Homeಮುಖಪುಟಭಾರತದಲ್ಲಿ ಉನ್ನತ ಶಿಕ್ಷಣ ಪಡೆದ ಯುವ ಜನರು ನಿರುದ್ಯೋಗಿಗಳಾಗುವ ಸಾಧ್ಯತೆ ಹೆಚ್ಚು: ವರದಿ

ಭಾರತದಲ್ಲಿ ಉನ್ನತ ಶಿಕ್ಷಣ ಪಡೆದ ಯುವ ಜನರು ನಿರುದ್ಯೋಗಿಗಳಾಗುವ ಸಾಧ್ಯತೆ ಹೆಚ್ಚು: ವರದಿ

- Advertisement -
- Advertisement -

ಭಾರತದಲ್ಲಿ ಉನ್ನತ ಶಿಕ್ಷಣ ಪಡೆದ ಯುವ ಜನರು ಯಾವುದೇ ಶಾಲಾ ಶಿಕ್ಷಣವಿಲ್ಲದವರಿಗಿಂತ ನಿರುದ್ಯೋಗಿಗಳಾಗುವ ಸಾಧ್ಯತೆ ಹೆಚ್ಚು ಎಂದು ಅಂತಾರಾಷ್ಟ್ರೀಯ ಕಾರ್ಮಿಕ ಸಂಘಟನೆ (ಐಎಲ್ಒ) ತಿಳಿಸಿದೆ.

ಪದವೀಧರರ ನಿರುದ್ಯೋಗ ದರವು ಶೇ. 29.1 ಇದ್ದು, ಓದಲು ಅಥವಾ ಬರೆಯಲು ಬಾರದವರ ದರ ಶೇ. 3.4 ಇದೆ. ಅಂದರೆ, ಉನ್ನತ ಶಿಕ್ಷಣ ಪಡೆದವರ ನಿರುದ್ಯೋಗ ಮಟ್ಟ ಯಾವುದೇ ಶಾಲಾ ಶಿಕ್ಷಣ ಪಡೆಯವರಿಗಿಂತ ಸುಮಾರು ಒಂಬತ್ತು ಪಟ್ಟು ಹೆಚ್ಚಿದೆ. ಇನ್ನು ಮಾಧ್ಯಮಿಕ ಅಥವಾ ಉನ್ನತ ಶಿಕ್ಷಣ ಹೊಂದಿರುವ ಯುವಜನರ ನಿರುದ್ಯೋಗ ದರ ಶೇ. 18.4 ಇದ್ದು, ಆರು ಪಟ್ಟು ಹೆಚ್ಚಿದೆ ಎಂದು ಭಾರತದ ಕಾರ್ಮಿಕ ಮಾರುಕಟ್ಟೆಯ ಕುರಿತು ವರದಿಯಲ್ಲಿ ಐಎಲ್‌ಒ ಹೇಳಿದೆ.

“ಭಾರತದಲ್ಲಿ ನಿರುದ್ಯೋಗವು ಯುವ ಜನರ ಪ್ರಧಾನ ಸಮಸ್ಯೆಯಾಗಿದೆ. ವಿಶೇಷವಾಗಿ ಮಾಧ್ಯಮಿಕ ಮಟ್ಟದ ಅಥವಾ ಹೆಚ್ಚಿನ ಶಿಕ್ಷಣ ಹೊಂದಿರುವ ಯುವ ಜನರಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಿದೆ ಮತ್ತು ಇದು ಕಾಲಾನಂತರದಲ್ಲಿ ತೀವ್ರಗೊಂಡಿದೆ” ಎಂದು ಐಎಲ್‌ಒ ಹೇಳಿದೆ.

ಅಂಕಿ ಅಂಶಗಳು, ಕಾರ್ಮಿಕ ಬಲದ ಕೌಶಲ್ಯ ಮತ್ತು ಮಾರುಕಟ್ಟೆಯಲ್ಲಿ ಸೃಷ್ಟಿಯಾಗುತ್ತಿರುವ ಉದ್ಯೋಗಗಳ ನಡುವಿನ ತೀಕ್ಷ್ಣವಾದ ಅಸಾಮರಸ್ಯವನ್ನುಈ ಸಮಸ್ಯೆಗೆ ಕಾರಣ ಎಂದಿದೆ. ಭಾರತದ ಕಳಪೆ ಶಾಲಾ ಶಿಕ್ಷಣವು ಕಾಲಾನಂತರದಲ್ಲಿ ಅದರ ಆರ್ಥಿಕ ಭವಿಷ್ಯವನ್ನು ತಡೆಯುತ್ತದೆ ಎಂಬ ಭಾರತೀಯ ರಿಸರ್ವ್‌ ಬ್ಯಾಂಕ್‌ನ ಮಾಜಿ ಗವರ್ನರ್ ರಘುರಾಮ್ ರಾಜನ್ ಅವರಂತಹ ಪ್ರಸಿದ್ಧ ಅರ್ಥಶಾಸ್ತ್ರಜ್ಞರ ಎಚ್ಚರಿಕೆಗಳನ್ನು ವರದಿ ಒತ್ತಿ ಹೇಳಿದೆ.

“ಭಾರತದಲ್ಲಿ ಯುವ ಜನರ ನಿರುದ್ಯೋಗ ಮಟ್ಟ ಈಗ ಜಾಗತಿಕ ಮಟ್ಟಕ್ಕಿಂತ ಹೆಚ್ಚಾಗಿದೆ. ಕೃಷಿಯೇತರ ವಲಯಗಳಲ್ಲಿ ವಿದ್ಯಾವಂತ ಯುವ ಜನರಿಗೆ ಲಾಭದಾಯಕ ಉದ್ಯೋಗಗಳನ್ನು ಸೃಷ್ಟಿಸುವಲ್ಲಿ ಭಾರತದ ಆರ್ಥಿಕತೆ ವಿಫಲವಾಗಿದೆ. ಇದು ನಿರುದ್ಯೋಗ ಹೆಚ್ಚಳಕ್ಕೆ ಕಾರಣ” ಎಂದು ಐಎಲ್‌ಒ ಹೇಳಿದೆ.

ಚೀನಾದಲ್ಲಿ, 16-24 ವರ್ಷ ವಯಸ್ಸಿನ ಯುವ ಜನರ ನಿರುದ್ಯೋಗ ದರವು ವರ್ಷದ ಮೊದಲ ಎರಡು ತಿಂಗಳಲ್ಲಿ ಶೇ. 15.3ಕ್ಕೆ ಏರಿದೆ. ಇದು ನಗರ ಜನಸಂಖ್ಯೆಯ ಶೇ. 5.3ರ ದರಕ್ಕಿಂತ ಮೂರು ಪಟ್ಟು ಹೆಚ್ಚಿದೆ.

ಯುವ ನಿರುದ್ಯೋಗಿಗಳ ವಿಷಯದಲ್ಲಿ ಭಾರತೀಯರ ಪಾಲು: 15-29 ವರ್ಷದೊಳಗಿನ ನಿರುದ್ಯೋಗಿಗಳ ದರ 2000 ಇಸವಿಯಲ್ಲಿ ಶೇ. 88.6 ಇತ್ತು. ಅದು 2022 ರಲ್ಲಿ ಶೇ. 82.9ಕ್ಕೆ ಇಳಿದಿದೆ. ಆದರೆ, ಈ ಪೈಕಿ ವಿದ್ಯಾವಂತ ಯುವ ಜನರ ಪಾಲು ಈ ಅವಧಿಯಲ್ಲಿ ಶೇ. 54.2 ರಿಂದ ಶೇ. 65.7ಕ್ಕೆ ಏರಿಕೆಯಾಗಿದೆ ಎಂದು ಐಎಲ್‌ಒ ಅಂಕಿ ಅಂಶಗಳು ತೋರಿಸಿವೆ.

ವಿದ್ಯಾವಂತ ನಿರುದ್ಯೋಗಿಗಳ ಪೈಕಿ ಮಹಿಳೆಯರ ಪ್ರಮಾಣ ಹೆಚ್ಚಿದೆ. ಪುರುಷರ ನಿರುದ್ಯೋಗ ಪ್ರಮಾಣ ಶೇ.62.2 ಇದ್ದರೆ, ಮಹಿಳೆಯರ ಪ್ರಮಾಣ ಶೇ.76.7 ಇದೆ. ಅಂಕಿ ಅಂಶಗಳು ಗ್ರಾಮೀಣ ಭಾಗಗಳಿಗಿಂತ ನಗರ ಪ್ರದೇಶಗಳಲ್ಲಿ ನಿರುದ್ಯೋಗ ಮಟ್ಟ ಹೆಚ್ಚಿದೆ ಎಂದು ತೋರಿಸಿದೆ.

ಭಾರತವು ವಿಶ್ವದಲ್ಲೇ ಅತ್ಯಂತ ಕಡಿಮೆ, ಅಂದರೆ ಶೇ. 25 ಮಹಿಳಾ ಕಾರ್ಮಿಕರ ಭಾಗವಹಿಸುವಿಕೆಯ ದರವನ್ನು ಹೊಂದಿದೆ. ಫುಡ್ ಡೆಲಿವರಿಯಂತಹ ಕಡಿಮೆ ಸಂಬಳದ ಮತ್ತು ಖಾತ್ರಿಯಲ್ಲದ ಉದ್ಯೋಗ ದರ ಹೆಚ್ಚುತ್ತಿರುವ ಬಗ್ಗೆ ಐಎಲ್‌ಒ ಎಚ್ಚರಿಸಿದೆ.

ಇದನ್ನೂ ಓದಿ : ವಯನಾಡ್‌ನಲ್ಲಿ ರಾಹುಲ್ ಗಾಂಧಿ ವಿರುದ್ಧ ಕಣಕ್ಕಿಳಿದಿರುವ ಬಿಜೆಪಿ ಅಭ್ಯರ್ಥಿ ಕೆ.ಸುರೇಂದ್ರನ್ ಮೇಲಿದೆ 242 ಕೇಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...