Homeಮುಖಪುಟ’ನಾಚಿಕೆಯಾಗ ಬೇಕು ನಿಮಗೆ’: ಅನಿಲ್ ಕುಂಬ್ಳೆ ವಿರುದ್ದ ಕನ್ನಡಿಗರು ಸಿಡಿದಿದ್ದೇಕೆ?

’ನಾಚಿಕೆಯಾಗ ಬೇಕು ನಿಮಗೆ’: ಅನಿಲ್ ಕುಂಬ್ಳೆ ವಿರುದ್ದ ಕನ್ನಡಿಗರು ಸಿಡಿದಿದ್ದೇಕೆ?

- Advertisement -
- Advertisement -

ರೈತ ಪ್ರತಿಭಟನೆಯ ವರದಿಯೊಂದನ್ನು ಉಲ್ಲೇಖಿಸಿ, “ನಾವೇಕೆ ರೈತ ಪ್ರತಿಭಟನೆಯ ಬಗ್ಗೆ ಮಾತನಾಡುತ್ತಿಲ್ಲ?” ಎಂದು ಅಂತಾರಾಷ್ಟ್ರೀಯ ಪಾಪ್ ತಾರೆ ರಿಹಾನ್ನಾ ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ್ದರು. ಇದರ ನಂತರ ಭಾರತದ ರೈತ ಹೋರಾಟಕ್ಕೆ ಅಂತಾರಾಷ್ಟ್ರೀಯವಾಗಿ ಬೆಂಬಲ ಹೆಚ್ಚಾಗಿದ್ದು, ಅಂತಾರಾಷ್ಟ್ರೀಯ ಸೆಲೆಬ್ರಿಟಿಗಳು, ರಾಜಕಾರಣಿಗಳು, ಸಾಮಾಜಿಕ ಕಾರ್ಯಕರ್ತರು ಭಾರತೀಯ ರೈತರ ಪರವಾಗಿ ಧ್ವನಿ ಎತ್ತಿದ್ದಾರೆ.

ರೈತ ಹೋರಾಟಕ್ಕೆ ಜಾಗತಿಕವಾಗಿ ಬೆಂಬಲ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತ ವಿದೇಶಾಂಗ ಸಚಿವಾಲಯ, ರೈತ ಹೋರಾಟವು ದೇಶದ ಆಂತರಿಕ ಸಮಸ್ಯೆಯಾಗಿದ್ದು ವಿದೇಶಿಗರು ಇದರ ಬಗ್ಗೆ ಮಾತನಾಡಬಾರದು ಎಂದು ಹೇಳಿತ್ತು. ಜೊತೆಗೆ #FarmersProtest ಹ್ಯಾಶ್‌ಟ್ಯಾಗ್‌ಗೆ ವಿರುದ್ದವಾಗಿ ’ಇಂಡಿಯಾ ಟುಗೇದರ್‌’ ಮತ್ತು  ’ಇಂಡಿಯಾ ಅಗೇನ್ಸ್ಟ್‌‌ ಪ್ರೊಪಗಾಂಡ’ ಎಂಬ ಹ್ಯಾಶ್ ಟ್ಯಾಗನ್ನು ನೀಡಿತ್ತು.

ಇದನ್ನೂ ಓದಿ: ಕೇಂದ್ರ ಸರ್ಕಾರದ ಪರವಾಗಿ ಕಾಪಿ-ಪೇಸ್ಟ್ ಟ್ವೀಟ್: ಸಿಕ್ಕಿಬಿದ್ದ ಭಾರತೀಯ ಸೆಲೆಬ್ರಿಟಿಗಳು!

ಕೇಂದ್ರ ಸರ್ಕಾರ ನೀಡಿರುವ ಹ್ಯಾಶ್‌ಟ್ರಾಗ್ ಬಳಸಿ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಅನಿಲ್ ಕುಂಬ್ಳೆ, “ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಭಾರತ ದೇಶವು ತನ್ನ ಆಂತರಿಕ ಸಮಸ್ಯೆಗಳನ್ನು ಸೌಹಾರ್ದಯುತವಾಗಿ ಬಗೆಹರಿಸುವ ಸಾಮರ್ಥ್ಯ ಹೊಂದಿದೆ” ಎಂದು ಕೇಂದ್ರ ಸರ್ಕಾರದ ಪರವಾಗಿ ಬೌಲಿಂಗ್ ಮಾಡಿದ್ದರು.

ಇದರ ವಿರುದ್ದ ಕನ್ನಡಿಗರು ತಿರುಗಿಬಿದ್ದಿದ್ದು, ನೂರಕ್ಕೂ ಹೆಚ್ಚು ರೈತರು ದಿಲ್ಲಿಯ ಕೊರೆಯುವ ಚಳಿಯಲ್ಲಿ ಸತ್ತು ಹೋದಾಗ ದೇಶದ ಘನತೆ, ಮರ್ಯಾದೆಯ ಪ್ರಶ್ನೆ ಎದೆಯಲ್ಲಿ ಮೂಡಲಿಲ್ಲವೇ? ಆಳುವ ಪಕ್ಷದ ಗುಲಾಮಗಿರಿ ಮಾಡುವುದಕ್ಕಿಂತ ಜನರ ಪರವಾಗಿ ನಿಂತುಕೊಳ್ಳಿ. ಇತಿಹಾಸ ನೆನಪಿಸಿಕೊಳ್ಳುತ್ತದೆ. ನಾಚಿಕೆಯಾಗಬೇಕು ನಿಮಗೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ಗ್ರೇಥಾ ಥನ್‌‌ಬರ್ಗ್ ಮತ್ತು ಪಾಪ್‌ ಗಾಯಕಿ ರಿಹಾನ್ನಾ ಬೆಂಬಲ; ನೆಟ್ಟಿಗರ ಪ್ರತಿಕ್ರಿಯೆಯೇನು?

ಸಂಯುಕ್ತ ಹೋರಾಟ ಕರ್ನಾಟಕ, “ಪ್ರತಿಭಟನೆ ಶುರುವಾದಾಗಿಂದ ನೂರಕ್ಕು ಹೆಚ್ಚು ರೈತರು ಸತ್ತಿದ್ದಾರೆ‌. ಸೆಪ್ಟೆಂಬರ್‌ನಿಂದ ಕರ್ನಾಟಕದ‌ ಹಾಗೂ ಕೇಂದ್ರದ ಕೃಷಿ ಕಾಯಿದೆ ತಿದ್ದುಪಡಿಗಳನ್ನು ಕರ್ನಾಟಕದಲ್ಲಿ‌ ವಿರೋಧಿಸುತಿದ್ದೇವೆ. ಒಮ್ಮೆಯಾದರು ಬಂದು ನಮ್ಮ ರೈತರು ಏಕೆ‌ ಹೊರಾಡುತಿದ್ದಾರೆ ಕೇಳಿದಿರೆ ಕುಂಬ್ಳೆ ಅವರೆ ? ಈಗ ಏನು ಟ್ವೀಟ್‌ ಮಾಡೋದು. ನಿಮ್ಮ ನಿಲುವು ಬಹಳ‌ ನೋವು ತಂದಿದೆ” ಎಂದು ಹೇಳಿದೆ.

ಸಂಯುಕ್ತ ಹೋರಾಟ ಕರ್ನಾಟಕವು ರೈತ, ಕಾರ್ಮಿಕ, ಮಹಿಳಾ ಹಾಗೂ ವಿದ್ಯಾರ್ಥಿಗಳ ಸಂಯುಕ್ತ ಹೋರಾಟದ ಒಕ್ಕೂಟವಾಗಿದೆ.

ಲೇಖಕ ಶ್ರೀನಿವಾಸ ಕಾರ್ಕಾಳ ಅವರು, “ಮಾನವ ಹಕ್ಕುಗಳ ಉಲ್ಲಂಘನೆಯು ಯಾವುದೆ ದೇಶದ ಆಂತಕರಿಕ ವಿಷಯವಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿದ ರಿಹಾನ್ನಾ: ಗೌರವಾರ್ಥವಾಗಿ ಹಾಡು ಸಮರ್ಪಿಸಿದ ದಿಲ್ಜಿತ್‌!

ಚೇತನ್ ಕೃಷ್ಣಾ ಅವರು, “ಕನ್ನಡಿಗರಾಗಿ ನೀವು ಇಂತಹ ಮನೆ ಹಾಳು ಸರಕಾರಕ್ಕೆ ಬಕೆಟ್ ಹಿಡಿಯುವುದು ನ್ಯಾಯವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತೆ ರೇಖಾ ಶ್ರೀನಿವಾಸ್ ಅವರು, “ಅಮೇರಿಕದ ಮಾಜಿ ಅಧ್ಯಕ್ಷ ಟ್ರಂಪ್ ಭಾರತವನ್ನು ಕೊಳಕು ದೇಶ ಅಂದಾಗ ಯಾರು ಮಾತಾಡಲಿಲ್ಲ. ಆದರೆ ಇಲ್ಲಿನ ರೈತರ ಬಗ್ಗೆ ಅನುಕಂಪ ತೋರಿಸಿದ ವಿದೇಶಿಯರು ಮಾಡಿದ ಒಂದೇ ಒಂದು ಬರಹಕ್ಕೆ ಎಷ್ಟು ಮಾತಾಡುತಿರೋ. ಇಷ್ಟು ದಿನ ರೈತ ಬೆಳೆದ ಅನ್ನ ತಿಂದಿದ್ದಕ್ಕಾದ್ರು ಸ್ವಲ್ಪ ನಿಯತ್ತು ಇರಲಿ” ಎಂದು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ರಿಹಾನ್ನಾ ಟ್ವೀಟ್ ಪರಿಣಾಮ-ರೈತ ಹೋರಾಟಕ್ಕೆ ಜಾಗತಿಕ ಮನ್ನಣೆ!

ಕನ್ನಡ ಪರ ಹೋರಾಟಗಾರ ದಿನೇಶ್ ಕುಮಾರ್‌ ಅವರು, “ನೂರಕ್ಕೂ ಹೆಚ್ಚು ರೈತರು ದಿಲ್ಲಿಯ ಕೊರೆಯುವ ಚಳಿಯಲ್ಲಿ ಸತ್ತುಹೋದಾಗ ದೇಶದ ಘನತೆ, ಮರ್ಯಾದೆಯ ಪ್ರಶ್ನೆ ಎದೆಯಲ್ಲಿ ಮೂಡಲಿಲ್ಲವೇ? ರೈತರ ಮೇಲೆ ದಾಳಿಯಾದಾಗ, ಸುಳ್ಳು ಕೇಸು ಹಾಕಿದಾಗ ನಿಮ್ಮ ಆತ್ಮಸಾಕ್ಷಿ ಎಲ್ಲಿತ್ತು ಸರ್? ಆಳುವ ಪಕ್ಷದ ಗುಲಾಮಗಿರಿ ಮಾಡುವುದಕ್ಕಿಂತ ಜನರ ಪರವಾಗಿ ನಿಂತುಕೊಳ್ಳಿ. ಇತಿಹಾಸ ನೆನಪಿಸಿಕೊಳ್ಳುತ್ತದೆ. ನಾಚಿಕೆಯಾಗ ಬೇಕು ನಿಮಗೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಈ ಸರ್ಕಾರದಿಂದ ದೇಶಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಅಪಖ್ಯಾತಿ – ರಾಹುಲ್ ಗಾಂಧಿ

ಇದನ್ನೂ ಓದಿ: ಭ್ರಷ್ಟ ನಾಯಕರನ್ನು ಖರೀದಿಸಬಹುದು; ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನಲ್ಲ – ಮಮತ ಬ್ಯಾನರ್ಜಿ

ಇದನ್ನೂ ಓದಿ: ಅದಾನಿಗೆ ಮಂಗಳೂರು ಏರ್‌ಪೋರ್ಟ್ ಗುತ್ತಿಗೆ: ಕೇಂದ್ರಕ್ಕೆ ಕರ್ನಾಟಕ ಹೈಕೋರ್ಟ್ ನೋಟಿಸ್

ಇದನ್ನೂ ಓದಿ: ನೀವು ಸುಳ್ಳು ಹೇಳುವ ವಿಧಾನ ನನಗೆ ಇಷ್ಟ: ಕಂಗನಾಗೆ ಕುನಾಲ್ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ರಸ್ತೆಯನ್ನು ರಿಪೇರಿ ಮಾಡುವುದು ಬಿಟ್ಟ, ರೈತರ
    ಪರವಾದ ಬೇಡಿಕೆಯನ್ನು ನ್ಯಾಯೋಚಿತ ರೀತಿಯಲ್ಲಿ ಹೋರಾಟದ ಹಾದಿ ಹಿಡಿದವರ ಹಾದಿಗೆ ಮೊಳೆ ಹೊಡೆದವರ ಪರವಾದ ನಿಮ್ಮ ಗೂಗ್ಲಿ ಬೌಲಿಂಗ್ ಇಲ್ಲಿ ಟ್ವಿಸ್ಟ್ ಆಗೋದಿಲ್ಲ ಕುಂಬ್ಳೆ ಅಣ್ಣಾ…
    ನೀವೇನೋ ಕ್ರಿಕೆಟ್ ಆಟದಿಂದ ಗಳಿಸಿದ ಕೀರ್ತಿಗೆ ಬೇರಾರೂ ಕಾರಣರಲ್ಲ…ನಿಮ್ಮ ಯಶಸ್ಸಿನ ಪಾಲುದಾರಿಯಲ್ಲಿ ರೈತ, ಕಾರ್ಮಿಕರು ಕೂಡಾ…
    ಈ ಹೋರಾಟದಲ್ಲಿ ಹತ್ತಾರು ರೈತರ ಜೀವಗಳು ತ್ಯಾಗ
    ಬಲಿದಾನವಾಗಿವೆ.ನೀವೇನು ಅರ್ಪಿಸಬಲ್ಲಿರಿ ..?

  2. ಎಡ ಪಂಥಿಯರ ಯೋಚನೆಗಳು ಯಾವತ್ತೂ ಬಲಗೈಯಿಯವರು ಎಡಗೈಯಿಂದ ಮಾಡುವ ಕೆಲಸಗಳಿಗೆ ಸಮವಾಗಿರುತ್ತೆ.

  3. ಅನಿಲ್ ಕುಂಬ್ಳೆ ಅವರ ಬಗ್ಗೆ‌ ಇದ್ದ ಅದೆಷ್ಟು ಗೌರವದ ಬಂಡಲ್ಗಳು ಇಂದು ಉರುಳಿ ಬಿತ್ತು. ಅವರಿಗೆ ಆಳುವ ಪಕ್ಷದ ಎಂಎಲ್ಸಿ ಏನಾದರೂ ಆಗುವ ಮೊದಲ ಹರಕೆಯ ಉರುಳು ಸೇವೆ ಇದು.
    ರೈತರು ಯಾಕೆ ಚಳುವಳಿ ಮಾಡುತ್ತಿದ್ದಾರೆ ಅನ್ನುವ‌ ಕನಿಷ್ಠ ವಿಚಾರವೇ ಏನಾದರೂ ನಿಮಗೆ ತಿಳಿದಿದೆಯೇ?
    ಹತ್ತಿಕ್ಕಿ ದಿಕ್ಕು ತಪ್ಪಿಸುವ ಕೆಲಸಕ್ಕೆ ಕೈ ಹಾಕ ಬೇಡಿ…..ಪ್ಲೀನ್…

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...