HomeUncategorizedಛತ್ತಿಸ್‌ಘಡದ ರೈತರಿಗೆ 2,500 ರೂ. ಬಿಹಾರದವರಿಗೆ 700 ರೂ. ಏಕೆ ಈ ಅನ್ಯಾಯ?: ರಾಹುಲ್ ಗಾಂಧಿ

ಛತ್ತಿಸ್‌ಘಡದ ರೈತರಿಗೆ 2,500 ರೂ. ಬಿಹಾರದವರಿಗೆ 700 ರೂ. ಏಕೆ ಈ ಅನ್ಯಾಯ?: ರಾಹುಲ್ ಗಾಂಧಿ

ಛತ್ತೀಸ್‌ಘಡದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುತ್ತಿದೆ. ಅಲ್ಲಿನ ರೈತರು ಅಷ್ಟು ಬೆಲೆ ಪಡೆಯುವಾಗ, ಬಿಹಾರದ ರೈತರಾದ ನೀವು ಇಷ್ಟು ಕಡಿಮೆ ಬೆಲೆ ಪಡೆಯಲು ಯಾವ ತಪ್ಪು ಮಾಡಿದ್ದೀರಿ..?

- Advertisement -
- Advertisement -

“ಛತ್ತಿಸ್‌ಘಡದಲ್ಲಿ ರೈತರು ಒಂದು ಕ್ವಿಂಟಲ್‌ ಭತ್ತಕ್ಕೆ 2,500 ರೂಪಾಯಿ ಪಡೆಯುತ್ತಿದ್ದಾರೆ. ಆದರೆ ಬಿಹಾರದ ರೈತರಿಗೆ ಕೇವಲ 700 ರೂಪಾಯಿ ಮಾತ್ರ ಸಿಗುತ್ತದೆ. ಯಾಕೆ..? ನಿಮ್ಮ ಬಳಿ ನೀರು, ವಿದ್ಯುತ್ ಮತ್ತು ಹೊಲ ಎಲ್ಲಾ ಸೌಲಭ್ಯಗಳು ಇವೆಯೇ..? ಕನಿಷ್ಟ ಬೆಂಬಲ ಬೆಲೆ ಬಿಡಿ, ಹೋಗಲಿ ನಿಮಗೆ ಒಂದು ಕ್ವಿಂಟಾಲ್ ಭತ್ತಕ್ಕೆ ಒಂದು ಸಾವಿರವಾದರೂ ಸಿಗುತ್ತಿದೆಯೇ..?” ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಬಿಹಾರ ಚುನಾವಣೆಯ ಮೂರನೇ ಹಂತದ ಚುನಾವಣಾ ಪ್ರಚಾರದಲ್ಲಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್‌ ಮತ್ತು ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಹಾರದ ಮತದಾರರು ನಿತೀಶ್ ಜಿ ಮತ್ತು ಮೋದಿಯವರಿಗೆ ಮತ ನೀಡಿ ತಪ್ಪು ಮಾಡಿದ್ದಿರಿ. ಈಗ ಸರಿಪಡಿಸಿಕೊಳ್ಳಲು ಇರುವ ಅವಕಾಶ ಈ ಚುನಾವಣೆ ಎಂದಿದ್ದಾರೆ.

ಬಿಹಾರದ ಕತಿಹಾರ್‌ನಲ್ಲಿ ರ್‍ಯಾಲಿ ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಪಕ್ಕದ ಕಾಂಗ್ರೆಸ್ ಆಡಳಿತದ ಛತ್ತೀಸ್‌ಘಡವನ್ನು ಉದಾಹರಣೆಯಾಗಿ ನೀಡುವ ಮೂಲಕ ಬಿಹಾರದ ರೈತರಿಗೆ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದಿದ್ದಾರೆ.

“ಛತ್ತೀಸ್‌ಘಡದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುತ್ತಿದೆ. ಅಲ್ಲಿನ ರೈತರು ಅಷ್ಟು ಬೆಲೆ ಪಡೆಯುವಾಗ, ಬಿಹಾರದ ರೈತರಾದ ನೀವು ಇಷ್ಟು ಕಡಿಮೆ ಬೆಲೆ ಪಡೆಯಲು ಯಾವ ತಪ್ಪು ಮಾಡಿದ್ದೀರಿ..?  ಎಂದು ಪ್ರಶ್ನಿಸಿದ ರಾಹುಲ್, “ನೀವು ನಿತೀಶ್ ಜಿ ಮತ್ತು ಮೋದಿ ಜಿ ಅವರಿಗೆ ಮತ ಹಾಕಿದ್ದೀರಿ. ಅದೇ ನಿಮ್ಮ ತಪ್ಪು. ಈಗ ತಪ್ಪನ್ನು ಸರಿಪಡಿಸುವ ಸಮಯ ಬಂದಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸುಳ್ಳು ಹೇಳುವುದರಲ್ಲಿ ಪ್ರಧಾನಿಗೆ ಪೈಪೋಟಿ ನೀಡಲಾರೆವು; ರಾಹುಲ್ ಗಾಂಧಿ

ಇದಕ್ಕೂ ಮೊದಲು ಎರಡನೇ ಹಂತದ ಮತದಾನಕ್ಕೆ ಮುನ್ನಾ ಬೆಳಗ್ಗೆಯೇ ಟ್ವೀಟ್ ಮಾಡಿದ್ದ ರಾಹುಲ್ ಗಾಂಧಿ, ‘ತಪ್ಪದೇ ಎಲ್ಲರೂ ಮತದಾನ ಮಾಡಿ. ಇದರಿಂದ ರಾಜ್ಯದಲ್ಲಿ ನಿಮ್ಮ ಆಯ್ಕೆಯ ಸರ್ಕಾರ ರಚನೆಯಾಗಲಿದೆ’ ಎಂದು ಬಿಹಾರದ ಮತದಾರರಲ್ಲಿ ಮನವಿ ಮಾಡಿದ್ದರು.

ಜೊತೆಗೆ ಇಂದು ನಾನು ಬಿಹಾರದ ಕೋಡಾ ಮತ್ತು ಕಿಷನ್‌ಗಂಜ್‌ನಲ್ಲಿ, ನಿರುದ್ಯೋಗ ಸಮಸ್ಯೆ, ಕೃಷಿಕರ ಸಮಸ್ಯೆಗಳು ಮತ್ತು ದುರ್ಬಲ ಆರ್ಥಿಕತೆ ಕುರಿತು ಮಾತನಾಡಲಿದ್ದೇನೆ’ ಎಂದೂ ಅವರು ತಿಳಿಸಿದ್ದರು. ತಮ್ಮ ರ್‍ಯಾಲಿಗಳಲ್ಲಿ ಈ ವಿಷಯಗಳನ್ನೇ ಚರ್ಚಿಸಿದ್ದಾರೆ.

ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ಪಕ್ಷಗಳ ನೇತೃತ್ವದ ಎನ್‌ಡಿಎಗೆ ಆರ್‌ಜೆಡಿಯ ಮುಖ್ಯಸ್ಥ ತೇಜಸ್ವಿ ಯಾದವ್ ಮತ್ತು ಕಾಂಗ್ರೆಸ್ ಜೊತೆಗೆ ಎಲ್‌ಜೆಪಿ ನಾಯಕ ಚಿರಾಗ್ ಪಾಸ್ವಾನ್ ಪ್ರಮುಖ ಪ್ರತಿಸ್ಪರ್ಧಿಯಾಗಿದ್ದಾರೆ. ಸದ್ಯ ಬಿಹಾರದಲ್ಲಿ 2 ಹಂತದ ಮತದಾನ ಪ್ರಕ್ರಿಯೆ ನಡೆದಿದ್ದು, ಕೊನೆಯ ಹಂತದ ಮತದಾನ ನವೆಂಬರ್ 7  ರಂದು ನಡೆಲಿದೆ. ನವೆಂಬರ್ 10 ರಂದು ಫಲಿತಾಂಶ ಹೊರಬೀಳಲಿದೆ.


ಇದನ್ನೂ ಓದಿ: ಕೇರಳ: ರಾಹುಲ್ ಗಾಂಧಿ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...