Homeಮುಖಪುಟ’ನಾಚಿಕೆಯಾಗ ಬೇಕು ನಿಮಗೆ’: ಅನಿಲ್ ಕುಂಬ್ಳೆ ವಿರುದ್ದ ಕನ್ನಡಿಗರು ಸಿಡಿದಿದ್ದೇಕೆ?

’ನಾಚಿಕೆಯಾಗ ಬೇಕು ನಿಮಗೆ’: ಅನಿಲ್ ಕುಂಬ್ಳೆ ವಿರುದ್ದ ಕನ್ನಡಿಗರು ಸಿಡಿದಿದ್ದೇಕೆ?

- Advertisement -
- Advertisement -

ರೈತ ಪ್ರತಿಭಟನೆಯ ವರದಿಯೊಂದನ್ನು ಉಲ್ಲೇಖಿಸಿ, “ನಾವೇಕೆ ರೈತ ಪ್ರತಿಭಟನೆಯ ಬಗ್ಗೆ ಮಾತನಾಡುತ್ತಿಲ್ಲ?” ಎಂದು ಅಂತಾರಾಷ್ಟ್ರೀಯ ಪಾಪ್ ತಾರೆ ರಿಹಾನ್ನಾ ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ್ದರು. ಇದರ ನಂತರ ಭಾರತದ ರೈತ ಹೋರಾಟಕ್ಕೆ ಅಂತಾರಾಷ್ಟ್ರೀಯವಾಗಿ ಬೆಂಬಲ ಹೆಚ್ಚಾಗಿದ್ದು, ಅಂತಾರಾಷ್ಟ್ರೀಯ ಸೆಲೆಬ್ರಿಟಿಗಳು, ರಾಜಕಾರಣಿಗಳು, ಸಾಮಾಜಿಕ ಕಾರ್ಯಕರ್ತರು ಭಾರತೀಯ ರೈತರ ಪರವಾಗಿ ಧ್ವನಿ ಎತ್ತಿದ್ದಾರೆ.

ರೈತ ಹೋರಾಟಕ್ಕೆ ಜಾಗತಿಕವಾಗಿ ಬೆಂಬಲ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತ ವಿದೇಶಾಂಗ ಸಚಿವಾಲಯ, ರೈತ ಹೋರಾಟವು ದೇಶದ ಆಂತರಿಕ ಸಮಸ್ಯೆಯಾಗಿದ್ದು ವಿದೇಶಿಗರು ಇದರ ಬಗ್ಗೆ ಮಾತನಾಡಬಾರದು ಎಂದು ಹೇಳಿತ್ತು. ಜೊತೆಗೆ #FarmersProtest ಹ್ಯಾಶ್‌ಟ್ಯಾಗ್‌ಗೆ ವಿರುದ್ದವಾಗಿ ’ಇಂಡಿಯಾ ಟುಗೇದರ್‌’ ಮತ್ತು  ’ಇಂಡಿಯಾ ಅಗೇನ್ಸ್ಟ್‌‌ ಪ್ರೊಪಗಾಂಡ’ ಎಂಬ ಹ್ಯಾಶ್ ಟ್ಯಾಗನ್ನು ನೀಡಿತ್ತು.

ಇದನ್ನೂ ಓದಿ: ಕೇಂದ್ರ ಸರ್ಕಾರದ ಪರವಾಗಿ ಕಾಪಿ-ಪೇಸ್ಟ್ ಟ್ವೀಟ್: ಸಿಕ್ಕಿಬಿದ್ದ ಭಾರತೀಯ ಸೆಲೆಬ್ರಿಟಿಗಳು!

ಕೇಂದ್ರ ಸರ್ಕಾರ ನೀಡಿರುವ ಹ್ಯಾಶ್‌ಟ್ರಾಗ್ ಬಳಸಿ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಅನಿಲ್ ಕುಂಬ್ಳೆ, “ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಭಾರತ ದೇಶವು ತನ್ನ ಆಂತರಿಕ ಸಮಸ್ಯೆಗಳನ್ನು ಸೌಹಾರ್ದಯುತವಾಗಿ ಬಗೆಹರಿಸುವ ಸಾಮರ್ಥ್ಯ ಹೊಂದಿದೆ” ಎಂದು ಕೇಂದ್ರ ಸರ್ಕಾರದ ಪರವಾಗಿ ಬೌಲಿಂಗ್ ಮಾಡಿದ್ದರು.

ಇದರ ವಿರುದ್ದ ಕನ್ನಡಿಗರು ತಿರುಗಿಬಿದ್ದಿದ್ದು, ನೂರಕ್ಕೂ ಹೆಚ್ಚು ರೈತರು ದಿಲ್ಲಿಯ ಕೊರೆಯುವ ಚಳಿಯಲ್ಲಿ ಸತ್ತು ಹೋದಾಗ ದೇಶದ ಘನತೆ, ಮರ್ಯಾದೆಯ ಪ್ರಶ್ನೆ ಎದೆಯಲ್ಲಿ ಮೂಡಲಿಲ್ಲವೇ? ಆಳುವ ಪಕ್ಷದ ಗುಲಾಮಗಿರಿ ಮಾಡುವುದಕ್ಕಿಂತ ಜನರ ಪರವಾಗಿ ನಿಂತುಕೊಳ್ಳಿ. ಇತಿಹಾಸ ನೆನಪಿಸಿಕೊಳ್ಳುತ್ತದೆ. ನಾಚಿಕೆಯಾಗಬೇಕು ನಿಮಗೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ಗ್ರೇಥಾ ಥನ್‌‌ಬರ್ಗ್ ಮತ್ತು ಪಾಪ್‌ ಗಾಯಕಿ ರಿಹಾನ್ನಾ ಬೆಂಬಲ; ನೆಟ್ಟಿಗರ ಪ್ರತಿಕ್ರಿಯೆಯೇನು?

ಸಂಯುಕ್ತ ಹೋರಾಟ ಕರ್ನಾಟಕ, “ಪ್ರತಿಭಟನೆ ಶುರುವಾದಾಗಿಂದ ನೂರಕ್ಕು ಹೆಚ್ಚು ರೈತರು ಸತ್ತಿದ್ದಾರೆ‌. ಸೆಪ್ಟೆಂಬರ್‌ನಿಂದ ಕರ್ನಾಟಕದ‌ ಹಾಗೂ ಕೇಂದ್ರದ ಕೃಷಿ ಕಾಯಿದೆ ತಿದ್ದುಪಡಿಗಳನ್ನು ಕರ್ನಾಟಕದಲ್ಲಿ‌ ವಿರೋಧಿಸುತಿದ್ದೇವೆ. ಒಮ್ಮೆಯಾದರು ಬಂದು ನಮ್ಮ ರೈತರು ಏಕೆ‌ ಹೊರಾಡುತಿದ್ದಾರೆ ಕೇಳಿದಿರೆ ಕುಂಬ್ಳೆ ಅವರೆ ? ಈಗ ಏನು ಟ್ವೀಟ್‌ ಮಾಡೋದು. ನಿಮ್ಮ ನಿಲುವು ಬಹಳ‌ ನೋವು ತಂದಿದೆ” ಎಂದು ಹೇಳಿದೆ.

ಸಂಯುಕ್ತ ಹೋರಾಟ ಕರ್ನಾಟಕವು ರೈತ, ಕಾರ್ಮಿಕ, ಮಹಿಳಾ ಹಾಗೂ ವಿದ್ಯಾರ್ಥಿಗಳ ಸಂಯುಕ್ತ ಹೋರಾಟದ ಒಕ್ಕೂಟವಾಗಿದೆ.

ಲೇಖಕ ಶ್ರೀನಿವಾಸ ಕಾರ್ಕಾಳ ಅವರು, “ಮಾನವ ಹಕ್ಕುಗಳ ಉಲ್ಲಂಘನೆಯು ಯಾವುದೆ ದೇಶದ ಆಂತಕರಿಕ ವಿಷಯವಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿದ ರಿಹಾನ್ನಾ: ಗೌರವಾರ್ಥವಾಗಿ ಹಾಡು ಸಮರ್ಪಿಸಿದ ದಿಲ್ಜಿತ್‌!

ಚೇತನ್ ಕೃಷ್ಣಾ ಅವರು, “ಕನ್ನಡಿಗರಾಗಿ ನೀವು ಇಂತಹ ಮನೆ ಹಾಳು ಸರಕಾರಕ್ಕೆ ಬಕೆಟ್ ಹಿಡಿಯುವುದು ನ್ಯಾಯವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತೆ ರೇಖಾ ಶ್ರೀನಿವಾಸ್ ಅವರು, “ಅಮೇರಿಕದ ಮಾಜಿ ಅಧ್ಯಕ್ಷ ಟ್ರಂಪ್ ಭಾರತವನ್ನು ಕೊಳಕು ದೇಶ ಅಂದಾಗ ಯಾರು ಮಾತಾಡಲಿಲ್ಲ. ಆದರೆ ಇಲ್ಲಿನ ರೈತರ ಬಗ್ಗೆ ಅನುಕಂಪ ತೋರಿಸಿದ ವಿದೇಶಿಯರು ಮಾಡಿದ ಒಂದೇ ಒಂದು ಬರಹಕ್ಕೆ ಎಷ್ಟು ಮಾತಾಡುತಿರೋ. ಇಷ್ಟು ದಿನ ರೈತ ಬೆಳೆದ ಅನ್ನ ತಿಂದಿದ್ದಕ್ಕಾದ್ರು ಸ್ವಲ್ಪ ನಿಯತ್ತು ಇರಲಿ” ಎಂದು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ರಿಹಾನ್ನಾ ಟ್ವೀಟ್ ಪರಿಣಾಮ-ರೈತ ಹೋರಾಟಕ್ಕೆ ಜಾಗತಿಕ ಮನ್ನಣೆ!

ಕನ್ನಡ ಪರ ಹೋರಾಟಗಾರ ದಿನೇಶ್ ಕುಮಾರ್‌ ಅವರು, “ನೂರಕ್ಕೂ ಹೆಚ್ಚು ರೈತರು ದಿಲ್ಲಿಯ ಕೊರೆಯುವ ಚಳಿಯಲ್ಲಿ ಸತ್ತುಹೋದಾಗ ದೇಶದ ಘನತೆ, ಮರ್ಯಾದೆಯ ಪ್ರಶ್ನೆ ಎದೆಯಲ್ಲಿ ಮೂಡಲಿಲ್ಲವೇ? ರೈತರ ಮೇಲೆ ದಾಳಿಯಾದಾಗ, ಸುಳ್ಳು ಕೇಸು ಹಾಕಿದಾಗ ನಿಮ್ಮ ಆತ್ಮಸಾಕ್ಷಿ ಎಲ್ಲಿತ್ತು ಸರ್? ಆಳುವ ಪಕ್ಷದ ಗುಲಾಮಗಿರಿ ಮಾಡುವುದಕ್ಕಿಂತ ಜನರ ಪರವಾಗಿ ನಿಂತುಕೊಳ್ಳಿ. ಇತಿಹಾಸ ನೆನಪಿಸಿಕೊಳ್ಳುತ್ತದೆ. ನಾಚಿಕೆಯಾಗ ಬೇಕು ನಿಮಗೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಈ ಸರ್ಕಾರದಿಂದ ದೇಶಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಅಪಖ್ಯಾತಿ – ರಾಹುಲ್ ಗಾಂಧಿ

ಇದನ್ನೂ ಓದಿ: ಭ್ರಷ್ಟ ನಾಯಕರನ್ನು ಖರೀದಿಸಬಹುದು; ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನಲ್ಲ – ಮಮತ ಬ್ಯಾನರ್ಜಿ

ಇದನ್ನೂ ಓದಿ: ಅದಾನಿಗೆ ಮಂಗಳೂರು ಏರ್‌ಪೋರ್ಟ್ ಗುತ್ತಿಗೆ: ಕೇಂದ್ರಕ್ಕೆ ಕರ್ನಾಟಕ ಹೈಕೋರ್ಟ್ ನೋಟಿಸ್

ಇದನ್ನೂ ಓದಿ: ನೀವು ಸುಳ್ಳು ಹೇಳುವ ವಿಧಾನ ನನಗೆ ಇಷ್ಟ: ಕಂಗನಾಗೆ ಕುನಾಲ್ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ರಸ್ತೆಯನ್ನು ರಿಪೇರಿ ಮಾಡುವುದು ಬಿಟ್ಟ, ರೈತರ
    ಪರವಾದ ಬೇಡಿಕೆಯನ್ನು ನ್ಯಾಯೋಚಿತ ರೀತಿಯಲ್ಲಿ ಹೋರಾಟದ ಹಾದಿ ಹಿಡಿದವರ ಹಾದಿಗೆ ಮೊಳೆ ಹೊಡೆದವರ ಪರವಾದ ನಿಮ್ಮ ಗೂಗ್ಲಿ ಬೌಲಿಂಗ್ ಇಲ್ಲಿ ಟ್ವಿಸ್ಟ್ ಆಗೋದಿಲ್ಲ ಕುಂಬ್ಳೆ ಅಣ್ಣಾ…
    ನೀವೇನೋ ಕ್ರಿಕೆಟ್ ಆಟದಿಂದ ಗಳಿಸಿದ ಕೀರ್ತಿಗೆ ಬೇರಾರೂ ಕಾರಣರಲ್ಲ…ನಿಮ್ಮ ಯಶಸ್ಸಿನ ಪಾಲುದಾರಿಯಲ್ಲಿ ರೈತ, ಕಾರ್ಮಿಕರು ಕೂಡಾ…
    ಈ ಹೋರಾಟದಲ್ಲಿ ಹತ್ತಾರು ರೈತರ ಜೀವಗಳು ತ್ಯಾಗ
    ಬಲಿದಾನವಾಗಿವೆ.ನೀವೇನು ಅರ್ಪಿಸಬಲ್ಲಿರಿ ..?

  2. ಎಡ ಪಂಥಿಯರ ಯೋಚನೆಗಳು ಯಾವತ್ತೂ ಬಲಗೈಯಿಯವರು ಎಡಗೈಯಿಂದ ಮಾಡುವ ಕೆಲಸಗಳಿಗೆ ಸಮವಾಗಿರುತ್ತೆ.

  3. ಅನಿಲ್ ಕುಂಬ್ಳೆ ಅವರ ಬಗ್ಗೆ‌ ಇದ್ದ ಅದೆಷ್ಟು ಗೌರವದ ಬಂಡಲ್ಗಳು ಇಂದು ಉರುಳಿ ಬಿತ್ತು. ಅವರಿಗೆ ಆಳುವ ಪಕ್ಷದ ಎಂಎಲ್ಸಿ ಏನಾದರೂ ಆಗುವ ಮೊದಲ ಹರಕೆಯ ಉರುಳು ಸೇವೆ ಇದು.
    ರೈತರು ಯಾಕೆ ಚಳುವಳಿ ಮಾಡುತ್ತಿದ್ದಾರೆ ಅನ್ನುವ‌ ಕನಿಷ್ಠ ವಿಚಾರವೇ ಏನಾದರೂ ನಿಮಗೆ ತಿಳಿದಿದೆಯೇ?
    ಹತ್ತಿಕ್ಕಿ ದಿಕ್ಕು ತಪ್ಪಿಸುವ ಕೆಲಸಕ್ಕೆ ಕೈ ಹಾಕ ಬೇಡಿ…..ಪ್ಲೀನ್…

LEAVE A REPLY

Please enter your comment!
Please enter your name here

- Advertisment -

ಮನೆ ವಿಳಾಸ ಬಹಿರಂಗ : ಹಿಂದುತ್ವ ಪೋರ್ಟಲ್‌ಗಳು, ಅಭಿಜಿತ್ ಅಯ್ಯರ್-ಮಿತ್ರ ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಸಿಜೆಪಿಯ ಸೌರವ್ ದಾಸ್

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ವಕ್ತಾರ ಸೌರವ್ ದಾಸ್ ಅವರು ಹಿಂದುತ್ವ ಡಿಜಿಟಲ್ ಮಾಧ್ಯಮ ಪೋರ್ಟಲ್‌ಗಳು, ಸಾಮಾಜಿಕ ಮಾಧ್ಯಮ ಮಧ್ಯವರ್ತಿಗಳು ಮತ್ತು ಬಲಪಂಥೀಯ ರಾಜಕೀಯ ವಿಶ್ಲೇಷಕ ಅಭಿಜಿತ್ ಅಯ್ಯರ್-ಮಿತ್ರ ಅವರ ವಿರುದ್ಧ ದೆಹಲಿ...

ದಾಖಲೆಗಳಿದ್ದರೂ ಬಂಗಾಳಿ ಮಾತನಾಡುವ ಕಾರಣಕ್ಕೆ ಮಹಿಳೆಯನ್ನು ಬಾಂಗ್ಲಾದೇಶಕ್ಕೆ ಕಳುಹಿಸಿದ ಅಧಿಕಾರಿಗಳು?

ನವಿ ಮುಂಬೈನ 40 ವರ್ಷದ ಬಂಗಾಳಿ ಮಾತನಾಡುವ ಮಹಿಳೆಯೊಬ್ಬರನ್ನು ಅಕ್ರಮ ಬಾಂಗ್ಲಾದೇಶಿ ವಲಸಿಗರು ಎಂಬ ಶಂಕೆಯ ಮೇಲೆ ಬಂಧಿಸಿ, ಆಕೆ ಭಾರತದಲ್ಲೇ ಜನಿಸಿ ವಾಸಿಸುತ್ತಿದ್ದ ದಾಖಲೆಗಳನ್ನು ಕುಟುಂಬದವರು ಒದಗಿಸಿದರೂ, ಗಡಿಯಾಚೆಗೆ ಕಳುಹಿಸಲಾಗಿದೆ ಎಂದು...

ಬಾರ್ ಕೌನ್ಸಿಲ್ ಅಧ್ಯಕ್ಷರ ವಿರುದ್ಧ ₹150 ಕೋಟಿ ಅಕ್ರಮ ಆರೋಪ: ತಕ್ಷಣವೇ ರಾಜೀನಾಮೆ ನೀಡಲು ಒತ್ತಾಯ

ಭಾರತೀಯ ಬಾರ್ ಕೌನ್ಸಿಲ್ (BCI) ಉಪಾಧ್ಯಕ್ಷ ಮತ್ತು ಹಿರಿಯ ವಕೀಲ ವೈ.ಆರ್. ಸದಾಶಿವ ರೆಡ್ಡಿ ಅವರು ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಅವರ ರಾಜೀನಾಮೆಗೆ ಆಗ್ರಹಿಸಿ ಪತ್ರ ಬರೆದಿದ್ದಾರೆ. ತಮ್ಮ ಪತ್ರದಲ್ಲಿ...

ಶಿಕ್ಷಕರ ನೇಮಕಾತಿಯಲ್ಲಿ ಉರ್ದು ಮಾಧ್ಯಮಕ್ಕೆ ಅನ್ಯಾಯ : ಹೈಕೋರ್ಟ್‌ಗೆ ಅರ್ಜಿ

ಕರ್ನಾಟಕ ಸರ್ಕಾರದ 15 ಸಾವಿರ ಶಿಕ್ಷಕರ ನೇಮಕಾತಿ ಅಧಿಸೂಚನೆಯಲ್ಲಿ ಉರ್ದು ಮಾಧ್ಯಮ ಹಾಗೂ ಇತರ ಭಾಷಾ ಅಲ್ಪಸಂಖ್ಯಾತ ಶಿಕ್ಷಕರ ಹುದ್ದೆಗಳನ್ನು ಕೈಬಿಡಲಾಗಿದೆ ಎಂದು ಆರೋಪಿಸಿ ಹೈಕೋರ್ಟ್‌ನ ಧಾರವಾಡ ಪೀಠದ ಮುಂದೆ ಅರ್ಜಿ ಸಲ್ಲಿಕೆಯಾಗಿದೆ. ಉರ್ದು...

ಚುನಾವಣಾ ಆಯೋಗಕ್ಕೆ ನಕಲಿ ಆಕ್ಷೇಪಣೆ ಪತ್ರ ಸಲ್ಲಿಕೆ; ಉತ್ತರಾಖಂಡ್ ಹಾಲಿ ಕಾಂಗ್ರೆಸ್ ಶಾಸಕರ ಹೆಸರು ಡಿಲೀಟ್

ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆದುಹಾಕಲು ಕೋರಿ ಸಲ್ಲಿಸಲಾದ ಆಕ್ಷೇಪಣೆಯನ್ನು (ಅರ್ಜಿ) ನಾನು ಸಲ್ಲಿಸಿಲ್ಲ ಎಂದು ವ್ಯಕ್ತಿಯೊಬ್ಬರು ನಿರಾಕರಿಸಿದ ನಂತರ, ಉತ್ತರಾಖಂಡ್ ಕಾಂಗ್ರೆಸ್ ಶಾಸಕ ಫುರ್ಕಾನ್ ಅಹಮದ್ ಅವರು ಮತದಾರರ ಪಟ್ಟಿಯ ವಿಶೇಷ ತೀವ್ರ...

RTI ಕಾರ್ಯಕರ್ತ ವಿನಾಯಕ ಬಾಳಿಗಾ ಹತ್ಯೆ ಪ್ರಕರಣ: ₹24 ಲಕ್ಷ ದೇವಸ್ಥಾನದ ಕಾಣಿಕೆ ಹಣ ಮನೆಗೆ ಕೊಂಡೊಯ್ದಿದ್ದ ನರೇಶ್ ಶೆಣೈ

RTI ಕಾರ್ಯಕರ್ತ ವಿನಾಯಕ ಬಾಳಿಗಾ ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಚಲನ ಮೂಡಿಸುವಂತಹ ಮಹತ್ವದ ದಾಖಲೆಯೊಂದು ಬಹಿರಂಗವಾಗಿದೆ. ಬಾಳಿಗಾ ಹತ್ಯೆ ನಡೆಯುವುದಕ್ಕೂ ಕೆಲವೇ ದಿನಗಳ ಮುನ್ನ, ಪ್ರಕರಣದ ಪ್ರಮುಖ ಆರೋಪಿ ನರೇಶ್...

ಸಿಜೆಪಿ ಪ್ರತಿಭಟನೆ: ಪೊಲೀಸ್ ದೌರ್ಜನ್ಯಗಳ ಆರೋಪದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಸುಪ್ರೀಂ ಆದೇಶ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ದೆಹಲಿ ಪೊಲೀಸರು ನಡೆಸಿದ ಅತಿಯಾದ ಬಲಪ್ರಯೋಗ, ಹಿಂಸಾಚಾರ ಮತ್ತು ಇತರ ಗಂಭೀರ ದುರ್ನಡತೆಯ ಆರೋಪಗಳ ತನಿಖೆಗೆ ಉನ್ನತ...

ನಕಲಿ ಔಷಧ ದಂಧೆ: ತನಿಖೆಗೆ ಕಾನೂನು ತೊಡಕು, ಎಸ್‌ಐಟಿಗೆ ವಿಶೇಷಾಧಿಕಾರಕ್ಕೆ ಬೇಡಿಕೆ

ರಾಮನಗರ ಜಿಲ್ಲೆಯ ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡೇರಿ ಗ್ರಾಮದ ಫಾರ್ಮ್‌ಹೌಸ್‌ನಲ್ಲಿ ಬೆಳಕಿಗೆ ಬಂದಿರುವ ಸುಮಾರು 5 ಕೋಟಿ ರೂಪಾಯಿ ಮೌಲ್ಯದ ಬೃಹತ್ ನಕಲಿ ಔಷಧ ದಂಧೆಯ ತನಿಖೆಗೆ ಗಂಭೀರವಾದ ಕಾನೂನು ತೊಡಕು...

ಸಿಜೆಪಿ ಸ್ವಯಂ ಸೇವಕರ ಮೇಲೆ ದಾಳಿ | ರಾಜಸ್ಥಾನದ ಬಿಜೆಪಿ ಸರ್ಕಾರಕ್ಕೆ 3 ಬೇಡಿಕೆಗಳನ್ನು ಮುಂದಿಟ್ಟ ಅಭಿಜೀತ್ ದೀಪ್ಕೆ : ಈಡೇರಿಸಲು 48 ಗಂಟೆಗಳ ಗಡುವು

ಸರ್ಕಾರಿ ಶಾಲೆಯ ದುಃಸ್ಥಿತಿಯನ್ನು ಪರಿಶೀಲಿಸಲು ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಸಹ-ಸಂಘಟಕ ಆಶುತೋಷ್ ರಾಂಕಾ ಮತ್ತು ಇತರ ಸ್ವಯಂಸೇವಕರ ಮೇಲೆ ದಾಳಿ ನಡೆಸಿರುವುದನ್ನು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ತೀವ್ರವಾಗಿ ಖಂಡಿಸಿದ್ದಾರೆ. ಬಿಜೆಪಿ ಕಾರ್ಯಕರ್ತರು...

ಸಾರ್ವಜನಿಕರ ಉಪಸ್ಥಿತಿಯಿಲ್ಲದ ಮುಚ್ಚಿದ ಸ್ಥಳದಲ್ಲಿ ಜಾತಿ ನಿಂದನೆ: ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಅಪರಾಧವಲ್ಲ: ಸುಪ್ರೀಂ ಕೋರ್ಟ್ 

ಸಾರ್ವಜನಿಕ ಪ್ರವೇಶವಿಲ್ಲದ ಮತ್ತು ಸಾರ್ವಜನಿಕರ ಉಪಸ್ಥಿತಿಯಿಲ್ಲದ ನಾಲ್ಕು ಗೋಡೆಗಳ ನಡುವೆ ಅಥವಾ ಸುತ್ತುವರಿದ ಮುಚ್ಚಿದ ಜಾಗದಲ್ಲಿ ನಡೆದಿದೆ ಎನ್ನಲಾದ ಜಾತಿ ಆಧಾರಿತ ನಿಂದನೆ ಅಥವಾ ವಾಗ್ವಾದಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ...