Homeಮುಖಪುಟಯುವ ಪತ್ರಕರ್ತನ ಕೊಲೆ ಪ್ರಕರಣ : ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ

ಯುವ ಪತ್ರಕರ್ತನ ಕೊಲೆ ಪ್ರಕರಣ : ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ

- Advertisement -
- Advertisement -

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನಡೆದ ಯುವ ಪತ್ರಕರ್ತ ಮುಕೇಶ್ ಚಂದ್ರಕರ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುರೇಶ್ ಚಂದ್ರಕರ್‌ ಅವರನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಅಧಿಕಾರಿಗಳು ಹೈದರಾಬಾದ್‌ನಲ್ಲಿ ಇಂದು (ಜ.6) ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಗುತ್ತಿಗೆದಾರನಾಗಿರುವ ಆರೋಪಿ ಸುರೇಶ್ ಚಂದ್ರಕರ್, ಜನವರಿ 3ರಂದು ಪತ್ರಕರ್ತ ಮುಕೇಶ್ ಚಂದ್ರಕರ್ ಶವ ಪತ್ತೆಯಾದ ಬಳಿಕ ನಾಪತ್ತೆಯಾಗಿದ್ದರು.

ಪತ್ರಕರ್ತನ ಸಾವು ದೇಶದಾದ್ಯಂತ ಸುದ್ದಿಯಾದ ಬಳಿಕ ಛತ್ತೀಸ್‌ಗಢ ಸರ್ಕಾರ ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಿತ್ತು. ತನಿಖಾ ಅಧಿಕಾರಿಗಳು ತಲೆಮರೆಸಿಕೊಂಡಿದ್ದ ಆರೋಪಿ ಸುರೇಶ್‌ಗಾಗಿ ಹುಡುಕಾಟ ನಡೆಸುತ್ತಿದ್ದರು. ಭಾನುವಾರ (ಜ.5) ರಾತ್ರಿ ಹೈದರಾಬಾದ್‌ನಲ್ಲಿ ಸೆರೆ ಹಿಡಿದಿದ್ದಾರೆ ಎಂದು ವರದಿಗಳು ಹೇಳಿವೆ.

ಪ್ರಕರಣದ ಇತರ ಆರೋಪಿಗಳಾದ ಸುರೇಶ್ ಚಂದ್ರಕರ್‌ನ ಸಹೋದರರು ರಿತೇಶ್ ಚಂದ್ರಕರ್‌ ಮತ್ತು ದಿನೇಶ್ ಚಂದ್ರಕರ್‌ ಹಾಗೂ ಇನ್ನೋರ್ವ ಮಹೇಂದ್ರ ರಾಮಟೆಕೆ ಅವರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.

ರಸ್ತೆ ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆದಿರುವ ಕುರಿತು ವರದಿ ಮಾಡಿದ ಬಳಿಕ, ಜನವರಿ 1ರಿಂದ ಸ್ವತಂತ್ರ ಪತ್ರಕರ್ತ ಮುಕೇಶ್ ಚಂದ್ರಕರ್ ಅವರು ನಾಪತ್ತೆಯಾಗಿದ್ದರು. ಜನವರಿ 3ರಂದು ಬಿಜಾಪುರ ಜಿಲ್ಲೆಯ ಚಟ್ಟಂಪಾರ ಬಸ್ತಿಯ ಆರೋಪಿ ಗುತ್ತಿಗೆದಾರ ಸುರೇಶ್ ಚಂದ್ರಕರ್ ಅವರ ಜಮೀನಿನ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಮುಕೇಶ್ ಅವರ ಶವ ಪತ್ತೆಯಾಗಿತ್ತು.

ಆರೋಪಿ ಸುರೇಶ್ ಚಂದ್ರಕರ್‌ ಗುತ್ತಿಗೆ ಪಡೆದಿದ್ದ ರಸ್ತೆ ಕಾಮಗಾರಿಯಲ್ಲಿ ನಡೆದ ಭ್ರಷ್ಟಾಚಾರದ ಕುರಿತು ವರದಿ ಮಾಡಿದ್ದಕ್ಕೆ ಪತ್ರಕರ್ತ ಮುಕೇಶ್ ಅವರನ್ನು ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಮೃತನ ಸಹೋದರ ಟಿವಿ ಪತ್ರಕರ್ತ ಯುಕೇಶ್ ಚಂದ್ರಕರ್ ನೀಡಿದ ದೂರು ಆಧರಿಸಿ ಸುರೇಶ್ ಚಂದ್ರಕರ್ ಹಾಗೂ ಇತರರ ವಿರುದ್ದ ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ತನಿಖೆಯನ್ನು ಎಸ್‌ಐಟಿ ನಡೆಸುತ್ತಿದೆ.

ಪತ್ರಿಕಾ ಸಂಸ್ಥೆಗಳಿಂದ ಖಂಡನೆ

ಪತ್ರಕರ್ತ ಮುಕೇಶ್ ಚಂದ್ರಕರ್‌ ಕೊಲೆಯನ್ನು ಡಿಜಿಟಲ್ ಸುದ್ದಿ ಸಂಸ್ಥೆಗಳ ಸಂಘ ‘DIGIPUB’ ಸೇರಿದಂತೆ ಹಲವು ಸುದ್ದಿ ಸಂಸ್ಥೆಗಳು ಖಂಡಿಸಿದ್ದು, ಅಪರಾಧಿಗಳ ವಿರುದ್ದ ಕಠಿಣ ಕ್ರಮಕ್ಕೆ ಆಗ್ರಹಿಸಿವೆ.

ಇದನ್ನೂ ಓದಿ : ಛತ್ತೀಸ್‌ಗಢದಲ್ಲಿ ಪತ್ರಕರ್ತ ಮುಕೇಶ್‌ ಚಂದ್ರಾಕರ್‌ ಹತ್ಯೆ: ಯಾರಿ ಪತ್ರಕರ್ತ, ಏನಿದು ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...