Homeಮುಖಪುಟ"ನಾರಿ ಶಕ್ತಿ ಎನ್ನುತ್ತೀರಿ, ಅದನ್ನು ಇಲ್ಲಿ ತೋರಿಸಿ": ಕೇಂದ್ರಕ್ಕೆ ಸುಪ್ರೀಂ ತರಾಟೆ

“ನಾರಿ ಶಕ್ತಿ ಎನ್ನುತ್ತೀರಿ, ಅದನ್ನು ಇಲ್ಲಿ ತೋರಿಸಿ”: ಕೇಂದ್ರಕ್ಕೆ ಸುಪ್ರೀಂ ತರಾಟೆ

- Advertisement -
- Advertisement -

ಕೋಸ್ಟ್ ಗಾರ್ಡ್‌ನಲ್ಲಿ ಮಹಿಳೆಯರಿಗೆ ಖಾಯಂ ಆಯೋಗದ ನೀಡಿಕೆ ವಿಚಾರದಲ್ಲಿ ‘ಪುರುಷ ಪ್ರಧಾನ’ ಧೋರಣೆ ಅನುಸರಿಸುತ್ತಿರುವ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, “ಸೇನೆ ಮತ್ತು ನೌಕಾಪಡೆ ಈಗಾಗಲೇ ಈ ನೀತಿಯನ್ನು ಜಾರಿಗೆ ತಂದಿರುವಾಗ ಕೋಸ್ಟ್‌ ಗಾರ್ಡ್‌ ಏಕೆ ವಿಭಿನ್ನವಾಗಿರಬೇಕು?” ಎಂದು ಪ್ರಶ್ನಿಸಿದೆ.

“ಮಹಿಳೆಯರು ಗಡಿಗಳನ್ನು ರಕ್ಷಿಸಬಲ್ಲರಾದರೆ, ಅವರು ಕರಾವಳಿಯನ್ನೂ ರಕ್ಷಿಸಬಲ್ಲರು” ಎಂದು ಹೇಳಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು, ಮಹಿಳಾ ಶಕ್ತಿಯ ಬಗ್ಗೆ ಮಾತನಾಡುವ ಸರ್ಕಾರಕ್ಕೆ ತನ್ನ ಬದ್ಧತೆಯನ್ನು ಪ್ರದರ್ಶಿಸುವ ಸಮಯ ಬಂದಿದೆ ಎಂದು ಹೇಳಿದೆ.

ಕೋಸ್ಟ್ ಗಾರ್ಡ್ ಶಾರ್ಟ್‌ ಸರ್ವಿಸ್ ಅಪಾಯಿಂಟ್‌ಮೆಂಟ್ ಅಧಿಕಾರಿ ಪ್ರಿಯಾಂಕಾ ತ್ಯಾಗಿ ಎಂಬವರು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿ “ನೀವು (ಕೇಂದ್ರ ಸರ್ಕಾರ) ನಾರಿ ಶಕ್ತಿ, ನಾರಿ ಶಕ್ತಿ ಎನ್ನುತ್ತೀರಿ. ಈಗ ಅದನ್ನು ಇಲ್ಲಿ ತೋರಿಸಿ. ನೌಕಾದಳ ಮಾಡಿರುವಾಗ ಕೋಸ್ಟ್ ಗಾರ್ಡ್ ಮಾಡಬಾರದೆಂದಿಲ್ಲ. ಕೋಸ್ಟ್ ಗಾರ್ಡ್ ವಲಯದಲ್ಲಿ ಮಹಿಳೆಯರು ಇರುವುದನ್ನು ನೋಡಲು ಬಯಸದಷ್ಟು ಯಾಕೆ ಪುರುಷ ಪ್ರಧಾನರಾಗಿದ್ದೀರಿ? ಕೋಸ್ಟ್ ಗಾರ್ಡ್ ಬಗ್ಗೆ ಏಕೆ ಅಷ್ಟೊಂದು ಅಸಡ್ಡೆ ಧೋರಣೆ?” ಎಂದು ಪ್ರಶ್ನಿಸಿದ್ದಾರೆ.

ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠವು, ಹೆಚ್ಚುವರಿ ಸಾಲಿಸಿಟರ್ ಜನರಲ್ ವಿಕ್ರಮಜಿತ್ ಬ್ಯಾನರ್ಜಿ ಅವರ ವಾದಕ್ಕೆ ಪ್ರತಿಕ್ರಿಯಿಸಿ, “ಕೋಸ್ಟ್ ಗಾರ್ಡ್ ಸೇನೆ ಮತ್ತು ನೌಕಾಪಡೆಗಿಂತ ವಿಭಿನ್ನ ಡೊಮೇನ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಮಹಿಳೆಯರು ಕೋಸ್ಟ್ ಗಾರ್ಡ್‌ನಲ್ಲಿ ಇರಲು ಸಾಧ್ಯವಿಲ್ಲ ಎಂದು ಹೇಳುವ ದಿನಗಳು ಹೋಗಿವೆ. ಮಹಿಳೆಯರು ಗಡಿಗಳನ್ನು ರಕ್ಷಿಸಬಲ್ಲರಾದರೆ, ಅವರು ಕರಾವಳಿಯನ್ನೂ ರಕ್ಷಿಸಬಲ್ಲರು. ಸುಪ್ರೀಂ ಕೋರ್ಟ್‌ನ ಮಹತ್ವದ ಬಬಿತಾ ಪುನಿಯಾ ತೀರ್ಪನ್ನು ನೀವು ಓದಿಲ್ಲ ಎಂದು ತೋರುತ್ತದೆ” ಎಂದಿದೆ.

2020ರ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್‌, ಸೇನೆಯಲ್ಲಿನ ಮಹಿಳಾ ಅಧಿಕಾರಿಗಳಿಗೆ ಖಾಯಂ ಆಯೋಗವನ್ನು ನೀಡುವಂತೆ ಸೂಚಿಸಿತ್ತು. ಶಾರೀರಿಕ ಮಿತಿಗಳು ಮತ್ತು ಸಾಮಾಜಿಕ ನಿಯಮಗಳು ಎಂಬ ಸರ್ಕಾರದ ವಾದವನ್ನು ಅದು ತಿರಸ್ಕರಿಸಿತ್ತು. ಇದು ಸಮಾನತೆಯ ಪರಿಕಲ್ಪನೆಗೆ ವಿರುದ್ಧವಾಗಿದೆ ಮತ್ತು ಲಿಂಗ ಪಕ್ಷಪಾತವನ್ನು ಹೊಂದಿದೆ ಎಂದಿತ್ತು.

ಪ್ರಿಯಾಂಕಾ ತ್ಯಾಗಿ ಅವರು ಕೋಸ್ಟ್‌ ಗಾರ್ಡ್‌ನ ಡೋರ್ನಿಯರ್‌ ವಿಮಾನಗಳ ನಿರ್ವಹಣೆಗೆ ನಿಯೋಜಿಸಲಾದ ಮೊದಲ ಮಹಿಳಾ ತಂಡದ ಭಾಗವಾಗಿದ್ದರು. ಪುರುಷ ಅಧಿಕಾರಿಗಳಂತೆಯೇ ತಮಗೂ ಖಾಯಂ ಆಯೋಗ ಬೇಕೆಂದು ಅವರು ಆಗ್ರಹಿಸಿದ್ದರು. ಖಾಯಂ ಆಯೋಗಕ್ಕೆ ಆಕೆಯನ್ನು ಪರಿಗಣಿಸಲು ನಿರಾಕರಿಸಿ ಡಿಸೆಂಬರ್‌ನಲ್ಲಿ ಸೇವೆಯಿಂದ ಬಿಡುಗಡೆಗೊಳಿಸಲಾಗಿತ್ತು.

ತ್ಯಾಗಿ ಅವರ ಪರವಾಗಿ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ಅರ್ಚನಾ ಪಾಠಕ್ ದವೆ ಅವರು, ಸಮಾನತೆಯ ಮೂಲಭೂತ ಹಕ್ಕನ್ನು ಪ್ರತಿಪಾದಿಸಿದ್ದಾರೆ. ಸೇನೆಯಲ್ಲಿರುವಂತೆ ಮಹಿಳಾ ಸಿಬ್ಬಂದಿಗೆ ಬಡ್ತಿ ನೀಡಬೇಕು ಮತ್ತು ಕೋಸ್ಟ್ ಗಾರ್ಡ್‌ನಲ್ಲಿ ನಿಯೋಜಿತ ಅಧಿಕಾರಿಗಳಾಗಲು ಅವಕಾಶ ನೀಡಬೇಕು ಎಂದು ಹೇಳಿದ್ದಾರೆ.

ತಂಬ್‌ನೈಲ್ ಚಿತ್ರ ಸಾಂದರ್ಭಿಕ

ಇದನ್ನೂ ಓದಿ : ದಾಳಿಗಳ ಬಗ್ಗೆ ತಲೆಕೆಡಿಸಿಕೊಳ್ಳಲ್ಲ; ಬಿಜೆಪಿಯ ಪಾಳೆಗಾರಿಕೆಯನ್ನು ಕೊನೆಗಾಣಿಸುತ್ತೇವೆ: ಅಭಿಷೇಕ್ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...