Homeಮುಖಪುಟ’ನಾಚಿಕೆಯಾಗ ಬೇಕು ನಿಮಗೆ’: ಅನಿಲ್ ಕುಂಬ್ಳೆ ವಿರುದ್ದ ಕನ್ನಡಿಗರು ಸಿಡಿದಿದ್ದೇಕೆ?

’ನಾಚಿಕೆಯಾಗ ಬೇಕು ನಿಮಗೆ’: ಅನಿಲ್ ಕುಂಬ್ಳೆ ವಿರುದ್ದ ಕನ್ನಡಿಗರು ಸಿಡಿದಿದ್ದೇಕೆ?

- Advertisement -
- Advertisement -

ರೈತ ಪ್ರತಿಭಟನೆಯ ವರದಿಯೊಂದನ್ನು ಉಲ್ಲೇಖಿಸಿ, “ನಾವೇಕೆ ರೈತ ಪ್ರತಿಭಟನೆಯ ಬಗ್ಗೆ ಮಾತನಾಡುತ್ತಿಲ್ಲ?” ಎಂದು ಅಂತಾರಾಷ್ಟ್ರೀಯ ಪಾಪ್ ತಾರೆ ರಿಹಾನ್ನಾ ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ್ದರು. ಇದರ ನಂತರ ಭಾರತದ ರೈತ ಹೋರಾಟಕ್ಕೆ ಅಂತಾರಾಷ್ಟ್ರೀಯವಾಗಿ ಬೆಂಬಲ ಹೆಚ್ಚಾಗಿದ್ದು, ಅಂತಾರಾಷ್ಟ್ರೀಯ ಸೆಲೆಬ್ರಿಟಿಗಳು, ರಾಜಕಾರಣಿಗಳು, ಸಾಮಾಜಿಕ ಕಾರ್ಯಕರ್ತರು ಭಾರತೀಯ ರೈತರ ಪರವಾಗಿ ಧ್ವನಿ ಎತ್ತಿದ್ದಾರೆ.

ರೈತ ಹೋರಾಟಕ್ಕೆ ಜಾಗತಿಕವಾಗಿ ಬೆಂಬಲ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತ ವಿದೇಶಾಂಗ ಸಚಿವಾಲಯ, ರೈತ ಹೋರಾಟವು ದೇಶದ ಆಂತರಿಕ ಸಮಸ್ಯೆಯಾಗಿದ್ದು ವಿದೇಶಿಗರು ಇದರ ಬಗ್ಗೆ ಮಾತನಾಡಬಾರದು ಎಂದು ಹೇಳಿತ್ತು. ಜೊತೆಗೆ #FarmersProtest ಹ್ಯಾಶ್‌ಟ್ಯಾಗ್‌ಗೆ ವಿರುದ್ದವಾಗಿ ’ಇಂಡಿಯಾ ಟುಗೇದರ್‌’ ಮತ್ತು  ’ಇಂಡಿಯಾ ಅಗೇನ್ಸ್ಟ್‌‌ ಪ್ರೊಪಗಾಂಡ’ ಎಂಬ ಹ್ಯಾಶ್ ಟ್ಯಾಗನ್ನು ನೀಡಿತ್ತು.

ಇದನ್ನೂ ಓದಿ: ಕೇಂದ್ರ ಸರ್ಕಾರದ ಪರವಾಗಿ ಕಾಪಿ-ಪೇಸ್ಟ್ ಟ್ವೀಟ್: ಸಿಕ್ಕಿಬಿದ್ದ ಭಾರತೀಯ ಸೆಲೆಬ್ರಿಟಿಗಳು!

ಕೇಂದ್ರ ಸರ್ಕಾರ ನೀಡಿರುವ ಹ್ಯಾಶ್‌ಟ್ರಾಗ್ ಬಳಸಿ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಅನಿಲ್ ಕುಂಬ್ಳೆ, “ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಭಾರತ ದೇಶವು ತನ್ನ ಆಂತರಿಕ ಸಮಸ್ಯೆಗಳನ್ನು ಸೌಹಾರ್ದಯುತವಾಗಿ ಬಗೆಹರಿಸುವ ಸಾಮರ್ಥ್ಯ ಹೊಂದಿದೆ” ಎಂದು ಕೇಂದ್ರ ಸರ್ಕಾರದ ಪರವಾಗಿ ಬೌಲಿಂಗ್ ಮಾಡಿದ್ದರು.

ಇದರ ವಿರುದ್ದ ಕನ್ನಡಿಗರು ತಿರುಗಿಬಿದ್ದಿದ್ದು, ನೂರಕ್ಕೂ ಹೆಚ್ಚು ರೈತರು ದಿಲ್ಲಿಯ ಕೊರೆಯುವ ಚಳಿಯಲ್ಲಿ ಸತ್ತು ಹೋದಾಗ ದೇಶದ ಘನತೆ, ಮರ್ಯಾದೆಯ ಪ್ರಶ್ನೆ ಎದೆಯಲ್ಲಿ ಮೂಡಲಿಲ್ಲವೇ? ಆಳುವ ಪಕ್ಷದ ಗುಲಾಮಗಿರಿ ಮಾಡುವುದಕ್ಕಿಂತ ಜನರ ಪರವಾಗಿ ನಿಂತುಕೊಳ್ಳಿ. ಇತಿಹಾಸ ನೆನಪಿಸಿಕೊಳ್ಳುತ್ತದೆ. ನಾಚಿಕೆಯಾಗಬೇಕು ನಿಮಗೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ಗ್ರೇಥಾ ಥನ್‌‌ಬರ್ಗ್ ಮತ್ತು ಪಾಪ್‌ ಗಾಯಕಿ ರಿಹಾನ್ನಾ ಬೆಂಬಲ; ನೆಟ್ಟಿಗರ ಪ್ರತಿಕ್ರಿಯೆಯೇನು?

ಸಂಯುಕ್ತ ಹೋರಾಟ ಕರ್ನಾಟಕ, “ಪ್ರತಿಭಟನೆ ಶುರುವಾದಾಗಿಂದ ನೂರಕ್ಕು ಹೆಚ್ಚು ರೈತರು ಸತ್ತಿದ್ದಾರೆ‌. ಸೆಪ್ಟೆಂಬರ್‌ನಿಂದ ಕರ್ನಾಟಕದ‌ ಹಾಗೂ ಕೇಂದ್ರದ ಕೃಷಿ ಕಾಯಿದೆ ತಿದ್ದುಪಡಿಗಳನ್ನು ಕರ್ನಾಟಕದಲ್ಲಿ‌ ವಿರೋಧಿಸುತಿದ್ದೇವೆ. ಒಮ್ಮೆಯಾದರು ಬಂದು ನಮ್ಮ ರೈತರು ಏಕೆ‌ ಹೊರಾಡುತಿದ್ದಾರೆ ಕೇಳಿದಿರೆ ಕುಂಬ್ಳೆ ಅವರೆ ? ಈಗ ಏನು ಟ್ವೀಟ್‌ ಮಾಡೋದು. ನಿಮ್ಮ ನಿಲುವು ಬಹಳ‌ ನೋವು ತಂದಿದೆ” ಎಂದು ಹೇಳಿದೆ.

ಸಂಯುಕ್ತ ಹೋರಾಟ ಕರ್ನಾಟಕವು ರೈತ, ಕಾರ್ಮಿಕ, ಮಹಿಳಾ ಹಾಗೂ ವಿದ್ಯಾರ್ಥಿಗಳ ಸಂಯುಕ್ತ ಹೋರಾಟದ ಒಕ್ಕೂಟವಾಗಿದೆ.

ಲೇಖಕ ಶ್ರೀನಿವಾಸ ಕಾರ್ಕಾಳ ಅವರು, “ಮಾನವ ಹಕ್ಕುಗಳ ಉಲ್ಲಂಘನೆಯು ಯಾವುದೆ ದೇಶದ ಆಂತಕರಿಕ ವಿಷಯವಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿದ ರಿಹಾನ್ನಾ: ಗೌರವಾರ್ಥವಾಗಿ ಹಾಡು ಸಮರ್ಪಿಸಿದ ದಿಲ್ಜಿತ್‌!

ಚೇತನ್ ಕೃಷ್ಣಾ ಅವರು, “ಕನ್ನಡಿಗರಾಗಿ ನೀವು ಇಂತಹ ಮನೆ ಹಾಳು ಸರಕಾರಕ್ಕೆ ಬಕೆಟ್ ಹಿಡಿಯುವುದು ನ್ಯಾಯವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತೆ ರೇಖಾ ಶ್ರೀನಿವಾಸ್ ಅವರು, “ಅಮೇರಿಕದ ಮಾಜಿ ಅಧ್ಯಕ್ಷ ಟ್ರಂಪ್ ಭಾರತವನ್ನು ಕೊಳಕು ದೇಶ ಅಂದಾಗ ಯಾರು ಮಾತಾಡಲಿಲ್ಲ. ಆದರೆ ಇಲ್ಲಿನ ರೈತರ ಬಗ್ಗೆ ಅನುಕಂಪ ತೋರಿಸಿದ ವಿದೇಶಿಯರು ಮಾಡಿದ ಒಂದೇ ಒಂದು ಬರಹಕ್ಕೆ ಎಷ್ಟು ಮಾತಾಡುತಿರೋ. ಇಷ್ಟು ದಿನ ರೈತ ಬೆಳೆದ ಅನ್ನ ತಿಂದಿದ್ದಕ್ಕಾದ್ರು ಸ್ವಲ್ಪ ನಿಯತ್ತು ಇರಲಿ” ಎಂದು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ರಿಹಾನ್ನಾ ಟ್ವೀಟ್ ಪರಿಣಾಮ-ರೈತ ಹೋರಾಟಕ್ಕೆ ಜಾಗತಿಕ ಮನ್ನಣೆ!

ಕನ್ನಡ ಪರ ಹೋರಾಟಗಾರ ದಿನೇಶ್ ಕುಮಾರ್‌ ಅವರು, “ನೂರಕ್ಕೂ ಹೆಚ್ಚು ರೈತರು ದಿಲ್ಲಿಯ ಕೊರೆಯುವ ಚಳಿಯಲ್ಲಿ ಸತ್ತುಹೋದಾಗ ದೇಶದ ಘನತೆ, ಮರ್ಯಾದೆಯ ಪ್ರಶ್ನೆ ಎದೆಯಲ್ಲಿ ಮೂಡಲಿಲ್ಲವೇ? ರೈತರ ಮೇಲೆ ದಾಳಿಯಾದಾಗ, ಸುಳ್ಳು ಕೇಸು ಹಾಕಿದಾಗ ನಿಮ್ಮ ಆತ್ಮಸಾಕ್ಷಿ ಎಲ್ಲಿತ್ತು ಸರ್? ಆಳುವ ಪಕ್ಷದ ಗುಲಾಮಗಿರಿ ಮಾಡುವುದಕ್ಕಿಂತ ಜನರ ಪರವಾಗಿ ನಿಂತುಕೊಳ್ಳಿ. ಇತಿಹಾಸ ನೆನಪಿಸಿಕೊಳ್ಳುತ್ತದೆ. ನಾಚಿಕೆಯಾಗ ಬೇಕು ನಿಮಗೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಈ ಸರ್ಕಾರದಿಂದ ದೇಶಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಅಪಖ್ಯಾತಿ – ರಾಹುಲ್ ಗಾಂಧಿ

ಇದನ್ನೂ ಓದಿ: ಭ್ರಷ್ಟ ನಾಯಕರನ್ನು ಖರೀದಿಸಬಹುದು; ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನಲ್ಲ – ಮಮತ ಬ್ಯಾನರ್ಜಿ

ಇದನ್ನೂ ಓದಿ: ಅದಾನಿಗೆ ಮಂಗಳೂರು ಏರ್‌ಪೋರ್ಟ್ ಗುತ್ತಿಗೆ: ಕೇಂದ್ರಕ್ಕೆ ಕರ್ನಾಟಕ ಹೈಕೋರ್ಟ್ ನೋಟಿಸ್

ಇದನ್ನೂ ಓದಿ: ನೀವು ಸುಳ್ಳು ಹೇಳುವ ವಿಧಾನ ನನಗೆ ಇಷ್ಟ: ಕಂಗನಾಗೆ ಕುನಾಲ್ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ರಸ್ತೆಯನ್ನು ರಿಪೇರಿ ಮಾಡುವುದು ಬಿಟ್ಟ, ರೈತರ
    ಪರವಾದ ಬೇಡಿಕೆಯನ್ನು ನ್ಯಾಯೋಚಿತ ರೀತಿಯಲ್ಲಿ ಹೋರಾಟದ ಹಾದಿ ಹಿಡಿದವರ ಹಾದಿಗೆ ಮೊಳೆ ಹೊಡೆದವರ ಪರವಾದ ನಿಮ್ಮ ಗೂಗ್ಲಿ ಬೌಲಿಂಗ್ ಇಲ್ಲಿ ಟ್ವಿಸ್ಟ್ ಆಗೋದಿಲ್ಲ ಕುಂಬ್ಳೆ ಅಣ್ಣಾ…
    ನೀವೇನೋ ಕ್ರಿಕೆಟ್ ಆಟದಿಂದ ಗಳಿಸಿದ ಕೀರ್ತಿಗೆ ಬೇರಾರೂ ಕಾರಣರಲ್ಲ…ನಿಮ್ಮ ಯಶಸ್ಸಿನ ಪಾಲುದಾರಿಯಲ್ಲಿ ರೈತ, ಕಾರ್ಮಿಕರು ಕೂಡಾ…
    ಈ ಹೋರಾಟದಲ್ಲಿ ಹತ್ತಾರು ರೈತರ ಜೀವಗಳು ತ್ಯಾಗ
    ಬಲಿದಾನವಾಗಿವೆ.ನೀವೇನು ಅರ್ಪಿಸಬಲ್ಲಿರಿ ..?

  2. ಎಡ ಪಂಥಿಯರ ಯೋಚನೆಗಳು ಯಾವತ್ತೂ ಬಲಗೈಯಿಯವರು ಎಡಗೈಯಿಂದ ಮಾಡುವ ಕೆಲಸಗಳಿಗೆ ಸಮವಾಗಿರುತ್ತೆ.

  3. ಅನಿಲ್ ಕುಂಬ್ಳೆ ಅವರ ಬಗ್ಗೆ‌ ಇದ್ದ ಅದೆಷ್ಟು ಗೌರವದ ಬಂಡಲ್ಗಳು ಇಂದು ಉರುಳಿ ಬಿತ್ತು. ಅವರಿಗೆ ಆಳುವ ಪಕ್ಷದ ಎಂಎಲ್ಸಿ ಏನಾದರೂ ಆಗುವ ಮೊದಲ ಹರಕೆಯ ಉರುಳು ಸೇವೆ ಇದು.
    ರೈತರು ಯಾಕೆ ಚಳುವಳಿ ಮಾಡುತ್ತಿದ್ದಾರೆ ಅನ್ನುವ‌ ಕನಿಷ್ಠ ವಿಚಾರವೇ ಏನಾದರೂ ನಿಮಗೆ ತಿಳಿದಿದೆಯೇ?
    ಹತ್ತಿಕ್ಕಿ ದಿಕ್ಕು ತಪ್ಪಿಸುವ ಕೆಲಸಕ್ಕೆ ಕೈ ಹಾಕ ಬೇಡಿ…..ಪ್ಲೀನ್…

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...