Homeಮುಖಪುಟಭಾರತದಲ್ಲಿ ಉನ್ನತ ಶಿಕ್ಷಣ ಪಡೆದ ಯುವ ಜನರು ನಿರುದ್ಯೋಗಿಗಳಾಗುವ ಸಾಧ್ಯತೆ ಹೆಚ್ಚು: ವರದಿ

ಭಾರತದಲ್ಲಿ ಉನ್ನತ ಶಿಕ್ಷಣ ಪಡೆದ ಯುವ ಜನರು ನಿರುದ್ಯೋಗಿಗಳಾಗುವ ಸಾಧ್ಯತೆ ಹೆಚ್ಚು: ವರದಿ

- Advertisement -
- Advertisement -

ಭಾರತದಲ್ಲಿ ಉನ್ನತ ಶಿಕ್ಷಣ ಪಡೆದ ಯುವ ಜನರು ಯಾವುದೇ ಶಾಲಾ ಶಿಕ್ಷಣವಿಲ್ಲದವರಿಗಿಂತ ನಿರುದ್ಯೋಗಿಗಳಾಗುವ ಸಾಧ್ಯತೆ ಹೆಚ್ಚು ಎಂದು ಅಂತಾರಾಷ್ಟ್ರೀಯ ಕಾರ್ಮಿಕ ಸಂಘಟನೆ (ಐಎಲ್ಒ) ತಿಳಿಸಿದೆ.

ಪದವೀಧರರ ನಿರುದ್ಯೋಗ ದರವು ಶೇ. 29.1 ಇದ್ದು, ಓದಲು ಅಥವಾ ಬರೆಯಲು ಬಾರದವರ ದರ ಶೇ. 3.4 ಇದೆ. ಅಂದರೆ, ಉನ್ನತ ಶಿಕ್ಷಣ ಪಡೆದವರ ನಿರುದ್ಯೋಗ ಮಟ್ಟ ಯಾವುದೇ ಶಾಲಾ ಶಿಕ್ಷಣ ಪಡೆಯವರಿಗಿಂತ ಸುಮಾರು ಒಂಬತ್ತು ಪಟ್ಟು ಹೆಚ್ಚಿದೆ. ಇನ್ನು ಮಾಧ್ಯಮಿಕ ಅಥವಾ ಉನ್ನತ ಶಿಕ್ಷಣ ಹೊಂದಿರುವ ಯುವಜನರ ನಿರುದ್ಯೋಗ ದರ ಶೇ. 18.4 ಇದ್ದು, ಆರು ಪಟ್ಟು ಹೆಚ್ಚಿದೆ ಎಂದು ಭಾರತದ ಕಾರ್ಮಿಕ ಮಾರುಕಟ್ಟೆಯ ಕುರಿತು ವರದಿಯಲ್ಲಿ ಐಎಲ್‌ಒ ಹೇಳಿದೆ.

“ಭಾರತದಲ್ಲಿ ನಿರುದ್ಯೋಗವು ಯುವ ಜನರ ಪ್ರಧಾನ ಸಮಸ್ಯೆಯಾಗಿದೆ. ವಿಶೇಷವಾಗಿ ಮಾಧ್ಯಮಿಕ ಮಟ್ಟದ ಅಥವಾ ಹೆಚ್ಚಿನ ಶಿಕ್ಷಣ ಹೊಂದಿರುವ ಯುವ ಜನರಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಿದೆ ಮತ್ತು ಇದು ಕಾಲಾನಂತರದಲ್ಲಿ ತೀವ್ರಗೊಂಡಿದೆ” ಎಂದು ಐಎಲ್‌ಒ ಹೇಳಿದೆ.

ಅಂಕಿ ಅಂಶಗಳು, ಕಾರ್ಮಿಕ ಬಲದ ಕೌಶಲ್ಯ ಮತ್ತು ಮಾರುಕಟ್ಟೆಯಲ್ಲಿ ಸೃಷ್ಟಿಯಾಗುತ್ತಿರುವ ಉದ್ಯೋಗಗಳ ನಡುವಿನ ತೀಕ್ಷ್ಣವಾದ ಅಸಾಮರಸ್ಯವನ್ನುಈ ಸಮಸ್ಯೆಗೆ ಕಾರಣ ಎಂದಿದೆ. ಭಾರತದ ಕಳಪೆ ಶಾಲಾ ಶಿಕ್ಷಣವು ಕಾಲಾನಂತರದಲ್ಲಿ ಅದರ ಆರ್ಥಿಕ ಭವಿಷ್ಯವನ್ನು ತಡೆಯುತ್ತದೆ ಎಂಬ ಭಾರತೀಯ ರಿಸರ್ವ್‌ ಬ್ಯಾಂಕ್‌ನ ಮಾಜಿ ಗವರ್ನರ್ ರಘುರಾಮ್ ರಾಜನ್ ಅವರಂತಹ ಪ್ರಸಿದ್ಧ ಅರ್ಥಶಾಸ್ತ್ರಜ್ಞರ ಎಚ್ಚರಿಕೆಗಳನ್ನು ವರದಿ ಒತ್ತಿ ಹೇಳಿದೆ.

“ಭಾರತದಲ್ಲಿ ಯುವ ಜನರ ನಿರುದ್ಯೋಗ ಮಟ್ಟ ಈಗ ಜಾಗತಿಕ ಮಟ್ಟಕ್ಕಿಂತ ಹೆಚ್ಚಾಗಿದೆ. ಕೃಷಿಯೇತರ ವಲಯಗಳಲ್ಲಿ ವಿದ್ಯಾವಂತ ಯುವ ಜನರಿಗೆ ಲಾಭದಾಯಕ ಉದ್ಯೋಗಗಳನ್ನು ಸೃಷ್ಟಿಸುವಲ್ಲಿ ಭಾರತದ ಆರ್ಥಿಕತೆ ವಿಫಲವಾಗಿದೆ. ಇದು ನಿರುದ್ಯೋಗ ಹೆಚ್ಚಳಕ್ಕೆ ಕಾರಣ” ಎಂದು ಐಎಲ್‌ಒ ಹೇಳಿದೆ.

ಚೀನಾದಲ್ಲಿ, 16-24 ವರ್ಷ ವಯಸ್ಸಿನ ಯುವ ಜನರ ನಿರುದ್ಯೋಗ ದರವು ವರ್ಷದ ಮೊದಲ ಎರಡು ತಿಂಗಳಲ್ಲಿ ಶೇ. 15.3ಕ್ಕೆ ಏರಿದೆ. ಇದು ನಗರ ಜನಸಂಖ್ಯೆಯ ಶೇ. 5.3ರ ದರಕ್ಕಿಂತ ಮೂರು ಪಟ್ಟು ಹೆಚ್ಚಿದೆ.

ಯುವ ನಿರುದ್ಯೋಗಿಗಳ ವಿಷಯದಲ್ಲಿ ಭಾರತೀಯರ ಪಾಲು: 15-29 ವರ್ಷದೊಳಗಿನ ನಿರುದ್ಯೋಗಿಗಳ ದರ 2000 ಇಸವಿಯಲ್ಲಿ ಶೇ. 88.6 ಇತ್ತು. ಅದು 2022 ರಲ್ಲಿ ಶೇ. 82.9ಕ್ಕೆ ಇಳಿದಿದೆ. ಆದರೆ, ಈ ಪೈಕಿ ವಿದ್ಯಾವಂತ ಯುವ ಜನರ ಪಾಲು ಈ ಅವಧಿಯಲ್ಲಿ ಶೇ. 54.2 ರಿಂದ ಶೇ. 65.7ಕ್ಕೆ ಏರಿಕೆಯಾಗಿದೆ ಎಂದು ಐಎಲ್‌ಒ ಅಂಕಿ ಅಂಶಗಳು ತೋರಿಸಿವೆ.

ವಿದ್ಯಾವಂತ ನಿರುದ್ಯೋಗಿಗಳ ಪೈಕಿ ಮಹಿಳೆಯರ ಪ್ರಮಾಣ ಹೆಚ್ಚಿದೆ. ಪುರುಷರ ನಿರುದ್ಯೋಗ ಪ್ರಮಾಣ ಶೇ.62.2 ಇದ್ದರೆ, ಮಹಿಳೆಯರ ಪ್ರಮಾಣ ಶೇ.76.7 ಇದೆ. ಅಂಕಿ ಅಂಶಗಳು ಗ್ರಾಮೀಣ ಭಾಗಗಳಿಗಿಂತ ನಗರ ಪ್ರದೇಶಗಳಲ್ಲಿ ನಿರುದ್ಯೋಗ ಮಟ್ಟ ಹೆಚ್ಚಿದೆ ಎಂದು ತೋರಿಸಿದೆ.

ಭಾರತವು ವಿಶ್ವದಲ್ಲೇ ಅತ್ಯಂತ ಕಡಿಮೆ, ಅಂದರೆ ಶೇ. 25 ಮಹಿಳಾ ಕಾರ್ಮಿಕರ ಭಾಗವಹಿಸುವಿಕೆಯ ದರವನ್ನು ಹೊಂದಿದೆ. ಫುಡ್ ಡೆಲಿವರಿಯಂತಹ ಕಡಿಮೆ ಸಂಬಳದ ಮತ್ತು ಖಾತ್ರಿಯಲ್ಲದ ಉದ್ಯೋಗ ದರ ಹೆಚ್ಚುತ್ತಿರುವ ಬಗ್ಗೆ ಐಎಲ್‌ಒ ಎಚ್ಚರಿಸಿದೆ.

ಇದನ್ನೂ ಓದಿ : ವಯನಾಡ್‌ನಲ್ಲಿ ರಾಹುಲ್ ಗಾಂಧಿ ವಿರುದ್ಧ ಕಣಕ್ಕಿಳಿದಿರುವ ಬಿಜೆಪಿ ಅಭ್ಯರ್ಥಿ ಕೆ.ಸುರೇಂದ್ರನ್ ಮೇಲಿದೆ 242 ಕೇಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...