Homeಅಂಕಣಗಳುಮುಂದೆ ಏನಾಗುತ್ತೆ ಅಂತ ನೋಡ್ತಾಯಿರಿ!

ಮುಂದೆ ಏನಾಗುತ್ತೆ ಅಂತ ನೋಡ್ತಾಯಿರಿ!

- Advertisement -
- Advertisement -

ರಸ್ತೆ ಉದ್ಘಾಟನೆ, ರೈಲುಗಳ ಉದ್ಘಾಟನೆಗೆ ಓಡೋಡಿ ಬರುವ ಪ್ರಧಾನಿ ಸಂಸತ್ ಭವನದ ಉದ್ಘಾಟನೆ ಬಿಟ್ಟಾರೆಯೇ! 20 ವಿರೋಧಪಕ್ಷಗಳು ವಿರೋಧಿಸಿದ್ದನ್ನೂ ಕೇರ್ ಮಾಡದ ಪ್ರಧಾನಿ ಸಾಧು ಸಂತರು, ಸಿದ್ದರು, ಸರ್ವ ಸಂಗ ಪರಿತ್ಯಾಗಿಗಳು ಎಂದು ಕರೆದುಕೊಳ್ಳುವವರನ್ನು ಕರೆಸಿ, ಪ್ರಧಾನಿ ಪೀಠಕ್ಕೆ ತೀರಾ ನಿಷ್ಠೆಯಿಂದಿರುವ ಶೃಂಗೇರಿ ಯತಿಗಳನ್ನು ಆಹ್ವಾನಿಸಿ ಸಂಸತ್ ಭವನದ ಉದ್ಘಾಟನೆಯನ್ನು ನೆರವೇರಿಸಿದರಲ್ಲಾ. ಇನ್ನ ನ್ಯಾಯೋಚಿತವಾಗಿ ಉದ್ಘಾಟನೆಯ ಹಕ್ಕು ಪಡೆದಿದ್ದ ದ್ರೌಪದಿ ಮುರ್ಮು ಅವರು, ತಮಗೆ ಒಲಿದ ರಾಷ್ಟ್ರಪತಿ ಹುದ್ದೆಯ ಖುಷಿಯಲ್ಲಿಯೇ ಇನ್ನೂ ಇರುವುದರಿಂದ ಪ್ರಧಾನಿ ಕೃತ್ಯವನ್ನು ಸಂತೋಷದಿಂದ ಒಪ್ಪಿಕೊಂಡಿದ್ದಾರೆ. ಭಾರತದ ರಾಷ್ಟ್ರಪತಿಗಳಾಗಿದ್ದ ರಾಜೇಂದ್ರ ಪ್ರಸಾದ್, ರಾಧಾಕೃಷ್ಣನ್ ಇಂತಹ ಮಹಾಚೇತನಗಳು ಪ್ರಧಾನಿ ಹಠಕ್ಕೆ ಮರುಗುತ್ತಿರಬಹುದಲ್ಲವೆ? ಸಂಸತ್ತಿನ ಒಳಗಿನವರಿಂದಲೂ ಈ ದೇಶಕ್ಕೆ ಏನೂ ಆಗಲಾರದು ಎಂದಿದ್ದ ಗಾಂಧೀಜಿಯವರ ಮಾತು ನೆನಪಿಗೆ ಬರುತ್ತಿದೆಯಲ್ಲಾ, ಥೂತ್ತೇರಿ.

******

ನಮ್ಮ ವಿಧಾನಸೌಧದ ಸ್ಪೀಕರ್ ಸ್ಥಾನ ಅತ್ಯಂತ ಶ್ರೇಷ್ಠವಾದ ಪಕ್ಷಾತೀತ ಪೀಠ. ಅಲ್ಲಿ ಕುಳಿತಿದ್ದ ಕಾಗೇರಿ ನಾನು ಆರೆಸ್ಸೆಸ್ಸಿನವನು ಎಂದು ಹೆಮ್ಮೆಯಿಂದ ಹೇಳಿ ಈ ನಾಡನ್ನು ಬೆಚ್ಚಿಬೀಳಿಸಿದ್ದರು. ಇನ್ನ ಆ ಪಾರ್ಟಿಯ ವಿದ್ವಾಂಸರು, ಸೆಕ್ಯುಲರ್ ಅಂದರೇನು, ಆ ಪದದ ಒಳಾರ್ಥವೇನು, ಅದನ್ನು ಅನುಸರಿಸುವವರ ನಡವಳಿಕೆಯೇನು ಎಂಬುದನ್ನು ಕುವೆಂಪು ಯೂನಿವರ್ಸಿಟಿಯಿಂದ ಹಿಡಿದು ಬೆಲ್ಜಿಯಂ ಬಾಲನವರೆಗೂ ಕೇಳಿ ಚರ್ಚೆ ನಡೆಸುತ್ತಿರುವಾಗ, ಸ್ಪೀಕರ್ ಸ್ಥಾನಕ್ಕೇರಿದ ಖಾದರ್ ಮಹಾ ಸೆಕ್ಯುಲರ್, ಮಾನವತಾವಾದಿ ಜಾತ್ಯತೀತ ಮನಸ್ಸುಳ್ಳವರು ಎಂದು ಹೇಳಿದ ಬಿಜೆಪಿ ಎಮ್ಮೆಲ್ಲೆಗಳೇ ಬಿಜೆಪಿ ವಿದ್ವಾಂಸರಿಗೆ ಸೆಕ್ಯುಲರ್ ಅರ್ಥವನ್ನು ರವಾನಿಸಿದ್ದಾರಲ್ಲಾ. ನಿಜಕ್ಕೂ ಪ್ರಜಾಪ್ರಭುತ್ವದ ಯಕ್ಷಣಿ ಎಂದರೆ ಇದೇ ಇರಬೇಕು. ಪ್ರಮಾದಗಳನ್ನು ಮತ್ತು ವಕ್ರಬುದ್ಧಿಗಳನ್ನು ಸರಿಪಡಿಸುವ ಶಕ್ತಿ ಕಾಲಪುರುಷನಿಗೆ ಮಾತ್ರ ಇರುವಂಥದಲ್ಲಾ, ಥೂತ್ತೇರಿ.

******

ಭಾರತ ಮತ್ತು ಕರ್ನಾಟಕದ ರಾಜಕಾರಣದ ಇತಿಹಾಸದಲ್ಲಿ ಮಾಧ್ಯಮ ವಿರೋಧ ಪಕ್ಷಗಳನ್ನು ಪ್ರಶ್ನೆ ಮಾಡುತ್ತಾ, ಟೀಕಿಸುತ್ತಾ ಕಾಲ ಹಾಕಿದ್ದು ಇದೇ ಪ್ರಥಮ ಆದ್ದರಿಂದ ಇನ್ನ ಆಡಳಿತಕ್ಕೇರಿದ ವಿರೋಧ ಪಕ್ಷವನ್ನು ಬಿಡುತ್ತವೆಯೇ? ಎಂದಿನಂತೆ ಬಣ ಸೃಷ್ಟಿಸಿಕೊಂಡು ಮಂತ್ರಿಗಳಾಗದವರನ್ನು ಕೆಣಕುತ್ತ, ಇಂತಹವೆಲ್ಲಾ ಸಾಧ್ಯವೇ ಇಲ್ಲಾ ಅಂತ ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ ಎಂದು ಬೊಬ್ಬೆಯಿಡುತ್ತಿವೆಯಲ್ಲಾ. ಇದನ್ನು ನೋಡಿದ ಕರ್ನಾಟಕದ ಜನಸ್ತೋಮ, ’ಈ ಮಾಧ್ಯಮದ ಮಂದಮತಿಗಳಿಗೆ ಕಳೆದ ಸರಕಾರದ ಹಗರಣಗಳು ಒಂದೂ ಕಾಣಲಿಲ್ಲ, ಮುಖ್ಯವಾಗಿ ನಲವತ್ತು ಪರಸೆಂಟ್ ಲಂಚ ಕಾಣಲಿಲ್ಲ, ಹಿಂದಿನ ಸರಕಾರ ಕರುಣಿಸಿದ್ದ ಹಲವು ಭಾಗ್ಯಗಳ ಪೈಕಿ ಇಂದಿರಾ ಕ್ಯಾಂಟಿನ್ ನಿಂತಿದ್ದು, ವಿದ್ಯಾರ್ಥಿಗಳಿಗೆ ಶೂಗಳನ್ನ ಕೊಡದಿದ್ದದು ಕಾಣಲೇ ಇಲ್ಲ’, ಈಗ ಗ್ಯಾರಂಟಿಗಳ ಮೇಲೆ ಬಿದ್ದಿರುವ ಬಿಜೆಪಿ ಬಾಯಿಬಡುಕರ ಜೊತೆ ತಾವೂ ಸೇರಿಕೊಂಡು ಎಬ್ಬಿಸುತ್ತಿರುವ ಗಲಭೆ ನೋಡಿ, ಬಿಜೆಪಿಗಳು ಸೋತಿರುವುದು ಏಕೆಂದು ಅವಕ್ಕಿನ್ನೂ ಗೊತ್ತಾಗಿಲ್ಲವಲ್ಲಾ ಎಂದು ನಗುತ್ತಿದ್ದಾರಲ್ಲಾ, ಥೂತ್ತೇರಿ.

******

ಕನಸು ಮನಸ್ಸಿನಲ್ಲೂ ನಿರೀಕ್ಷೆ ಮಾಡದ ಫಲಿತಾಂಶದಿಂದ ಕಂಗಾಲಾದಂತೆ ಏನೇನೊ ಮಾತಾನಾಡುತ್ತಿರುವ ಕುಮಾರಣ್ಣನನ್ನು ಮಾತನಾಡಿಸಿ ಸಮಾಧಾನ ಹೇಳುವುದು ನಮ್ಮ ಕರ್ತವ್ಯವೆಂದು ತಿಳಿದು ಫೋನ್ ಮಾಡಲಾಗಿ ರಿಂಗಾಯ್ತು. ರಿಂಗ್ ಟೋನ್: ’ನೇಗಿಲ ಹಿಡಿದಾ ಹೊಲದೊಳು ಹಾಡುತ ಉಳುವಾ ಯೋಗಿಯ ನೋಡಲ್ಲಿ ಹೋ..’

“ಹಲೋ ಯಾರು?”

“ನಾನು ಸಾರ್ ಯಾಹೂ.”

“ಎಲ್ಲಿದ್ದಿರಿ ಯಾಹು? ಬನ್ರಿ ಮಾತಾಡನ.”

“ಭಾಳ ದೂರದಲ್ಲಿದ್ದಿನಿ ಸಾರ್. ನಿಮ್ಮ ಮೊಬೈಲ್ ರಿಂಗ್ ಟೋನ್ ಚನ್ನಾಗ್ಯದೆ ಸಾರ್.”

“ಅದು ಕುವೆಂಪು ಬರದ ಪದ ಕಂಡ್ರಿ.”

“ಕವನ ಸಾರ್ ಅದು. ಸಿ. ಅಶ್ವತ್ಥ ಪದ ಮಾಡಿದ್ರು. ಆದ್ರು ಕಾಲ ಏನು ಮಾಡತ್ತೆ ನೋಡಿ, ಆ ಕವನದ ಆಶಯನೆ ಹಾಳಾಯ್ತಲ್ಲ ಸಾ.”

“ಎಲ್ಲಿ ಹಾಳಾಗಿದೆರಿ?”

ಇದನ್ನೂ ಓದಿ: ಚಿಕ್ಕಮಗಳೂರು ಜನಕ್ಕೆ ಈ ಸೋಲು ಬೇಕಿತ್ತು ಸಾರ್!

“ಕುವೆಂಪು ಆ ಕವನ ಬರದದ್ದು ವಲ ಉಳೊ ರೈತನ್ನ ನೋಡಿ. ಆವುನು ಉಕ್ಕೆ ಗೆರೆಗೆ ನೆಟ್ಟಿದ್ದ ದೃಷ್ಟಿ ನೋಡಿ ಯೋಗಿ ಅಂದುಬುಟ್ರು. ಈಗ ನೋಡಿದ್ರೆ ಟ್ರಾಕ್ಟರಲ್ಲಿ ವಲ ಉಳುತಾ ಅವುನೆ.”

“ಅದರಲ್ಲಿ ಆಶ್ಚರ್ಯ ಪಡತಕ್ಕಂತದ್ದೇನಿದೇರಿ? ಜನರ ಶ್ರಮ ಸ್ವಲ್ಪ ಕಡಮೆ ಆಗಿದೆ. ದನಗಳೂ ಇಲ್ಲ. ಅದ್ಕೆ ಟಾಕ್ಟ್ರಲ್ಲಿ ಉಳುಮೆ ಮಾಡತಕ್ಕಂತ ಕೆಲಸ ಏನಿದೆ ಅದನ್ನ ಮಾಡ್ತ ಇದಾನೆ. ನಮಗೆ ಜಾಸ್ತಿ ಸೀಟುಗಳನ್ನ ಕೊಟ್ಟು ಸಮ್ಮಿಶ್ರ ಸರಕಾರದ ರೂವಾರಿ ಮಾಡಿದ್ದ ಮತದಾರ ಇವತ್ತು ಆಶೆ ಅಮಿಷಕ್ಕೆ ಬಲಿಯಾಗಿ ನಮಗೆ ಕೇವಲ 19 ಸ್ಥಾನ ಕೊಟ್ಟಿದ್ದಾನೆ. ಏನು ಮಾಡಕ್ಕಾಗತ್ತೆ ಹೇಳಿ ಕಾಲ ಬದಲಾಗುತ್ತೆ.”

“ಇಂತ ಸೋಲಿಗೆ ನೀವು ಕಂಡುಕೊಂಡ ಉತ್ತರ ಏನು ಸಾರ್?”

“ಉತ್ತರ ಕಣ್ಣಿಗೆ ಕಾಣ್ತಯಿದೆಯಲ್ರೀ. ನನ್ನ ಪಂಚರತ್ನ ನೋಡಿ ಕಾಂಗ್ರೆಸ್ಸಿನವರು ಗ್ಯಾರಂಟಿ ಅನವುನ್ಸ್ ಮಾಡಿದ್ರು. ಅದೂಅಲ್ಲದೆ ಮೂರು ಸಾವುರ ಎರಡು ಸಾವುರ ಉಡುಗೊರೆ ಕೊಟ್ಟವರೆ ಬೇಕಿದ್ರೆ ತನಿಖೆ ಮಾಡಲಿ.”

“ನೀವು ಏನೂ ಕೊಡಲಿಲ್ವ ಸಾರ್?”

“ನಮ್ಮತ್ರ ದುಡ್ಡಿದ್ರೆ ತಾನೆ ಕೊಡದು?”

“ಸಾರ್ ಈ ಚುನಾವಣೆಲಿ ಯಲ್ರು ಯಲ್ಲಾನು ಕೊಟ್ಟವುರೆ. ನಾನೇ ನೋಡಿದಂಗೆ ನಿಮ್ಮ ಮತ್ತೆ ದೇವೇಗೌಡ್ರ ಸಭೆಗೆ ಜನ ತರೊದಕ್ಕೆ ನಿಮ್ಮ ಪಕ್ಷದ ಎಮ್ಮೆಲ್ಲೆ ಮತ್ತೆ ಲೀಡ್ರುಗಳು ಕೂಡ ಕೊಟ್ರು. ಇನ್ನ ಚುನಾವಣೆ ಹಿಂದಿನ ದಿನ ಮನೆ ಮನೆಗೆ ನುಗ್ಗಿ ಕೊಟ್ರು. ಕಾಂಗ್ರೆಸ್ಸು ಹಂಗೆ ನೋಡಿದ್ರೆ ಕಡಿಮೆ ಕೊಡ್ತು. ಇನ್ನ ಬಿಜೆಪಿಗಳಂತೂ ಲೆಕ್ಕವಿಲ್ಲದೆ ಕೊಟ್ರು. ಜನ ಯಲ್ಲಾರತ್ಲೂ ಈಸಗಂಡು ಮಾಡದ್ನೆ ಮಾಡಿದ್ರು.”

“ನಮ್ಮವರು ದುಡ್ಡು ಹಂಚಿಲ್ಲ ಕಂಡ್ರಿ.”

“ಸಾರ್ ನಮ್ಮನೆಲಿ ಏಳು ಓಟಿದ್ದೊ. ಏಳು ಓಟಿಗೆ ಹತ್ತುವರೆ ಸಾವುರ ಕೊಟ್ಟು ಹೋದ್ರು ಗೊತ್ತ ಸಾರ್?”

“ಅಂಗಾದ್ರೆ ನೀವೂ ದುಡ್ಡು ತಗಂಡರೇನ್ರಿ?”

“ನಾವು ತಗಂಡ್ರೆ ಬರಿಯಕ್ಕಾಗತ್ತ ಸಾರ್?”

“ನಾವು ಗಿಫ್ಟ್ ಕೊಟ್ಟಿಲ್ಲ, ಕೂಪನ್ನು ಕೊಟ್ಟಿಲ್ಲ.”

“ಹಿಂದೆ ಕೊಟ್ಟ ದಾಖಲೆ ಇದೆ ಸಾರ್. ಹಂಚಕ್ಕಾಗದೆ ಉಳದ ದಾಸ್ತಾನಿನ ಫೋಟೊ ಇದೆ.”

“ಅದು ಹಳೆದು, ಈಗಿನ ಕತೆ ಹೇಳ್ರಿ.”

“ಈಗಿನ ಕತೆ ಏನು ಅಂದ್ರೇ, ನೀವು ಕಾಂಗ್ರೆಸ್ ಮೇಲೆ ದಾಳಿ ಮಾಡದಕಿಂತ, ಐದು ವರ್ಷ ಭಯಾನಕ ಸರಕಾರ ನಡೆಸಿದೊರ ಮೇಲೆ ಕಣ್ಣಿಡಬೇಕಿತ್ತು. ಅವರ ಅಕ್ರಮ ಬಯಲು ಮಾಡಬೇಕಿತ್ತು. ಅದು ಬುಟ್ಟು ಕಾಂಗ್ರೆಸ್ ಮೇಲೆ ದಾಳಿ ಮಾಡಿದ್ರಿ ಸಾರ್. ಕಾಂಗ್ರೆಸ್ಸು ಅದು ಏನೇ ಆಗಿರ್ಲಿ ದೇವೆಗೌಡ್ರನ್ನ ಪ್ರಧಾನಿ ಮಾಡಿತ್ತು. ನಿಮ್ಮನಮ್ಮೆ ಮುಖ್ಯಮಂತ್ರಿ ಮಾಡಿತ್ತು. ಆದ್ರು ನೀವು ಕಾಂಗ್ರೆಸ್ಸನ್ನ ಟೀಕುಸ್ತಿರಿ, ಹೀಯಾಳುಸ್ತಿರಿ. ಈಗ್ಲು ನೋಡಿ ದೇಶದ ವಿರೋಧ ಪಕ್ಷಗಳೆಲ್ಲಾ ಒಂದಾಗಿ ಪಾರ್ಲಿಮೆಂಟ್ ಭವನದ ಉದ್ಘಾಟನೆ ಬಹಿಷ್ಕರಿಸಿ ದೂರ ಇದ್ರೆ, ದೇವೇಗೌಡ್ರು ಇಂತ ಸ್ಥಿತಿಲಿ ಹೋಗಿ ಭಾಗವಹಿಸಿದ್ರು. ನಿಮಗೆ 19 ಸೀಟು ಬಂದಿರಕ್ಕೆ ಇಲ್ಲೂ ಉತ್ತರ ಸಿಗತ್ತೇ ಅಲ್ವಾ ಸಾರ್.”

“ರೀ ನಮ್ಮ ತಂದೆ ಸರಿಯಾಗೆ ಹೇಳ್ಯವುರಲ್ಲವೇನ್ರಿ? ಈ ದೇಶದ ಪಾರ್ಲಿಮೆಂಟ್ ಕಟ್ಟದ ಏನಿದೆ ಅದು ಆರೆಸ್ಸೆಸ್ಸ್ ಕಚೇರಿಯಲ್ಲ, ಅದ್ಕೆ ಹೋಯ್ತಿನಿ ಅಂತ. ಹೋದ್ರು ಅದು ತಪ್ಪ?”

“ಆರೆಸ್ಸೆಸ್ ಕಚೇರಿಯಲ್ಲ ಸರಿ. ಆದ್ರೆ ಉದ್ಘಾಟಿಸಿದವರು ಆರೆಸ್ಸೆಸ್ಸಿನವರು. ಅಲ್ಲಿ ಪಾರ್ಲಿಮೆಂಟ್ ಸದಸ್ಯರಿಗಿಂತ ಜಗದ್ಗುರುಗಳು ಅನ್ನಿಸಿಕೊಂಡೋರು ಜಾಸ್ತಿ ಜಮಾಯಿಸಿದ್ರು. ಅಂದ್ರೇನು ನೀವು ದೇಶದ ಬಿಜೆಪಿಯ ಬಿ ಟೀಮು ಅಂತ ತೋರಿಸಿಗಂಡ್ರಲ್ಲವಾ ಸಾರ್? ಕಾಂಗ್ರೆಸ್ಸಿನ ಸಿ ಟೀಮಾಗಾದ್ರು ಕಾಣಸಿಗಂಡಿದ್ರೆ ಇನ್ನೊಸಿ ಸೀಟು ಬರವು.”

“ನೋಡ್ರಿ ಯಾಹೂ, ನಾವು ಯಾರಿಗೂ ಬಿ ಟೀಮು, ಸಿ ಟೀಮಾಗಿ ಕೆಲಸ ಮಾಡಲಿಲ್ಲ. ಪೂರ್ಣ ಪ್ರಮಾಣದಲ್ಲಿ ಮೆಜಾರಿಟಿಗೆ ಬರತಕ್ಕಂತ ಪ್ರಣಾಳಿಕೆ ತಯಾರು ಮಾಡಿ ಜನತೆ ಮುಂದೆ ಇಟ್ಟೊ. ಕಾಂಗ್ರೆಸ್ಸಿನ ಅಕ್ರಮದಿಂದ ಸೋತಿದ್ದಿವಿ. ಮುಂದೆ ಏನಾಗತ್ತೆ ನೋಡ್ತಾಯಿರಿ.”

“ಏನಾಗಬಹುದು ಸಾರ್?”

“ಅದನ್ನ ಈಗ್ಲೆ ಹೇಳಕ್ಕೆ ಬರಲ್ಲ. ಕೇವಲ 16 ಸೀಟು ಎಂ.ಪಿಗಳು ಗೆದ್ದಿದ್ದಕ್ಕೆ ದೇವೇಗೌಡ್ರನ್ನ ಕರದು ಈ ದೇಶದ ಪ್ರಧಾನಿ ಮಾಡಿದ್ರು. ಅದಕ್ಕೂ ಹಿಂದೆ ನಮ್ಮ ತಂದೆ ನಿಂತ ಎರಡೂ ಕ್ಷೇತ್ರದಲ್ಲಿ ಸೋತಿದ್ರು. ನಮ್ಮ ಭಾಗಕ್ಕೆ ಇನ್ನೇನು ಎಲ್ಲಾ ಮುಗುದೋಯ್ತು ಅಂತ ಭಾವನೆ ಪಡತಿದ್ದ ಕಾಲ ಅದು. ಮುಂದೆ ಏನಾಯ್ತು ನಿಮಗೆ ಗೊತ್ತಿದೆ.”

“ಸರಿ ನೀವು 19 ಸೀಟು ಮಡಿಕಂಡು ಏನಾಯ್ತಿರಿ?”

“ಮುಂದಿನ ಲೋಕಸಭಾ ಚುನಾವಣೆವರಿಗೆ ಮಾತ್ರ ಈ ಸರಕಾರ ಇರದು.”

“ಅಮ್ಯಾಲೇನಾಗುತ್ತೆ ಸಾರ್?”

“ಅದನ್ನು ಈಗ್ಲೆ ಹೇಳಕ್ಕೆ ಬರಲ್ಲ.”

“ನೀವು ಇಬ್ರಾಹಿಂ ಅವರನ್ನ ಅಧ್ಯಕ್ಷನನ್ನಾಗಿ ಮಾಡಬಾರದಿತ್ತು ಸಾರ್. ನೀವೇ ಆಗಿದ್ರೆ ಇನ್ನ ಜಾಸ್ತಿ ಸೀಟು ಬರ್ತಿದ್ದೊ.”

“ನಮ್ಮ ತಂದೆಗೇಳಿದೆ ಕಂಡ್ರಿ, ಅವುರು ಕೇಳಲಿಲ್ಲ. ಮುಸ್ಲಿಂ ಓಟು ಬತ್ತವೆ ಅಂದ್ರು, ಅವು ಬರಲಿಲ್ಲ.”

“ನಿಜ ಸಾರ್ ರಾಮನಗರದಲ್ಲಿ ನೋಡಿ ಒಂದು ಓಟೂ ಬರಲಿಲ್ಲ. ಅದ್ಕೆ ನಿಖಿಲ್ ಸೋತಿದ್ದು.”

“ರಾಮನಗರದಲ್ಲಷ್ಟೇ ಅಲ್ಲ, ಯಲ್ಲಾ ಕಡೆನು ಮುಸ್ಲಿಮರ ಓಟು ನಮಗೆ ಬರಲಿಲ್ಲ. ಅದ್ಕೆ 19 ಸೀಟು ಬಂದಿದ್ದು.”

“ಮತ್ತೆ ಕಾಂಗ್ರೆಸ್ ಅಕ್ರಮ ನಡಸ್ತು ಅಂದ್ರಿ?”

“ಅದೂ ನ್ಯಡಿತು.”

“ಇದ್ಯಾವುದೂ ನಿಜ ಅಲ್ಲ ಸಾರ್. ನಿಮಗೆ ಜನ ಯಾವತ್ತು ಮೆಜಾರಿಟಿ ಕೊಡಲ್ಲ. ಯಲ್ಲಾ ನಿಮ್ಮ ಭ್ರಮೆ. ಜನ ಈ ಸಾರಿ ಕಾಂಗ್ರೆಸ್ಸಿನವುರು ನಿಮ್ಮ ಮನೆ ಬಾಗಿಲಿಗೆ ಬರದಂಗೆ, ಬಿಜೆಪಿಗಳು ಆಪರೇಷನ್ ಮಾಡದಂಗೆ ಓಟು ಮಾಡ್ಯವುರೆ. ಅಲ್ವೆ ಸಾರ್?”

“ನೋಡ್ತಯಿರಿ ಮುಂದೆ ನೂರ ಹತ್ತೊಂಬತ್ತು ಬರಲಿಲ್ಲ ಅಂದ್ರೆ ನನ್ನ ಪಾರ್ಟಿನೆ ವಿಸರ್ಜನೆ ಮಾಡ್ತಿನಿ.”

“ಥೂತ್ತೇರಿ”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...