Homeಮುಖಪುಟಜೀವನ ಕೊನೆಗೊಳಿಸಲು ಅನುಮತಿ ನೀಡಿ; ಲೈಂಗಿಕ ಕಿರುಕುಳದಿಂದ ನೊಂದು ಸಿಜೆಐಗೆ ಪತ್ರ ಬರೆದ ನ್ಯಾಯಾಧೀಶೆ!

ಜೀವನ ಕೊನೆಗೊಳಿಸಲು ಅನುಮತಿ ನೀಡಿ; ಲೈಂಗಿಕ ಕಿರುಕುಳದಿಂದ ನೊಂದು ಸಿಜೆಐಗೆ ಪತ್ರ ಬರೆದ ನ್ಯಾಯಾಧೀಶೆ!

- Advertisement -
- Advertisement -

‘ಹಿರಿಯ ನ್ಯಾಯಾಧೀಶರು ನನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ’ ಎಂದು ಉತ್ತರ ಪ್ರದೇಶದ ಯುವ ನ್ಯಾಯಾಧೀಶೆಯೊಬ್ಬರು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಬಹಿರಂಗ ಪತ್ರ ಬರೆದಿದ್ದು, ‘ಜೀವನವನ್ನು ಕೊನೆಗೊಳಿಸಲು ಬಯಸುತ್ತೇನೆ’ ಎಂದು ಹೇಳಿದ್ದಾರೆ. ಈ ಕುರಿತು ವರದಿ ನೀಡುವಂತೆ ಅಲಹಾಬಾದ್ ಹೈಕೋರ್ಟಿಗೆ ಸುಪ್ರೀಂ ಸೂಚನೆ ನೀಡಿದೆ.

ಆರು ತಿಂಗಳ ಹಿಂದೆ ತಾನಿದ್ದ ಹುದ್ದೆಯಲ್ಲಿ, ಹಿರಿಯ ನ್ಯಾಯಾಧೀಶರಿಂದ ಲೈಂಗಿಕ ಕಿರುಕುಳ ಅನುಭವಿಸಿದ್ದೇನೆ ಎಂದು ಆರೋಪಿಸಿದ್ದಾರೆ. ‘ನ್ಯಾಯ ಸಿಗುವುದು ಬಿಡಿ; ನ್ಯಾಯಯುತ ತನಿಖೆ ನಡೆಯುವ ಭರವಸೆ ಇಲ್ಲ’ ಎಂದು ಅಸಹಾಯಕತೆ ವ್ಯಕ್ತಪಡಿಸಿರುವ ಅವರು, ನನ್ನ ಜೀವನವನ್ನು ಕೊನೆಗೊಳಿಸಲು ಅನುಮತಿ ನೀಡುವಂತೆ ಕೋರಿ ಬಹಿರಂಗ ಪತ್ರ ಬರೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಎರಡು ಪುಟಗಳ ಪತ್ರ ಬರೆದಿರುವ ಅವರು, ‘ಜನ ಸಾಮಾನ್ಯರಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ಬಹಳ ಉತ್ಸಾಹದಿಂದ ಮತ್ತು ನಂಬಿಕೆಯಿಂದ ನ್ಯಾಯಾಂಗ ಸೇವೆಗೆ ಸೇರಿಕೊಂಡೆ. ನಾನೀಗ ನ್ಯಾಯಕ್ಕಾಗಿ ಎಡತಾಕುವ ಪ್ರತಿಯೊಂದು ಬಾಗಿಲಿನಲ್ಲೂ ಶೀಘ್ರದಲ್ಲೇ ಭಿಕ್ಷುಕಳಾಗುತ್ತೇನೆ ಎಂಬುದು ನನಗೆ ಗೊತ್ತು. ನನ್ನ ಅಲ್ಪಾವಧಿ ಸೇವಾವಧಿಯಲ್ಲಿ, ತೆರೆದ ನ್ಯಾಯಾಲಯದ ವೇದಿಕೆಯ ಮೇಲೆ ನಿಂದನೆಗೆ ಒಳಗಾದ ಅಪರೂಪದ ಗೌರವ ನನಗೆ ಸಿಕ್ಕಿದೆ. ನನ್ನನ್ನು ಸಂಪೂರ್ಣ ಕಸದಂತೆ ನಡೆಸಿಕೊಳ್ಳಲಾಗಿದೆ. ಜನರಿಗೆ ನ್ಯಾಯ ಒದಗಿಸಲು ಬಯಸುವ ನನಗೆ  ನಾನೊಂದು ಅನಾವಶ್ಯಕ ಕೀಟದಂತೆ ಭಾಸವಾಗುತ್ತಿದೆ’ ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.

‘ನನ್ನ ದೂರು ಮತ್ತು ಹೇಳಿಕೆಗಳನ್ನು ‘ಕಾರ್ಡಿನಲ್ ಸತ್ಯ’ವನ್ನಾಗಿ ಪರಿಗಣಿಸುತ್ತಾರೆ ಎಂಬುದನ್ನು ನಾನು ನಿರೀಕ್ಷಿಸಿರಲಿಲ್ಲ. ನ್ಯಾಯಯುತ ವಿಚಾರಣೆ ಮಾತ್ರ ನಾನು ಬಯಸಿದ್ದು. ರಾತ್ರಿ ಹೊತ್ತು ಹಿರಿಯ ನ್ಯಾಯಾಧೀಶರನ್ನು ಭೇಟಿಯಾಗುವಂತೆ ಹೇಳಲಾಗಿತ್ತು. ಇದರಿಂದ ನೊಂದು ನಾನು ಆತ್ಮಹತ್ಯೆಗೆ ಪ್ರಯತ್ನಿಸಿದ್ದೆ. ಆದರೆ, ನನ್ನ ಪ್ರಯತ್ನ ಯಶಸ್ವಿಯಾಗಲಿಲ್ಲ’ ಎಂದು ಹೇಳಿದ್ದಾರೆ.

ಯುವ ನ್ಯಾಯಾಧೀಶೆ ಬರೆದಿರುವ ಬಹಿರಂಗ ಪತ್ರ

‘ನನಗಿನ್ನು ಬದುಕುವ ಇಚ್ಛೆ ಇಲ್ಲ. ಕಳೆದ ಒಂದೂವರೆ ವರ್ಷದಲ್ಲಿ ನನ್ನನ್ನು ನಡೆದಾಡುವ ಶವದಂತೆ ಮಾಡಲಾಗಿದೆ. ಈ ಆತ್ಮವಿಲ್ಲದ ಮತ್ತು ನಿರ್ಜೀವ ದೇಹವನ್ನು ಮುಂದೆ ಸಾಗಿಸುವುದರಲ್ಲಿ ಯಾವುದೇ ಅರ್ಥವಿಲ್ಲ. ಬದುಕಲು ನನ್ನ ಜೀವನದಲ್ಲಿ ಯಾವುದೇ ಉದ್ದೇಶಗಳು ಉಳಿದಿಲ್ಲ. ನನ್ನ ಜೀವನವನ್ನು ಗೌರವಯುತವಾಗಿ ಕೊನೆಗೊಳಿಸಲು ದಯವಿಟ್ಟು ನನಗೆ ಅನುಮತಿ ನೀಡಿ’ ಎಂದು ಅವರು ಸಿಜೆಐಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದಾರೆ.

‘ಭಾರತದಲ್ಲಿ ಕೆಲಸ ಮಾಡುವ ಮಹಿಳೆಯರು ವ್ಯವಸ್ಥೆ ವಿರುದ್ಧ ಹೋರಾಡುವ ಪ್ರಯತ್ನಗಳನ್ನು ಮಾಡಬೇಡಿ. ವ್ಯವಸ್ಥೆಯ ವಿರುದ್ಧ ಹೋರಾಡುತ್ತಿರುವ ಮಹಿಳೆಯರಿಗೆ ನಾನು ಕಿವಿಮಾತು ಹೇಳುತ್ತೇನೆ, ನಾನು ನ್ಯಾಯಾಧೀಶೆಯಾಗಿ ನನ್ನಿಂದಲೇ ಸಾಧ್ಯವಾಗಲಿಲ್ಲ. ನ್ಯಾಯಯುತವಾದ ವಿಚಾರಣೆಯನ್ನೂ ಮಾಡಿಕೊಳ್ಳಲಾಗಲಿಲ್ಲ. ನ್ಯಾಯವನ್ನು ಬಿಡಿ; ಆಟಿಕೆ ಅಥವಾ ನಿರ್ಜೀವ ವಸ್ತುವಾಗಿರುವುದನ್ನು ಕಲಿಯಲು ನಾನು ಎಲ್ಲ ಮಹಿಳೆಯರಿಗೆ ಸಲಹೆ ನೀಡುತ್ತೇನೆ’ ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರ ಸೂಚನೆಯ ಮೇರೆಗೆ ಅಲಹಾಬಾದ್ ಹೈಕೋರ್ಟಿನಿಂದ ಮಹಿಳಾ ನ್ಯಾಯಾಂಗ ಅಧಿಕಾರಿ ಸಲ್ಲಿಸಿದ ದೂರಿನ ಕುರಿತು ರಿಜಿಸ್ಟ್ರಾರ್ ವರದಿ ಕೇಳಿದ್ದಾರೆ. ಗುರುವಾರ ಸಂಜೆ ವಿವರ ಕೇಳಿ ಪತ್ರ ಬರೆಯಲಾಗಿದ್ದು, ಶುಕ್ರವಾರದ ವೇಳೆಗೆ ವರದಿಯನ್ನು ನಿರೀಕ್ಷಿಸುತ್ತಿದೆ ತಿಳಿದುಬಂದಿದೆ.

ಅಲಹಾಬಾದ್ ಹೈಕೋರ್ಟಿನ ಆಂತರಿಕ ದೂರುಗಳ ಸಮಿತಿಯು ಈಗಾಗಲೇ ವಿಷಯದ ಕುರಿತು ವಿಚಾರಣೆ ನಡೆಸಿದೆ. ಸಿವಿಲ್ ನ್ಯಾಯಾಧೀಶರಾಗಿರುವ ದೂರುದಾರರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯ ಅನುಮೋದನೆಗೆ ನಿರ್ಣಯ ಅಂಗೀಕರಿಸಿದ್ದಾರೆ ಎಂಬುದನ್ನು ಗಮನಿಸಿದ ಸುಪ್ರೀಂ ಕೋರ್ಟ್, ಡಿಸೆಂಬರ್ 13 ರಂದು ಮಹಿಳಾ ನ್ಯಾಯಾಧೀಶರ ಮನವಿಯನ್ನು ತಿರಸ್ಕರಿಸಿತು. ಆ ನಂತರ ಬಂದಾ ಜಿಲ್ಲೆಯ ನ್ಯಾಯಾಧೀಶರು ತಮ್ಮ ಜೀವನವನ್ನು ಅಂತ್ಯಗೊಳಿಸಲು ಅನುಮತಿ ಕೋರಿ ಸಿಜೆಐಗೆ ಬಹಿರಂಗ ಪತ್ರ ಬರೆದಿದ್ದಾರೆ.

ಇದನ್ನೂ ಓದಿ; ಸಂಸತ್ ಸದಸ್ಯತ್ವದಿಂದ ಉಚ್ಛಾಟನೆ: ಇಂದು ಸುಪ್ರೀಂನಲ್ಲಿ ಮಹುವಾ ಅರ್ಜಿ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...