Homeಮುಖಪುಟಜೀವನ ಕೊನೆಗೊಳಿಸಲು ಅನುಮತಿ ನೀಡಿ; ಲೈಂಗಿಕ ಕಿರುಕುಳದಿಂದ ನೊಂದು ಸಿಜೆಐಗೆ ಪತ್ರ ಬರೆದ ನ್ಯಾಯಾಧೀಶೆ!

ಜೀವನ ಕೊನೆಗೊಳಿಸಲು ಅನುಮತಿ ನೀಡಿ; ಲೈಂಗಿಕ ಕಿರುಕುಳದಿಂದ ನೊಂದು ಸಿಜೆಐಗೆ ಪತ್ರ ಬರೆದ ನ್ಯಾಯಾಧೀಶೆ!

- Advertisement -
- Advertisement -

‘ಹಿರಿಯ ನ್ಯಾಯಾಧೀಶರು ನನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ’ ಎಂದು ಉತ್ತರ ಪ್ರದೇಶದ ಯುವ ನ್ಯಾಯಾಧೀಶೆಯೊಬ್ಬರು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಬಹಿರಂಗ ಪತ್ರ ಬರೆದಿದ್ದು, ‘ಜೀವನವನ್ನು ಕೊನೆಗೊಳಿಸಲು ಬಯಸುತ್ತೇನೆ’ ಎಂದು ಹೇಳಿದ್ದಾರೆ. ಈ ಕುರಿತು ವರದಿ ನೀಡುವಂತೆ ಅಲಹಾಬಾದ್ ಹೈಕೋರ್ಟಿಗೆ ಸುಪ್ರೀಂ ಸೂಚನೆ ನೀಡಿದೆ.

ಆರು ತಿಂಗಳ ಹಿಂದೆ ತಾನಿದ್ದ ಹುದ್ದೆಯಲ್ಲಿ, ಹಿರಿಯ ನ್ಯಾಯಾಧೀಶರಿಂದ ಲೈಂಗಿಕ ಕಿರುಕುಳ ಅನುಭವಿಸಿದ್ದೇನೆ ಎಂದು ಆರೋಪಿಸಿದ್ದಾರೆ. ‘ನ್ಯಾಯ ಸಿಗುವುದು ಬಿಡಿ; ನ್ಯಾಯಯುತ ತನಿಖೆ ನಡೆಯುವ ಭರವಸೆ ಇಲ್ಲ’ ಎಂದು ಅಸಹಾಯಕತೆ ವ್ಯಕ್ತಪಡಿಸಿರುವ ಅವರು, ನನ್ನ ಜೀವನವನ್ನು ಕೊನೆಗೊಳಿಸಲು ಅನುಮತಿ ನೀಡುವಂತೆ ಕೋರಿ ಬಹಿರಂಗ ಪತ್ರ ಬರೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಎರಡು ಪುಟಗಳ ಪತ್ರ ಬರೆದಿರುವ ಅವರು, ‘ಜನ ಸಾಮಾನ್ಯರಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ಬಹಳ ಉತ್ಸಾಹದಿಂದ ಮತ್ತು ನಂಬಿಕೆಯಿಂದ ನ್ಯಾಯಾಂಗ ಸೇವೆಗೆ ಸೇರಿಕೊಂಡೆ. ನಾನೀಗ ನ್ಯಾಯಕ್ಕಾಗಿ ಎಡತಾಕುವ ಪ್ರತಿಯೊಂದು ಬಾಗಿಲಿನಲ್ಲೂ ಶೀಘ್ರದಲ್ಲೇ ಭಿಕ್ಷುಕಳಾಗುತ್ತೇನೆ ಎಂಬುದು ನನಗೆ ಗೊತ್ತು. ನನ್ನ ಅಲ್ಪಾವಧಿ ಸೇವಾವಧಿಯಲ್ಲಿ, ತೆರೆದ ನ್ಯಾಯಾಲಯದ ವೇದಿಕೆಯ ಮೇಲೆ ನಿಂದನೆಗೆ ಒಳಗಾದ ಅಪರೂಪದ ಗೌರವ ನನಗೆ ಸಿಕ್ಕಿದೆ. ನನ್ನನ್ನು ಸಂಪೂರ್ಣ ಕಸದಂತೆ ನಡೆಸಿಕೊಳ್ಳಲಾಗಿದೆ. ಜನರಿಗೆ ನ್ಯಾಯ ಒದಗಿಸಲು ಬಯಸುವ ನನಗೆ  ನಾನೊಂದು ಅನಾವಶ್ಯಕ ಕೀಟದಂತೆ ಭಾಸವಾಗುತ್ತಿದೆ’ ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.

‘ನನ್ನ ದೂರು ಮತ್ತು ಹೇಳಿಕೆಗಳನ್ನು ‘ಕಾರ್ಡಿನಲ್ ಸತ್ಯ’ವನ್ನಾಗಿ ಪರಿಗಣಿಸುತ್ತಾರೆ ಎಂಬುದನ್ನು ನಾನು ನಿರೀಕ್ಷಿಸಿರಲಿಲ್ಲ. ನ್ಯಾಯಯುತ ವಿಚಾರಣೆ ಮಾತ್ರ ನಾನು ಬಯಸಿದ್ದು. ರಾತ್ರಿ ಹೊತ್ತು ಹಿರಿಯ ನ್ಯಾಯಾಧೀಶರನ್ನು ಭೇಟಿಯಾಗುವಂತೆ ಹೇಳಲಾಗಿತ್ತು. ಇದರಿಂದ ನೊಂದು ನಾನು ಆತ್ಮಹತ್ಯೆಗೆ ಪ್ರಯತ್ನಿಸಿದ್ದೆ. ಆದರೆ, ನನ್ನ ಪ್ರಯತ್ನ ಯಶಸ್ವಿಯಾಗಲಿಲ್ಲ’ ಎಂದು ಹೇಳಿದ್ದಾರೆ.

ಯುವ ನ್ಯಾಯಾಧೀಶೆ ಬರೆದಿರುವ ಬಹಿರಂಗ ಪತ್ರ

‘ನನಗಿನ್ನು ಬದುಕುವ ಇಚ್ಛೆ ಇಲ್ಲ. ಕಳೆದ ಒಂದೂವರೆ ವರ್ಷದಲ್ಲಿ ನನ್ನನ್ನು ನಡೆದಾಡುವ ಶವದಂತೆ ಮಾಡಲಾಗಿದೆ. ಈ ಆತ್ಮವಿಲ್ಲದ ಮತ್ತು ನಿರ್ಜೀವ ದೇಹವನ್ನು ಮುಂದೆ ಸಾಗಿಸುವುದರಲ್ಲಿ ಯಾವುದೇ ಅರ್ಥವಿಲ್ಲ. ಬದುಕಲು ನನ್ನ ಜೀವನದಲ್ಲಿ ಯಾವುದೇ ಉದ್ದೇಶಗಳು ಉಳಿದಿಲ್ಲ. ನನ್ನ ಜೀವನವನ್ನು ಗೌರವಯುತವಾಗಿ ಕೊನೆಗೊಳಿಸಲು ದಯವಿಟ್ಟು ನನಗೆ ಅನುಮತಿ ನೀಡಿ’ ಎಂದು ಅವರು ಸಿಜೆಐಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದಾರೆ.

‘ಭಾರತದಲ್ಲಿ ಕೆಲಸ ಮಾಡುವ ಮಹಿಳೆಯರು ವ್ಯವಸ್ಥೆ ವಿರುದ್ಧ ಹೋರಾಡುವ ಪ್ರಯತ್ನಗಳನ್ನು ಮಾಡಬೇಡಿ. ವ್ಯವಸ್ಥೆಯ ವಿರುದ್ಧ ಹೋರಾಡುತ್ತಿರುವ ಮಹಿಳೆಯರಿಗೆ ನಾನು ಕಿವಿಮಾತು ಹೇಳುತ್ತೇನೆ, ನಾನು ನ್ಯಾಯಾಧೀಶೆಯಾಗಿ ನನ್ನಿಂದಲೇ ಸಾಧ್ಯವಾಗಲಿಲ್ಲ. ನ್ಯಾಯಯುತವಾದ ವಿಚಾರಣೆಯನ್ನೂ ಮಾಡಿಕೊಳ್ಳಲಾಗಲಿಲ್ಲ. ನ್ಯಾಯವನ್ನು ಬಿಡಿ; ಆಟಿಕೆ ಅಥವಾ ನಿರ್ಜೀವ ವಸ್ತುವಾಗಿರುವುದನ್ನು ಕಲಿಯಲು ನಾನು ಎಲ್ಲ ಮಹಿಳೆಯರಿಗೆ ಸಲಹೆ ನೀಡುತ್ತೇನೆ’ ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರ ಸೂಚನೆಯ ಮೇರೆಗೆ ಅಲಹಾಬಾದ್ ಹೈಕೋರ್ಟಿನಿಂದ ಮಹಿಳಾ ನ್ಯಾಯಾಂಗ ಅಧಿಕಾರಿ ಸಲ್ಲಿಸಿದ ದೂರಿನ ಕುರಿತು ರಿಜಿಸ್ಟ್ರಾರ್ ವರದಿ ಕೇಳಿದ್ದಾರೆ. ಗುರುವಾರ ಸಂಜೆ ವಿವರ ಕೇಳಿ ಪತ್ರ ಬರೆಯಲಾಗಿದ್ದು, ಶುಕ್ರವಾರದ ವೇಳೆಗೆ ವರದಿಯನ್ನು ನಿರೀಕ್ಷಿಸುತ್ತಿದೆ ತಿಳಿದುಬಂದಿದೆ.

ಅಲಹಾಬಾದ್ ಹೈಕೋರ್ಟಿನ ಆಂತರಿಕ ದೂರುಗಳ ಸಮಿತಿಯು ಈಗಾಗಲೇ ವಿಷಯದ ಕುರಿತು ವಿಚಾರಣೆ ನಡೆಸಿದೆ. ಸಿವಿಲ್ ನ್ಯಾಯಾಧೀಶರಾಗಿರುವ ದೂರುದಾರರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯ ಅನುಮೋದನೆಗೆ ನಿರ್ಣಯ ಅಂಗೀಕರಿಸಿದ್ದಾರೆ ಎಂಬುದನ್ನು ಗಮನಿಸಿದ ಸುಪ್ರೀಂ ಕೋರ್ಟ್, ಡಿಸೆಂಬರ್ 13 ರಂದು ಮಹಿಳಾ ನ್ಯಾಯಾಧೀಶರ ಮನವಿಯನ್ನು ತಿರಸ್ಕರಿಸಿತು. ಆ ನಂತರ ಬಂದಾ ಜಿಲ್ಲೆಯ ನ್ಯಾಯಾಧೀಶರು ತಮ್ಮ ಜೀವನವನ್ನು ಅಂತ್ಯಗೊಳಿಸಲು ಅನುಮತಿ ಕೋರಿ ಸಿಜೆಐಗೆ ಬಹಿರಂಗ ಪತ್ರ ಬರೆದಿದ್ದಾರೆ.

ಇದನ್ನೂ ಓದಿ; ಸಂಸತ್ ಸದಸ್ಯತ್ವದಿಂದ ಉಚ್ಛಾಟನೆ: ಇಂದು ಸುಪ್ರೀಂನಲ್ಲಿ ಮಹುವಾ ಅರ್ಜಿ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...