Homeಚಳವಳಿರೈತ ಹೋರಾಟಕ್ಕೆ ಬೆಂಬಲ: ದೇಶಪ್ರೇಮಿ ಯುವಾಂದೋಲನ ಹೆಸರಿನಲ್ಲಿ ಹಳ್ಳಿಗಳಿಗೆ ಹೊರಟ ಯುವಜನತೆ

ರೈತ ಹೋರಾಟಕ್ಕೆ ಬೆಂಬಲ: ದೇಶಪ್ರೇಮಿ ಯುವಾಂದೋಲನ ಹೆಸರಿನಲ್ಲಿ ಹಳ್ಳಿಗಳಿಗೆ ಹೊರಟ ಯುವಜನತೆ

2021ರ ಹೊಸವರ್ಷಕ್ಕೆ ರೈತಪರವಾದ ಹೊಸ ವರ್ಷದ ನಿರ್ಣಯಗಳನ್ನು ಕೈಗೊಂಡಿರುವ ಯುವಜನರು ಸೈಕಲ್ ಜಾಥ ಮೂಲಕ ಹಳ್ಳಿ ಹಳ್ಳಿಗಳಿಗೆ ಹೊರಟಿದ್ದಾರೆ.

- Advertisement -
- Advertisement -

ದೇಶಕ್ಕೆ ಅನ್ನ ಕೊಡುವ ರೈತರು ಇಂದು ತಮ್ಮ ಉಳಿವಿಗಾಗಿ ಹೋರಾಡುತ್ತಿದ್ದಾರೆ. ದೆಹಲಿಯ ಕೊರೆಯುವ ಚಳಿಯಲ್ಲಿ ಸತತ 37 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಅನ್ನದಾತರು ಸಂಕಷ್ಟದಲ್ಲಿರುವಾಗ ಅವರ ಬೆಂಬಲಕ್ಕೆ ನಿಲ್ಲುವುದು ನಮ್ಮ ಕರ್ತವ್ಯ ಎಂದು ಘೋಷಿಸಿರುವ ಯುವಜನರು ರೈತರ ಸಂಕಷ್ಟಗಳು ಅರಿತು ರೈತರಿಂದ ಕಲಿಯಲು ಮತ್ತು ಕೃಷಿ ಕಾಯ್ದೆಗಳ ಅಪಾಯಗಳ ಬಗ್ಗೆ ಜನರಿಗೆ ತಿಳಿಸಲು ಹಳ್ಳಿಗಳಿಗೆ ಹೊರಟಿದ್ದಾರೆ.

ರಾಜ್ಯದಲ್ಲಿ ದೇಶಪ್ರೇಮಿ ಯುವಾಂದೋಲನ ಹೆಸರಿನಲ್ಲಿ ಸೈಕಲ್ ಜಾಥದ ಮೂಲಕ ಒಂದು ವಾರಗಳ ಕಾಲ ಹಲವು ಹಳ್ಳಿಗಳನ್ನು ತಲುಪಲು ವಿದ್ಯಾರ್ಥಿ – ಯುವಜನರು ನಿರ್ಧರಿಸದ್ದಾರೆ. ರಾಮನಗರ ಮತ್ತು ಗಂಗಾವತಿಯಲ್ಲಿ ಇಂದು ಸೈಕಲ್ ಜಾಥ ಉದ್ಘಾಟನೆಯಾಗಿದ್ದು ಹತ್ತಾರು ಯುವಕರು ಎರಡು ತಂಡಗಳಲ್ಲಿ ಪ್ರಚಾರಾಂದೋಲನ ಆರಂಭಿಸಿದ್ದಾರೆ.

ದೇಶಕ್ಕೆ ಈತನಕ ಅನ್ನ ಕೊಟ್ಟ ಅನ್ನದಾತರಿಂದ ಪ್ರತಿಭಟನೆಗೆ ಇಳಿದು, ದೆಹಲಿಯ ಬೀದಿಗಳಲ್ಲಿ ಪ್ರಾಣ ಕೊಡುತ್ತಿದ್ದಾರೆ. ಅವರು ಬೆವರು ರಕ್ತ ಬಸಿದು ಕೊಟ್ಟ ಅನ್ನ ತಿಂದು ಬೆಳೆದ ನಮ್ಮೆಲ್ಲರ ಮೇಲೂ ಅನ್ನದ ಋಣ ಇದೆ. ಇದರ ನಡುವೆಯೂ ಹೊಸ ವರ್ಷ ಬರುತ್ತಿದೆ. ಪ್ರತಿ ಹೊಸವರ್ಷಕ್ಕೆ ನಾವು ಸಾಧಿಸಬೇಕಾದ ನಿರ್ಣಯಗಳನ್ನು ತೆಗೆದುಕೊಳ್ಳುವುದು ರೂಢಿ. ರೈತರ ಹೋರಾಟದ ನಡುವೆ ಬರುತ್ತಿರುವ 2021ರ ಹೊಸವರ್ಷಕ್ಕೆ ರೈತಪರವಾದ ಹೊಸ ವರ್ಷದ ನಿರ್ಣಯಗಳನ್ನು ಕೈಗೊಳ್ಳೋಣ ಬನ್ನಿ ಎಂದು ಯುವಜನರು ಕರೆ ನೀಡಿದ್ದಾರೆ.

1. ಅನ್ನದಾತರು ಬೀದಿಗಿಳಿಯಲು ಕಾರಣವೇನೆಂದು ಸಮಗ್ರವಾಗಿ ಎಲ್ಲ ಆಯಾಮಗಳಿಂದ ಅಧ್ಯಯನ ಮಾಡುತ್ತೇನೆ. ಸಂಪೂರ್ಣ ವಿಚಾರ ತಿಳಿದುಕೊಳ್ಳುತ್ತೇನೆ.
2. ರೈತರ ಹಿತಾಸಕ್ತಿಯನ್ನು ಮಣ್ಣುಪಾಲು ಮಾಡಿ, ಚಿನ್ನದ ಅರಮನೆಗಳಲ್ಲಿ ಮೆರೆಯುತ್ತಿರುವ ರಿಲಾಯನ್ಸ್ ಅಂಬಾನಿಗಳಂತಹ ಕಾರ್ಪೊರೇಟ್ ಕಂಪೆನಿಗಳ ಕುರಿತ ಸತ್ಯಾಂಶಗಳನ್ನು ತಿಳಿದುಕೊಳ್ಳುತ್ತೇನೆ.
3. ನನಗೆ ಪರಿಚಿತರಾಗಿರುವ 10 ಜನರಿಗೆ ಈ ಎಲ್ಲ ವಿಚಾರದ ಕುರಿತಾಗಿ ಮಾಹಿತಿ ನೀಡುತ್ತೇನೆ.
4. ಹೊಸ ವರ್ಷದಲ್ಲಾದರೂ ಹೋರಾಡುತ್ತಿರುವ ರೈತರು ಹಿಂತಿರುಗಿ ಹೋಗಿ ತಮ್ಮ ಕುಟುಂಬಗಳನ್ನು ಸುರಕ್ಷಿತವಾಗಿ ಸೇರುವಂತೆ ರೈತರ ಹಕ್ಕೊತ್ತಾಯಗಳನ್ನು ಈಡೇರಿಸಬೇಕೆಂಬ ಆಗ್ರಹವನ್ನು ಯಾವ ರೀತಿಯಲ್ಲಿ ಸಾಧ್ಯವೋ ಹಾಗೆ ಸರ್ಕಾರಕ್ಕೆ ಮುಟ್ಟಿಸುತ್ತೇನೆ.
5. ದೆಹಲಿಯ ಹೋರಾಟನಿರತ ರೈತರು ನೀಡಿರುವ ಕರೆಗೆ ಓಗೊಡುತ್ತಾ ಜಿಯೋ ಸಿಮ್ ಗಳನ್ನೂ, ರಿಲಾಯನ್ಸ್ ಉತ್ಪನ್ನಗಳನ್ನೂ ತಿರಸ್ಕರಿಸುತ್ತೇನೆ ಎಂಬ 5 ನಿರ್ಣಯಗಳನ್ನು ಈ ಯುವಜನರು ಕೈಗೊಂಡಿದ್ದಾರೆ.

ದೇಶಪ್ರೇಮಿ ಯುವಾಂದೋಲನದ “ಹಳ್ಳಿಗಳಿಗೆ ವಿದ್ಯಾರ್ಥಿ-ಯುವಜನರ ಸೈಕಲ್ ಜಾಥಾ” ಗೆ ರಾಮನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಮಲ್ಲಯ್ಯನವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಹಲವಾರು ರೈತ ಮುಖಂಡರು, ದೇಶಪ್ರೇಮಿ ಯುವಾಂದೋಲನದ ಸರೋವರ್ ಬೆಂಕಿಕೆರೆ, ಮನೋಜ್, ಪುಷ್ಪಲತಾ, ರವಿ, ರಾಜಶೇಖರ್ ಅಂಗಡಿ, ಬಸವರಾಜ್, ಮಮತ ಇದ್ದರು.

ಜಾಥಾ ಚಾಲನೆ ಹಾಗೂ ಸಭೆಯ ನಂತರ ರಾಮನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ದೇಶಪ್ರೇಮಿ ಯುವಾಂದೋಲನ ತಂಡ ಕರಪತ್ರಗಳನ್ನು ಹಂಚಿ ಪ್ರಚಾರ ನಡೆಸಿತು. ನಂತರ ಚನ್ನಮಾನಹಳ್ಳಿ ಮತ್ತು ಚಿಕ್ಕೇನಹಳ್ಳಿಯಲ್ಲಿ ಮನೆ ಮನೆಗೂ ತೆರಳಿದ ಯುವಜನರು ಜನರಿಗೆ ರೈತ ಹೋರಾಟ ಮಾಹಿತಿ ನೀಡುತ್ತಿದ್ದಾರೆ.

ಇನ್ನೊಂದೆಡೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಸೈಕಲ್ ಜಾಥ ಉದ್ಘಾಟನೆಗೊಂಡು ಕಂಪ್ಲಿ ಕಡೆ ಹೊರಟಿದೆ. ಜಾಥಾಗೆ ಚಿಂತಕರಾದ ಬಿ.ಪೀರ್‌ಭಾಷಾ, ಹೋರಾಟಗಾರರಾದ ಡಿ.ಎಚ್ ಪೂಜಾರ್ ಚಾಲನೆ ನೀಡಿದರು. ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸಂತೋಷ್ ಎಚ್. ಎಂ, ರಾಜೇಂದ್ರ, ಗುರುಬಸವ, ಮರಿಸ್ವಾಮಿ, ದುರ್ಗೇಶ್, ಶರಣಬಸವ ಮತ್ತಿತರರು ಜಾಥದಲ್ಲಿದ್ದಾರೆ.


ಇದನ್ನೂ ಓದಿ: ರಿಲಾಯನ್ಸ್ ಬಹಿಷ್ಕರಿಸಲು ಕರೆ: ರೈತ ಹೋರಾಟ ಬೆಂಬಲಿಸಿ ಸಿಂಧನೂರಿನಲ್ಲಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...