Homeಕರ್ನಾಟಕನನ್ನನ್ನು ಕೆಣಕಿದ್ದೀರಿ, ಇದರ ಪರಿಣಾಮ ಕಾದು ನೋಡಿ: ದೇವೇಗೌಡರಿಗೆ ಇಬ್ರಾಹಿಂ ಸವಾಲು

ನನ್ನನ್ನು ಕೆಣಕಿದ್ದೀರಿ, ಇದರ ಪರಿಣಾಮ ಕಾದು ನೋಡಿ: ದೇವೇಗೌಡರಿಗೆ ಇಬ್ರಾಹಿಂ ಸವಾಲು

- Advertisement -
- Advertisement -

”ಜೆಡಿಎಸ್‌ ರಾಜ್ಯ ಘಟಕಕ್ಕೆ ನಾನೇ ಅಧ್ಯಕ್ಷ. ನನ್ನನ್ನು ಕೆಳಗಿಳಿಸುವ ಅಧಿಕಾರ ರಾಜ್ಯ ಉನ್ನತ ನಾಯಕರ ಸಭೆಗೆ ಇಲ್ಲ” ಎಂದು ಸಿ.ಎಂ.ಇಬ್ರಾಹಿಂ ಜೆಡಿಎಸ್‌ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ಜೆಡಿಎಸ್  ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹಾಗೂ ರಾಜ್ಯ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ವಿಸರ್ಜಿಸಿ ಹೆಚ್​ಡಿ ದೇವೇಗೌಡ ಅವರು ಇಂದು (ಗುರುವಾರ) ಆದೇಶ ಹೊರಡಿಸಿದ್ದಾರೆ. ಅಲ್ಲದೇ ತಾತ್ಕಾಲಿಕವಾಗಿ ಹೆಚ್​ಡಿ ಕುಮಾರಸ್ವಾಮಿ ಅವರನ್ನು ಜೆಡಿಎಸ್ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಲೋಕಸಭಾ ಚುನಾವಣೆಗೆ ಬಿಜೆಪಿ ಜತೆ ಜೆಡಿಎಸ್​ ಮೈತ್ರಿ ಮಾಡಿಕೊಂಡಿರುವುದನ್ನು ವಿರೋಧಿಸಿ, ಪ್ರತ್ಯೇಕ ಸಭೆ ನಡೆಸುವುದರೊಂದಿಗೆ ತೀವ್ರ ಅಸಮಾಧಾನ ಹೊರಹಾಕಿದ್ದ ಸಿಎಂ ಇಬ್ರಾಹಿಂ ಇದೀಗ ರಾಜ್ಯಾಧ್ಯಕ್ಷ ಸ್ಥಾನ ಕಳೆದುಕೊಂಡಿದ್ದಾರೆ.

ಪಕ್ಷದ ರಾಜ್ಯ ಘಟಕ ವಿಸರ್ಜನೆ ಕುರಿತು ಗುರುವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಇಬ್ರಾಹಿಂ, ”ಅವರ ನಿರ್ಧಾರವನ್ನು ಕೋರ್ಟ್‌ನಲ್ಲಿ ಪ್ರಶ್ನಿಸುತ್ತೇನೆ. ಚುನಾವಣಾ ಆಯೋಗಕ್ಕೂ ದೂರು ಸಲ್ಲಿಸುತ್ತೇನೆ. ದೇವೇಗೌಡರಿಗೆ ಪುತ್ರ ವ್ಯಾಮೋಹ ಇರೋದು ಈಗ ಸಾಬೀತಾಗಿದೆ. ನನ್ನನ್ನು ಕೆಣಕಿದ್ದೀರಿ, ಇದರ ಪರಿಣಾಮ ಮುಂದೆ ಏನಿರುತ್ತೆ ಅಂತ ಕಾದು ನೋಡಿ” ಎಂದು ಎಚ್ಚರಿಸಿದರು.

”ಮೊದಲು ಕಾರ್ಯಕಾರಿ ಸಮಿತಿಯ 2/3 ನೇ ಸದಸ್ಯರ ಅನುಮತಿ ಪಡೆದು ನೋಟೀಸ್ ಕೊಡಬೇಕಾಗಿತ್ತು. ನಾನು ಇಲ್ಲಿಗೇ ಇದನ್ನು ಬಿಡಲ್ಲ, ಹಾಸನದಲ್ಲಿ, ಮಂಡ್ಯದಲ್ಲಿ ಪಕ್ಷದ ಮುಖಂಡರ ಸಭೆ ಮಾಡುತೇನೆ. ಮಹಾಭಾರತದ ನಾಟಕದ ಅಂಕ ಶುರುವಾಗಿದೆ. ಯಾವ ಒಕ್ಕಲಿಗರ ಮಕ್ಕಳನ್ನು ದೇವೇಗೌಡರು ಬೆಳೆಸಿದ್ದಾರೆ? ರಾತ್ರಿ ಹಗಲು ಓಡಾಡಿ ಅವರ ಮಗನನ್ನ ಗೆಲ್ಲಿಸಿದ್ದೇನೆ. ನನಗೆ ಅವರು ಒಳ್ಳೆಯ ಬಹುಮಾನ ಕೊಟ್ಟಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

”ನಾನು ಚುನಾವಣಾ ಆಯೋಗದಲ್ಲಿ ನಿಮ್ಮ ನಿರ್ಧಾರ ಪ್ರಶ್ನೆ ಮಾಡುತ್ತೇನೆ” ಎಂದು ಹೇಳಿದ್ದಾರೆ.

”ಇವತ್ತಿನವರೆಗೂ ದೇವೇಗೌಡರನ್ನು ನಾನು ನನ್ನ ತಂದೆ ಸಮಾನ ಅಂದುಕೊಂಡಿದ್ದೆ. ಇದೇನಾ ಮಗನಿಗೆ ಕೊಡುವ ಪ್ರೀತಿ?” ಎಂದು ಪ್ರಶ್ನಿಸಿದ್ದಾರೆ.

”ಇನ್ನೂ ನಾಲ್ಕು ವರ್ಷ ಇದ್ದ ನನ್ನ ಪರಿಷತ್ ಸ್ಥಾನ ಬಿಟ್ಟು ನಿಮ್ಮ ಬಳಿ ಬಂದೆ ಆದರೆ ನೀವು ಹೀಗೆ ಮಾಡಿದ್ದೀರಿ. ಇಷ್ಟು ದೊಡ್ಡ ವಯಸ್ಸಿನಲ್ಲಿ ನಿಮ್ಮಿಂದ ಇದನ್ನು ನಿರೀಕ್ಷೆ ಮಾಡಿರಲಿಲ್ಲ. ನಿಮಗೆ ಕೈ ಮುಗಿತಿನಿ, ಇನ್ನೂ ಎಷ್ಟು ಮನೆ ಹಾಳು ಮಾಡಬೇಕು ಅಂತಾ ಮಾಡಿದ್ದೀರಿ?” ಎಂದು ದೇವೆಗೌಡರಿಗೆ ಪ್ರಶ್ನಿಸಿದ್ದಾರೆ.

”ಇವತ್ತಿನ ಸಭೆಗೆ ನನಗೆ ಆಹ್ವಾನ ಇರಲಿಲ್ಲ. ಸಭೆ ಬಗ್ಗೆ ನನಗೆ ಗೊತ್ತೂ ಇಲ್ಲ. ಕಂಡೋರ ಮಕ್ಕಳು ಸಿಕ್ಕಿದ್ದೇವೆ ಅಂತ ಹೀಗೆಲ್ಲಾ ಮಾಡುವುದು ಸರಿಯಲ್ಲ ಗೌಡ್ರೇ. ನನಗೆ ಅಧಿಕಾರದ ಆಸೆ ಇಲ್ಲ. ಜೆಡಿಎಸ್ ಕುಟುಂಬದ ಸ್ವತ್ತು ಅಂತ ತೋರಿಸಿಬಿಟ್ಟಿರಿ. ಗೌಡರಿಗೆ ಸ್ವಲ್ಪವಾದರೂ ಪ್ರಜ್ಞೆ ಬೇಡವಾ? ನನ್ನ ಜೊತೆ ಮಾತಾಡಬೇಕು ಅಂತ ಅನ್ನಿಸಲಿಲ್ವಾ? ರಾತ್ರಿ ಹಗಲು ಓಡಾಡಿ ಅವರ ಮಗನನ್ನು ಗೆಲ್ಲಿಸಿದ್ದೇನೆ. ನನಗೆ ಅವರು ಒಳ್ಳೆಯ ಬಹುಮಾನ ಕೊಟ್ಟಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

”ನಾನು ಕೋರ್ಟ್‌ಗೆ ಹೋಗುತ್ತೇನೆ, ವಕೀಲರಿಂದ ನಿಮ್ಮ ಆದೇಶಕ್ಕೆ ತಡೆಯಾಜ್ಞೆ ತರುತ್ತೇನೆ, ಅವರಿಗೆ ನನ್ನನ್ನು ತೆಗೆಯುವ ಅಧಿಕಾರ ಇಲ್ಲ. ಕಾರ್ಯಕಾರಿ ಸಮಿತಿಯ 3/2 ನೇ ಸದಸ್ಯರ ಅನುಮತಿ ಪಡೆದು ಮೊದಲು ನನಗೆ ನೋಟಿಸ್ ಕೊಡಬೇಕು. ನನ್ನನ್ನು ಕೆಣಕಿದ್ದೀರಿ, ಇದರ ಪರಿಣಾಮ ಮುಂದೆ ಏನಿರುತ್ತದೆ ಅಂತ ಕಾದು ನೋಡಿ” ಎಂದು ಸವಾಲು ಹಾಕಿದ್ದಾರೆ.

ಇದನ್ನೂ ಓದಿ: ಜೆಡಿಎಸ್‌ನ ‘ಅಡಹಾಕ್ ಅಧ್ಯಕ್ಷ’ರಾಗಿ ಹೆಚ್‌ಡಿಕೆ ನೇಮಕ: ಸಿಎಂ ಇಬ್ರಾಹಿಂಗೆ ಕೊಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...