Homeದಲಿತ್ ಫೈಲ್ಸ್‘ನೀನು ಕೂಲಿ ಕೆಲಸ ಮಾಡಬೇಕು, ಶಾಲೆಯಲ್ಲಿ ಅಡುಗೆಯನ್ನಲ್ಲ’: 6 ತಿಂಗಳಾದರೂ ದಲಿತ ಮಹಿಳೆಗೆ ನಿಲ್ಲದ ಕಿರುಕುಳ

‘ನೀನು ಕೂಲಿ ಕೆಲಸ ಮಾಡಬೇಕು, ಶಾಲೆಯಲ್ಲಿ ಅಡುಗೆಯನ್ನಲ್ಲ’: 6 ತಿಂಗಳಾದರೂ ದಲಿತ ಮಹಿಳೆಗೆ ನಿಲ್ಲದ ಕಿರುಕುಳ

ದಲಿತ ಮಹಿಳೆ ಸುನೀತಾ ಅವರು ದಾಖಲಿಸಿರುವ ಪ್ರಕರಣವನ್ನು ವಾಪಸ್‌ ಪಡೆಯುವಂತೆ ಒತ್ತಡ ಹೇರಲು ಸಂಬಳ ನೀಡದೆ ತೊಂದರೆ ನೀಡಲಾಗುತ್ತಿದೆ.

- Advertisement -
- Advertisement -

ದಲಿತ ಭೋಜನ್ಮಾತಾ (ಬಿಸಿಯೂಟದ ಸಿಬ್ಬಂದಿ) ಸುನಿತಾ ದೇವಿ ಅವರು ಬೇಯಿಸಿದ ಮಧ್ಯಾಹ್ನದ ಊಟವನ್ನು ಕೆಲವು ಮೇಲ್ಜಾತಿಯ ವಿದ್ಯಾರ್ಥಿಗಳು ನಿರಾಕರಿಸಿದ ಪ್ರಕರಣ ನಡೆದು ಆರು ತಿಂಗಳಾಯಿತು. ಆದರೆ ಇಷ್ಟು ದಿನದ ನಂತರವೂ ಚಂಪಾವತ್‌ನ ಸುಖಿದಂಗ್ ಸರ್ಕಾರಿ ಅಂತರ ಕಾಲೇಜಿನಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸವರ್ಣೀಯ ಜಾತಿಯ ಮಕ್ಕಳು ಅಸ್ಪೃಶ್ಯತೆ ಆಚರಿಸುವುದನ್ನು ಮುಂದುರಿಸಿದ್ದಾರೆ.

“ವಿದ್ಯಾರ್ಥಿಗಳು ನಾನು ಬೇಯಿಸಿದ ಊಟವನ್ನು ತಿನ್ನಲು ನಿರಾಕರಿಸುತ್ತಿದ್ದಾರೆ ಮಾತ್ರವಲ್ಲ, ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮದಡಿಯಲ್ಲಿ ನೀಡಲಾಗುವ ಹಾಲನ್ನೂ ಬೇಡ ಎನ್ನುತ್ತಿದ್ದಾರೆ” ಎಂದು ಸುನೀತಾ ಶನಿವಾರ ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚಂಪಾವತ್‌ನ ಡಿಎಂ ನರೇಂದರ್ ಸಿಂಗ್ ಭಂಡಾರಿ ಅವರು ಇತ್ತೀಚೆಗೆ ಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಸೂಚನೆಯನ್ನೂ ನೀಡಿ, “ಜಾತಿ ತಾರತಮ್ಯದಿಂದ ಹೊರಬರಬೇಕು” ಎಂದು ತಿಳಿಸಿದ್ದಾರೆ.

ಕೆಲವು ಮೇಲ್ವರ್ಗದ ವಿದ್ಯಾರ್ಥಿಗಳ ಪೋಷಕರು, “ದಲಿತ ಮಹಿಳೆ ಮಾಡಿದ ಊಟವನ್ನು ಬಲವಂತವಾಗಿ ನಮ್ಮ ಮಕ್ಕಳಿಗೆ ನೀಡಬಾರದು” ಎಂದು ಆಗ್ರಹಿಸಿದ್ದಾರೆ.

ಶಾಲೆಯಲ್ಲಿ 57 ವಿದ್ಯಾರ್ಥಿಗಳಿದ್ದಾರೆ. ಸಾಮಾನ್ಯ ವರ್ಗದ 37 ವಿದ್ಯಾರ್ಥಿಗಳು, ಎಸ್‌ಸಿ ಸಮುದಾಯದಿಂದ 20 ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

“ನಾನು ಅಡುಗೆ ಕೆಲಸ ಬಿಟ್ಟು ಕೂಲಿ ಕೆಲಸ ಮಾಡಬೇಕೆಂದು ಮಕ್ಕಳು ಬಯಸುತ್ತಾರೆ” ಎನ್ನುತ್ತಾರೆ ಸುನಿತಾ. ಇಲ್ಲಿ ಇಬ್ಬರು ಅಡುಗೆಯವರು ಇದ್ದು, ಸಾಮಾನ್ಯ ವರ್ಗದ ವಿಮಲಾ ಉಪ್ರೇತಿ 2016ರಲ್ಲಿ ನೇಮಕವಾಗಿದ್ದಾರೆ. ದಲಿತರಾದ ಸುನಿತಾ ದೇವಿ ಅವರು ಈ ವರ್ಷದ ಜನವರಿಯಲ್ಲಿ ಮರುಸೇರ್ಪಡೆಯಾಗಿದ್ದಾರೆ.

‘ಟೈಮ್ಸ್ ಆಫ್‌ ಇಂಡಿಯಾ’ ಜೊತೆ ಮಾತನಾಡಿರುವ ಸುನೀತಾ, “ನಾನು ತಯಾರಿಸಿದ ಊಟವನ್ನು ಡಿಎಂ ಕೋರಿಕೆಯ ನಂತರವೂ ಅವರು ತಿನ್ನಲು ಸಿದ್ಧರಿಲ್ಲ. ಆದರೆ, ಇತರ ಭೋಜನ್ಮಾತಾ ವಿಷಯದಲ್ಲಿ ಹೀಗಾಗಿಲ್ಲ. ನನ್ನ ಬಗೆಗೆ ಇರುವ ತಾರತಮ್ಯದ ಮನೋಭಾವವನ್ನು ಅಧಿಕಾರಿಗಳಿಂದ ಬದಲಾಯಿಸಲು ಸಾಧ್ಯವಾಗದಿದ್ದಾಗ, ಇನ್ಯಾರೂ ಸರಿಪಡಿಸಬಲ್ಲರು?” ಎಂದು ಪ್ರಶ್ನಿಸಿದ್ದಾರೆ.

“ಶಾಲೆಯ ಪೋಷಕರು-ಶಿಕ್ಷಕರ ಸಂಘದ ಅಧ್ಯಕ್ಷರು ನನ್ನ ವೇತನವನ್ನು (ಮೇ ತಿಂಗಳಿಗೆ) ಒಂದು ತಿಂಗಳಿನಿಂದ ತಡೆಹಿಡಿದಿದ್ದಾರೆ. ನಾನು ಶಾಲೆಯ ಕೆಲಸವನ್ನು ಬಿಟ್ಟು ಕೂಲಿ ಕೆಲಸ ಮಾಡಬೇಕೆಂದು ಗ್ರಾಮದ ಕೆಲವು ಸವರ್ಣೀಯರು ಬಯಸುತ್ತಿದ್ದಾರೆ” ಎಂದು ಸುನೀತಾ ಆರೋಪಿಸಿದ್ದಾರೆ.

“ಅಧ್ಯಕ್ಷರು ನನ್ನ ವೇತನದ ಚೆಕ್‌ಗೆ ಸಹಿ ಹಾಕಲು ನಿರಾಕರಿಸುತ್ತಿದ್ದಾರೆ. ಈ ವರ್ಷದ ಆರಂಭದಲ್ಲಿ ನಾನು ನೀಡಿದ ದೂರಿನ ಆಧಾರದಲ್ಲಿ ಅಧ್ಯಕ್ಷರು ಮತ್ತು ಇತರರ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಹಿಂಪಡೆಯುವಂತೆ ಈ ಮೂಲಕ ಒತ್ತಡ ಹಾಕಲಾಗುತ್ತಿದೆ. ಆದರೆ ನಾನು ಪ್ರಕರಣವನ್ನು ಹಿಂಪಡೆಯುವುದಿಲ್ಲ, ಅದು ನನ್ನ ಘನತೆಯ ವಿಷಯ” ಎಂದಿದ್ದಾರೆ ಸುನೀತಾ.

ಹಲವು ಬಾರಿ ಪ್ರಯತ್ನಿಸಿದರೂ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಲು ಸಾಧ್ಯವಾಗಲಿಲ್ಲ ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ. ಅಲ್ಲದೆ ಈಗ ಆಗುತ್ತಿರುವ ಬೆಳವಣಿಗೆಗಳು ನಿಜವೆಂದು ಶಾಲೆಯ ನಿರ್ವಹಣಾ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ ಎಂದು ಪತ್ರಿಕೆ ಸ್ಪಷ್ಟಪಡಿಸಿದೆ.

ಇದನ್ನೂ ಓದಿರಿ: ಉತ್ತರಾಖಾಂಡ್‌: ದಲಿತ ಮಹಿಳೆ ಬೇಯಿಸಿದ ಆಹಾರ ಸೇವಿಸಲು ಮತ್ತೆ ನಿರಾಕರಿಸಿದ ಸವರ್ಣೀಯ ವಿದ್ಯಾರ್ಥಿಗಳು

ಇದೇ ವೇಳೆ ಮಾತನಾಡಿರುವ ಜಿಲ್ಲಾ ಮುಖ್ಯ ಶಿಕ್ಷಣಾಧಿಕಾರಿ ಜಿತೇಂದ್ರ ಸಕ್ಸೇನಾ, “ಸಂಬಳದ ವಿಚಾರ ನನ್ನ ಅರಿವಿಗೆ ಬಂದಿರಲಿಲ್ಲ. ಸಂಬಳ ಸಿಗುವಂತೆ ಕ್ರಮಕೈಗೊಳ್ಳುತ್ತೇವೆ. ಸುನೀತಾ ಅವರು ತಯಾರಿಸಿದ ಊಟವನ್ನು ತಿನ್ನಲು ವಿದ್ಯಾರ್ಥಿಗಳು ನಿರಾಕರಿಸುತ್ತಲೇ ಇದ್ದಾರೆ. ಈ ತಾರತಮ್ಯವನ್ನು ಬದಲಾಯಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗಿದೆ. ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ಸುನೀತಾ ದೇವಿ ಅವರನ್ನು ಸರಿಯಾದ ಕಾರ್ಯವಿಧಾನದ ಪ್ರಕಾರ ನೇಮಕ ಮಾಡಿರುವುದರಿಂದ ಅವರನ್ನು ಕೆಲಸದಿಂದ ತೆಗೆಯಲು ಸಾಧ್ಯವಿಲ್ಲ” ಎಂದಿದ್ದಾರೆ.

ಕಳೆದ ವರ್ಷ ಈ ಘಟನೆಯ ಬಗ್ಗೆ ವರದಿ ಮಾಡಿದಾಗ ಸುನೀತಾ ಅವರಿಗೆ ಆಗಿರುವ ತಾರತಮ್ಯ ಬೆಳಕಿಗೆ ಬಂದಿತು. ದಲಿತ ಮಹಿಳೆಯ ನೇಮಕಾತಿಯನ್ನು ಜಿಲ್ಲೆಯ ಮುಖ್ಯ ಶಿಕ್ಷಣಾಧಿಕಾರಿ ರದ್ದು ಮಾಡಿದ್ದರು. ಕೆಲವು ದಿನಗಳ ನಂತರ, ಚಂಪಾವತ್ ಜಿಲ್ಲಾಡಳಿತವು ಸುನೀತಾ ಅವರನ್ನು ಮರು ನೇಮಕ ಮಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...