Homeಮುಖಪುಟ"ನಾರಿ ಶಕ್ತಿ ಎನ್ನುತ್ತೀರಿ, ಅದನ್ನು ಇಲ್ಲಿ ತೋರಿಸಿ": ಕೇಂದ್ರಕ್ಕೆ ಸುಪ್ರೀಂ ತರಾಟೆ

“ನಾರಿ ಶಕ್ತಿ ಎನ್ನುತ್ತೀರಿ, ಅದನ್ನು ಇಲ್ಲಿ ತೋರಿಸಿ”: ಕೇಂದ್ರಕ್ಕೆ ಸುಪ್ರೀಂ ತರಾಟೆ

- Advertisement -
- Advertisement -

ಕೋಸ್ಟ್ ಗಾರ್ಡ್‌ನಲ್ಲಿ ಮಹಿಳೆಯರಿಗೆ ಖಾಯಂ ಆಯೋಗದ ನೀಡಿಕೆ ವಿಚಾರದಲ್ಲಿ ‘ಪುರುಷ ಪ್ರಧಾನ’ ಧೋರಣೆ ಅನುಸರಿಸುತ್ತಿರುವ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, “ಸೇನೆ ಮತ್ತು ನೌಕಾಪಡೆ ಈಗಾಗಲೇ ಈ ನೀತಿಯನ್ನು ಜಾರಿಗೆ ತಂದಿರುವಾಗ ಕೋಸ್ಟ್‌ ಗಾರ್ಡ್‌ ಏಕೆ ವಿಭಿನ್ನವಾಗಿರಬೇಕು?” ಎಂದು ಪ್ರಶ್ನಿಸಿದೆ.

“ಮಹಿಳೆಯರು ಗಡಿಗಳನ್ನು ರಕ್ಷಿಸಬಲ್ಲರಾದರೆ, ಅವರು ಕರಾವಳಿಯನ್ನೂ ರಕ್ಷಿಸಬಲ್ಲರು” ಎಂದು ಹೇಳಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು, ಮಹಿಳಾ ಶಕ್ತಿಯ ಬಗ್ಗೆ ಮಾತನಾಡುವ ಸರ್ಕಾರಕ್ಕೆ ತನ್ನ ಬದ್ಧತೆಯನ್ನು ಪ್ರದರ್ಶಿಸುವ ಸಮಯ ಬಂದಿದೆ ಎಂದು ಹೇಳಿದೆ.

ಕೋಸ್ಟ್ ಗಾರ್ಡ್ ಶಾರ್ಟ್‌ ಸರ್ವಿಸ್ ಅಪಾಯಿಂಟ್‌ಮೆಂಟ್ ಅಧಿಕಾರಿ ಪ್ರಿಯಾಂಕಾ ತ್ಯಾಗಿ ಎಂಬವರು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿ “ನೀವು (ಕೇಂದ್ರ ಸರ್ಕಾರ) ನಾರಿ ಶಕ್ತಿ, ನಾರಿ ಶಕ್ತಿ ಎನ್ನುತ್ತೀರಿ. ಈಗ ಅದನ್ನು ಇಲ್ಲಿ ತೋರಿಸಿ. ನೌಕಾದಳ ಮಾಡಿರುವಾಗ ಕೋಸ್ಟ್ ಗಾರ್ಡ್ ಮಾಡಬಾರದೆಂದಿಲ್ಲ. ಕೋಸ್ಟ್ ಗಾರ್ಡ್ ವಲಯದಲ್ಲಿ ಮಹಿಳೆಯರು ಇರುವುದನ್ನು ನೋಡಲು ಬಯಸದಷ್ಟು ಯಾಕೆ ಪುರುಷ ಪ್ರಧಾನರಾಗಿದ್ದೀರಿ? ಕೋಸ್ಟ್ ಗಾರ್ಡ್ ಬಗ್ಗೆ ಏಕೆ ಅಷ್ಟೊಂದು ಅಸಡ್ಡೆ ಧೋರಣೆ?” ಎಂದು ಪ್ರಶ್ನಿಸಿದ್ದಾರೆ.

ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠವು, ಹೆಚ್ಚುವರಿ ಸಾಲಿಸಿಟರ್ ಜನರಲ್ ವಿಕ್ರಮಜಿತ್ ಬ್ಯಾನರ್ಜಿ ಅವರ ವಾದಕ್ಕೆ ಪ್ರತಿಕ್ರಿಯಿಸಿ, “ಕೋಸ್ಟ್ ಗಾರ್ಡ್ ಸೇನೆ ಮತ್ತು ನೌಕಾಪಡೆಗಿಂತ ವಿಭಿನ್ನ ಡೊಮೇನ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಮಹಿಳೆಯರು ಕೋಸ್ಟ್ ಗಾರ್ಡ್‌ನಲ್ಲಿ ಇರಲು ಸಾಧ್ಯವಿಲ್ಲ ಎಂದು ಹೇಳುವ ದಿನಗಳು ಹೋಗಿವೆ. ಮಹಿಳೆಯರು ಗಡಿಗಳನ್ನು ರಕ್ಷಿಸಬಲ್ಲರಾದರೆ, ಅವರು ಕರಾವಳಿಯನ್ನೂ ರಕ್ಷಿಸಬಲ್ಲರು. ಸುಪ್ರೀಂ ಕೋರ್ಟ್‌ನ ಮಹತ್ವದ ಬಬಿತಾ ಪುನಿಯಾ ತೀರ್ಪನ್ನು ನೀವು ಓದಿಲ್ಲ ಎಂದು ತೋರುತ್ತದೆ” ಎಂದಿದೆ.

2020ರ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್‌, ಸೇನೆಯಲ್ಲಿನ ಮಹಿಳಾ ಅಧಿಕಾರಿಗಳಿಗೆ ಖಾಯಂ ಆಯೋಗವನ್ನು ನೀಡುವಂತೆ ಸೂಚಿಸಿತ್ತು. ಶಾರೀರಿಕ ಮಿತಿಗಳು ಮತ್ತು ಸಾಮಾಜಿಕ ನಿಯಮಗಳು ಎಂಬ ಸರ್ಕಾರದ ವಾದವನ್ನು ಅದು ತಿರಸ್ಕರಿಸಿತ್ತು. ಇದು ಸಮಾನತೆಯ ಪರಿಕಲ್ಪನೆಗೆ ವಿರುದ್ಧವಾಗಿದೆ ಮತ್ತು ಲಿಂಗ ಪಕ್ಷಪಾತವನ್ನು ಹೊಂದಿದೆ ಎಂದಿತ್ತು.

ಪ್ರಿಯಾಂಕಾ ತ್ಯಾಗಿ ಅವರು ಕೋಸ್ಟ್‌ ಗಾರ್ಡ್‌ನ ಡೋರ್ನಿಯರ್‌ ವಿಮಾನಗಳ ನಿರ್ವಹಣೆಗೆ ನಿಯೋಜಿಸಲಾದ ಮೊದಲ ಮಹಿಳಾ ತಂಡದ ಭಾಗವಾಗಿದ್ದರು. ಪುರುಷ ಅಧಿಕಾರಿಗಳಂತೆಯೇ ತಮಗೂ ಖಾಯಂ ಆಯೋಗ ಬೇಕೆಂದು ಅವರು ಆಗ್ರಹಿಸಿದ್ದರು. ಖಾಯಂ ಆಯೋಗಕ್ಕೆ ಆಕೆಯನ್ನು ಪರಿಗಣಿಸಲು ನಿರಾಕರಿಸಿ ಡಿಸೆಂಬರ್‌ನಲ್ಲಿ ಸೇವೆಯಿಂದ ಬಿಡುಗಡೆಗೊಳಿಸಲಾಗಿತ್ತು.

ತ್ಯಾಗಿ ಅವರ ಪರವಾಗಿ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ಅರ್ಚನಾ ಪಾಠಕ್ ದವೆ ಅವರು, ಸಮಾನತೆಯ ಮೂಲಭೂತ ಹಕ್ಕನ್ನು ಪ್ರತಿಪಾದಿಸಿದ್ದಾರೆ. ಸೇನೆಯಲ್ಲಿರುವಂತೆ ಮಹಿಳಾ ಸಿಬ್ಬಂದಿಗೆ ಬಡ್ತಿ ನೀಡಬೇಕು ಮತ್ತು ಕೋಸ್ಟ್ ಗಾರ್ಡ್‌ನಲ್ಲಿ ನಿಯೋಜಿತ ಅಧಿಕಾರಿಗಳಾಗಲು ಅವಕಾಶ ನೀಡಬೇಕು ಎಂದು ಹೇಳಿದ್ದಾರೆ.

ತಂಬ್‌ನೈಲ್ ಚಿತ್ರ ಸಾಂದರ್ಭಿಕ

ಇದನ್ನೂ ಓದಿ : ದಾಳಿಗಳ ಬಗ್ಗೆ ತಲೆಕೆಡಿಸಿಕೊಳ್ಳಲ್ಲ; ಬಿಜೆಪಿಯ ಪಾಳೆಗಾರಿಕೆಯನ್ನು ಕೊನೆಗಾಣಿಸುತ್ತೇವೆ: ಅಭಿಷೇಕ್ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...