Homeಚಳವಳಿರೈತ ಹೋರಾಟಕ್ಕೆ ಬೆಂಬಲ: ದೇಶಪ್ರೇಮಿ ಯುವಾಂದೋಲನ ಹೆಸರಿನಲ್ಲಿ ಹಳ್ಳಿಗಳಿಗೆ ಹೊರಟ ಯುವಜನತೆ

ರೈತ ಹೋರಾಟಕ್ಕೆ ಬೆಂಬಲ: ದೇಶಪ್ರೇಮಿ ಯುವಾಂದೋಲನ ಹೆಸರಿನಲ್ಲಿ ಹಳ್ಳಿಗಳಿಗೆ ಹೊರಟ ಯುವಜನತೆ

2021ರ ಹೊಸವರ್ಷಕ್ಕೆ ರೈತಪರವಾದ ಹೊಸ ವರ್ಷದ ನಿರ್ಣಯಗಳನ್ನು ಕೈಗೊಂಡಿರುವ ಯುವಜನರು ಸೈಕಲ್ ಜಾಥ ಮೂಲಕ ಹಳ್ಳಿ ಹಳ್ಳಿಗಳಿಗೆ ಹೊರಟಿದ್ದಾರೆ.

- Advertisement -
- Advertisement -

ದೇಶಕ್ಕೆ ಅನ್ನ ಕೊಡುವ ರೈತರು ಇಂದು ತಮ್ಮ ಉಳಿವಿಗಾಗಿ ಹೋರಾಡುತ್ತಿದ್ದಾರೆ. ದೆಹಲಿಯ ಕೊರೆಯುವ ಚಳಿಯಲ್ಲಿ ಸತತ 37 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಅನ್ನದಾತರು ಸಂಕಷ್ಟದಲ್ಲಿರುವಾಗ ಅವರ ಬೆಂಬಲಕ್ಕೆ ನಿಲ್ಲುವುದು ನಮ್ಮ ಕರ್ತವ್ಯ ಎಂದು ಘೋಷಿಸಿರುವ ಯುವಜನರು ರೈತರ ಸಂಕಷ್ಟಗಳು ಅರಿತು ರೈತರಿಂದ ಕಲಿಯಲು ಮತ್ತು ಕೃಷಿ ಕಾಯ್ದೆಗಳ ಅಪಾಯಗಳ ಬಗ್ಗೆ ಜನರಿಗೆ ತಿಳಿಸಲು ಹಳ್ಳಿಗಳಿಗೆ ಹೊರಟಿದ್ದಾರೆ.

ರಾಜ್ಯದಲ್ಲಿ ದೇಶಪ್ರೇಮಿ ಯುವಾಂದೋಲನ ಹೆಸರಿನಲ್ಲಿ ಸೈಕಲ್ ಜಾಥದ ಮೂಲಕ ಒಂದು ವಾರಗಳ ಕಾಲ ಹಲವು ಹಳ್ಳಿಗಳನ್ನು ತಲುಪಲು ವಿದ್ಯಾರ್ಥಿ – ಯುವಜನರು ನಿರ್ಧರಿಸದ್ದಾರೆ. ರಾಮನಗರ ಮತ್ತು ಗಂಗಾವತಿಯಲ್ಲಿ ಇಂದು ಸೈಕಲ್ ಜಾಥ ಉದ್ಘಾಟನೆಯಾಗಿದ್ದು ಹತ್ತಾರು ಯುವಕರು ಎರಡು ತಂಡಗಳಲ್ಲಿ ಪ್ರಚಾರಾಂದೋಲನ ಆರಂಭಿಸಿದ್ದಾರೆ.

ದೇಶಕ್ಕೆ ಈತನಕ ಅನ್ನ ಕೊಟ್ಟ ಅನ್ನದಾತರಿಂದ ಪ್ರತಿಭಟನೆಗೆ ಇಳಿದು, ದೆಹಲಿಯ ಬೀದಿಗಳಲ್ಲಿ ಪ್ರಾಣ ಕೊಡುತ್ತಿದ್ದಾರೆ. ಅವರು ಬೆವರು ರಕ್ತ ಬಸಿದು ಕೊಟ್ಟ ಅನ್ನ ತಿಂದು ಬೆಳೆದ ನಮ್ಮೆಲ್ಲರ ಮೇಲೂ ಅನ್ನದ ಋಣ ಇದೆ. ಇದರ ನಡುವೆಯೂ ಹೊಸ ವರ್ಷ ಬರುತ್ತಿದೆ. ಪ್ರತಿ ಹೊಸವರ್ಷಕ್ಕೆ ನಾವು ಸಾಧಿಸಬೇಕಾದ ನಿರ್ಣಯಗಳನ್ನು ತೆಗೆದುಕೊಳ್ಳುವುದು ರೂಢಿ. ರೈತರ ಹೋರಾಟದ ನಡುವೆ ಬರುತ್ತಿರುವ 2021ರ ಹೊಸವರ್ಷಕ್ಕೆ ರೈತಪರವಾದ ಹೊಸ ವರ್ಷದ ನಿರ್ಣಯಗಳನ್ನು ಕೈಗೊಳ್ಳೋಣ ಬನ್ನಿ ಎಂದು ಯುವಜನರು ಕರೆ ನೀಡಿದ್ದಾರೆ.

1. ಅನ್ನದಾತರು ಬೀದಿಗಿಳಿಯಲು ಕಾರಣವೇನೆಂದು ಸಮಗ್ರವಾಗಿ ಎಲ್ಲ ಆಯಾಮಗಳಿಂದ ಅಧ್ಯಯನ ಮಾಡುತ್ತೇನೆ. ಸಂಪೂರ್ಣ ವಿಚಾರ ತಿಳಿದುಕೊಳ್ಳುತ್ತೇನೆ.
2. ರೈತರ ಹಿತಾಸಕ್ತಿಯನ್ನು ಮಣ್ಣುಪಾಲು ಮಾಡಿ, ಚಿನ್ನದ ಅರಮನೆಗಳಲ್ಲಿ ಮೆರೆಯುತ್ತಿರುವ ರಿಲಾಯನ್ಸ್ ಅಂಬಾನಿಗಳಂತಹ ಕಾರ್ಪೊರೇಟ್ ಕಂಪೆನಿಗಳ ಕುರಿತ ಸತ್ಯಾಂಶಗಳನ್ನು ತಿಳಿದುಕೊಳ್ಳುತ್ತೇನೆ.
3. ನನಗೆ ಪರಿಚಿತರಾಗಿರುವ 10 ಜನರಿಗೆ ಈ ಎಲ್ಲ ವಿಚಾರದ ಕುರಿತಾಗಿ ಮಾಹಿತಿ ನೀಡುತ್ತೇನೆ.
4. ಹೊಸ ವರ್ಷದಲ್ಲಾದರೂ ಹೋರಾಡುತ್ತಿರುವ ರೈತರು ಹಿಂತಿರುಗಿ ಹೋಗಿ ತಮ್ಮ ಕುಟುಂಬಗಳನ್ನು ಸುರಕ್ಷಿತವಾಗಿ ಸೇರುವಂತೆ ರೈತರ ಹಕ್ಕೊತ್ತಾಯಗಳನ್ನು ಈಡೇರಿಸಬೇಕೆಂಬ ಆಗ್ರಹವನ್ನು ಯಾವ ರೀತಿಯಲ್ಲಿ ಸಾಧ್ಯವೋ ಹಾಗೆ ಸರ್ಕಾರಕ್ಕೆ ಮುಟ್ಟಿಸುತ್ತೇನೆ.
5. ದೆಹಲಿಯ ಹೋರಾಟನಿರತ ರೈತರು ನೀಡಿರುವ ಕರೆಗೆ ಓಗೊಡುತ್ತಾ ಜಿಯೋ ಸಿಮ್ ಗಳನ್ನೂ, ರಿಲಾಯನ್ಸ್ ಉತ್ಪನ್ನಗಳನ್ನೂ ತಿರಸ್ಕರಿಸುತ್ತೇನೆ ಎಂಬ 5 ನಿರ್ಣಯಗಳನ್ನು ಈ ಯುವಜನರು ಕೈಗೊಂಡಿದ್ದಾರೆ.

ದೇಶಪ್ರೇಮಿ ಯುವಾಂದೋಲನದ “ಹಳ್ಳಿಗಳಿಗೆ ವಿದ್ಯಾರ್ಥಿ-ಯುವಜನರ ಸೈಕಲ್ ಜಾಥಾ” ಗೆ ರಾಮನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಮಲ್ಲಯ್ಯನವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಹಲವಾರು ರೈತ ಮುಖಂಡರು, ದೇಶಪ್ರೇಮಿ ಯುವಾಂದೋಲನದ ಸರೋವರ್ ಬೆಂಕಿಕೆರೆ, ಮನೋಜ್, ಪುಷ್ಪಲತಾ, ರವಿ, ರಾಜಶೇಖರ್ ಅಂಗಡಿ, ಬಸವರಾಜ್, ಮಮತ ಇದ್ದರು.

ಜಾಥಾ ಚಾಲನೆ ಹಾಗೂ ಸಭೆಯ ನಂತರ ರಾಮನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ದೇಶಪ್ರೇಮಿ ಯುವಾಂದೋಲನ ತಂಡ ಕರಪತ್ರಗಳನ್ನು ಹಂಚಿ ಪ್ರಚಾರ ನಡೆಸಿತು. ನಂತರ ಚನ್ನಮಾನಹಳ್ಳಿ ಮತ್ತು ಚಿಕ್ಕೇನಹಳ್ಳಿಯಲ್ಲಿ ಮನೆ ಮನೆಗೂ ತೆರಳಿದ ಯುವಜನರು ಜನರಿಗೆ ರೈತ ಹೋರಾಟ ಮಾಹಿತಿ ನೀಡುತ್ತಿದ್ದಾರೆ.

ಇನ್ನೊಂದೆಡೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಸೈಕಲ್ ಜಾಥ ಉದ್ಘಾಟನೆಗೊಂಡು ಕಂಪ್ಲಿ ಕಡೆ ಹೊರಟಿದೆ. ಜಾಥಾಗೆ ಚಿಂತಕರಾದ ಬಿ.ಪೀರ್‌ಭಾಷಾ, ಹೋರಾಟಗಾರರಾದ ಡಿ.ಎಚ್ ಪೂಜಾರ್ ಚಾಲನೆ ನೀಡಿದರು. ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸಂತೋಷ್ ಎಚ್. ಎಂ, ರಾಜೇಂದ್ರ, ಗುರುಬಸವ, ಮರಿಸ್ವಾಮಿ, ದುರ್ಗೇಶ್, ಶರಣಬಸವ ಮತ್ತಿತರರು ಜಾಥದಲ್ಲಿದ್ದಾರೆ.


ಇದನ್ನೂ ಓದಿ: ರಿಲಾಯನ್ಸ್ ಬಹಿಷ್ಕರಿಸಲು ಕರೆ: ರೈತ ಹೋರಾಟ ಬೆಂಬಲಿಸಿ ಸಿಂಧನೂರಿನಲ್ಲಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...