Homeದಲಿತ್ ಫೈಲ್ಸ್‘ನೀನು ಕೂಲಿ ಕೆಲಸ ಮಾಡಬೇಕು, ಶಾಲೆಯಲ್ಲಿ ಅಡುಗೆಯನ್ನಲ್ಲ’: 6 ತಿಂಗಳಾದರೂ ದಲಿತ ಮಹಿಳೆಗೆ ನಿಲ್ಲದ ಕಿರುಕುಳ

‘ನೀನು ಕೂಲಿ ಕೆಲಸ ಮಾಡಬೇಕು, ಶಾಲೆಯಲ್ಲಿ ಅಡುಗೆಯನ್ನಲ್ಲ’: 6 ತಿಂಗಳಾದರೂ ದಲಿತ ಮಹಿಳೆಗೆ ನಿಲ್ಲದ ಕಿರುಕುಳ

ದಲಿತ ಮಹಿಳೆ ಸುನೀತಾ ಅವರು ದಾಖಲಿಸಿರುವ ಪ್ರಕರಣವನ್ನು ವಾಪಸ್‌ ಪಡೆಯುವಂತೆ ಒತ್ತಡ ಹೇರಲು ಸಂಬಳ ನೀಡದೆ ತೊಂದರೆ ನೀಡಲಾಗುತ್ತಿದೆ.

- Advertisement -
- Advertisement -

ದಲಿತ ಭೋಜನ್ಮಾತಾ (ಬಿಸಿಯೂಟದ ಸಿಬ್ಬಂದಿ) ಸುನಿತಾ ದೇವಿ ಅವರು ಬೇಯಿಸಿದ ಮಧ್ಯಾಹ್ನದ ಊಟವನ್ನು ಕೆಲವು ಮೇಲ್ಜಾತಿಯ ವಿದ್ಯಾರ್ಥಿಗಳು ನಿರಾಕರಿಸಿದ ಪ್ರಕರಣ ನಡೆದು ಆರು ತಿಂಗಳಾಯಿತು. ಆದರೆ ಇಷ್ಟು ದಿನದ ನಂತರವೂ ಚಂಪಾವತ್‌ನ ಸುಖಿದಂಗ್ ಸರ್ಕಾರಿ ಅಂತರ ಕಾಲೇಜಿನಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸವರ್ಣೀಯ ಜಾತಿಯ ಮಕ್ಕಳು ಅಸ್ಪೃಶ್ಯತೆ ಆಚರಿಸುವುದನ್ನು ಮುಂದುರಿಸಿದ್ದಾರೆ.

“ವಿದ್ಯಾರ್ಥಿಗಳು ನಾನು ಬೇಯಿಸಿದ ಊಟವನ್ನು ತಿನ್ನಲು ನಿರಾಕರಿಸುತ್ತಿದ್ದಾರೆ ಮಾತ್ರವಲ್ಲ, ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮದಡಿಯಲ್ಲಿ ನೀಡಲಾಗುವ ಹಾಲನ್ನೂ ಬೇಡ ಎನ್ನುತ್ತಿದ್ದಾರೆ” ಎಂದು ಸುನೀತಾ ಶನಿವಾರ ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚಂಪಾವತ್‌ನ ಡಿಎಂ ನರೇಂದರ್ ಸಿಂಗ್ ಭಂಡಾರಿ ಅವರು ಇತ್ತೀಚೆಗೆ ಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಸೂಚನೆಯನ್ನೂ ನೀಡಿ, “ಜಾತಿ ತಾರತಮ್ಯದಿಂದ ಹೊರಬರಬೇಕು” ಎಂದು ತಿಳಿಸಿದ್ದಾರೆ.

ಕೆಲವು ಮೇಲ್ವರ್ಗದ ವಿದ್ಯಾರ್ಥಿಗಳ ಪೋಷಕರು, “ದಲಿತ ಮಹಿಳೆ ಮಾಡಿದ ಊಟವನ್ನು ಬಲವಂತವಾಗಿ ನಮ್ಮ ಮಕ್ಕಳಿಗೆ ನೀಡಬಾರದು” ಎಂದು ಆಗ್ರಹಿಸಿದ್ದಾರೆ.

ಶಾಲೆಯಲ್ಲಿ 57 ವಿದ್ಯಾರ್ಥಿಗಳಿದ್ದಾರೆ. ಸಾಮಾನ್ಯ ವರ್ಗದ 37 ವಿದ್ಯಾರ್ಥಿಗಳು, ಎಸ್‌ಸಿ ಸಮುದಾಯದಿಂದ 20 ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

“ನಾನು ಅಡುಗೆ ಕೆಲಸ ಬಿಟ್ಟು ಕೂಲಿ ಕೆಲಸ ಮಾಡಬೇಕೆಂದು ಮಕ್ಕಳು ಬಯಸುತ್ತಾರೆ” ಎನ್ನುತ್ತಾರೆ ಸುನಿತಾ. ಇಲ್ಲಿ ಇಬ್ಬರು ಅಡುಗೆಯವರು ಇದ್ದು, ಸಾಮಾನ್ಯ ವರ್ಗದ ವಿಮಲಾ ಉಪ್ರೇತಿ 2016ರಲ್ಲಿ ನೇಮಕವಾಗಿದ್ದಾರೆ. ದಲಿತರಾದ ಸುನಿತಾ ದೇವಿ ಅವರು ಈ ವರ್ಷದ ಜನವರಿಯಲ್ಲಿ ಮರುಸೇರ್ಪಡೆಯಾಗಿದ್ದಾರೆ.

‘ಟೈಮ್ಸ್ ಆಫ್‌ ಇಂಡಿಯಾ’ ಜೊತೆ ಮಾತನಾಡಿರುವ ಸುನೀತಾ, “ನಾನು ತಯಾರಿಸಿದ ಊಟವನ್ನು ಡಿಎಂ ಕೋರಿಕೆಯ ನಂತರವೂ ಅವರು ತಿನ್ನಲು ಸಿದ್ಧರಿಲ್ಲ. ಆದರೆ, ಇತರ ಭೋಜನ್ಮಾತಾ ವಿಷಯದಲ್ಲಿ ಹೀಗಾಗಿಲ್ಲ. ನನ್ನ ಬಗೆಗೆ ಇರುವ ತಾರತಮ್ಯದ ಮನೋಭಾವವನ್ನು ಅಧಿಕಾರಿಗಳಿಂದ ಬದಲಾಯಿಸಲು ಸಾಧ್ಯವಾಗದಿದ್ದಾಗ, ಇನ್ಯಾರೂ ಸರಿಪಡಿಸಬಲ್ಲರು?” ಎಂದು ಪ್ರಶ್ನಿಸಿದ್ದಾರೆ.

“ಶಾಲೆಯ ಪೋಷಕರು-ಶಿಕ್ಷಕರ ಸಂಘದ ಅಧ್ಯಕ್ಷರು ನನ್ನ ವೇತನವನ್ನು (ಮೇ ತಿಂಗಳಿಗೆ) ಒಂದು ತಿಂಗಳಿನಿಂದ ತಡೆಹಿಡಿದಿದ್ದಾರೆ. ನಾನು ಶಾಲೆಯ ಕೆಲಸವನ್ನು ಬಿಟ್ಟು ಕೂಲಿ ಕೆಲಸ ಮಾಡಬೇಕೆಂದು ಗ್ರಾಮದ ಕೆಲವು ಸವರ್ಣೀಯರು ಬಯಸುತ್ತಿದ್ದಾರೆ” ಎಂದು ಸುನೀತಾ ಆರೋಪಿಸಿದ್ದಾರೆ.

“ಅಧ್ಯಕ್ಷರು ನನ್ನ ವೇತನದ ಚೆಕ್‌ಗೆ ಸಹಿ ಹಾಕಲು ನಿರಾಕರಿಸುತ್ತಿದ್ದಾರೆ. ಈ ವರ್ಷದ ಆರಂಭದಲ್ಲಿ ನಾನು ನೀಡಿದ ದೂರಿನ ಆಧಾರದಲ್ಲಿ ಅಧ್ಯಕ್ಷರು ಮತ್ತು ಇತರರ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಹಿಂಪಡೆಯುವಂತೆ ಈ ಮೂಲಕ ಒತ್ತಡ ಹಾಕಲಾಗುತ್ತಿದೆ. ಆದರೆ ನಾನು ಪ್ರಕರಣವನ್ನು ಹಿಂಪಡೆಯುವುದಿಲ್ಲ, ಅದು ನನ್ನ ಘನತೆಯ ವಿಷಯ” ಎಂದಿದ್ದಾರೆ ಸುನೀತಾ.

ಹಲವು ಬಾರಿ ಪ್ರಯತ್ನಿಸಿದರೂ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಲು ಸಾಧ್ಯವಾಗಲಿಲ್ಲ ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ. ಅಲ್ಲದೆ ಈಗ ಆಗುತ್ತಿರುವ ಬೆಳವಣಿಗೆಗಳು ನಿಜವೆಂದು ಶಾಲೆಯ ನಿರ್ವಹಣಾ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ ಎಂದು ಪತ್ರಿಕೆ ಸ್ಪಷ್ಟಪಡಿಸಿದೆ.

ಇದನ್ನೂ ಓದಿರಿ: ಉತ್ತರಾಖಾಂಡ್‌: ದಲಿತ ಮಹಿಳೆ ಬೇಯಿಸಿದ ಆಹಾರ ಸೇವಿಸಲು ಮತ್ತೆ ನಿರಾಕರಿಸಿದ ಸವರ್ಣೀಯ ವಿದ್ಯಾರ್ಥಿಗಳು

ಇದೇ ವೇಳೆ ಮಾತನಾಡಿರುವ ಜಿಲ್ಲಾ ಮುಖ್ಯ ಶಿಕ್ಷಣಾಧಿಕಾರಿ ಜಿತೇಂದ್ರ ಸಕ್ಸೇನಾ, “ಸಂಬಳದ ವಿಚಾರ ನನ್ನ ಅರಿವಿಗೆ ಬಂದಿರಲಿಲ್ಲ. ಸಂಬಳ ಸಿಗುವಂತೆ ಕ್ರಮಕೈಗೊಳ್ಳುತ್ತೇವೆ. ಸುನೀತಾ ಅವರು ತಯಾರಿಸಿದ ಊಟವನ್ನು ತಿನ್ನಲು ವಿದ್ಯಾರ್ಥಿಗಳು ನಿರಾಕರಿಸುತ್ತಲೇ ಇದ್ದಾರೆ. ಈ ತಾರತಮ್ಯವನ್ನು ಬದಲಾಯಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗಿದೆ. ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ಸುನೀತಾ ದೇವಿ ಅವರನ್ನು ಸರಿಯಾದ ಕಾರ್ಯವಿಧಾನದ ಪ್ರಕಾರ ನೇಮಕ ಮಾಡಿರುವುದರಿಂದ ಅವರನ್ನು ಕೆಲಸದಿಂದ ತೆಗೆಯಲು ಸಾಧ್ಯವಿಲ್ಲ” ಎಂದಿದ್ದಾರೆ.

ಕಳೆದ ವರ್ಷ ಈ ಘಟನೆಯ ಬಗ್ಗೆ ವರದಿ ಮಾಡಿದಾಗ ಸುನೀತಾ ಅವರಿಗೆ ಆಗಿರುವ ತಾರತಮ್ಯ ಬೆಳಕಿಗೆ ಬಂದಿತು. ದಲಿತ ಮಹಿಳೆಯ ನೇಮಕಾತಿಯನ್ನು ಜಿಲ್ಲೆಯ ಮುಖ್ಯ ಶಿಕ್ಷಣಾಧಿಕಾರಿ ರದ್ದು ಮಾಡಿದ್ದರು. ಕೆಲವು ದಿನಗಳ ನಂತರ, ಚಂಪಾವತ್ ಜಿಲ್ಲಾಡಳಿತವು ಸುನೀತಾ ಅವರನ್ನು ಮರು ನೇಮಕ ಮಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...