Homeಕರ್ನಾಟಕನನ್ನನ್ನು ಕೆಣಕಿದ್ದೀರಿ, ಇದರ ಪರಿಣಾಮ ಕಾದು ನೋಡಿ: ದೇವೇಗೌಡರಿಗೆ ಇಬ್ರಾಹಿಂ ಸವಾಲು

ನನ್ನನ್ನು ಕೆಣಕಿದ್ದೀರಿ, ಇದರ ಪರಿಣಾಮ ಕಾದು ನೋಡಿ: ದೇವೇಗೌಡರಿಗೆ ಇಬ್ರಾಹಿಂ ಸವಾಲು

- Advertisement -
- Advertisement -

”ಜೆಡಿಎಸ್‌ ರಾಜ್ಯ ಘಟಕಕ್ಕೆ ನಾನೇ ಅಧ್ಯಕ್ಷ. ನನ್ನನ್ನು ಕೆಳಗಿಳಿಸುವ ಅಧಿಕಾರ ರಾಜ್ಯ ಉನ್ನತ ನಾಯಕರ ಸಭೆಗೆ ಇಲ್ಲ” ಎಂದು ಸಿ.ಎಂ.ಇಬ್ರಾಹಿಂ ಜೆಡಿಎಸ್‌ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ಜೆಡಿಎಸ್  ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹಾಗೂ ರಾಜ್ಯ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ವಿಸರ್ಜಿಸಿ ಹೆಚ್​ಡಿ ದೇವೇಗೌಡ ಅವರು ಇಂದು (ಗುರುವಾರ) ಆದೇಶ ಹೊರಡಿಸಿದ್ದಾರೆ. ಅಲ್ಲದೇ ತಾತ್ಕಾಲಿಕವಾಗಿ ಹೆಚ್​ಡಿ ಕುಮಾರಸ್ವಾಮಿ ಅವರನ್ನು ಜೆಡಿಎಸ್ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಲೋಕಸಭಾ ಚುನಾವಣೆಗೆ ಬಿಜೆಪಿ ಜತೆ ಜೆಡಿಎಸ್​ ಮೈತ್ರಿ ಮಾಡಿಕೊಂಡಿರುವುದನ್ನು ವಿರೋಧಿಸಿ, ಪ್ರತ್ಯೇಕ ಸಭೆ ನಡೆಸುವುದರೊಂದಿಗೆ ತೀವ್ರ ಅಸಮಾಧಾನ ಹೊರಹಾಕಿದ್ದ ಸಿಎಂ ಇಬ್ರಾಹಿಂ ಇದೀಗ ರಾಜ್ಯಾಧ್ಯಕ್ಷ ಸ್ಥಾನ ಕಳೆದುಕೊಂಡಿದ್ದಾರೆ.

ಪಕ್ಷದ ರಾಜ್ಯ ಘಟಕ ವಿಸರ್ಜನೆ ಕುರಿತು ಗುರುವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಇಬ್ರಾಹಿಂ, ”ಅವರ ನಿರ್ಧಾರವನ್ನು ಕೋರ್ಟ್‌ನಲ್ಲಿ ಪ್ರಶ್ನಿಸುತ್ತೇನೆ. ಚುನಾವಣಾ ಆಯೋಗಕ್ಕೂ ದೂರು ಸಲ್ಲಿಸುತ್ತೇನೆ. ದೇವೇಗೌಡರಿಗೆ ಪುತ್ರ ವ್ಯಾಮೋಹ ಇರೋದು ಈಗ ಸಾಬೀತಾಗಿದೆ. ನನ್ನನ್ನು ಕೆಣಕಿದ್ದೀರಿ, ಇದರ ಪರಿಣಾಮ ಮುಂದೆ ಏನಿರುತ್ತೆ ಅಂತ ಕಾದು ನೋಡಿ” ಎಂದು ಎಚ್ಚರಿಸಿದರು.

”ಮೊದಲು ಕಾರ್ಯಕಾರಿ ಸಮಿತಿಯ 2/3 ನೇ ಸದಸ್ಯರ ಅನುಮತಿ ಪಡೆದು ನೋಟೀಸ್ ಕೊಡಬೇಕಾಗಿತ್ತು. ನಾನು ಇಲ್ಲಿಗೇ ಇದನ್ನು ಬಿಡಲ್ಲ, ಹಾಸನದಲ್ಲಿ, ಮಂಡ್ಯದಲ್ಲಿ ಪಕ್ಷದ ಮುಖಂಡರ ಸಭೆ ಮಾಡುತೇನೆ. ಮಹಾಭಾರತದ ನಾಟಕದ ಅಂಕ ಶುರುವಾಗಿದೆ. ಯಾವ ಒಕ್ಕಲಿಗರ ಮಕ್ಕಳನ್ನು ದೇವೇಗೌಡರು ಬೆಳೆಸಿದ್ದಾರೆ? ರಾತ್ರಿ ಹಗಲು ಓಡಾಡಿ ಅವರ ಮಗನನ್ನ ಗೆಲ್ಲಿಸಿದ್ದೇನೆ. ನನಗೆ ಅವರು ಒಳ್ಳೆಯ ಬಹುಮಾನ ಕೊಟ್ಟಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

”ನಾನು ಚುನಾವಣಾ ಆಯೋಗದಲ್ಲಿ ನಿಮ್ಮ ನಿರ್ಧಾರ ಪ್ರಶ್ನೆ ಮಾಡುತ್ತೇನೆ” ಎಂದು ಹೇಳಿದ್ದಾರೆ.

”ಇವತ್ತಿನವರೆಗೂ ದೇವೇಗೌಡರನ್ನು ನಾನು ನನ್ನ ತಂದೆ ಸಮಾನ ಅಂದುಕೊಂಡಿದ್ದೆ. ಇದೇನಾ ಮಗನಿಗೆ ಕೊಡುವ ಪ್ರೀತಿ?” ಎಂದು ಪ್ರಶ್ನಿಸಿದ್ದಾರೆ.

”ಇನ್ನೂ ನಾಲ್ಕು ವರ್ಷ ಇದ್ದ ನನ್ನ ಪರಿಷತ್ ಸ್ಥಾನ ಬಿಟ್ಟು ನಿಮ್ಮ ಬಳಿ ಬಂದೆ ಆದರೆ ನೀವು ಹೀಗೆ ಮಾಡಿದ್ದೀರಿ. ಇಷ್ಟು ದೊಡ್ಡ ವಯಸ್ಸಿನಲ್ಲಿ ನಿಮ್ಮಿಂದ ಇದನ್ನು ನಿರೀಕ್ಷೆ ಮಾಡಿರಲಿಲ್ಲ. ನಿಮಗೆ ಕೈ ಮುಗಿತಿನಿ, ಇನ್ನೂ ಎಷ್ಟು ಮನೆ ಹಾಳು ಮಾಡಬೇಕು ಅಂತಾ ಮಾಡಿದ್ದೀರಿ?” ಎಂದು ದೇವೆಗೌಡರಿಗೆ ಪ್ರಶ್ನಿಸಿದ್ದಾರೆ.

”ಇವತ್ತಿನ ಸಭೆಗೆ ನನಗೆ ಆಹ್ವಾನ ಇರಲಿಲ್ಲ. ಸಭೆ ಬಗ್ಗೆ ನನಗೆ ಗೊತ್ತೂ ಇಲ್ಲ. ಕಂಡೋರ ಮಕ್ಕಳು ಸಿಕ್ಕಿದ್ದೇವೆ ಅಂತ ಹೀಗೆಲ್ಲಾ ಮಾಡುವುದು ಸರಿಯಲ್ಲ ಗೌಡ್ರೇ. ನನಗೆ ಅಧಿಕಾರದ ಆಸೆ ಇಲ್ಲ. ಜೆಡಿಎಸ್ ಕುಟುಂಬದ ಸ್ವತ್ತು ಅಂತ ತೋರಿಸಿಬಿಟ್ಟಿರಿ. ಗೌಡರಿಗೆ ಸ್ವಲ್ಪವಾದರೂ ಪ್ರಜ್ಞೆ ಬೇಡವಾ? ನನ್ನ ಜೊತೆ ಮಾತಾಡಬೇಕು ಅಂತ ಅನ್ನಿಸಲಿಲ್ವಾ? ರಾತ್ರಿ ಹಗಲು ಓಡಾಡಿ ಅವರ ಮಗನನ್ನು ಗೆಲ್ಲಿಸಿದ್ದೇನೆ. ನನಗೆ ಅವರು ಒಳ್ಳೆಯ ಬಹುಮಾನ ಕೊಟ್ಟಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

”ನಾನು ಕೋರ್ಟ್‌ಗೆ ಹೋಗುತ್ತೇನೆ, ವಕೀಲರಿಂದ ನಿಮ್ಮ ಆದೇಶಕ್ಕೆ ತಡೆಯಾಜ್ಞೆ ತರುತ್ತೇನೆ, ಅವರಿಗೆ ನನ್ನನ್ನು ತೆಗೆಯುವ ಅಧಿಕಾರ ಇಲ್ಲ. ಕಾರ್ಯಕಾರಿ ಸಮಿತಿಯ 3/2 ನೇ ಸದಸ್ಯರ ಅನುಮತಿ ಪಡೆದು ಮೊದಲು ನನಗೆ ನೋಟಿಸ್ ಕೊಡಬೇಕು. ನನ್ನನ್ನು ಕೆಣಕಿದ್ದೀರಿ, ಇದರ ಪರಿಣಾಮ ಮುಂದೆ ಏನಿರುತ್ತದೆ ಅಂತ ಕಾದು ನೋಡಿ” ಎಂದು ಸವಾಲು ಹಾಕಿದ್ದಾರೆ.

ಇದನ್ನೂ ಓದಿ: ಜೆಡಿಎಸ್‌ನ ‘ಅಡಹಾಕ್ ಅಧ್ಯಕ್ಷ’ರಾಗಿ ಹೆಚ್‌ಡಿಕೆ ನೇಮಕ: ಸಿಎಂ ಇಬ್ರಾಹಿಂಗೆ ಕೊಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...