30 ಇದ್ದ ಮಕ್ಕಳ ಸಂಖ್ಯೆ ಕೇವಲ 2 ವಾರಗಳಲ್ಲಿ 100ರ ಸಂಖ್ಯೆಯನ್ನೂ ದಾಟಿ ಹಿಗ್ಗುತ್ತಾ ಹೋಗಿ ಶಾಲೆಯನ್ನು ಅಂಬೇಡ್ಕರ್ ಭವನಕ್ಕೆ ಸ್ಥಳಾಂತರಿಸಬೇಕಾದ ಅನಿವಾರ್ಯತೆ ಸೃಷ್ಟಿಸಿತು. ಈಗ ಶಾಲೆಯಲ್ಲಿ 200ಕ್ಕೂ ಹೆಚ್ಚು ಮಕ್ಕಳು 1-4 ಹಾಗೂ 5-9ರವರೆಗಿನ ವಿಭಾಗಗಳಲ್ಲಿ ನಿರಂತರ ಕಲಿಕೆಯಲ್ಲಿದ್ದಾರೆ.

ಇದೇ ಶಾಲೆಯ ಹಿರಿಯ ವಿದ್ಯಾರ್ಥಿನಿ ರಚನಾ, ತನ್ನ ಔಪಚಾರಿಕ ಖಾಸಗಿ ಶಾಲೆಯಲ್ಲಿ ಅತ್ಯುತ್ತಮ ಅಂಕಗಳೊಂದಿಗೆ ತರಗತಿಗೆ ಮೊದಲ ಸ್ಥಾನ ಗಳಿಸಿ ಆಜಾದ್ ರವರಿಂದ ಬಹುಮಾನ ಪಡೆದಿರುವುದನ್ನು ಬಹಳ ಹೆಮ್ಮೆಯಿಂದ ಹೇಳಿಕೊಳ್ಳುತ್ತಾಳೆ. ರಚನಾ ಕೂಲಿಕಾರ್ಮಿಕರಾದ ತನ್ನ ತಂದೆತಾಯಿಯರ 7 ಮಂದಿ ಮಕ್ಕಳಲ್ಲಿ ಒಬ್ಬಳು. ‘ಭೀಮ್ ಆರ್ಮಿಯೊಂದಿಗೆ ಗುರುತಿಸಿಕೊಂಡಿರುವುದರಿಂದ ನಾವು ದಲಿತ ಹೆಣ್ಣುಮಕ್ಕಳು ಇಂದು ಲೈಂಗಿಕ ದೌರ್ಜನ್ಯಗಳ ಭೀತಿಯಿಲ್ಲದೆ ಸೈಕಲ್ ತುಳಿದುಕೊಂಡು ಶಾಲೆಗೆ ಹೋಗಲು ಸಾಧ್ಯವಾಗುತ್ತಿದೆ. ನಾನು ಜೀವಶಾಸ್ತ್ರ ಕಲಿತು ಮುಂದೆ ವೈದ್ಯೆಯಾಗಬೇಕು, ನೊಂದವರಿಗಾಗಿ ಉಚಿತ ಚಿಕಿತ್ಸಾಲಯಗಳನ್ನು ತೆರೆಯಬೇಕು’ ಎಂಬ ಕನಸು ಕಾಣುವುದು ರಚನಾಗೆ ಈಗ ಸಾಧ್ಯವಾಗಿದೆ. ಆಕೆಯು ಭೀಮಶಾಲೆಯ ಮತ್ತೊಬ್ಬ ಸ್ವಯಂಸೇವಕ ಬೋಧಕಿ!

ಈ ಅನೌಪಚಾರಿಕ ಶಾಲೆಗಳು ದಲಿತ ಸ್ವಾಭಿಮಾನದ, ಅರಿವಿನ ಮತ್ತು ಐಕ್ಯತೆಯ ಪ್ರತೀಕಗಳಾಗಿ ಛಾಪು ಮೂಡಿಸುತ್ತಾ ವಿಸ್ತರಣೆಗೊಳ್ಳುತ್ತಲೇ ಹೋಗುತ್ತಿವೆ.
ಶೋಷಿತರ ಸ್ವಾಭಿಮಾನದ ಚಳವಳಿಗಳಿಗೆ ಶಿಕ್ಷಣವು ಕೇವಲ ಅನ್ನದ ಮಾರ್ಗ ಮಾತ್ರವಲ್ಲ; ಸಮಾಜ ಪರಿವರ್ತನೆಯ ಮಾರ್ಗ. ಶೋಷಿತ ಸಮುದಾಯಗಳು ತಮ್ಮದೇ ಆದ ಸಾಮಾಜಿಕ ಸಾಂಸ್ಕøತಿಕ ಗುರುತನ್ನು ಗಳಿಸಿಕೊಳ್ಳುವ ಮತ್ತು ಉಳಿಸಿಕೊಳ್ಳುವ ಮಾರ್ಗ. ಆದ್ದರಿಂದಲೇ ರಷ್ಯಾ ಕ್ರಾಂತಿಯ ನಂತರ ಲೆನಿನ್ ತಮ್ಮ ಭಾಷಣವೊಂದರಲ್ಲಿ “ರಷ್ಯಾದ ದುಡಿಯುವ ಜನತೆಯ ಶೇ.90ಕ್ಕಿಂತ ಹೆಚ್ಚು ಮಂದಿ ಶಿಕ್ಷಣ ಪಡೆದಿಲ್ಲ; ಆದರೆ, ಬಂಡವಾಳಶಾಹಿಗಳ ಮೇಲೆ ವಿಜಯ ಸಾಧಿಸಲು ತಮಗೆ ಅದು ಬೇಕೇಬೇಕು ಎಂಬುದನ್ನು ಅರಿತಿದ್ದಾರೆ. ಇಲ್ಲಿ ಶಿಕ್ಷಣ ಕೇವಲ ಅಕ್ಷರ ಜ್ಞಾನವಲ್ಲ, ಹೊಸ ಮಾನವರ ಹುಟ್ಟು” ಎನ್ನುತ್ತಾರೆ. ಇದೇ ಮಾದರಿಯಲ್ಲಿ ಭೀಮ್ ಪಾಠಶಾಲೆಯ ಪ್ರಯೋಗ ಏಕಕಾಲದಲ್ಲಿ ರಚನಾತ್ಮಕವಾದದ್ದೂ ಹಾಗೂ ಅತ್ಯಂತ ರಾಜಕೀಯವಾದದ್ದೂ ಹೌದು.

ಛತ್ತೀಸ್‍ಗಢದಲ್ಲಿ ಹೋರಾಟ ಮತ್ತು ರಚನಾತ್ಮಕ ಕೆಲಸಗಳು ಜೊತೆಜೊತೆಯಾಗಿ ಸಾಗಬೇಕಿರುವ ಕುರಿತು ಛತ್ತೀಸ್‍ಗಡ ಮುಕ್ತಿ ಮೋರ್ಚಾದ ಸಂಸ್ಥಾಪಕ ಶಂಕರ್ ಗುಹಾ ನಿಯೋಗಿ ‘ಸಂಘರ್ಷ್ ಔರ್ ನಿರ್ಮಾಣ್’ ಎಂದು ಸೂತ್ರೀಕರಿಸಿದ್ದರು. ಶಹೀದ್ ಶಾಲೆಗಳು ಮತ್ತು ಶಹೀದ್ ಆಸ್ಪತ್ರೆಗಳು ಇಂದಿಗೂ ಮಾದರಿ ಸಂಸ್ಥೆಗಳಾಗಿವೆ. ಮಹಾರಾಷ್ಟ್ರದಲ್ಲಿ ಅನೂಪ್ ವಾರ್ಧಾರವರು ನಡೆಸುತ್ತಿರುವ ನಳಂದ ಅಕಾಡೆಮಿಯ ಪ್ರಯೋಗದ ಕುರಿತು, ಅವರ ಸಂದರ್ಶನದ ಮೂಲಕ ಓದುಗರಿಗೆ ‘ಪತ್ರಿಕೆ’ ತಿಳಿಸಿತ್ತು.

ಬಹುಶಃ ಸಂಘರ್ಷ್ ಔರ್ ನಿರ್ಮಾಣ್‍ಗಳು ಇಂದು ಹಿಂದೆಂದಿಗಿಂತಲೂ ಹೆಚ್ಚು ಪ್ರಸ್ತುತವಾಗಿವೆ. ಈ ತಲೆಮಾರಿನ ಯುವಜನರನ್ನು ಒಳಗೊಂಡು, ಮಕ್ಕಳು ಕುಟುಂಬ ಎಲ್ಲರನ್ನೂ ಜೊತೆಗೊಯ್ಯಬಲ್ಲ ಹೋರಾಟದ ಮಾದರಿಗಳು ಹೆಚ್ಚೆಚ್ಚು ಜನರನ್ನೂ ತಲುಪುತ್ತವೆ ಹಾಗೂ ಇದರ ಪ್ರಭಾವ ಹಾಗೂ ಪರಿಣಾಮ ದೂರಗಾಮಿಯಾದದ್ದೂ ಆಗಿರುತ್ತದೆ. ಇದನ್ನು ಭೀಮ್‍ಆರ್ಮಿ ತಂಡವು ಚೆನ್ನಾಗಿಯೇ ಮನಗಂಡಿದೆ. ಅವರಿಗೊಂದು ಜೈಭೀಮ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...