Homeದಲಿತ್ ಫೈಲ್ಸ್‘ನೀನು ಕೂಲಿ ಕೆಲಸ ಮಾಡಬೇಕು, ಶಾಲೆಯಲ್ಲಿ ಅಡುಗೆಯನ್ನಲ್ಲ’: 6 ತಿಂಗಳಾದರೂ ದಲಿತ ಮಹಿಳೆಗೆ ನಿಲ್ಲದ ಕಿರುಕುಳ

‘ನೀನು ಕೂಲಿ ಕೆಲಸ ಮಾಡಬೇಕು, ಶಾಲೆಯಲ್ಲಿ ಅಡುಗೆಯನ್ನಲ್ಲ’: 6 ತಿಂಗಳಾದರೂ ದಲಿತ ಮಹಿಳೆಗೆ ನಿಲ್ಲದ ಕಿರುಕುಳ

ದಲಿತ ಮಹಿಳೆ ಸುನೀತಾ ಅವರು ದಾಖಲಿಸಿರುವ ಪ್ರಕರಣವನ್ನು ವಾಪಸ್‌ ಪಡೆಯುವಂತೆ ಒತ್ತಡ ಹೇರಲು ಸಂಬಳ ನೀಡದೆ ತೊಂದರೆ ನೀಡಲಾಗುತ್ತಿದೆ.

- Advertisement -
- Advertisement -

ದಲಿತ ಭೋಜನ್ಮಾತಾ (ಬಿಸಿಯೂಟದ ಸಿಬ್ಬಂದಿ) ಸುನಿತಾ ದೇವಿ ಅವರು ಬೇಯಿಸಿದ ಮಧ್ಯಾಹ್ನದ ಊಟವನ್ನು ಕೆಲವು ಮೇಲ್ಜಾತಿಯ ವಿದ್ಯಾರ್ಥಿಗಳು ನಿರಾಕರಿಸಿದ ಪ್ರಕರಣ ನಡೆದು ಆರು ತಿಂಗಳಾಯಿತು. ಆದರೆ ಇಷ್ಟು ದಿನದ ನಂತರವೂ ಚಂಪಾವತ್‌ನ ಸುಖಿದಂಗ್ ಸರ್ಕಾರಿ ಅಂತರ ಕಾಲೇಜಿನಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸವರ್ಣೀಯ ಜಾತಿಯ ಮಕ್ಕಳು ಅಸ್ಪೃಶ್ಯತೆ ಆಚರಿಸುವುದನ್ನು ಮುಂದುರಿಸಿದ್ದಾರೆ.

“ವಿದ್ಯಾರ್ಥಿಗಳು ನಾನು ಬೇಯಿಸಿದ ಊಟವನ್ನು ತಿನ್ನಲು ನಿರಾಕರಿಸುತ್ತಿದ್ದಾರೆ ಮಾತ್ರವಲ್ಲ, ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮದಡಿಯಲ್ಲಿ ನೀಡಲಾಗುವ ಹಾಲನ್ನೂ ಬೇಡ ಎನ್ನುತ್ತಿದ್ದಾರೆ” ಎಂದು ಸುನೀತಾ ಶನಿವಾರ ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚಂಪಾವತ್‌ನ ಡಿಎಂ ನರೇಂದರ್ ಸಿಂಗ್ ಭಂಡಾರಿ ಅವರು ಇತ್ತೀಚೆಗೆ ಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಸೂಚನೆಯನ್ನೂ ನೀಡಿ, “ಜಾತಿ ತಾರತಮ್ಯದಿಂದ ಹೊರಬರಬೇಕು” ಎಂದು ತಿಳಿಸಿದ್ದಾರೆ.

ಕೆಲವು ಮೇಲ್ವರ್ಗದ ವಿದ್ಯಾರ್ಥಿಗಳ ಪೋಷಕರು, “ದಲಿತ ಮಹಿಳೆ ಮಾಡಿದ ಊಟವನ್ನು ಬಲವಂತವಾಗಿ ನಮ್ಮ ಮಕ್ಕಳಿಗೆ ನೀಡಬಾರದು” ಎಂದು ಆಗ್ರಹಿಸಿದ್ದಾರೆ.

ಶಾಲೆಯಲ್ಲಿ 57 ವಿದ್ಯಾರ್ಥಿಗಳಿದ್ದಾರೆ. ಸಾಮಾನ್ಯ ವರ್ಗದ 37 ವಿದ್ಯಾರ್ಥಿಗಳು, ಎಸ್‌ಸಿ ಸಮುದಾಯದಿಂದ 20 ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

“ನಾನು ಅಡುಗೆ ಕೆಲಸ ಬಿಟ್ಟು ಕೂಲಿ ಕೆಲಸ ಮಾಡಬೇಕೆಂದು ಮಕ್ಕಳು ಬಯಸುತ್ತಾರೆ” ಎನ್ನುತ್ತಾರೆ ಸುನಿತಾ. ಇಲ್ಲಿ ಇಬ್ಬರು ಅಡುಗೆಯವರು ಇದ್ದು, ಸಾಮಾನ್ಯ ವರ್ಗದ ವಿಮಲಾ ಉಪ್ರೇತಿ 2016ರಲ್ಲಿ ನೇಮಕವಾಗಿದ್ದಾರೆ. ದಲಿತರಾದ ಸುನಿತಾ ದೇವಿ ಅವರು ಈ ವರ್ಷದ ಜನವರಿಯಲ್ಲಿ ಮರುಸೇರ್ಪಡೆಯಾಗಿದ್ದಾರೆ.

‘ಟೈಮ್ಸ್ ಆಫ್‌ ಇಂಡಿಯಾ’ ಜೊತೆ ಮಾತನಾಡಿರುವ ಸುನೀತಾ, “ನಾನು ತಯಾರಿಸಿದ ಊಟವನ್ನು ಡಿಎಂ ಕೋರಿಕೆಯ ನಂತರವೂ ಅವರು ತಿನ್ನಲು ಸಿದ್ಧರಿಲ್ಲ. ಆದರೆ, ಇತರ ಭೋಜನ್ಮಾತಾ ವಿಷಯದಲ್ಲಿ ಹೀಗಾಗಿಲ್ಲ. ನನ್ನ ಬಗೆಗೆ ಇರುವ ತಾರತಮ್ಯದ ಮನೋಭಾವವನ್ನು ಅಧಿಕಾರಿಗಳಿಂದ ಬದಲಾಯಿಸಲು ಸಾಧ್ಯವಾಗದಿದ್ದಾಗ, ಇನ್ಯಾರೂ ಸರಿಪಡಿಸಬಲ್ಲರು?” ಎಂದು ಪ್ರಶ್ನಿಸಿದ್ದಾರೆ.

“ಶಾಲೆಯ ಪೋಷಕರು-ಶಿಕ್ಷಕರ ಸಂಘದ ಅಧ್ಯಕ್ಷರು ನನ್ನ ವೇತನವನ್ನು (ಮೇ ತಿಂಗಳಿಗೆ) ಒಂದು ತಿಂಗಳಿನಿಂದ ತಡೆಹಿಡಿದಿದ್ದಾರೆ. ನಾನು ಶಾಲೆಯ ಕೆಲಸವನ್ನು ಬಿಟ್ಟು ಕೂಲಿ ಕೆಲಸ ಮಾಡಬೇಕೆಂದು ಗ್ರಾಮದ ಕೆಲವು ಸವರ್ಣೀಯರು ಬಯಸುತ್ತಿದ್ದಾರೆ” ಎಂದು ಸುನೀತಾ ಆರೋಪಿಸಿದ್ದಾರೆ.

“ಅಧ್ಯಕ್ಷರು ನನ್ನ ವೇತನದ ಚೆಕ್‌ಗೆ ಸಹಿ ಹಾಕಲು ನಿರಾಕರಿಸುತ್ತಿದ್ದಾರೆ. ಈ ವರ್ಷದ ಆರಂಭದಲ್ಲಿ ನಾನು ನೀಡಿದ ದೂರಿನ ಆಧಾರದಲ್ಲಿ ಅಧ್ಯಕ್ಷರು ಮತ್ತು ಇತರರ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಹಿಂಪಡೆಯುವಂತೆ ಈ ಮೂಲಕ ಒತ್ತಡ ಹಾಕಲಾಗುತ್ತಿದೆ. ಆದರೆ ನಾನು ಪ್ರಕರಣವನ್ನು ಹಿಂಪಡೆಯುವುದಿಲ್ಲ, ಅದು ನನ್ನ ಘನತೆಯ ವಿಷಯ” ಎಂದಿದ್ದಾರೆ ಸುನೀತಾ.

ಹಲವು ಬಾರಿ ಪ್ರಯತ್ನಿಸಿದರೂ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಲು ಸಾಧ್ಯವಾಗಲಿಲ್ಲ ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ. ಅಲ್ಲದೆ ಈಗ ಆಗುತ್ತಿರುವ ಬೆಳವಣಿಗೆಗಳು ನಿಜವೆಂದು ಶಾಲೆಯ ನಿರ್ವಹಣಾ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ ಎಂದು ಪತ್ರಿಕೆ ಸ್ಪಷ್ಟಪಡಿಸಿದೆ.

ಇದನ್ನೂ ಓದಿರಿ: ಉತ್ತರಾಖಾಂಡ್‌: ದಲಿತ ಮಹಿಳೆ ಬೇಯಿಸಿದ ಆಹಾರ ಸೇವಿಸಲು ಮತ್ತೆ ನಿರಾಕರಿಸಿದ ಸವರ್ಣೀಯ ವಿದ್ಯಾರ್ಥಿಗಳು

ಇದೇ ವೇಳೆ ಮಾತನಾಡಿರುವ ಜಿಲ್ಲಾ ಮುಖ್ಯ ಶಿಕ್ಷಣಾಧಿಕಾರಿ ಜಿತೇಂದ್ರ ಸಕ್ಸೇನಾ, “ಸಂಬಳದ ವಿಚಾರ ನನ್ನ ಅರಿವಿಗೆ ಬಂದಿರಲಿಲ್ಲ. ಸಂಬಳ ಸಿಗುವಂತೆ ಕ್ರಮಕೈಗೊಳ್ಳುತ್ತೇವೆ. ಸುನೀತಾ ಅವರು ತಯಾರಿಸಿದ ಊಟವನ್ನು ತಿನ್ನಲು ವಿದ್ಯಾರ್ಥಿಗಳು ನಿರಾಕರಿಸುತ್ತಲೇ ಇದ್ದಾರೆ. ಈ ತಾರತಮ್ಯವನ್ನು ಬದಲಾಯಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗಿದೆ. ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ಸುನೀತಾ ದೇವಿ ಅವರನ್ನು ಸರಿಯಾದ ಕಾರ್ಯವಿಧಾನದ ಪ್ರಕಾರ ನೇಮಕ ಮಾಡಿರುವುದರಿಂದ ಅವರನ್ನು ಕೆಲಸದಿಂದ ತೆಗೆಯಲು ಸಾಧ್ಯವಿಲ್ಲ” ಎಂದಿದ್ದಾರೆ.

ಕಳೆದ ವರ್ಷ ಈ ಘಟನೆಯ ಬಗ್ಗೆ ವರದಿ ಮಾಡಿದಾಗ ಸುನೀತಾ ಅವರಿಗೆ ಆಗಿರುವ ತಾರತಮ್ಯ ಬೆಳಕಿಗೆ ಬಂದಿತು. ದಲಿತ ಮಹಿಳೆಯ ನೇಮಕಾತಿಯನ್ನು ಜಿಲ್ಲೆಯ ಮುಖ್ಯ ಶಿಕ್ಷಣಾಧಿಕಾರಿ ರದ್ದು ಮಾಡಿದ್ದರು. ಕೆಲವು ದಿನಗಳ ನಂತರ, ಚಂಪಾವತ್ ಜಿಲ್ಲಾಡಳಿತವು ಸುನೀತಾ ಅವರನ್ನು ಮರು ನೇಮಕ ಮಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...