Homeಮುಖಪುಟಜೀವನ ಕೊನೆಗೊಳಿಸಲು ಅನುಮತಿ ನೀಡಿ; ಲೈಂಗಿಕ ಕಿರುಕುಳದಿಂದ ನೊಂದು ಸಿಜೆಐಗೆ ಪತ್ರ ಬರೆದ ನ್ಯಾಯಾಧೀಶೆ!

ಜೀವನ ಕೊನೆಗೊಳಿಸಲು ಅನುಮತಿ ನೀಡಿ; ಲೈಂಗಿಕ ಕಿರುಕುಳದಿಂದ ನೊಂದು ಸಿಜೆಐಗೆ ಪತ್ರ ಬರೆದ ನ್ಯಾಯಾಧೀಶೆ!

- Advertisement -
- Advertisement -

‘ಹಿರಿಯ ನ್ಯಾಯಾಧೀಶರು ನನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ’ ಎಂದು ಉತ್ತರ ಪ್ರದೇಶದ ಯುವ ನ್ಯಾಯಾಧೀಶೆಯೊಬ್ಬರು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಬಹಿರಂಗ ಪತ್ರ ಬರೆದಿದ್ದು, ‘ಜೀವನವನ್ನು ಕೊನೆಗೊಳಿಸಲು ಬಯಸುತ್ತೇನೆ’ ಎಂದು ಹೇಳಿದ್ದಾರೆ. ಈ ಕುರಿತು ವರದಿ ನೀಡುವಂತೆ ಅಲಹಾಬಾದ್ ಹೈಕೋರ್ಟಿಗೆ ಸುಪ್ರೀಂ ಸೂಚನೆ ನೀಡಿದೆ.

ಆರು ತಿಂಗಳ ಹಿಂದೆ ತಾನಿದ್ದ ಹುದ್ದೆಯಲ್ಲಿ, ಹಿರಿಯ ನ್ಯಾಯಾಧೀಶರಿಂದ ಲೈಂಗಿಕ ಕಿರುಕುಳ ಅನುಭವಿಸಿದ್ದೇನೆ ಎಂದು ಆರೋಪಿಸಿದ್ದಾರೆ. ‘ನ್ಯಾಯ ಸಿಗುವುದು ಬಿಡಿ; ನ್ಯಾಯಯುತ ತನಿಖೆ ನಡೆಯುವ ಭರವಸೆ ಇಲ್ಲ’ ಎಂದು ಅಸಹಾಯಕತೆ ವ್ಯಕ್ತಪಡಿಸಿರುವ ಅವರು, ನನ್ನ ಜೀವನವನ್ನು ಕೊನೆಗೊಳಿಸಲು ಅನುಮತಿ ನೀಡುವಂತೆ ಕೋರಿ ಬಹಿರಂಗ ಪತ್ರ ಬರೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಎರಡು ಪುಟಗಳ ಪತ್ರ ಬರೆದಿರುವ ಅವರು, ‘ಜನ ಸಾಮಾನ್ಯರಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ಬಹಳ ಉತ್ಸಾಹದಿಂದ ಮತ್ತು ನಂಬಿಕೆಯಿಂದ ನ್ಯಾಯಾಂಗ ಸೇವೆಗೆ ಸೇರಿಕೊಂಡೆ. ನಾನೀಗ ನ್ಯಾಯಕ್ಕಾಗಿ ಎಡತಾಕುವ ಪ್ರತಿಯೊಂದು ಬಾಗಿಲಿನಲ್ಲೂ ಶೀಘ್ರದಲ್ಲೇ ಭಿಕ್ಷುಕಳಾಗುತ್ತೇನೆ ಎಂಬುದು ನನಗೆ ಗೊತ್ತು. ನನ್ನ ಅಲ್ಪಾವಧಿ ಸೇವಾವಧಿಯಲ್ಲಿ, ತೆರೆದ ನ್ಯಾಯಾಲಯದ ವೇದಿಕೆಯ ಮೇಲೆ ನಿಂದನೆಗೆ ಒಳಗಾದ ಅಪರೂಪದ ಗೌರವ ನನಗೆ ಸಿಕ್ಕಿದೆ. ನನ್ನನ್ನು ಸಂಪೂರ್ಣ ಕಸದಂತೆ ನಡೆಸಿಕೊಳ್ಳಲಾಗಿದೆ. ಜನರಿಗೆ ನ್ಯಾಯ ಒದಗಿಸಲು ಬಯಸುವ ನನಗೆ  ನಾನೊಂದು ಅನಾವಶ್ಯಕ ಕೀಟದಂತೆ ಭಾಸವಾಗುತ್ತಿದೆ’ ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.

‘ನನ್ನ ದೂರು ಮತ್ತು ಹೇಳಿಕೆಗಳನ್ನು ‘ಕಾರ್ಡಿನಲ್ ಸತ್ಯ’ವನ್ನಾಗಿ ಪರಿಗಣಿಸುತ್ತಾರೆ ಎಂಬುದನ್ನು ನಾನು ನಿರೀಕ್ಷಿಸಿರಲಿಲ್ಲ. ನ್ಯಾಯಯುತ ವಿಚಾರಣೆ ಮಾತ್ರ ನಾನು ಬಯಸಿದ್ದು. ರಾತ್ರಿ ಹೊತ್ತು ಹಿರಿಯ ನ್ಯಾಯಾಧೀಶರನ್ನು ಭೇಟಿಯಾಗುವಂತೆ ಹೇಳಲಾಗಿತ್ತು. ಇದರಿಂದ ನೊಂದು ನಾನು ಆತ್ಮಹತ್ಯೆಗೆ ಪ್ರಯತ್ನಿಸಿದ್ದೆ. ಆದರೆ, ನನ್ನ ಪ್ರಯತ್ನ ಯಶಸ್ವಿಯಾಗಲಿಲ್ಲ’ ಎಂದು ಹೇಳಿದ್ದಾರೆ.

ಯುವ ನ್ಯಾಯಾಧೀಶೆ ಬರೆದಿರುವ ಬಹಿರಂಗ ಪತ್ರ

‘ನನಗಿನ್ನು ಬದುಕುವ ಇಚ್ಛೆ ಇಲ್ಲ. ಕಳೆದ ಒಂದೂವರೆ ವರ್ಷದಲ್ಲಿ ನನ್ನನ್ನು ನಡೆದಾಡುವ ಶವದಂತೆ ಮಾಡಲಾಗಿದೆ. ಈ ಆತ್ಮವಿಲ್ಲದ ಮತ್ತು ನಿರ್ಜೀವ ದೇಹವನ್ನು ಮುಂದೆ ಸಾಗಿಸುವುದರಲ್ಲಿ ಯಾವುದೇ ಅರ್ಥವಿಲ್ಲ. ಬದುಕಲು ನನ್ನ ಜೀವನದಲ್ಲಿ ಯಾವುದೇ ಉದ್ದೇಶಗಳು ಉಳಿದಿಲ್ಲ. ನನ್ನ ಜೀವನವನ್ನು ಗೌರವಯುತವಾಗಿ ಕೊನೆಗೊಳಿಸಲು ದಯವಿಟ್ಟು ನನಗೆ ಅನುಮತಿ ನೀಡಿ’ ಎಂದು ಅವರು ಸಿಜೆಐಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದಾರೆ.

‘ಭಾರತದಲ್ಲಿ ಕೆಲಸ ಮಾಡುವ ಮಹಿಳೆಯರು ವ್ಯವಸ್ಥೆ ವಿರುದ್ಧ ಹೋರಾಡುವ ಪ್ರಯತ್ನಗಳನ್ನು ಮಾಡಬೇಡಿ. ವ್ಯವಸ್ಥೆಯ ವಿರುದ್ಧ ಹೋರಾಡುತ್ತಿರುವ ಮಹಿಳೆಯರಿಗೆ ನಾನು ಕಿವಿಮಾತು ಹೇಳುತ್ತೇನೆ, ನಾನು ನ್ಯಾಯಾಧೀಶೆಯಾಗಿ ನನ್ನಿಂದಲೇ ಸಾಧ್ಯವಾಗಲಿಲ್ಲ. ನ್ಯಾಯಯುತವಾದ ವಿಚಾರಣೆಯನ್ನೂ ಮಾಡಿಕೊಳ್ಳಲಾಗಲಿಲ್ಲ. ನ್ಯಾಯವನ್ನು ಬಿಡಿ; ಆಟಿಕೆ ಅಥವಾ ನಿರ್ಜೀವ ವಸ್ತುವಾಗಿರುವುದನ್ನು ಕಲಿಯಲು ನಾನು ಎಲ್ಲ ಮಹಿಳೆಯರಿಗೆ ಸಲಹೆ ನೀಡುತ್ತೇನೆ’ ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರ ಸೂಚನೆಯ ಮೇರೆಗೆ ಅಲಹಾಬಾದ್ ಹೈಕೋರ್ಟಿನಿಂದ ಮಹಿಳಾ ನ್ಯಾಯಾಂಗ ಅಧಿಕಾರಿ ಸಲ್ಲಿಸಿದ ದೂರಿನ ಕುರಿತು ರಿಜಿಸ್ಟ್ರಾರ್ ವರದಿ ಕೇಳಿದ್ದಾರೆ. ಗುರುವಾರ ಸಂಜೆ ವಿವರ ಕೇಳಿ ಪತ್ರ ಬರೆಯಲಾಗಿದ್ದು, ಶುಕ್ರವಾರದ ವೇಳೆಗೆ ವರದಿಯನ್ನು ನಿರೀಕ್ಷಿಸುತ್ತಿದೆ ತಿಳಿದುಬಂದಿದೆ.

ಅಲಹಾಬಾದ್ ಹೈಕೋರ್ಟಿನ ಆಂತರಿಕ ದೂರುಗಳ ಸಮಿತಿಯು ಈಗಾಗಲೇ ವಿಷಯದ ಕುರಿತು ವಿಚಾರಣೆ ನಡೆಸಿದೆ. ಸಿವಿಲ್ ನ್ಯಾಯಾಧೀಶರಾಗಿರುವ ದೂರುದಾರರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯ ಅನುಮೋದನೆಗೆ ನಿರ್ಣಯ ಅಂಗೀಕರಿಸಿದ್ದಾರೆ ಎಂಬುದನ್ನು ಗಮನಿಸಿದ ಸುಪ್ರೀಂ ಕೋರ್ಟ್, ಡಿಸೆಂಬರ್ 13 ರಂದು ಮಹಿಳಾ ನ್ಯಾಯಾಧೀಶರ ಮನವಿಯನ್ನು ತಿರಸ್ಕರಿಸಿತು. ಆ ನಂತರ ಬಂದಾ ಜಿಲ್ಲೆಯ ನ್ಯಾಯಾಧೀಶರು ತಮ್ಮ ಜೀವನವನ್ನು ಅಂತ್ಯಗೊಳಿಸಲು ಅನುಮತಿ ಕೋರಿ ಸಿಜೆಐಗೆ ಬಹಿರಂಗ ಪತ್ರ ಬರೆದಿದ್ದಾರೆ.

ಇದನ್ನೂ ಓದಿ; ಸಂಸತ್ ಸದಸ್ಯತ್ವದಿಂದ ಉಚ್ಛಾಟನೆ: ಇಂದು ಸುಪ್ರೀಂನಲ್ಲಿ ಮಹುವಾ ಅರ್ಜಿ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...