Homeಮುಖಪುಟಭಾರತದಲ್ಲಿ ಉನ್ನತ ಶಿಕ್ಷಣ ಪಡೆದ ಯುವ ಜನರು ನಿರುದ್ಯೋಗಿಗಳಾಗುವ ಸಾಧ್ಯತೆ ಹೆಚ್ಚು: ವರದಿ

ಭಾರತದಲ್ಲಿ ಉನ್ನತ ಶಿಕ್ಷಣ ಪಡೆದ ಯುವ ಜನರು ನಿರುದ್ಯೋಗಿಗಳಾಗುವ ಸಾಧ್ಯತೆ ಹೆಚ್ಚು: ವರದಿ

- Advertisement -
- Advertisement -

ಭಾರತದಲ್ಲಿ ಉನ್ನತ ಶಿಕ್ಷಣ ಪಡೆದ ಯುವ ಜನರು ಯಾವುದೇ ಶಾಲಾ ಶಿಕ್ಷಣವಿಲ್ಲದವರಿಗಿಂತ ನಿರುದ್ಯೋಗಿಗಳಾಗುವ ಸಾಧ್ಯತೆ ಹೆಚ್ಚು ಎಂದು ಅಂತಾರಾಷ್ಟ್ರೀಯ ಕಾರ್ಮಿಕ ಸಂಘಟನೆ (ಐಎಲ್ಒ) ತಿಳಿಸಿದೆ.

ಪದವೀಧರರ ನಿರುದ್ಯೋಗ ದರವು ಶೇ. 29.1 ಇದ್ದು, ಓದಲು ಅಥವಾ ಬರೆಯಲು ಬಾರದವರ ದರ ಶೇ. 3.4 ಇದೆ. ಅಂದರೆ, ಉನ್ನತ ಶಿಕ್ಷಣ ಪಡೆದವರ ನಿರುದ್ಯೋಗ ಮಟ್ಟ ಯಾವುದೇ ಶಾಲಾ ಶಿಕ್ಷಣ ಪಡೆಯವರಿಗಿಂತ ಸುಮಾರು ಒಂಬತ್ತು ಪಟ್ಟು ಹೆಚ್ಚಿದೆ. ಇನ್ನು ಮಾಧ್ಯಮಿಕ ಅಥವಾ ಉನ್ನತ ಶಿಕ್ಷಣ ಹೊಂದಿರುವ ಯುವಜನರ ನಿರುದ್ಯೋಗ ದರ ಶೇ. 18.4 ಇದ್ದು, ಆರು ಪಟ್ಟು ಹೆಚ್ಚಿದೆ ಎಂದು ಭಾರತದ ಕಾರ್ಮಿಕ ಮಾರುಕಟ್ಟೆಯ ಕುರಿತು ವರದಿಯಲ್ಲಿ ಐಎಲ್‌ಒ ಹೇಳಿದೆ.

“ಭಾರತದಲ್ಲಿ ನಿರುದ್ಯೋಗವು ಯುವ ಜನರ ಪ್ರಧಾನ ಸಮಸ್ಯೆಯಾಗಿದೆ. ವಿಶೇಷವಾಗಿ ಮಾಧ್ಯಮಿಕ ಮಟ್ಟದ ಅಥವಾ ಹೆಚ್ಚಿನ ಶಿಕ್ಷಣ ಹೊಂದಿರುವ ಯುವ ಜನರಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಿದೆ ಮತ್ತು ಇದು ಕಾಲಾನಂತರದಲ್ಲಿ ತೀವ್ರಗೊಂಡಿದೆ” ಎಂದು ಐಎಲ್‌ಒ ಹೇಳಿದೆ.

ಅಂಕಿ ಅಂಶಗಳು, ಕಾರ್ಮಿಕ ಬಲದ ಕೌಶಲ್ಯ ಮತ್ತು ಮಾರುಕಟ್ಟೆಯಲ್ಲಿ ಸೃಷ್ಟಿಯಾಗುತ್ತಿರುವ ಉದ್ಯೋಗಗಳ ನಡುವಿನ ತೀಕ್ಷ್ಣವಾದ ಅಸಾಮರಸ್ಯವನ್ನುಈ ಸಮಸ್ಯೆಗೆ ಕಾರಣ ಎಂದಿದೆ. ಭಾರತದ ಕಳಪೆ ಶಾಲಾ ಶಿಕ್ಷಣವು ಕಾಲಾನಂತರದಲ್ಲಿ ಅದರ ಆರ್ಥಿಕ ಭವಿಷ್ಯವನ್ನು ತಡೆಯುತ್ತದೆ ಎಂಬ ಭಾರತೀಯ ರಿಸರ್ವ್‌ ಬ್ಯಾಂಕ್‌ನ ಮಾಜಿ ಗವರ್ನರ್ ರಘುರಾಮ್ ರಾಜನ್ ಅವರಂತಹ ಪ್ರಸಿದ್ಧ ಅರ್ಥಶಾಸ್ತ್ರಜ್ಞರ ಎಚ್ಚರಿಕೆಗಳನ್ನು ವರದಿ ಒತ್ತಿ ಹೇಳಿದೆ.

“ಭಾರತದಲ್ಲಿ ಯುವ ಜನರ ನಿರುದ್ಯೋಗ ಮಟ್ಟ ಈಗ ಜಾಗತಿಕ ಮಟ್ಟಕ್ಕಿಂತ ಹೆಚ್ಚಾಗಿದೆ. ಕೃಷಿಯೇತರ ವಲಯಗಳಲ್ಲಿ ವಿದ್ಯಾವಂತ ಯುವ ಜನರಿಗೆ ಲಾಭದಾಯಕ ಉದ್ಯೋಗಗಳನ್ನು ಸೃಷ್ಟಿಸುವಲ್ಲಿ ಭಾರತದ ಆರ್ಥಿಕತೆ ವಿಫಲವಾಗಿದೆ. ಇದು ನಿರುದ್ಯೋಗ ಹೆಚ್ಚಳಕ್ಕೆ ಕಾರಣ” ಎಂದು ಐಎಲ್‌ಒ ಹೇಳಿದೆ.

ಚೀನಾದಲ್ಲಿ, 16-24 ವರ್ಷ ವಯಸ್ಸಿನ ಯುವ ಜನರ ನಿರುದ್ಯೋಗ ದರವು ವರ್ಷದ ಮೊದಲ ಎರಡು ತಿಂಗಳಲ್ಲಿ ಶೇ. 15.3ಕ್ಕೆ ಏರಿದೆ. ಇದು ನಗರ ಜನಸಂಖ್ಯೆಯ ಶೇ. 5.3ರ ದರಕ್ಕಿಂತ ಮೂರು ಪಟ್ಟು ಹೆಚ್ಚಿದೆ.

ಯುವ ನಿರುದ್ಯೋಗಿಗಳ ವಿಷಯದಲ್ಲಿ ಭಾರತೀಯರ ಪಾಲು: 15-29 ವರ್ಷದೊಳಗಿನ ನಿರುದ್ಯೋಗಿಗಳ ದರ 2000 ಇಸವಿಯಲ್ಲಿ ಶೇ. 88.6 ಇತ್ತು. ಅದು 2022 ರಲ್ಲಿ ಶೇ. 82.9ಕ್ಕೆ ಇಳಿದಿದೆ. ಆದರೆ, ಈ ಪೈಕಿ ವಿದ್ಯಾವಂತ ಯುವ ಜನರ ಪಾಲು ಈ ಅವಧಿಯಲ್ಲಿ ಶೇ. 54.2 ರಿಂದ ಶೇ. 65.7ಕ್ಕೆ ಏರಿಕೆಯಾಗಿದೆ ಎಂದು ಐಎಲ್‌ಒ ಅಂಕಿ ಅಂಶಗಳು ತೋರಿಸಿವೆ.

ವಿದ್ಯಾವಂತ ನಿರುದ್ಯೋಗಿಗಳ ಪೈಕಿ ಮಹಿಳೆಯರ ಪ್ರಮಾಣ ಹೆಚ್ಚಿದೆ. ಪುರುಷರ ನಿರುದ್ಯೋಗ ಪ್ರಮಾಣ ಶೇ.62.2 ಇದ್ದರೆ, ಮಹಿಳೆಯರ ಪ್ರಮಾಣ ಶೇ.76.7 ಇದೆ. ಅಂಕಿ ಅಂಶಗಳು ಗ್ರಾಮೀಣ ಭಾಗಗಳಿಗಿಂತ ನಗರ ಪ್ರದೇಶಗಳಲ್ಲಿ ನಿರುದ್ಯೋಗ ಮಟ್ಟ ಹೆಚ್ಚಿದೆ ಎಂದು ತೋರಿಸಿದೆ.

ಭಾರತವು ವಿಶ್ವದಲ್ಲೇ ಅತ್ಯಂತ ಕಡಿಮೆ, ಅಂದರೆ ಶೇ. 25 ಮಹಿಳಾ ಕಾರ್ಮಿಕರ ಭಾಗವಹಿಸುವಿಕೆಯ ದರವನ್ನು ಹೊಂದಿದೆ. ಫುಡ್ ಡೆಲಿವರಿಯಂತಹ ಕಡಿಮೆ ಸಂಬಳದ ಮತ್ತು ಖಾತ್ರಿಯಲ್ಲದ ಉದ್ಯೋಗ ದರ ಹೆಚ್ಚುತ್ತಿರುವ ಬಗ್ಗೆ ಐಎಲ್‌ಒ ಎಚ್ಚರಿಸಿದೆ.

ಇದನ್ನೂ ಓದಿ : ವಯನಾಡ್‌ನಲ್ಲಿ ರಾಹುಲ್ ಗಾಂಧಿ ವಿರುದ್ಧ ಕಣಕ್ಕಿಳಿದಿರುವ ಬಿಜೆಪಿ ಅಭ್ಯರ್ಥಿ ಕೆ.ಸುರೇಂದ್ರನ್ ಮೇಲಿದೆ 242 ಕೇಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...