HomeUncategorizedಛತ್ತಿಸ್‌ಘಡದ ರೈತರಿಗೆ 2,500 ರೂ. ಬಿಹಾರದವರಿಗೆ 700 ರೂ. ಏಕೆ ಈ ಅನ್ಯಾಯ?: ರಾಹುಲ್ ಗಾಂಧಿ

ಛತ್ತಿಸ್‌ಘಡದ ರೈತರಿಗೆ 2,500 ರೂ. ಬಿಹಾರದವರಿಗೆ 700 ರೂ. ಏಕೆ ಈ ಅನ್ಯಾಯ?: ರಾಹುಲ್ ಗಾಂಧಿ

ಛತ್ತೀಸ್‌ಘಡದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುತ್ತಿದೆ. ಅಲ್ಲಿನ ರೈತರು ಅಷ್ಟು ಬೆಲೆ ಪಡೆಯುವಾಗ, ಬಿಹಾರದ ರೈತರಾದ ನೀವು ಇಷ್ಟು ಕಡಿಮೆ ಬೆಲೆ ಪಡೆಯಲು ಯಾವ ತಪ್ಪು ಮಾಡಿದ್ದೀರಿ..?

- Advertisement -
- Advertisement -

“ಛತ್ತಿಸ್‌ಘಡದಲ್ಲಿ ರೈತರು ಒಂದು ಕ್ವಿಂಟಲ್‌ ಭತ್ತಕ್ಕೆ 2,500 ರೂಪಾಯಿ ಪಡೆಯುತ್ತಿದ್ದಾರೆ. ಆದರೆ ಬಿಹಾರದ ರೈತರಿಗೆ ಕೇವಲ 700 ರೂಪಾಯಿ ಮಾತ್ರ ಸಿಗುತ್ತದೆ. ಯಾಕೆ..? ನಿಮ್ಮ ಬಳಿ ನೀರು, ವಿದ್ಯುತ್ ಮತ್ತು ಹೊಲ ಎಲ್ಲಾ ಸೌಲಭ್ಯಗಳು ಇವೆಯೇ..? ಕನಿಷ್ಟ ಬೆಂಬಲ ಬೆಲೆ ಬಿಡಿ, ಹೋಗಲಿ ನಿಮಗೆ ಒಂದು ಕ್ವಿಂಟಾಲ್ ಭತ್ತಕ್ಕೆ ಒಂದು ಸಾವಿರವಾದರೂ ಸಿಗುತ್ತಿದೆಯೇ..?” ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಬಿಹಾರ ಚುನಾವಣೆಯ ಮೂರನೇ ಹಂತದ ಚುನಾವಣಾ ಪ್ರಚಾರದಲ್ಲಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್‌ ಮತ್ತು ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಹಾರದ ಮತದಾರರು ನಿತೀಶ್ ಜಿ ಮತ್ತು ಮೋದಿಯವರಿಗೆ ಮತ ನೀಡಿ ತಪ್ಪು ಮಾಡಿದ್ದಿರಿ. ಈಗ ಸರಿಪಡಿಸಿಕೊಳ್ಳಲು ಇರುವ ಅವಕಾಶ ಈ ಚುನಾವಣೆ ಎಂದಿದ್ದಾರೆ.

ಬಿಹಾರದ ಕತಿಹಾರ್‌ನಲ್ಲಿ ರ್‍ಯಾಲಿ ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಪಕ್ಕದ ಕಾಂಗ್ರೆಸ್ ಆಡಳಿತದ ಛತ್ತೀಸ್‌ಘಡವನ್ನು ಉದಾಹರಣೆಯಾಗಿ ನೀಡುವ ಮೂಲಕ ಬಿಹಾರದ ರೈತರಿಗೆ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದಿದ್ದಾರೆ.

“ಛತ್ತೀಸ್‌ಘಡದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುತ್ತಿದೆ. ಅಲ್ಲಿನ ರೈತರು ಅಷ್ಟು ಬೆಲೆ ಪಡೆಯುವಾಗ, ಬಿಹಾರದ ರೈತರಾದ ನೀವು ಇಷ್ಟು ಕಡಿಮೆ ಬೆಲೆ ಪಡೆಯಲು ಯಾವ ತಪ್ಪು ಮಾಡಿದ್ದೀರಿ..?  ಎಂದು ಪ್ರಶ್ನಿಸಿದ ರಾಹುಲ್, “ನೀವು ನಿತೀಶ್ ಜಿ ಮತ್ತು ಮೋದಿ ಜಿ ಅವರಿಗೆ ಮತ ಹಾಕಿದ್ದೀರಿ. ಅದೇ ನಿಮ್ಮ ತಪ್ಪು. ಈಗ ತಪ್ಪನ್ನು ಸರಿಪಡಿಸುವ ಸಮಯ ಬಂದಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸುಳ್ಳು ಹೇಳುವುದರಲ್ಲಿ ಪ್ರಧಾನಿಗೆ ಪೈಪೋಟಿ ನೀಡಲಾರೆವು; ರಾಹುಲ್ ಗಾಂಧಿ

ಇದಕ್ಕೂ ಮೊದಲು ಎರಡನೇ ಹಂತದ ಮತದಾನಕ್ಕೆ ಮುನ್ನಾ ಬೆಳಗ್ಗೆಯೇ ಟ್ವೀಟ್ ಮಾಡಿದ್ದ ರಾಹುಲ್ ಗಾಂಧಿ, ‘ತಪ್ಪದೇ ಎಲ್ಲರೂ ಮತದಾನ ಮಾಡಿ. ಇದರಿಂದ ರಾಜ್ಯದಲ್ಲಿ ನಿಮ್ಮ ಆಯ್ಕೆಯ ಸರ್ಕಾರ ರಚನೆಯಾಗಲಿದೆ’ ಎಂದು ಬಿಹಾರದ ಮತದಾರರಲ್ಲಿ ಮನವಿ ಮಾಡಿದ್ದರು.

ಜೊತೆಗೆ ಇಂದು ನಾನು ಬಿಹಾರದ ಕೋಡಾ ಮತ್ತು ಕಿಷನ್‌ಗಂಜ್‌ನಲ್ಲಿ, ನಿರುದ್ಯೋಗ ಸಮಸ್ಯೆ, ಕೃಷಿಕರ ಸಮಸ್ಯೆಗಳು ಮತ್ತು ದುರ್ಬಲ ಆರ್ಥಿಕತೆ ಕುರಿತು ಮಾತನಾಡಲಿದ್ದೇನೆ’ ಎಂದೂ ಅವರು ತಿಳಿಸಿದ್ದರು. ತಮ್ಮ ರ್‍ಯಾಲಿಗಳಲ್ಲಿ ಈ ವಿಷಯಗಳನ್ನೇ ಚರ್ಚಿಸಿದ್ದಾರೆ.

ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ಪಕ್ಷಗಳ ನೇತೃತ್ವದ ಎನ್‌ಡಿಎಗೆ ಆರ್‌ಜೆಡಿಯ ಮುಖ್ಯಸ್ಥ ತೇಜಸ್ವಿ ಯಾದವ್ ಮತ್ತು ಕಾಂಗ್ರೆಸ್ ಜೊತೆಗೆ ಎಲ್‌ಜೆಪಿ ನಾಯಕ ಚಿರಾಗ್ ಪಾಸ್ವಾನ್ ಪ್ರಮುಖ ಪ್ರತಿಸ್ಪರ್ಧಿಯಾಗಿದ್ದಾರೆ. ಸದ್ಯ ಬಿಹಾರದಲ್ಲಿ 2 ಹಂತದ ಮತದಾನ ಪ್ರಕ್ರಿಯೆ ನಡೆದಿದ್ದು, ಕೊನೆಯ ಹಂತದ ಮತದಾನ ನವೆಂಬರ್ 7  ರಂದು ನಡೆಲಿದೆ. ನವೆಂಬರ್ 10 ರಂದು ಫಲಿತಾಂಶ ಹೊರಬೀಳಲಿದೆ.


ಇದನ್ನೂ ಓದಿ: ಕೇರಳ: ರಾಹುಲ್ ಗಾಂಧಿ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...