Homeಮುಖಪುಟಇಂಧನ ಬೆಲೆ ಏರಿಕೆ ಬಗ್ಗೆ ನಿಮ್ಮ ರಾಜ್ಯ ಸರ್ಕಾರಗಳನ್ನು ಕೇಳಿ: ನಿರ್ಮಲಾ ಸೀತಾರಾಮನ್‌

ಇಂಧನ ಬೆಲೆ ಏರಿಕೆ ಬಗ್ಗೆ ನಿಮ್ಮ ರಾಜ್ಯ ಸರ್ಕಾರಗಳನ್ನು ಕೇಳಿ: ನಿರ್ಮಲಾ ಸೀತಾರಾಮನ್‌

- Advertisement -
- Advertisement -

ಇಂಧನ ಬೆಲೆ ಏರಿಕೆ ಬಗ್ಗೆ ಜನರು ತಮ್ಮದೇ ರಾಜ್ಯ ಸರ್ಕಾರಗಳನ್ನು ಕೇಳಬೇಕು. ಕೇಂದ್ರ ಸರ್ಕಾರವು ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ್ದು, ಇಂಧನ ದರವನ್ನು ಮತ್ತಷ್ಟು ತಗ್ಗಿಸಲು ಮೌಲ್ಯವರ್ಧಿತ ತೆರಿಗೆ (VAT) ಅನ್ನು ಕಡಿಮೆ ಮಾಡುವಂತೆ ರಾಜ್ಯಗಳಿಗೆ ಮನವಿ ಮಾಡಿದೆ ಎಂದು ನಿರ್ಮಲಾ ಸೀತಾರಾಮನ್‌ ತಿಳಿಸಿದರು.

ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ’ಜಿಎಸ್‌ಟಿ ಕೌನ್ಸಿಲ್‌ ಇಂಧನ ಸೇರ್ಪಡೆಗೆ ದರವನ್ನು ನಿಗದಿಪಡಿಸುವವರೆಗೆ ಪೆಟ್ರೋಲ್‌ ಮತ್ತು ಡೀಸೆಲ್‌ ಅನ್ನು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯಾಪ್ತಿಗೆ ಸೇರಿಸಲಾಗುವುದಿಲ್ಲ’ ಎಂದರು.

ದೇಶದಲ್ಲಿ ಹೂಡಿಕೆಯನ್ನು ಹೆಚ್ಚಿಸುವ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಹಣಕಾಸು ಮಂತ್ರಿಗಳೊಂದಿಗಿನ ಸಂವಾದದ ನಂತರ ಸೀತಾರಾಮನ್‌ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು.

ಇಂಧನ ಬೆಲೆ ಏರಿಕೆ ಬಗ್ಗೆ ವ್ಯಾಪಕ ಟೀಕೆಗಳು ವ್ಯಕ್ತವಾದ ನಂತರ, ಕೇಂದ್ರ ಸರ್ಕಾರವು ದೀಪಾವಳಿಯ ಹಿಂದಿನ ದಿನ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ ಕ್ರಮವಾಗಿ 5ರೂ ಮತ್ತು 10 ರೂ ನಷ್ಟು ಕಡಿಮೆ ಮಾಡಿದೆ. ಇಂಧನ ಬೆಲೆಗಳನ್ನು ತಗ್ಗಿಸಲು ಹಲವಾರು ರಾಜ್ಯಗಳು ವ್ಯಾಟ್‌ ಅನ್ನು ಕಡಿಮೆ ಮಾಡಿದ್ದವು. ಕೆಲವು ರಾಜ್ಯಗಳು ಅಬಕಾರಿ ಸುಂಕವನ್ನು ಮತ್ತಷ್ಟು ಕಡಿಮೆ ಮಾಡಬೇಕೆಂದು ಕೇಂದ್ರವನ್ನು ಒತ್ತಾಯಿಸಿವೆ.

ಕೇರಳದ ಹಣಕಾಸು ಸಚಿವರು ಕೇಂದ್ರದ ಕ್ರಮವನ್ನು ‘ಹಾನಿ ನಿಯಂತ್ರಣ’ ಎಂದು ಕರೆದರು. ಇತ್ತೀಚಿನ ಉಪಚುನಾವಣೆಗಳಲ್ಲಿ ಆಡಳಿತಾರೂಢ ಬಿಜೆಪಿ ಹಲವು ಸ್ಥಾನಗಳಲ್ಲಿ ಸೋತಿದೆ. ಅದಕ್ಕೆ ಇಂಧನ ಬೆಲೆ ಏರಿಕೆ ಮತ್ತಿತರ ಅಂಶಗಳೂ ಕಾರಣವಾಗಿವೆ. ಹಾಗಾಗಿ ಅವರು ಸಣ್ಣ ಮಟ್ಟಿಗೆ ಬೆಲೆ ಇಳಿಸಿದ್ದಾರೆ ಎಂದು ಟೀಕಿಸಿದ್ದರು.

ಮೋದಿ ಸರ್ಕಾರವು ಈ ಹಿಂದೆ ಅಬಕಾರಿ ಸುಂಕವನ್ನು ಗಣನೀಯವಾಗಿ ಹೆಚ್ಚಿಸಿ, ನಂತರ ಸ್ವಲ್ಪ ಮಟ್ಟಿಗೆ ಕಡಿಮೆ ಮಾಡಿದೆ. ರಾಜ್ಯ ಸರ್ಕಾರಗಳು ವ್ಯಾಟ್‌ ಹೆಚ್ಚಿಸಿಲ್ಲ ಆದ್ದರಿಂದ ಅದನ್ನು ಕಡಿಮೆ ಮಾಡುವ ಪ್ರಶ್ನೆಯೇ ಇಲ್ಲ. ಕೇಂದ್ರವು ಅಬಕಾರಿ ಸುಂಕವನ್ನು ಹೆಚ್ಚಳವನ್ನು ಹಿಂತೆಗೆದುಕೊಂಡರೆ ಬೆಲೆಗಳು ಸ್ವಯಂಚಾಲಿತವಾಗಿ ಇಳಿಯುತ್ತವೆ ಎಂದು ವಿರೋಧ ಪಕ್ಷಗಳು ತಿಳಿಸಿವೆ.

ಕೇಂದ್ರ ಸರ್ಕಾರವು ದೀಪಾವಳಿ ಸಮಯದಲ್ಲಿ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು  5 ರೂ ಮತ್ತು ಡೀಸೆಲ್ ಮೇಲೆ 10 ರೂ ಸುಂಕವನ್ನು ಇಳಿಸಿತ್ತು. ಕರ್ನಾಟಕ ಸರ್ಕಾರವು ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ವ್ಯಾಟ್‌ ಅನ್ನು 7 ರೂ ಕಡಿಮೆ ಗೊಳಿಸಿತ್ತು.

ಪ್ರಸ್ತುತ ಕೇಂದ್ರ ಸರ್ಕಾರವು ಪೆಟ್ರೋಲ್ ಮೇಲೆ ಪ್ರತಿ ಲೀಟರ್‌ಗೆ 27ರೂ ಮತ್ತು ರಾಜ್ಯ ಸರ್ಕಾರವು 20 ರೂ ಸುಂಕ ವಸೂಲಿ ಮಾಡುತ್ತಿದೆ. ಹಾಗೆಯೇ ಡೀಸೆಲ್ ಮೇಲೆ ಕೇಂದ್ರವು 21 ರೂ ಹಾಗೂ ರಾಜ್ಯವೂ 11 ರೂ ತೆರಿಗೆ ವಿಧಿಸುತ್ತಿದೆ.


ಇದನ್ನು ಓದಿ: ಪೆಟ್ರೋಲ್, ಡೀಸೆಲ್ ಮೇಲಿನ ಸಂಪೂರ್ಣ ಸೆಸ್ ತೆಗೆದುಹಾಕಿ: ತೆಲಂಗಾಣ ಸಿಎಂ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಹಾಗಾದರೆ ಕೇಂದ್ರದಲ್ಲಿ ನಿಮ್ಮ ಸರ್ಕಾರ ಇದಕ್ಕೆ ಇದೆ ರಾಜೀನಾಮೆ ಕೊಡಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...