Homeದಲಿತ್ ಫೈಲ್ಸ್‘ನೀನು ಕೂಲಿ ಕೆಲಸ ಮಾಡಬೇಕು, ಶಾಲೆಯಲ್ಲಿ ಅಡುಗೆಯನ್ನಲ್ಲ’: 6 ತಿಂಗಳಾದರೂ ದಲಿತ ಮಹಿಳೆಗೆ ನಿಲ್ಲದ ಕಿರುಕುಳ

‘ನೀನು ಕೂಲಿ ಕೆಲಸ ಮಾಡಬೇಕು, ಶಾಲೆಯಲ್ಲಿ ಅಡುಗೆಯನ್ನಲ್ಲ’: 6 ತಿಂಗಳಾದರೂ ದಲಿತ ಮಹಿಳೆಗೆ ನಿಲ್ಲದ ಕಿರುಕುಳ

ದಲಿತ ಮಹಿಳೆ ಸುನೀತಾ ಅವರು ದಾಖಲಿಸಿರುವ ಪ್ರಕರಣವನ್ನು ವಾಪಸ್‌ ಪಡೆಯುವಂತೆ ಒತ್ತಡ ಹೇರಲು ಸಂಬಳ ನೀಡದೆ ತೊಂದರೆ ನೀಡಲಾಗುತ್ತಿದೆ.

- Advertisement -
- Advertisement -

ದಲಿತ ಭೋಜನ್ಮಾತಾ (ಬಿಸಿಯೂಟದ ಸಿಬ್ಬಂದಿ) ಸುನಿತಾ ದೇವಿ ಅವರು ಬೇಯಿಸಿದ ಮಧ್ಯಾಹ್ನದ ಊಟವನ್ನು ಕೆಲವು ಮೇಲ್ಜಾತಿಯ ವಿದ್ಯಾರ್ಥಿಗಳು ನಿರಾಕರಿಸಿದ ಪ್ರಕರಣ ನಡೆದು ಆರು ತಿಂಗಳಾಯಿತು. ಆದರೆ ಇಷ್ಟು ದಿನದ ನಂತರವೂ ಚಂಪಾವತ್‌ನ ಸುಖಿದಂಗ್ ಸರ್ಕಾರಿ ಅಂತರ ಕಾಲೇಜಿನಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸವರ್ಣೀಯ ಜಾತಿಯ ಮಕ್ಕಳು ಅಸ್ಪೃಶ್ಯತೆ ಆಚರಿಸುವುದನ್ನು ಮುಂದುರಿಸಿದ್ದಾರೆ.

“ವಿದ್ಯಾರ್ಥಿಗಳು ನಾನು ಬೇಯಿಸಿದ ಊಟವನ್ನು ತಿನ್ನಲು ನಿರಾಕರಿಸುತ್ತಿದ್ದಾರೆ ಮಾತ್ರವಲ್ಲ, ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮದಡಿಯಲ್ಲಿ ನೀಡಲಾಗುವ ಹಾಲನ್ನೂ ಬೇಡ ಎನ್ನುತ್ತಿದ್ದಾರೆ” ಎಂದು ಸುನೀತಾ ಶನಿವಾರ ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚಂಪಾವತ್‌ನ ಡಿಎಂ ನರೇಂದರ್ ಸಿಂಗ್ ಭಂಡಾರಿ ಅವರು ಇತ್ತೀಚೆಗೆ ಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಸೂಚನೆಯನ್ನೂ ನೀಡಿ, “ಜಾತಿ ತಾರತಮ್ಯದಿಂದ ಹೊರಬರಬೇಕು” ಎಂದು ತಿಳಿಸಿದ್ದಾರೆ.

ಕೆಲವು ಮೇಲ್ವರ್ಗದ ವಿದ್ಯಾರ್ಥಿಗಳ ಪೋಷಕರು, “ದಲಿತ ಮಹಿಳೆ ಮಾಡಿದ ಊಟವನ್ನು ಬಲವಂತವಾಗಿ ನಮ್ಮ ಮಕ್ಕಳಿಗೆ ನೀಡಬಾರದು” ಎಂದು ಆಗ್ರಹಿಸಿದ್ದಾರೆ.

ಶಾಲೆಯಲ್ಲಿ 57 ವಿದ್ಯಾರ್ಥಿಗಳಿದ್ದಾರೆ. ಸಾಮಾನ್ಯ ವರ್ಗದ 37 ವಿದ್ಯಾರ್ಥಿಗಳು, ಎಸ್‌ಸಿ ಸಮುದಾಯದಿಂದ 20 ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

“ನಾನು ಅಡುಗೆ ಕೆಲಸ ಬಿಟ್ಟು ಕೂಲಿ ಕೆಲಸ ಮಾಡಬೇಕೆಂದು ಮಕ್ಕಳು ಬಯಸುತ್ತಾರೆ” ಎನ್ನುತ್ತಾರೆ ಸುನಿತಾ. ಇಲ್ಲಿ ಇಬ್ಬರು ಅಡುಗೆಯವರು ಇದ್ದು, ಸಾಮಾನ್ಯ ವರ್ಗದ ವಿಮಲಾ ಉಪ್ರೇತಿ 2016ರಲ್ಲಿ ನೇಮಕವಾಗಿದ್ದಾರೆ. ದಲಿತರಾದ ಸುನಿತಾ ದೇವಿ ಅವರು ಈ ವರ್ಷದ ಜನವರಿಯಲ್ಲಿ ಮರುಸೇರ್ಪಡೆಯಾಗಿದ್ದಾರೆ.

‘ಟೈಮ್ಸ್ ಆಫ್‌ ಇಂಡಿಯಾ’ ಜೊತೆ ಮಾತನಾಡಿರುವ ಸುನೀತಾ, “ನಾನು ತಯಾರಿಸಿದ ಊಟವನ್ನು ಡಿಎಂ ಕೋರಿಕೆಯ ನಂತರವೂ ಅವರು ತಿನ್ನಲು ಸಿದ್ಧರಿಲ್ಲ. ಆದರೆ, ಇತರ ಭೋಜನ್ಮಾತಾ ವಿಷಯದಲ್ಲಿ ಹೀಗಾಗಿಲ್ಲ. ನನ್ನ ಬಗೆಗೆ ಇರುವ ತಾರತಮ್ಯದ ಮನೋಭಾವವನ್ನು ಅಧಿಕಾರಿಗಳಿಂದ ಬದಲಾಯಿಸಲು ಸಾಧ್ಯವಾಗದಿದ್ದಾಗ, ಇನ್ಯಾರೂ ಸರಿಪಡಿಸಬಲ್ಲರು?” ಎಂದು ಪ್ರಶ್ನಿಸಿದ್ದಾರೆ.

“ಶಾಲೆಯ ಪೋಷಕರು-ಶಿಕ್ಷಕರ ಸಂಘದ ಅಧ್ಯಕ್ಷರು ನನ್ನ ವೇತನವನ್ನು (ಮೇ ತಿಂಗಳಿಗೆ) ಒಂದು ತಿಂಗಳಿನಿಂದ ತಡೆಹಿಡಿದಿದ್ದಾರೆ. ನಾನು ಶಾಲೆಯ ಕೆಲಸವನ್ನು ಬಿಟ್ಟು ಕೂಲಿ ಕೆಲಸ ಮಾಡಬೇಕೆಂದು ಗ್ರಾಮದ ಕೆಲವು ಸವರ್ಣೀಯರು ಬಯಸುತ್ತಿದ್ದಾರೆ” ಎಂದು ಸುನೀತಾ ಆರೋಪಿಸಿದ್ದಾರೆ.

“ಅಧ್ಯಕ್ಷರು ನನ್ನ ವೇತನದ ಚೆಕ್‌ಗೆ ಸಹಿ ಹಾಕಲು ನಿರಾಕರಿಸುತ್ತಿದ್ದಾರೆ. ಈ ವರ್ಷದ ಆರಂಭದಲ್ಲಿ ನಾನು ನೀಡಿದ ದೂರಿನ ಆಧಾರದಲ್ಲಿ ಅಧ್ಯಕ್ಷರು ಮತ್ತು ಇತರರ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಹಿಂಪಡೆಯುವಂತೆ ಈ ಮೂಲಕ ಒತ್ತಡ ಹಾಕಲಾಗುತ್ತಿದೆ. ಆದರೆ ನಾನು ಪ್ರಕರಣವನ್ನು ಹಿಂಪಡೆಯುವುದಿಲ್ಲ, ಅದು ನನ್ನ ಘನತೆಯ ವಿಷಯ” ಎಂದಿದ್ದಾರೆ ಸುನೀತಾ.

ಹಲವು ಬಾರಿ ಪ್ರಯತ್ನಿಸಿದರೂ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಲು ಸಾಧ್ಯವಾಗಲಿಲ್ಲ ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ. ಅಲ್ಲದೆ ಈಗ ಆಗುತ್ತಿರುವ ಬೆಳವಣಿಗೆಗಳು ನಿಜವೆಂದು ಶಾಲೆಯ ನಿರ್ವಹಣಾ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ ಎಂದು ಪತ್ರಿಕೆ ಸ್ಪಷ್ಟಪಡಿಸಿದೆ.

ಇದನ್ನೂ ಓದಿರಿ: ಉತ್ತರಾಖಾಂಡ್‌: ದಲಿತ ಮಹಿಳೆ ಬೇಯಿಸಿದ ಆಹಾರ ಸೇವಿಸಲು ಮತ್ತೆ ನಿರಾಕರಿಸಿದ ಸವರ್ಣೀಯ ವಿದ್ಯಾರ್ಥಿಗಳು

ಇದೇ ವೇಳೆ ಮಾತನಾಡಿರುವ ಜಿಲ್ಲಾ ಮುಖ್ಯ ಶಿಕ್ಷಣಾಧಿಕಾರಿ ಜಿತೇಂದ್ರ ಸಕ್ಸೇನಾ, “ಸಂಬಳದ ವಿಚಾರ ನನ್ನ ಅರಿವಿಗೆ ಬಂದಿರಲಿಲ್ಲ. ಸಂಬಳ ಸಿಗುವಂತೆ ಕ್ರಮಕೈಗೊಳ್ಳುತ್ತೇವೆ. ಸುನೀತಾ ಅವರು ತಯಾರಿಸಿದ ಊಟವನ್ನು ತಿನ್ನಲು ವಿದ್ಯಾರ್ಥಿಗಳು ನಿರಾಕರಿಸುತ್ತಲೇ ಇದ್ದಾರೆ. ಈ ತಾರತಮ್ಯವನ್ನು ಬದಲಾಯಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗಿದೆ. ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ಸುನೀತಾ ದೇವಿ ಅವರನ್ನು ಸರಿಯಾದ ಕಾರ್ಯವಿಧಾನದ ಪ್ರಕಾರ ನೇಮಕ ಮಾಡಿರುವುದರಿಂದ ಅವರನ್ನು ಕೆಲಸದಿಂದ ತೆಗೆಯಲು ಸಾಧ್ಯವಿಲ್ಲ” ಎಂದಿದ್ದಾರೆ.

ಕಳೆದ ವರ್ಷ ಈ ಘಟನೆಯ ಬಗ್ಗೆ ವರದಿ ಮಾಡಿದಾಗ ಸುನೀತಾ ಅವರಿಗೆ ಆಗಿರುವ ತಾರತಮ್ಯ ಬೆಳಕಿಗೆ ಬಂದಿತು. ದಲಿತ ಮಹಿಳೆಯ ನೇಮಕಾತಿಯನ್ನು ಜಿಲ್ಲೆಯ ಮುಖ್ಯ ಶಿಕ್ಷಣಾಧಿಕಾರಿ ರದ್ದು ಮಾಡಿದ್ದರು. ಕೆಲವು ದಿನಗಳ ನಂತರ, ಚಂಪಾವತ್ ಜಿಲ್ಲಾಡಳಿತವು ಸುನೀತಾ ಅವರನ್ನು ಮರು ನೇಮಕ ಮಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...