Homeಮುಖಪುಟ’ನಾಚಿಕೆಯಾಗ ಬೇಕು ನಿಮಗೆ’: ಅನಿಲ್ ಕುಂಬ್ಳೆ ವಿರುದ್ದ ಕನ್ನಡಿಗರು ಸಿಡಿದಿದ್ದೇಕೆ?

’ನಾಚಿಕೆಯಾಗ ಬೇಕು ನಿಮಗೆ’: ಅನಿಲ್ ಕುಂಬ್ಳೆ ವಿರುದ್ದ ಕನ್ನಡಿಗರು ಸಿಡಿದಿದ್ದೇಕೆ?

- Advertisement -
- Advertisement -

ರೈತ ಪ್ರತಿಭಟನೆಯ ವರದಿಯೊಂದನ್ನು ಉಲ್ಲೇಖಿಸಿ, “ನಾವೇಕೆ ರೈತ ಪ್ರತಿಭಟನೆಯ ಬಗ್ಗೆ ಮಾತನಾಡುತ್ತಿಲ್ಲ?” ಎಂದು ಅಂತಾರಾಷ್ಟ್ರೀಯ ಪಾಪ್ ತಾರೆ ರಿಹಾನ್ನಾ ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ್ದರು. ಇದರ ನಂತರ ಭಾರತದ ರೈತ ಹೋರಾಟಕ್ಕೆ ಅಂತಾರಾಷ್ಟ್ರೀಯವಾಗಿ ಬೆಂಬಲ ಹೆಚ್ಚಾಗಿದ್ದು, ಅಂತಾರಾಷ್ಟ್ರೀಯ ಸೆಲೆಬ್ರಿಟಿಗಳು, ರಾಜಕಾರಣಿಗಳು, ಸಾಮಾಜಿಕ ಕಾರ್ಯಕರ್ತರು ಭಾರತೀಯ ರೈತರ ಪರವಾಗಿ ಧ್ವನಿ ಎತ್ತಿದ್ದಾರೆ.

ರೈತ ಹೋರಾಟಕ್ಕೆ ಜಾಗತಿಕವಾಗಿ ಬೆಂಬಲ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತ ವಿದೇಶಾಂಗ ಸಚಿವಾಲಯ, ರೈತ ಹೋರಾಟವು ದೇಶದ ಆಂತರಿಕ ಸಮಸ್ಯೆಯಾಗಿದ್ದು ವಿದೇಶಿಗರು ಇದರ ಬಗ್ಗೆ ಮಾತನಾಡಬಾರದು ಎಂದು ಹೇಳಿತ್ತು. ಜೊತೆಗೆ #FarmersProtest ಹ್ಯಾಶ್‌ಟ್ಯಾಗ್‌ಗೆ ವಿರುದ್ದವಾಗಿ ’ಇಂಡಿಯಾ ಟುಗೇದರ್‌’ ಮತ್ತು  ’ಇಂಡಿಯಾ ಅಗೇನ್ಸ್ಟ್‌‌ ಪ್ರೊಪಗಾಂಡ’ ಎಂಬ ಹ್ಯಾಶ್ ಟ್ಯಾಗನ್ನು ನೀಡಿತ್ತು.

ಇದನ್ನೂ ಓದಿ: ಕೇಂದ್ರ ಸರ್ಕಾರದ ಪರವಾಗಿ ಕಾಪಿ-ಪೇಸ್ಟ್ ಟ್ವೀಟ್: ಸಿಕ್ಕಿಬಿದ್ದ ಭಾರತೀಯ ಸೆಲೆಬ್ರಿಟಿಗಳು!

ಕೇಂದ್ರ ಸರ್ಕಾರ ನೀಡಿರುವ ಹ್ಯಾಶ್‌ಟ್ರಾಗ್ ಬಳಸಿ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಅನಿಲ್ ಕುಂಬ್ಳೆ, “ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಭಾರತ ದೇಶವು ತನ್ನ ಆಂತರಿಕ ಸಮಸ್ಯೆಗಳನ್ನು ಸೌಹಾರ್ದಯುತವಾಗಿ ಬಗೆಹರಿಸುವ ಸಾಮರ್ಥ್ಯ ಹೊಂದಿದೆ” ಎಂದು ಕೇಂದ್ರ ಸರ್ಕಾರದ ಪರವಾಗಿ ಬೌಲಿಂಗ್ ಮಾಡಿದ್ದರು.

ಇದರ ವಿರುದ್ದ ಕನ್ನಡಿಗರು ತಿರುಗಿಬಿದ್ದಿದ್ದು, ನೂರಕ್ಕೂ ಹೆಚ್ಚು ರೈತರು ದಿಲ್ಲಿಯ ಕೊರೆಯುವ ಚಳಿಯಲ್ಲಿ ಸತ್ತು ಹೋದಾಗ ದೇಶದ ಘನತೆ, ಮರ್ಯಾದೆಯ ಪ್ರಶ್ನೆ ಎದೆಯಲ್ಲಿ ಮೂಡಲಿಲ್ಲವೇ? ಆಳುವ ಪಕ್ಷದ ಗುಲಾಮಗಿರಿ ಮಾಡುವುದಕ್ಕಿಂತ ಜನರ ಪರವಾಗಿ ನಿಂತುಕೊಳ್ಳಿ. ಇತಿಹಾಸ ನೆನಪಿಸಿಕೊಳ್ಳುತ್ತದೆ. ನಾಚಿಕೆಯಾಗಬೇಕು ನಿಮಗೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ಗ್ರೇಥಾ ಥನ್‌‌ಬರ್ಗ್ ಮತ್ತು ಪಾಪ್‌ ಗಾಯಕಿ ರಿಹಾನ್ನಾ ಬೆಂಬಲ; ನೆಟ್ಟಿಗರ ಪ್ರತಿಕ್ರಿಯೆಯೇನು?

ಸಂಯುಕ್ತ ಹೋರಾಟ ಕರ್ನಾಟಕ, “ಪ್ರತಿಭಟನೆ ಶುರುವಾದಾಗಿಂದ ನೂರಕ್ಕು ಹೆಚ್ಚು ರೈತರು ಸತ್ತಿದ್ದಾರೆ‌. ಸೆಪ್ಟೆಂಬರ್‌ನಿಂದ ಕರ್ನಾಟಕದ‌ ಹಾಗೂ ಕೇಂದ್ರದ ಕೃಷಿ ಕಾಯಿದೆ ತಿದ್ದುಪಡಿಗಳನ್ನು ಕರ್ನಾಟಕದಲ್ಲಿ‌ ವಿರೋಧಿಸುತಿದ್ದೇವೆ. ಒಮ್ಮೆಯಾದರು ಬಂದು ನಮ್ಮ ರೈತರು ಏಕೆ‌ ಹೊರಾಡುತಿದ್ದಾರೆ ಕೇಳಿದಿರೆ ಕುಂಬ್ಳೆ ಅವರೆ ? ಈಗ ಏನು ಟ್ವೀಟ್‌ ಮಾಡೋದು. ನಿಮ್ಮ ನಿಲುವು ಬಹಳ‌ ನೋವು ತಂದಿದೆ” ಎಂದು ಹೇಳಿದೆ.

ಸಂಯುಕ್ತ ಹೋರಾಟ ಕರ್ನಾಟಕವು ರೈತ, ಕಾರ್ಮಿಕ, ಮಹಿಳಾ ಹಾಗೂ ವಿದ್ಯಾರ್ಥಿಗಳ ಸಂಯುಕ್ತ ಹೋರಾಟದ ಒಕ್ಕೂಟವಾಗಿದೆ.

ಲೇಖಕ ಶ್ರೀನಿವಾಸ ಕಾರ್ಕಾಳ ಅವರು, “ಮಾನವ ಹಕ್ಕುಗಳ ಉಲ್ಲಂಘನೆಯು ಯಾವುದೆ ದೇಶದ ಆಂತಕರಿಕ ವಿಷಯವಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿದ ರಿಹಾನ್ನಾ: ಗೌರವಾರ್ಥವಾಗಿ ಹಾಡು ಸಮರ್ಪಿಸಿದ ದಿಲ್ಜಿತ್‌!

ಚೇತನ್ ಕೃಷ್ಣಾ ಅವರು, “ಕನ್ನಡಿಗರಾಗಿ ನೀವು ಇಂತಹ ಮನೆ ಹಾಳು ಸರಕಾರಕ್ಕೆ ಬಕೆಟ್ ಹಿಡಿಯುವುದು ನ್ಯಾಯವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತೆ ರೇಖಾ ಶ್ರೀನಿವಾಸ್ ಅವರು, “ಅಮೇರಿಕದ ಮಾಜಿ ಅಧ್ಯಕ್ಷ ಟ್ರಂಪ್ ಭಾರತವನ್ನು ಕೊಳಕು ದೇಶ ಅಂದಾಗ ಯಾರು ಮಾತಾಡಲಿಲ್ಲ. ಆದರೆ ಇಲ್ಲಿನ ರೈತರ ಬಗ್ಗೆ ಅನುಕಂಪ ತೋರಿಸಿದ ವಿದೇಶಿಯರು ಮಾಡಿದ ಒಂದೇ ಒಂದು ಬರಹಕ್ಕೆ ಎಷ್ಟು ಮಾತಾಡುತಿರೋ. ಇಷ್ಟು ದಿನ ರೈತ ಬೆಳೆದ ಅನ್ನ ತಿಂದಿದ್ದಕ್ಕಾದ್ರು ಸ್ವಲ್ಪ ನಿಯತ್ತು ಇರಲಿ” ಎಂದು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ರಿಹಾನ್ನಾ ಟ್ವೀಟ್ ಪರಿಣಾಮ-ರೈತ ಹೋರಾಟಕ್ಕೆ ಜಾಗತಿಕ ಮನ್ನಣೆ!

ಕನ್ನಡ ಪರ ಹೋರಾಟಗಾರ ದಿನೇಶ್ ಕುಮಾರ್‌ ಅವರು, “ನೂರಕ್ಕೂ ಹೆಚ್ಚು ರೈತರು ದಿಲ್ಲಿಯ ಕೊರೆಯುವ ಚಳಿಯಲ್ಲಿ ಸತ್ತುಹೋದಾಗ ದೇಶದ ಘನತೆ, ಮರ್ಯಾದೆಯ ಪ್ರಶ್ನೆ ಎದೆಯಲ್ಲಿ ಮೂಡಲಿಲ್ಲವೇ? ರೈತರ ಮೇಲೆ ದಾಳಿಯಾದಾಗ, ಸುಳ್ಳು ಕೇಸು ಹಾಕಿದಾಗ ನಿಮ್ಮ ಆತ್ಮಸಾಕ್ಷಿ ಎಲ್ಲಿತ್ತು ಸರ್? ಆಳುವ ಪಕ್ಷದ ಗುಲಾಮಗಿರಿ ಮಾಡುವುದಕ್ಕಿಂತ ಜನರ ಪರವಾಗಿ ನಿಂತುಕೊಳ್ಳಿ. ಇತಿಹಾಸ ನೆನಪಿಸಿಕೊಳ್ಳುತ್ತದೆ. ನಾಚಿಕೆಯಾಗ ಬೇಕು ನಿಮಗೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಈ ಸರ್ಕಾರದಿಂದ ದೇಶಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಅಪಖ್ಯಾತಿ – ರಾಹುಲ್ ಗಾಂಧಿ

ಇದನ್ನೂ ಓದಿ: ಭ್ರಷ್ಟ ನಾಯಕರನ್ನು ಖರೀದಿಸಬಹುದು; ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನಲ್ಲ – ಮಮತ ಬ್ಯಾನರ್ಜಿ

ಇದನ್ನೂ ಓದಿ: ಅದಾನಿಗೆ ಮಂಗಳೂರು ಏರ್‌ಪೋರ್ಟ್ ಗುತ್ತಿಗೆ: ಕೇಂದ್ರಕ್ಕೆ ಕರ್ನಾಟಕ ಹೈಕೋರ್ಟ್ ನೋಟಿಸ್

ಇದನ್ನೂ ಓದಿ: ನೀವು ಸುಳ್ಳು ಹೇಳುವ ವಿಧಾನ ನನಗೆ ಇಷ್ಟ: ಕಂಗನಾಗೆ ಕುನಾಲ್ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ರಸ್ತೆಯನ್ನು ರಿಪೇರಿ ಮಾಡುವುದು ಬಿಟ್ಟ, ರೈತರ
    ಪರವಾದ ಬೇಡಿಕೆಯನ್ನು ನ್ಯಾಯೋಚಿತ ರೀತಿಯಲ್ಲಿ ಹೋರಾಟದ ಹಾದಿ ಹಿಡಿದವರ ಹಾದಿಗೆ ಮೊಳೆ ಹೊಡೆದವರ ಪರವಾದ ನಿಮ್ಮ ಗೂಗ್ಲಿ ಬೌಲಿಂಗ್ ಇಲ್ಲಿ ಟ್ವಿಸ್ಟ್ ಆಗೋದಿಲ್ಲ ಕುಂಬ್ಳೆ ಅಣ್ಣಾ…
    ನೀವೇನೋ ಕ್ರಿಕೆಟ್ ಆಟದಿಂದ ಗಳಿಸಿದ ಕೀರ್ತಿಗೆ ಬೇರಾರೂ ಕಾರಣರಲ್ಲ…ನಿಮ್ಮ ಯಶಸ್ಸಿನ ಪಾಲುದಾರಿಯಲ್ಲಿ ರೈತ, ಕಾರ್ಮಿಕರು ಕೂಡಾ…
    ಈ ಹೋರಾಟದಲ್ಲಿ ಹತ್ತಾರು ರೈತರ ಜೀವಗಳು ತ್ಯಾಗ
    ಬಲಿದಾನವಾಗಿವೆ.ನೀವೇನು ಅರ್ಪಿಸಬಲ್ಲಿರಿ ..?

  2. ಎಡ ಪಂಥಿಯರ ಯೋಚನೆಗಳು ಯಾವತ್ತೂ ಬಲಗೈಯಿಯವರು ಎಡಗೈಯಿಂದ ಮಾಡುವ ಕೆಲಸಗಳಿಗೆ ಸಮವಾಗಿರುತ್ತೆ.

  3. ಅನಿಲ್ ಕುಂಬ್ಳೆ ಅವರ ಬಗ್ಗೆ‌ ಇದ್ದ ಅದೆಷ್ಟು ಗೌರವದ ಬಂಡಲ್ಗಳು ಇಂದು ಉರುಳಿ ಬಿತ್ತು. ಅವರಿಗೆ ಆಳುವ ಪಕ್ಷದ ಎಂಎಲ್ಸಿ ಏನಾದರೂ ಆಗುವ ಮೊದಲ ಹರಕೆಯ ಉರುಳು ಸೇವೆ ಇದು.
    ರೈತರು ಯಾಕೆ ಚಳುವಳಿ ಮಾಡುತ್ತಿದ್ದಾರೆ ಅನ್ನುವ‌ ಕನಿಷ್ಠ ವಿಚಾರವೇ ಏನಾದರೂ ನಿಮಗೆ ತಿಳಿದಿದೆಯೇ?
    ಹತ್ತಿಕ್ಕಿ ದಿಕ್ಕು ತಪ್ಪಿಸುವ ಕೆಲಸಕ್ಕೆ ಕೈ ಹಾಕ ಬೇಡಿ…..ಪ್ಲೀನ್…

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...