Homeಮುಖಪುಟಜೀವನ ಕೊನೆಗೊಳಿಸಲು ಅನುಮತಿ ನೀಡಿ; ಲೈಂಗಿಕ ಕಿರುಕುಳದಿಂದ ನೊಂದು ಸಿಜೆಐಗೆ ಪತ್ರ ಬರೆದ ನ್ಯಾಯಾಧೀಶೆ!

ಜೀವನ ಕೊನೆಗೊಳಿಸಲು ಅನುಮತಿ ನೀಡಿ; ಲೈಂಗಿಕ ಕಿರುಕುಳದಿಂದ ನೊಂದು ಸಿಜೆಐಗೆ ಪತ್ರ ಬರೆದ ನ್ಯಾಯಾಧೀಶೆ!

- Advertisement -
- Advertisement -

‘ಹಿರಿಯ ನ್ಯಾಯಾಧೀಶರು ನನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ’ ಎಂದು ಉತ್ತರ ಪ್ರದೇಶದ ಯುವ ನ್ಯಾಯಾಧೀಶೆಯೊಬ್ಬರು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಬಹಿರಂಗ ಪತ್ರ ಬರೆದಿದ್ದು, ‘ಜೀವನವನ್ನು ಕೊನೆಗೊಳಿಸಲು ಬಯಸುತ್ತೇನೆ’ ಎಂದು ಹೇಳಿದ್ದಾರೆ. ಈ ಕುರಿತು ವರದಿ ನೀಡುವಂತೆ ಅಲಹಾಬಾದ್ ಹೈಕೋರ್ಟಿಗೆ ಸುಪ್ರೀಂ ಸೂಚನೆ ನೀಡಿದೆ.

ಆರು ತಿಂಗಳ ಹಿಂದೆ ತಾನಿದ್ದ ಹುದ್ದೆಯಲ್ಲಿ, ಹಿರಿಯ ನ್ಯಾಯಾಧೀಶರಿಂದ ಲೈಂಗಿಕ ಕಿರುಕುಳ ಅನುಭವಿಸಿದ್ದೇನೆ ಎಂದು ಆರೋಪಿಸಿದ್ದಾರೆ. ‘ನ್ಯಾಯ ಸಿಗುವುದು ಬಿಡಿ; ನ್ಯಾಯಯುತ ತನಿಖೆ ನಡೆಯುವ ಭರವಸೆ ಇಲ್ಲ’ ಎಂದು ಅಸಹಾಯಕತೆ ವ್ಯಕ್ತಪಡಿಸಿರುವ ಅವರು, ನನ್ನ ಜೀವನವನ್ನು ಕೊನೆಗೊಳಿಸಲು ಅನುಮತಿ ನೀಡುವಂತೆ ಕೋರಿ ಬಹಿರಂಗ ಪತ್ರ ಬರೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಎರಡು ಪುಟಗಳ ಪತ್ರ ಬರೆದಿರುವ ಅವರು, ‘ಜನ ಸಾಮಾನ್ಯರಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ಬಹಳ ಉತ್ಸಾಹದಿಂದ ಮತ್ತು ನಂಬಿಕೆಯಿಂದ ನ್ಯಾಯಾಂಗ ಸೇವೆಗೆ ಸೇರಿಕೊಂಡೆ. ನಾನೀಗ ನ್ಯಾಯಕ್ಕಾಗಿ ಎಡತಾಕುವ ಪ್ರತಿಯೊಂದು ಬಾಗಿಲಿನಲ್ಲೂ ಶೀಘ್ರದಲ್ಲೇ ಭಿಕ್ಷುಕಳಾಗುತ್ತೇನೆ ಎಂಬುದು ನನಗೆ ಗೊತ್ತು. ನನ್ನ ಅಲ್ಪಾವಧಿ ಸೇವಾವಧಿಯಲ್ಲಿ, ತೆರೆದ ನ್ಯಾಯಾಲಯದ ವೇದಿಕೆಯ ಮೇಲೆ ನಿಂದನೆಗೆ ಒಳಗಾದ ಅಪರೂಪದ ಗೌರವ ನನಗೆ ಸಿಕ್ಕಿದೆ. ನನ್ನನ್ನು ಸಂಪೂರ್ಣ ಕಸದಂತೆ ನಡೆಸಿಕೊಳ್ಳಲಾಗಿದೆ. ಜನರಿಗೆ ನ್ಯಾಯ ಒದಗಿಸಲು ಬಯಸುವ ನನಗೆ  ನಾನೊಂದು ಅನಾವಶ್ಯಕ ಕೀಟದಂತೆ ಭಾಸವಾಗುತ್ತಿದೆ’ ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.

‘ನನ್ನ ದೂರು ಮತ್ತು ಹೇಳಿಕೆಗಳನ್ನು ‘ಕಾರ್ಡಿನಲ್ ಸತ್ಯ’ವನ್ನಾಗಿ ಪರಿಗಣಿಸುತ್ತಾರೆ ಎಂಬುದನ್ನು ನಾನು ನಿರೀಕ್ಷಿಸಿರಲಿಲ್ಲ. ನ್ಯಾಯಯುತ ವಿಚಾರಣೆ ಮಾತ್ರ ನಾನು ಬಯಸಿದ್ದು. ರಾತ್ರಿ ಹೊತ್ತು ಹಿರಿಯ ನ್ಯಾಯಾಧೀಶರನ್ನು ಭೇಟಿಯಾಗುವಂತೆ ಹೇಳಲಾಗಿತ್ತು. ಇದರಿಂದ ನೊಂದು ನಾನು ಆತ್ಮಹತ್ಯೆಗೆ ಪ್ರಯತ್ನಿಸಿದ್ದೆ. ಆದರೆ, ನನ್ನ ಪ್ರಯತ್ನ ಯಶಸ್ವಿಯಾಗಲಿಲ್ಲ’ ಎಂದು ಹೇಳಿದ್ದಾರೆ.

ಯುವ ನ್ಯಾಯಾಧೀಶೆ ಬರೆದಿರುವ ಬಹಿರಂಗ ಪತ್ರ

‘ನನಗಿನ್ನು ಬದುಕುವ ಇಚ್ಛೆ ಇಲ್ಲ. ಕಳೆದ ಒಂದೂವರೆ ವರ್ಷದಲ್ಲಿ ನನ್ನನ್ನು ನಡೆದಾಡುವ ಶವದಂತೆ ಮಾಡಲಾಗಿದೆ. ಈ ಆತ್ಮವಿಲ್ಲದ ಮತ್ತು ನಿರ್ಜೀವ ದೇಹವನ್ನು ಮುಂದೆ ಸಾಗಿಸುವುದರಲ್ಲಿ ಯಾವುದೇ ಅರ್ಥವಿಲ್ಲ. ಬದುಕಲು ನನ್ನ ಜೀವನದಲ್ಲಿ ಯಾವುದೇ ಉದ್ದೇಶಗಳು ಉಳಿದಿಲ್ಲ. ನನ್ನ ಜೀವನವನ್ನು ಗೌರವಯುತವಾಗಿ ಕೊನೆಗೊಳಿಸಲು ದಯವಿಟ್ಟು ನನಗೆ ಅನುಮತಿ ನೀಡಿ’ ಎಂದು ಅವರು ಸಿಜೆಐಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದಾರೆ.

‘ಭಾರತದಲ್ಲಿ ಕೆಲಸ ಮಾಡುವ ಮಹಿಳೆಯರು ವ್ಯವಸ್ಥೆ ವಿರುದ್ಧ ಹೋರಾಡುವ ಪ್ರಯತ್ನಗಳನ್ನು ಮಾಡಬೇಡಿ. ವ್ಯವಸ್ಥೆಯ ವಿರುದ್ಧ ಹೋರಾಡುತ್ತಿರುವ ಮಹಿಳೆಯರಿಗೆ ನಾನು ಕಿವಿಮಾತು ಹೇಳುತ್ತೇನೆ, ನಾನು ನ್ಯಾಯಾಧೀಶೆಯಾಗಿ ನನ್ನಿಂದಲೇ ಸಾಧ್ಯವಾಗಲಿಲ್ಲ. ನ್ಯಾಯಯುತವಾದ ವಿಚಾರಣೆಯನ್ನೂ ಮಾಡಿಕೊಳ್ಳಲಾಗಲಿಲ್ಲ. ನ್ಯಾಯವನ್ನು ಬಿಡಿ; ಆಟಿಕೆ ಅಥವಾ ನಿರ್ಜೀವ ವಸ್ತುವಾಗಿರುವುದನ್ನು ಕಲಿಯಲು ನಾನು ಎಲ್ಲ ಮಹಿಳೆಯರಿಗೆ ಸಲಹೆ ನೀಡುತ್ತೇನೆ’ ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರ ಸೂಚನೆಯ ಮೇರೆಗೆ ಅಲಹಾಬಾದ್ ಹೈಕೋರ್ಟಿನಿಂದ ಮಹಿಳಾ ನ್ಯಾಯಾಂಗ ಅಧಿಕಾರಿ ಸಲ್ಲಿಸಿದ ದೂರಿನ ಕುರಿತು ರಿಜಿಸ್ಟ್ರಾರ್ ವರದಿ ಕೇಳಿದ್ದಾರೆ. ಗುರುವಾರ ಸಂಜೆ ವಿವರ ಕೇಳಿ ಪತ್ರ ಬರೆಯಲಾಗಿದ್ದು, ಶುಕ್ರವಾರದ ವೇಳೆಗೆ ವರದಿಯನ್ನು ನಿರೀಕ್ಷಿಸುತ್ತಿದೆ ತಿಳಿದುಬಂದಿದೆ.

ಅಲಹಾಬಾದ್ ಹೈಕೋರ್ಟಿನ ಆಂತರಿಕ ದೂರುಗಳ ಸಮಿತಿಯು ಈಗಾಗಲೇ ವಿಷಯದ ಕುರಿತು ವಿಚಾರಣೆ ನಡೆಸಿದೆ. ಸಿವಿಲ್ ನ್ಯಾಯಾಧೀಶರಾಗಿರುವ ದೂರುದಾರರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯ ಅನುಮೋದನೆಗೆ ನಿರ್ಣಯ ಅಂಗೀಕರಿಸಿದ್ದಾರೆ ಎಂಬುದನ್ನು ಗಮನಿಸಿದ ಸುಪ್ರೀಂ ಕೋರ್ಟ್, ಡಿಸೆಂಬರ್ 13 ರಂದು ಮಹಿಳಾ ನ್ಯಾಯಾಧೀಶರ ಮನವಿಯನ್ನು ತಿರಸ್ಕರಿಸಿತು. ಆ ನಂತರ ಬಂದಾ ಜಿಲ್ಲೆಯ ನ್ಯಾಯಾಧೀಶರು ತಮ್ಮ ಜೀವನವನ್ನು ಅಂತ್ಯಗೊಳಿಸಲು ಅನುಮತಿ ಕೋರಿ ಸಿಜೆಐಗೆ ಬಹಿರಂಗ ಪತ್ರ ಬರೆದಿದ್ದಾರೆ.

ಇದನ್ನೂ ಓದಿ; ಸಂಸತ್ ಸದಸ್ಯತ್ವದಿಂದ ಉಚ್ಛಾಟನೆ: ಇಂದು ಸುಪ್ರೀಂನಲ್ಲಿ ಮಹುವಾ ಅರ್ಜಿ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...