Homeಮುಖಪುಟಯಂಗ್ ಇಂಡಿಯಾ ದೇಶದ ಸಮಸ್ಯೆಗಳಿಗೆ ಪರಿಹಾರ ಒದಗಿಸುತ್ತದೆ: ಪ್ರಧಾನಿ ಮೋದಿ

ಯಂಗ್ ಇಂಡಿಯಾ ದೇಶದ ಸಮಸ್ಯೆಗಳಿಗೆ ಪರಿಹಾರ ಒದಗಿಸುತ್ತದೆ: ಪ್ರಧಾನಿ ಮೋದಿ

ಕೊರೊನಾ ವೈರಸ್ ಕಾಲದಲ್ಲಿ ಹ್ಯಾಕಥಾನ್ ನಡೆಸುವುದು ದೊಡ್ಡ ಸವಾಲಾಗಿತ್ತು. ತೀವ್ರ ಸವಾಲುಗಳ ನಡುವೆಯೂ ಇದು ನಡೆಯುತ್ತಿರುವುದು ಆಶ್ಚರ್ಯಕರವಾಗಿದೆ.

- Advertisement -
- Advertisement -

ಯಂಗ್ ಇಂಡಿಯಾ ದೇಶದ ಸಮಸ್ಯೆಗಳಿಗೆ ನವೀನ ಮತ್ತು ಸೃಜನಶೀಲ ಪರಿಹಾರಗಳನ್ನು ನೀಡುವ ಪ್ರತಿಭೆಯ ಉಗ್ರಾಣವಾಗಿದೆ. ಸಣ್ಣ ಮಾರ್ಗದರ್ಶನ ಸಾಕು ವಿದ್ಯಾರ್ಥಿಗಳು ಕೊರೊನಾ ಸಾಂಕ್ರಾಮಿಕದ ಮಧ್ಯೆಯು ಭಾರತವನ್ನು ಬಹುದೂರ ಕೊಂಡ್ಯೊಯುತ್ತಾರೆ, ಸಾಂಕ್ರಾಮಿಕ ಮುಗಿದ ನಂತರ ಹೊಸ ಜಾಗತಿಕ ಸನ್ನಿವೇಶ ಸೃಷ್ಟಿಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2020 ಗ್ರ್ಯಾಂಡ್ ಫಿನಾಲೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಧಾನಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಕೊರೊನಾ ವೈರಸ್ ಕಾಲದಲ್ಲಿ ಹ್ಯಾಕಥಾನ್ ನಡೆಸುವುದು ದೊಡ್ಡ ಸವಾಲಾಗಿತ್ತು. ತೀವ್ರ ಸವಾಲುಗಳ ನಡುವೆಯೂ ಇದು ನಡೆಯುತ್ತಿರುವುದು ಆಶ್ಚರ್ಯಕರವಾಗಿದೆ. ಈ ಸಂದರ್ಭಕ್ಕೆ ಕಾರ್ಯಕ್ರಮವನ್ನು ಸಾಧ್ಯವಾಗಿಸಿದ ಸಂಘಟಕರನ್ನು ನಾನು ಅಭಿನಂದಿಸುತ್ತೇನೆ ಎಂದಿದ್ದಾರೆ.

ಫೈನಲ್‌ನಲ್ಲಿ ಮಳೆ ಮುನ್ಸೂಚನೆ ಮಾದರಿಯ ಪರಿಕಲ್ಪನೆಯನ್ನು ಮಂಡಿಸಿದ ವಿದ್ಯಾರ್ಥಿಯನ್ನು ಶ್ಲಾಘಿಸಿದ ಅವರು, ಈ ಆವಿಷ್ಕಾರ ಯಶಸ್ವಿಯಾದರೆ, ದೇಶದಲ್ಲಿನ ರೈತರಿಗೆ ಅಪಾರ ಸಹಾಯವಾಗುತ್ತದೆ ಎಂದು ಹೇಳಿದರು.

ಈ ವರ್ಷ ಸುಮಾರು 10,000 ವಿದ್ಯಾರ್ಥಿಗಳು ಹ್ಯಾಕಥಾನ್‌ನಲ್ಲಿ ಭಾಗವಹಿಸುತ್ತಿದ್ದಾರೆ. ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2020 (ಸಾಫ್ಟ್‌ವೇರ್) ಗ್ರ್ಯಾಂಡ್ ಫಿನಾಲೆ ಆಗಸ್ಟ್ 1 ರಿಂದ 3 ರವರೆಗೆ ನಡೆಯಲಿದೆ.

“ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ಆದರ್ಶ ಮತ್ತು ಹೊಸತನವನ್ನು ನೀಡುವ ರೋಮಾಂಚಕ ವೇದಿಕೆಯಾಗಿ ಹೊರಹೊಮ್ಮಿದೆ. ಸ್ವಾಭಾವಿಕವಾಗಿ, ಈ ಸಮಯದಲ್ಲಿ ನಮ್ಮ ಯುವಕರು ಕೊರೊನಾದ ನಂತರದ ಪ್ರಪಂಚವನ್ನು ತಮ್ಮ ಆವಿಷ್ಕಾರಗಳಲ್ಲಿ ಕೇಂದ್ರೀಕರಿಸುತ್ತಾರೆ ಎಂದು ಹೇಳಿದ್ದಾರೆ.

ಹ್ಯಾಕಥಾನ್ ಅನ್ನು ಮಾನವ ಸಂಪನ್ಮೂಲ ಸಚಿವಾಲಯದ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಆಯೋಜಿಸುತ್ತಿದೆ.

ಅಂತಿಮ ಪಂದ್ಯದ ಆರಂಭದಲ್ಲಿ, ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವ ಡಾ.ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರು ವಿಜೇತರಿಗೆ 1 ಲಕ್ಷ ರೂಪಾಯಿ ನಗದು ಬಹುಮಾನವಾಗಿ ನೀಡಲಾಗುವುದು ಎಂದು ಘೋಷಿಸಿದರು.

ದೈನಂದಿನ ಜೀವನದಲ್ಲಿ ಜನರು ಎದುರಿಸುತ್ತಿರುವ ಕೆಲವು ನಿರ್ಣಾಯಕ ಸಮಸ್ಯೆಗಳನ್ನು ಪರಿಹರಿಸಲು ವಿದ್ಯಾರ್ಥಿಗಳಿಗೆ ವೇದಿಕೆಯನ್ನು ಒದಗಿಸುವ ಹ್ಯಾಕಥಾನ್ ರಾಷ್ಟ್ರವ್ಯಾಪಿ ಕಾರ್ಯಕ್ರಮವಾಗಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.

ಉನ್ನತ ಶಿಕ್ಷಣವನ್ನು ಪಡೆಯುವ ವಿದ್ಯಾರ್ಥಿಗಳಲ್ಲಿ ಸಮಸ್ಯೆ-ಪರಿಹರಿಸುವ ಮನೋಭಾವವನ್ನು ನಿರ್ಮಿಸುವ ಗುರಿಯನ್ನು ಇದು ಹೊಂದಿದೆ ಎಂದಿದ್ದಾರೆ.


ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ: ರಿಯಾ ಚಕ್ರವರ್ತಿಯನ್ನು ಪತ್ತೆ ಮಾಡಲಾಗುತ್ತಿಲ್ಲವೆಂದ ಬಿಹಾರ ಪೊಲೀಸರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...