Homeಮುಖಪುಟ"ನಾರಿ ಶಕ್ತಿ ಎನ್ನುತ್ತೀರಿ, ಅದನ್ನು ಇಲ್ಲಿ ತೋರಿಸಿ": ಕೇಂದ್ರಕ್ಕೆ ಸುಪ್ರೀಂ ತರಾಟೆ

“ನಾರಿ ಶಕ್ತಿ ಎನ್ನುತ್ತೀರಿ, ಅದನ್ನು ಇಲ್ಲಿ ತೋರಿಸಿ”: ಕೇಂದ್ರಕ್ಕೆ ಸುಪ್ರೀಂ ತರಾಟೆ

- Advertisement -
- Advertisement -

ಕೋಸ್ಟ್ ಗಾರ್ಡ್‌ನಲ್ಲಿ ಮಹಿಳೆಯರಿಗೆ ಖಾಯಂ ಆಯೋಗದ ನೀಡಿಕೆ ವಿಚಾರದಲ್ಲಿ ‘ಪುರುಷ ಪ್ರಧಾನ’ ಧೋರಣೆ ಅನುಸರಿಸುತ್ತಿರುವ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, “ಸೇನೆ ಮತ್ತು ನೌಕಾಪಡೆ ಈಗಾಗಲೇ ಈ ನೀತಿಯನ್ನು ಜಾರಿಗೆ ತಂದಿರುವಾಗ ಕೋಸ್ಟ್‌ ಗಾರ್ಡ್‌ ಏಕೆ ವಿಭಿನ್ನವಾಗಿರಬೇಕು?” ಎಂದು ಪ್ರಶ್ನಿಸಿದೆ.

“ಮಹಿಳೆಯರು ಗಡಿಗಳನ್ನು ರಕ್ಷಿಸಬಲ್ಲರಾದರೆ, ಅವರು ಕರಾವಳಿಯನ್ನೂ ರಕ್ಷಿಸಬಲ್ಲರು” ಎಂದು ಹೇಳಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು, ಮಹಿಳಾ ಶಕ್ತಿಯ ಬಗ್ಗೆ ಮಾತನಾಡುವ ಸರ್ಕಾರಕ್ಕೆ ತನ್ನ ಬದ್ಧತೆಯನ್ನು ಪ್ರದರ್ಶಿಸುವ ಸಮಯ ಬಂದಿದೆ ಎಂದು ಹೇಳಿದೆ.

ಕೋಸ್ಟ್ ಗಾರ್ಡ್ ಶಾರ್ಟ್‌ ಸರ್ವಿಸ್ ಅಪಾಯಿಂಟ್‌ಮೆಂಟ್ ಅಧಿಕಾರಿ ಪ್ರಿಯಾಂಕಾ ತ್ಯಾಗಿ ಎಂಬವರು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿ “ನೀವು (ಕೇಂದ್ರ ಸರ್ಕಾರ) ನಾರಿ ಶಕ್ತಿ, ನಾರಿ ಶಕ್ತಿ ಎನ್ನುತ್ತೀರಿ. ಈಗ ಅದನ್ನು ಇಲ್ಲಿ ತೋರಿಸಿ. ನೌಕಾದಳ ಮಾಡಿರುವಾಗ ಕೋಸ್ಟ್ ಗಾರ್ಡ್ ಮಾಡಬಾರದೆಂದಿಲ್ಲ. ಕೋಸ್ಟ್ ಗಾರ್ಡ್ ವಲಯದಲ್ಲಿ ಮಹಿಳೆಯರು ಇರುವುದನ್ನು ನೋಡಲು ಬಯಸದಷ್ಟು ಯಾಕೆ ಪುರುಷ ಪ್ರಧಾನರಾಗಿದ್ದೀರಿ? ಕೋಸ್ಟ್ ಗಾರ್ಡ್ ಬಗ್ಗೆ ಏಕೆ ಅಷ್ಟೊಂದು ಅಸಡ್ಡೆ ಧೋರಣೆ?” ಎಂದು ಪ್ರಶ್ನಿಸಿದ್ದಾರೆ.

ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠವು, ಹೆಚ್ಚುವರಿ ಸಾಲಿಸಿಟರ್ ಜನರಲ್ ವಿಕ್ರಮಜಿತ್ ಬ್ಯಾನರ್ಜಿ ಅವರ ವಾದಕ್ಕೆ ಪ್ರತಿಕ್ರಿಯಿಸಿ, “ಕೋಸ್ಟ್ ಗಾರ್ಡ್ ಸೇನೆ ಮತ್ತು ನೌಕಾಪಡೆಗಿಂತ ವಿಭಿನ್ನ ಡೊಮೇನ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಮಹಿಳೆಯರು ಕೋಸ್ಟ್ ಗಾರ್ಡ್‌ನಲ್ಲಿ ಇರಲು ಸಾಧ್ಯವಿಲ್ಲ ಎಂದು ಹೇಳುವ ದಿನಗಳು ಹೋಗಿವೆ. ಮಹಿಳೆಯರು ಗಡಿಗಳನ್ನು ರಕ್ಷಿಸಬಲ್ಲರಾದರೆ, ಅವರು ಕರಾವಳಿಯನ್ನೂ ರಕ್ಷಿಸಬಲ್ಲರು. ಸುಪ್ರೀಂ ಕೋರ್ಟ್‌ನ ಮಹತ್ವದ ಬಬಿತಾ ಪುನಿಯಾ ತೀರ್ಪನ್ನು ನೀವು ಓದಿಲ್ಲ ಎಂದು ತೋರುತ್ತದೆ” ಎಂದಿದೆ.

2020ರ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್‌, ಸೇನೆಯಲ್ಲಿನ ಮಹಿಳಾ ಅಧಿಕಾರಿಗಳಿಗೆ ಖಾಯಂ ಆಯೋಗವನ್ನು ನೀಡುವಂತೆ ಸೂಚಿಸಿತ್ತು. ಶಾರೀರಿಕ ಮಿತಿಗಳು ಮತ್ತು ಸಾಮಾಜಿಕ ನಿಯಮಗಳು ಎಂಬ ಸರ್ಕಾರದ ವಾದವನ್ನು ಅದು ತಿರಸ್ಕರಿಸಿತ್ತು. ಇದು ಸಮಾನತೆಯ ಪರಿಕಲ್ಪನೆಗೆ ವಿರುದ್ಧವಾಗಿದೆ ಮತ್ತು ಲಿಂಗ ಪಕ್ಷಪಾತವನ್ನು ಹೊಂದಿದೆ ಎಂದಿತ್ತು.

ಪ್ರಿಯಾಂಕಾ ತ್ಯಾಗಿ ಅವರು ಕೋಸ್ಟ್‌ ಗಾರ್ಡ್‌ನ ಡೋರ್ನಿಯರ್‌ ವಿಮಾನಗಳ ನಿರ್ವಹಣೆಗೆ ನಿಯೋಜಿಸಲಾದ ಮೊದಲ ಮಹಿಳಾ ತಂಡದ ಭಾಗವಾಗಿದ್ದರು. ಪುರುಷ ಅಧಿಕಾರಿಗಳಂತೆಯೇ ತಮಗೂ ಖಾಯಂ ಆಯೋಗ ಬೇಕೆಂದು ಅವರು ಆಗ್ರಹಿಸಿದ್ದರು. ಖಾಯಂ ಆಯೋಗಕ್ಕೆ ಆಕೆಯನ್ನು ಪರಿಗಣಿಸಲು ನಿರಾಕರಿಸಿ ಡಿಸೆಂಬರ್‌ನಲ್ಲಿ ಸೇವೆಯಿಂದ ಬಿಡುಗಡೆಗೊಳಿಸಲಾಗಿತ್ತು.

ತ್ಯಾಗಿ ಅವರ ಪರವಾಗಿ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ಅರ್ಚನಾ ಪಾಠಕ್ ದವೆ ಅವರು, ಸಮಾನತೆಯ ಮೂಲಭೂತ ಹಕ್ಕನ್ನು ಪ್ರತಿಪಾದಿಸಿದ್ದಾರೆ. ಸೇನೆಯಲ್ಲಿರುವಂತೆ ಮಹಿಳಾ ಸಿಬ್ಬಂದಿಗೆ ಬಡ್ತಿ ನೀಡಬೇಕು ಮತ್ತು ಕೋಸ್ಟ್ ಗಾರ್ಡ್‌ನಲ್ಲಿ ನಿಯೋಜಿತ ಅಧಿಕಾರಿಗಳಾಗಲು ಅವಕಾಶ ನೀಡಬೇಕು ಎಂದು ಹೇಳಿದ್ದಾರೆ.

ತಂಬ್‌ನೈಲ್ ಚಿತ್ರ ಸಾಂದರ್ಭಿಕ

ಇದನ್ನೂ ಓದಿ : ದಾಳಿಗಳ ಬಗ್ಗೆ ತಲೆಕೆಡಿಸಿಕೊಳ್ಳಲ್ಲ; ಬಿಜೆಪಿಯ ಪಾಳೆಗಾರಿಕೆಯನ್ನು ಕೊನೆಗಾಣಿಸುತ್ತೇವೆ: ಅಭಿಷೇಕ್ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...