Homeಮುಖಪುಟ’ನಾಚಿಕೆಯಾಗ ಬೇಕು ನಿಮಗೆ’: ಅನಿಲ್ ಕುಂಬ್ಳೆ ವಿರುದ್ದ ಕನ್ನಡಿಗರು ಸಿಡಿದಿದ್ದೇಕೆ?

’ನಾಚಿಕೆಯಾಗ ಬೇಕು ನಿಮಗೆ’: ಅನಿಲ್ ಕುಂಬ್ಳೆ ವಿರುದ್ದ ಕನ್ನಡಿಗರು ಸಿಡಿದಿದ್ದೇಕೆ?

- Advertisement -
- Advertisement -

ರೈತ ಪ್ರತಿಭಟನೆಯ ವರದಿಯೊಂದನ್ನು ಉಲ್ಲೇಖಿಸಿ, “ನಾವೇಕೆ ರೈತ ಪ್ರತಿಭಟನೆಯ ಬಗ್ಗೆ ಮಾತನಾಡುತ್ತಿಲ್ಲ?” ಎಂದು ಅಂತಾರಾಷ್ಟ್ರೀಯ ಪಾಪ್ ತಾರೆ ರಿಹಾನ್ನಾ ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ್ದರು. ಇದರ ನಂತರ ಭಾರತದ ರೈತ ಹೋರಾಟಕ್ಕೆ ಅಂತಾರಾಷ್ಟ್ರೀಯವಾಗಿ ಬೆಂಬಲ ಹೆಚ್ಚಾಗಿದ್ದು, ಅಂತಾರಾಷ್ಟ್ರೀಯ ಸೆಲೆಬ್ರಿಟಿಗಳು, ರಾಜಕಾರಣಿಗಳು, ಸಾಮಾಜಿಕ ಕಾರ್ಯಕರ್ತರು ಭಾರತೀಯ ರೈತರ ಪರವಾಗಿ ಧ್ವನಿ ಎತ್ತಿದ್ದಾರೆ.

ರೈತ ಹೋರಾಟಕ್ಕೆ ಜಾಗತಿಕವಾಗಿ ಬೆಂಬಲ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತ ವಿದೇಶಾಂಗ ಸಚಿವಾಲಯ, ರೈತ ಹೋರಾಟವು ದೇಶದ ಆಂತರಿಕ ಸಮಸ್ಯೆಯಾಗಿದ್ದು ವಿದೇಶಿಗರು ಇದರ ಬಗ್ಗೆ ಮಾತನಾಡಬಾರದು ಎಂದು ಹೇಳಿತ್ತು. ಜೊತೆಗೆ #FarmersProtest ಹ್ಯಾಶ್‌ಟ್ಯಾಗ್‌ಗೆ ವಿರುದ್ದವಾಗಿ ’ಇಂಡಿಯಾ ಟುಗೇದರ್‌’ ಮತ್ತು  ’ಇಂಡಿಯಾ ಅಗೇನ್ಸ್ಟ್‌‌ ಪ್ರೊಪಗಾಂಡ’ ಎಂಬ ಹ್ಯಾಶ್ ಟ್ಯಾಗನ್ನು ನೀಡಿತ್ತು.

ಇದನ್ನೂ ಓದಿ: ಕೇಂದ್ರ ಸರ್ಕಾರದ ಪರವಾಗಿ ಕಾಪಿ-ಪೇಸ್ಟ್ ಟ್ವೀಟ್: ಸಿಕ್ಕಿಬಿದ್ದ ಭಾರತೀಯ ಸೆಲೆಬ್ರಿಟಿಗಳು!

ಕೇಂದ್ರ ಸರ್ಕಾರ ನೀಡಿರುವ ಹ್ಯಾಶ್‌ಟ್ರಾಗ್ ಬಳಸಿ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಅನಿಲ್ ಕುಂಬ್ಳೆ, “ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಭಾರತ ದೇಶವು ತನ್ನ ಆಂತರಿಕ ಸಮಸ್ಯೆಗಳನ್ನು ಸೌಹಾರ್ದಯುತವಾಗಿ ಬಗೆಹರಿಸುವ ಸಾಮರ್ಥ್ಯ ಹೊಂದಿದೆ” ಎಂದು ಕೇಂದ್ರ ಸರ್ಕಾರದ ಪರವಾಗಿ ಬೌಲಿಂಗ್ ಮಾಡಿದ್ದರು.

ಇದರ ವಿರುದ್ದ ಕನ್ನಡಿಗರು ತಿರುಗಿಬಿದ್ದಿದ್ದು, ನೂರಕ್ಕೂ ಹೆಚ್ಚು ರೈತರು ದಿಲ್ಲಿಯ ಕೊರೆಯುವ ಚಳಿಯಲ್ಲಿ ಸತ್ತು ಹೋದಾಗ ದೇಶದ ಘನತೆ, ಮರ್ಯಾದೆಯ ಪ್ರಶ್ನೆ ಎದೆಯಲ್ಲಿ ಮೂಡಲಿಲ್ಲವೇ? ಆಳುವ ಪಕ್ಷದ ಗುಲಾಮಗಿರಿ ಮಾಡುವುದಕ್ಕಿಂತ ಜನರ ಪರವಾಗಿ ನಿಂತುಕೊಳ್ಳಿ. ಇತಿಹಾಸ ನೆನಪಿಸಿಕೊಳ್ಳುತ್ತದೆ. ನಾಚಿಕೆಯಾಗಬೇಕು ನಿಮಗೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ಗ್ರೇಥಾ ಥನ್‌‌ಬರ್ಗ್ ಮತ್ತು ಪಾಪ್‌ ಗಾಯಕಿ ರಿಹಾನ್ನಾ ಬೆಂಬಲ; ನೆಟ್ಟಿಗರ ಪ್ರತಿಕ್ರಿಯೆಯೇನು?

ಸಂಯುಕ್ತ ಹೋರಾಟ ಕರ್ನಾಟಕ, “ಪ್ರತಿಭಟನೆ ಶುರುವಾದಾಗಿಂದ ನೂರಕ್ಕು ಹೆಚ್ಚು ರೈತರು ಸತ್ತಿದ್ದಾರೆ‌. ಸೆಪ್ಟೆಂಬರ್‌ನಿಂದ ಕರ್ನಾಟಕದ‌ ಹಾಗೂ ಕೇಂದ್ರದ ಕೃಷಿ ಕಾಯಿದೆ ತಿದ್ದುಪಡಿಗಳನ್ನು ಕರ್ನಾಟಕದಲ್ಲಿ‌ ವಿರೋಧಿಸುತಿದ್ದೇವೆ. ಒಮ್ಮೆಯಾದರು ಬಂದು ನಮ್ಮ ರೈತರು ಏಕೆ‌ ಹೊರಾಡುತಿದ್ದಾರೆ ಕೇಳಿದಿರೆ ಕುಂಬ್ಳೆ ಅವರೆ ? ಈಗ ಏನು ಟ್ವೀಟ್‌ ಮಾಡೋದು. ನಿಮ್ಮ ನಿಲುವು ಬಹಳ‌ ನೋವು ತಂದಿದೆ” ಎಂದು ಹೇಳಿದೆ.

ಸಂಯುಕ್ತ ಹೋರಾಟ ಕರ್ನಾಟಕವು ರೈತ, ಕಾರ್ಮಿಕ, ಮಹಿಳಾ ಹಾಗೂ ವಿದ್ಯಾರ್ಥಿಗಳ ಸಂಯುಕ್ತ ಹೋರಾಟದ ಒಕ್ಕೂಟವಾಗಿದೆ.

ಲೇಖಕ ಶ್ರೀನಿವಾಸ ಕಾರ್ಕಾಳ ಅವರು, “ಮಾನವ ಹಕ್ಕುಗಳ ಉಲ್ಲಂಘನೆಯು ಯಾವುದೆ ದೇಶದ ಆಂತಕರಿಕ ವಿಷಯವಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿದ ರಿಹಾನ್ನಾ: ಗೌರವಾರ್ಥವಾಗಿ ಹಾಡು ಸಮರ್ಪಿಸಿದ ದಿಲ್ಜಿತ್‌!

ಚೇತನ್ ಕೃಷ್ಣಾ ಅವರು, “ಕನ್ನಡಿಗರಾಗಿ ನೀವು ಇಂತಹ ಮನೆ ಹಾಳು ಸರಕಾರಕ್ಕೆ ಬಕೆಟ್ ಹಿಡಿಯುವುದು ನ್ಯಾಯವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತೆ ರೇಖಾ ಶ್ರೀನಿವಾಸ್ ಅವರು, “ಅಮೇರಿಕದ ಮಾಜಿ ಅಧ್ಯಕ್ಷ ಟ್ರಂಪ್ ಭಾರತವನ್ನು ಕೊಳಕು ದೇಶ ಅಂದಾಗ ಯಾರು ಮಾತಾಡಲಿಲ್ಲ. ಆದರೆ ಇಲ್ಲಿನ ರೈತರ ಬಗ್ಗೆ ಅನುಕಂಪ ತೋರಿಸಿದ ವಿದೇಶಿಯರು ಮಾಡಿದ ಒಂದೇ ಒಂದು ಬರಹಕ್ಕೆ ಎಷ್ಟು ಮಾತಾಡುತಿರೋ. ಇಷ್ಟು ದಿನ ರೈತ ಬೆಳೆದ ಅನ್ನ ತಿಂದಿದ್ದಕ್ಕಾದ್ರು ಸ್ವಲ್ಪ ನಿಯತ್ತು ಇರಲಿ” ಎಂದು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ರಿಹಾನ್ನಾ ಟ್ವೀಟ್ ಪರಿಣಾಮ-ರೈತ ಹೋರಾಟಕ್ಕೆ ಜಾಗತಿಕ ಮನ್ನಣೆ!

ಕನ್ನಡ ಪರ ಹೋರಾಟಗಾರ ದಿನೇಶ್ ಕುಮಾರ್‌ ಅವರು, “ನೂರಕ್ಕೂ ಹೆಚ್ಚು ರೈತರು ದಿಲ್ಲಿಯ ಕೊರೆಯುವ ಚಳಿಯಲ್ಲಿ ಸತ್ತುಹೋದಾಗ ದೇಶದ ಘನತೆ, ಮರ್ಯಾದೆಯ ಪ್ರಶ್ನೆ ಎದೆಯಲ್ಲಿ ಮೂಡಲಿಲ್ಲವೇ? ರೈತರ ಮೇಲೆ ದಾಳಿಯಾದಾಗ, ಸುಳ್ಳು ಕೇಸು ಹಾಕಿದಾಗ ನಿಮ್ಮ ಆತ್ಮಸಾಕ್ಷಿ ಎಲ್ಲಿತ್ತು ಸರ್? ಆಳುವ ಪಕ್ಷದ ಗುಲಾಮಗಿರಿ ಮಾಡುವುದಕ್ಕಿಂತ ಜನರ ಪರವಾಗಿ ನಿಂತುಕೊಳ್ಳಿ. ಇತಿಹಾಸ ನೆನಪಿಸಿಕೊಳ್ಳುತ್ತದೆ. ನಾಚಿಕೆಯಾಗ ಬೇಕು ನಿಮಗೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಈ ಸರ್ಕಾರದಿಂದ ದೇಶಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಅಪಖ್ಯಾತಿ – ರಾಹುಲ್ ಗಾಂಧಿ

ಇದನ್ನೂ ಓದಿ: ಭ್ರಷ್ಟ ನಾಯಕರನ್ನು ಖರೀದಿಸಬಹುದು; ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನಲ್ಲ – ಮಮತ ಬ್ಯಾನರ್ಜಿ

ಇದನ್ನೂ ಓದಿ: ಅದಾನಿಗೆ ಮಂಗಳೂರು ಏರ್‌ಪೋರ್ಟ್ ಗುತ್ತಿಗೆ: ಕೇಂದ್ರಕ್ಕೆ ಕರ್ನಾಟಕ ಹೈಕೋರ್ಟ್ ನೋಟಿಸ್

ಇದನ್ನೂ ಓದಿ: ನೀವು ಸುಳ್ಳು ಹೇಳುವ ವಿಧಾನ ನನಗೆ ಇಷ್ಟ: ಕಂಗನಾಗೆ ಕುನಾಲ್ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ರಸ್ತೆಯನ್ನು ರಿಪೇರಿ ಮಾಡುವುದು ಬಿಟ್ಟ, ರೈತರ
    ಪರವಾದ ಬೇಡಿಕೆಯನ್ನು ನ್ಯಾಯೋಚಿತ ರೀತಿಯಲ್ಲಿ ಹೋರಾಟದ ಹಾದಿ ಹಿಡಿದವರ ಹಾದಿಗೆ ಮೊಳೆ ಹೊಡೆದವರ ಪರವಾದ ನಿಮ್ಮ ಗೂಗ್ಲಿ ಬೌಲಿಂಗ್ ಇಲ್ಲಿ ಟ್ವಿಸ್ಟ್ ಆಗೋದಿಲ್ಲ ಕುಂಬ್ಳೆ ಅಣ್ಣಾ…
    ನೀವೇನೋ ಕ್ರಿಕೆಟ್ ಆಟದಿಂದ ಗಳಿಸಿದ ಕೀರ್ತಿಗೆ ಬೇರಾರೂ ಕಾರಣರಲ್ಲ…ನಿಮ್ಮ ಯಶಸ್ಸಿನ ಪಾಲುದಾರಿಯಲ್ಲಿ ರೈತ, ಕಾರ್ಮಿಕರು ಕೂಡಾ…
    ಈ ಹೋರಾಟದಲ್ಲಿ ಹತ್ತಾರು ರೈತರ ಜೀವಗಳು ತ್ಯಾಗ
    ಬಲಿದಾನವಾಗಿವೆ.ನೀವೇನು ಅರ್ಪಿಸಬಲ್ಲಿರಿ ..?

  2. ಎಡ ಪಂಥಿಯರ ಯೋಚನೆಗಳು ಯಾವತ್ತೂ ಬಲಗೈಯಿಯವರು ಎಡಗೈಯಿಂದ ಮಾಡುವ ಕೆಲಸಗಳಿಗೆ ಸಮವಾಗಿರುತ್ತೆ.

  3. ಅನಿಲ್ ಕುಂಬ್ಳೆ ಅವರ ಬಗ್ಗೆ‌ ಇದ್ದ ಅದೆಷ್ಟು ಗೌರವದ ಬಂಡಲ್ಗಳು ಇಂದು ಉರುಳಿ ಬಿತ್ತು. ಅವರಿಗೆ ಆಳುವ ಪಕ್ಷದ ಎಂಎಲ್ಸಿ ಏನಾದರೂ ಆಗುವ ಮೊದಲ ಹರಕೆಯ ಉರುಳು ಸೇವೆ ಇದು.
    ರೈತರು ಯಾಕೆ ಚಳುವಳಿ ಮಾಡುತ್ತಿದ್ದಾರೆ ಅನ್ನುವ‌ ಕನಿಷ್ಠ ವಿಚಾರವೇ ಏನಾದರೂ ನಿಮಗೆ ತಿಳಿದಿದೆಯೇ?
    ಹತ್ತಿಕ್ಕಿ ದಿಕ್ಕು ತಪ್ಪಿಸುವ ಕೆಲಸಕ್ಕೆ ಕೈ ಹಾಕ ಬೇಡಿ…..ಪ್ಲೀನ್…

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...