Homeದಲಿತ್ ಫೈಲ್ಸ್‘ನೀನು ಕೂಲಿ ಕೆಲಸ ಮಾಡಬೇಕು, ಶಾಲೆಯಲ್ಲಿ ಅಡುಗೆಯನ್ನಲ್ಲ’: 6 ತಿಂಗಳಾದರೂ ದಲಿತ ಮಹಿಳೆಗೆ ನಿಲ್ಲದ ಕಿರುಕುಳ

‘ನೀನು ಕೂಲಿ ಕೆಲಸ ಮಾಡಬೇಕು, ಶಾಲೆಯಲ್ಲಿ ಅಡುಗೆಯನ್ನಲ್ಲ’: 6 ತಿಂಗಳಾದರೂ ದಲಿತ ಮಹಿಳೆಗೆ ನಿಲ್ಲದ ಕಿರುಕುಳ

ದಲಿತ ಮಹಿಳೆ ಸುನೀತಾ ಅವರು ದಾಖಲಿಸಿರುವ ಪ್ರಕರಣವನ್ನು ವಾಪಸ್‌ ಪಡೆಯುವಂತೆ ಒತ್ತಡ ಹೇರಲು ಸಂಬಳ ನೀಡದೆ ತೊಂದರೆ ನೀಡಲಾಗುತ್ತಿದೆ.

- Advertisement -
- Advertisement -

ದಲಿತ ಭೋಜನ್ಮಾತಾ (ಬಿಸಿಯೂಟದ ಸಿಬ್ಬಂದಿ) ಸುನಿತಾ ದೇವಿ ಅವರು ಬೇಯಿಸಿದ ಮಧ್ಯಾಹ್ನದ ಊಟವನ್ನು ಕೆಲವು ಮೇಲ್ಜಾತಿಯ ವಿದ್ಯಾರ್ಥಿಗಳು ನಿರಾಕರಿಸಿದ ಪ್ರಕರಣ ನಡೆದು ಆರು ತಿಂಗಳಾಯಿತು. ಆದರೆ ಇಷ್ಟು ದಿನದ ನಂತರವೂ ಚಂಪಾವತ್‌ನ ಸುಖಿದಂಗ್ ಸರ್ಕಾರಿ ಅಂತರ ಕಾಲೇಜಿನಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸವರ್ಣೀಯ ಜಾತಿಯ ಮಕ್ಕಳು ಅಸ್ಪೃಶ್ಯತೆ ಆಚರಿಸುವುದನ್ನು ಮುಂದುರಿಸಿದ್ದಾರೆ.

“ವಿದ್ಯಾರ್ಥಿಗಳು ನಾನು ಬೇಯಿಸಿದ ಊಟವನ್ನು ತಿನ್ನಲು ನಿರಾಕರಿಸುತ್ತಿದ್ದಾರೆ ಮಾತ್ರವಲ್ಲ, ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮದಡಿಯಲ್ಲಿ ನೀಡಲಾಗುವ ಹಾಲನ್ನೂ ಬೇಡ ಎನ್ನುತ್ತಿದ್ದಾರೆ” ಎಂದು ಸುನೀತಾ ಶನಿವಾರ ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚಂಪಾವತ್‌ನ ಡಿಎಂ ನರೇಂದರ್ ಸಿಂಗ್ ಭಂಡಾರಿ ಅವರು ಇತ್ತೀಚೆಗೆ ಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಸೂಚನೆಯನ್ನೂ ನೀಡಿ, “ಜಾತಿ ತಾರತಮ್ಯದಿಂದ ಹೊರಬರಬೇಕು” ಎಂದು ತಿಳಿಸಿದ್ದಾರೆ.

ಕೆಲವು ಮೇಲ್ವರ್ಗದ ವಿದ್ಯಾರ್ಥಿಗಳ ಪೋಷಕರು, “ದಲಿತ ಮಹಿಳೆ ಮಾಡಿದ ಊಟವನ್ನು ಬಲವಂತವಾಗಿ ನಮ್ಮ ಮಕ್ಕಳಿಗೆ ನೀಡಬಾರದು” ಎಂದು ಆಗ್ರಹಿಸಿದ್ದಾರೆ.

ಶಾಲೆಯಲ್ಲಿ 57 ವಿದ್ಯಾರ್ಥಿಗಳಿದ್ದಾರೆ. ಸಾಮಾನ್ಯ ವರ್ಗದ 37 ವಿದ್ಯಾರ್ಥಿಗಳು, ಎಸ್‌ಸಿ ಸಮುದಾಯದಿಂದ 20 ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

“ನಾನು ಅಡುಗೆ ಕೆಲಸ ಬಿಟ್ಟು ಕೂಲಿ ಕೆಲಸ ಮಾಡಬೇಕೆಂದು ಮಕ್ಕಳು ಬಯಸುತ್ತಾರೆ” ಎನ್ನುತ್ತಾರೆ ಸುನಿತಾ. ಇಲ್ಲಿ ಇಬ್ಬರು ಅಡುಗೆಯವರು ಇದ್ದು, ಸಾಮಾನ್ಯ ವರ್ಗದ ವಿಮಲಾ ಉಪ್ರೇತಿ 2016ರಲ್ಲಿ ನೇಮಕವಾಗಿದ್ದಾರೆ. ದಲಿತರಾದ ಸುನಿತಾ ದೇವಿ ಅವರು ಈ ವರ್ಷದ ಜನವರಿಯಲ್ಲಿ ಮರುಸೇರ್ಪಡೆಯಾಗಿದ್ದಾರೆ.

‘ಟೈಮ್ಸ್ ಆಫ್‌ ಇಂಡಿಯಾ’ ಜೊತೆ ಮಾತನಾಡಿರುವ ಸುನೀತಾ, “ನಾನು ತಯಾರಿಸಿದ ಊಟವನ್ನು ಡಿಎಂ ಕೋರಿಕೆಯ ನಂತರವೂ ಅವರು ತಿನ್ನಲು ಸಿದ್ಧರಿಲ್ಲ. ಆದರೆ, ಇತರ ಭೋಜನ್ಮಾತಾ ವಿಷಯದಲ್ಲಿ ಹೀಗಾಗಿಲ್ಲ. ನನ್ನ ಬಗೆಗೆ ಇರುವ ತಾರತಮ್ಯದ ಮನೋಭಾವವನ್ನು ಅಧಿಕಾರಿಗಳಿಂದ ಬದಲಾಯಿಸಲು ಸಾಧ್ಯವಾಗದಿದ್ದಾಗ, ಇನ್ಯಾರೂ ಸರಿಪಡಿಸಬಲ್ಲರು?” ಎಂದು ಪ್ರಶ್ನಿಸಿದ್ದಾರೆ.

“ಶಾಲೆಯ ಪೋಷಕರು-ಶಿಕ್ಷಕರ ಸಂಘದ ಅಧ್ಯಕ್ಷರು ನನ್ನ ವೇತನವನ್ನು (ಮೇ ತಿಂಗಳಿಗೆ) ಒಂದು ತಿಂಗಳಿನಿಂದ ತಡೆಹಿಡಿದಿದ್ದಾರೆ. ನಾನು ಶಾಲೆಯ ಕೆಲಸವನ್ನು ಬಿಟ್ಟು ಕೂಲಿ ಕೆಲಸ ಮಾಡಬೇಕೆಂದು ಗ್ರಾಮದ ಕೆಲವು ಸವರ್ಣೀಯರು ಬಯಸುತ್ತಿದ್ದಾರೆ” ಎಂದು ಸುನೀತಾ ಆರೋಪಿಸಿದ್ದಾರೆ.

“ಅಧ್ಯಕ್ಷರು ನನ್ನ ವೇತನದ ಚೆಕ್‌ಗೆ ಸಹಿ ಹಾಕಲು ನಿರಾಕರಿಸುತ್ತಿದ್ದಾರೆ. ಈ ವರ್ಷದ ಆರಂಭದಲ್ಲಿ ನಾನು ನೀಡಿದ ದೂರಿನ ಆಧಾರದಲ್ಲಿ ಅಧ್ಯಕ್ಷರು ಮತ್ತು ಇತರರ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಹಿಂಪಡೆಯುವಂತೆ ಈ ಮೂಲಕ ಒತ್ತಡ ಹಾಕಲಾಗುತ್ತಿದೆ. ಆದರೆ ನಾನು ಪ್ರಕರಣವನ್ನು ಹಿಂಪಡೆಯುವುದಿಲ್ಲ, ಅದು ನನ್ನ ಘನತೆಯ ವಿಷಯ” ಎಂದಿದ್ದಾರೆ ಸುನೀತಾ.

ಹಲವು ಬಾರಿ ಪ್ರಯತ್ನಿಸಿದರೂ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಲು ಸಾಧ್ಯವಾಗಲಿಲ್ಲ ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ. ಅಲ್ಲದೆ ಈಗ ಆಗುತ್ತಿರುವ ಬೆಳವಣಿಗೆಗಳು ನಿಜವೆಂದು ಶಾಲೆಯ ನಿರ್ವಹಣಾ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ ಎಂದು ಪತ್ರಿಕೆ ಸ್ಪಷ್ಟಪಡಿಸಿದೆ.

ಇದನ್ನೂ ಓದಿರಿ: ಉತ್ತರಾಖಾಂಡ್‌: ದಲಿತ ಮಹಿಳೆ ಬೇಯಿಸಿದ ಆಹಾರ ಸೇವಿಸಲು ಮತ್ತೆ ನಿರಾಕರಿಸಿದ ಸವರ್ಣೀಯ ವಿದ್ಯಾರ್ಥಿಗಳು

ಇದೇ ವೇಳೆ ಮಾತನಾಡಿರುವ ಜಿಲ್ಲಾ ಮುಖ್ಯ ಶಿಕ್ಷಣಾಧಿಕಾರಿ ಜಿತೇಂದ್ರ ಸಕ್ಸೇನಾ, “ಸಂಬಳದ ವಿಚಾರ ನನ್ನ ಅರಿವಿಗೆ ಬಂದಿರಲಿಲ್ಲ. ಸಂಬಳ ಸಿಗುವಂತೆ ಕ್ರಮಕೈಗೊಳ್ಳುತ್ತೇವೆ. ಸುನೀತಾ ಅವರು ತಯಾರಿಸಿದ ಊಟವನ್ನು ತಿನ್ನಲು ವಿದ್ಯಾರ್ಥಿಗಳು ನಿರಾಕರಿಸುತ್ತಲೇ ಇದ್ದಾರೆ. ಈ ತಾರತಮ್ಯವನ್ನು ಬದಲಾಯಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗಿದೆ. ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ಸುನೀತಾ ದೇವಿ ಅವರನ್ನು ಸರಿಯಾದ ಕಾರ್ಯವಿಧಾನದ ಪ್ರಕಾರ ನೇಮಕ ಮಾಡಿರುವುದರಿಂದ ಅವರನ್ನು ಕೆಲಸದಿಂದ ತೆಗೆಯಲು ಸಾಧ್ಯವಿಲ್ಲ” ಎಂದಿದ್ದಾರೆ.

ಕಳೆದ ವರ್ಷ ಈ ಘಟನೆಯ ಬಗ್ಗೆ ವರದಿ ಮಾಡಿದಾಗ ಸುನೀತಾ ಅವರಿಗೆ ಆಗಿರುವ ತಾರತಮ್ಯ ಬೆಳಕಿಗೆ ಬಂದಿತು. ದಲಿತ ಮಹಿಳೆಯ ನೇಮಕಾತಿಯನ್ನು ಜಿಲ್ಲೆಯ ಮುಖ್ಯ ಶಿಕ್ಷಣಾಧಿಕಾರಿ ರದ್ದು ಮಾಡಿದ್ದರು. ಕೆಲವು ದಿನಗಳ ನಂತರ, ಚಂಪಾವತ್ ಜಿಲ್ಲಾಡಳಿತವು ಸುನೀತಾ ಅವರನ್ನು ಮರು ನೇಮಕ ಮಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎರಡು ವರ್ಷದಲ್ಲಿ 532 ನಕ್ಸಲರ ಹತ್ಯೆ; 2004 ಜನರ ಬಂಧನ: ಛತ್ತೀಸ್‌ಗಢ ಉಪ ಮುಖ್ಯಮಂತ್ರಿ

2024 ರ ಜನವರಿಯಿಂದ ರಾಜ್ಯದಲ್ಲಿ 532 ನಕ್ಸಲರು ಸಾವನ್ನಪ್ಪಿದ್ದಾರೆ, 2004 ಜನರನ್ನು ಬಂಧಿಸಲಾಗಿದ್ದು, 2,700 ಜನರು ಶರಣಾಗಿದ್ದಾರೆ ಎಂದು ಛತ್ತೀಸ್‌ಗಢ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಶುಕ್ರವಾರ ಹೇಳಿದ್ದಾರೆ. 2026ರ ಮಾರ್ಚ್ 31 ರೊಳಗೆ...

ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾಗುವುದಾಗಿ ಒಪ್ಪಿದ ಪೋಕ್ಸೋ ಪ್ರಕರಣದ ಆರೋಪಿಗೆ ಜಾಮೀನು

ಅಸ್ಸಾಂ (ಬೊಂಗಾನ್): ಎರಡು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಕಳೊಂದಿಗೆ ಸ್ನೇಹ ಬೆಳೆಸಿದ ನಂತರ ಅವಳೊಂದಿಗೆ ಸಹವಾಸ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟ 24 ವರ್ಷದ ಯುವಕನಿಗೆ ಇಲ್ಲಿನ ಬೊಂಗಾನ್ ಉಪ-ವಿಭಾಗೀಯ ನ್ಯಾಯಾಲಯವು ಜಾಮೀನು...

ಕೇರಳ: ಪಾದಚಾರಿ ಮಾರ್ಗದಲ್ಲಿ ಸ್ಕೂಟರ್ ಸವಾರನನ್ನು ತಡೆದ ವೃದ್ಧೆಗೆ ಸಾರಿಗೆ ಅಧಿಕಾರಿಗಳಿಂದ ಸನ್ಮಾನ

ಕಳೆದ ಶುಕ್ರವಾರ ಕೋಝಿಕ್ಕೋಡ್‌ನಲ್ಲಿ ಸ್ಕೂಟರ್ ಸವಾರನೊಬ್ಬ ಪಾದಚಾರಿ ಮಾರ್ಗದಲ್ಲಿ ಬೈಕ್ ಚಾಲನೆ ಮಾಡುವುದುನ್ನು ತಡೆದ ವೃದ್ಧ ಮಹಿಳೆಯನ್ನು ಕೇರಳದ ಮೋಟಾರು ವಾಹನ ಇಲಾಖೆ (ಎಂವಿಡಿ) ಅಧಿಕಾರಿಗಳು ಸನ್ಮಾನಿಸಿದರು. ಮುಖ್ಯ ರಸ್ತೆಯಲ್ಲಿನ ದಟ್ಟಣೆಯನ್ನು ತಪ್ಪಿಸಲು ಎರಂಜಿಪಾಲಂನ...

ಫೆಬ್ರವರಿ 14, ಪ್ರೇಮಿಗಳ ದಿನದಂದು ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ: ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಪ್ರವೇಶ ನಿಷೇಧಿಸಿದ ಜಿಲ್ಲಾಡಳಿತ 

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಫೆಬ್ರವರಿ 14 ರಂದು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರು ಪ್ರವೇಶಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಈ...

ಮೊಹಮ್ಮದ್ ದೀಪಕ್ ಜಿಮ್‌ನಲ್ಲಿ ಸದಸ್ಯತ್ವ ಪಡೆದ 15 ಜನ ಹಿರಿಯ ಸುಪ್ರೀಂ ಕೋರ್ಟ್ ವಕೀಲರು

ಉತ್ತರಾಖಂಡದ ಕೋಟ್ದ್ವಾರದ ದೀಪಕ್ ಅವರ ಜಿಮ್‌ ಈ ಹಿಂದೆ 150 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿತ್ತು, ಜನನಿಬಿಡ ಕೇಂದ್ರವಾಗಿದ್ದ ದೀಪಕ್ ಕುಮಾರ್ ಅವರ 'ಹಲ್ಕ್' ಜಿಮ್‌ಗೆ, ಮುಸ್ಲಿಂ ವ್ಯಾಪಾರಿ ಪರವಾಗಿ ನಿಂತ ಬಳಿಕ...

ಮೀರತ್‌ನಲ್ಲಿ ‘ಲವ್ ಜಿಹಾದ್’ ಕಾನೂನಿನಡಿಯಲ್ಲಿ ಮುಸ್ಲಿಂ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು; ಹಿಂದುತ್ವದ ಹೇಳಿಕೆಗಳನ್ನು ತಿರಸ್ಕರಿಸಿದ ಬೌದ್ಧ ವಧು

ಉತ್ತರ ಪ್ರದೇಶದ ಮುಸ್ಲಿಂ ವ್ಯಕ್ತಿಯೊಬ್ಬನ ವಿರುದ್ಧ ವಧುವಿನ ಚಿಕ್ಕಪ್ಪ ಆತನ ನಿಶ್ಚಿತಾರ್ಥದ ದಿನ ಅಂತರಧರ್ಮೀಯ ವಿವಾಹಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ದೂರು ದಾಖಲಿಸಿದ್ದು, ಶುಕ್ರವಾರ ನಡೆಯಬೇಕಿದ್ದ ವಿವಾಹದ ಸುತ್ತ ಉದ್ವಿಗ್ನತೆ ಹೆಚ್ಚಾಗಿದೆ. ಈ ಪ್ರಕರಣವು...

ತಮಿಳುನಾಡು: ವಿಧಾನಸಭಾ ಚುನಾವಣೆಗೂ ಮುನ್ನ 1.31 ಕೋಟಿ ಮಹಿಳೆಯರ ಖಾತೆಗೆ 5000ರೂ ಜಮಾ ಮಾಡಿದ ಸ್ಟಾಲಿನ್ ಸರ್ಕಾರ

ಚೆನ್ನೈ: ವಿಧಾನಸಭಾ ಚುನಾವಣೆಗೆ ಮುನ್ನ ಮಹತ್ವದ ಹೆಜ್ಜೆಯಾಗಿ, ತಮಿಳುನಾಡಿನ ಡಿಎಂಕೆ ಸರ್ಕಾರ ಶುಕ್ರವಾರ ಮಹಿಳೆಯರಿಗೆ ಮಾಸಿಕ ರೂ.1,000 ಸಹಾಯ ಯೋಜನೆಯ 1.31 ಕೋಟಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ರೂ.5,000 ಜಮಾ ಮಾಡಿದೆ. ಏಪ್ರಿಲ್-ಮೇ ವಿಧಾನಸಭಾ...

17 ವರ್ಷಗಳ ಗಡಿಪಾರಿನ ಬಳಿಕ ತಾರಿಕ್ ರೆಹಮಾನ್ ರಾಜಕೀಯ ಪುನರಾಗಮನ; ಬಾಂಗ್ಲಾದೇಶ ಚುನಾವಣೆಯಲ್ಲಿ ಬಿಎನ್‌ಪಿಗೆ ಬಹುಮತ

17 ವರ್ಷಗಳ ಗಡಿಪಾರಾದ ನಂತರ ತಾರಿಕ್ ರೆಹಮಾನ್ ರಾಜಕೀಯವಾಗಿ ಪುನರಾಗಮನ ಮಾಡಿದ್ದಾರೆ. 2026 ರ ಬಾಂಗ್ಲಾದೇಶ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷವನ್ನು ಭರ್ಜರಿ ಗೆಲುವಿನತ್ತ ಕೊಂಡೊಯ್ದಿದ್ದಾರೆ. ಬಿಎನ್‌ಪಿ ಅಧ್ಯಕ್ಷರಾಗಿರುವ ತಾರಿಕ್ ಎರಡು ಕ್ಷೇತ್ರಗಳಿಂದ...

ಸುಡಾನ್: ನೈಲ್ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ 21 ಸಾವು, ಹಲವರು ನಾಪತ್ತೆ!

ಉತ್ತರ ಸುಡಾನ್‌ನ ನೈಲ್ ರಾಜ್ಯದ ನೈಲ್ ನದಿಯಲ್ಲಿ ಪ್ರಯಾಣಿಕರ ದೋಣಿ ಮುಳುಗಿದ ನಂತರ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ಯುದ್ಧ ಪೀಡಿತ ದೇಶದ ನಾಗರಿಕ ರಕ್ಷಣಾ...

ಹೊಸಕೋಟೆ ಭೀಕರ ಅಪಘಾತದಲ್ಲಿ 7 ಮಂದಿ ಸಾವು: ಮೃತರಲ್ಲಿ 6 ಮಂದಿ 17-18 ವರ್ಷದ ವಿದ್ಯಾರ್ಥಿಗಳು!

ಬೆಂಗಳೂರು: ಫೆಬ್ರವರಿ 13, ಶುಕ್ರವಾರ ಬೆಳಗಿನ ಜಾವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಹೊರವಲಯದಲ್ಲಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಪೊಲೀಸರ ಪ್ರಕಾರ,...