Homeಚಳವಳಿರೈತ ಹೋರಾಟಕ್ಕೆ ಬೆಂಬಲ: ದೇಶಪ್ರೇಮಿ ಯುವಾಂದೋಲನ ಹೆಸರಿನಲ್ಲಿ ಹಳ್ಳಿಗಳಿಗೆ ಹೊರಟ ಯುವಜನತೆ

ರೈತ ಹೋರಾಟಕ್ಕೆ ಬೆಂಬಲ: ದೇಶಪ್ರೇಮಿ ಯುವಾಂದೋಲನ ಹೆಸರಿನಲ್ಲಿ ಹಳ್ಳಿಗಳಿಗೆ ಹೊರಟ ಯುವಜನತೆ

2021ರ ಹೊಸವರ್ಷಕ್ಕೆ ರೈತಪರವಾದ ಹೊಸ ವರ್ಷದ ನಿರ್ಣಯಗಳನ್ನು ಕೈಗೊಂಡಿರುವ ಯುವಜನರು ಸೈಕಲ್ ಜಾಥ ಮೂಲಕ ಹಳ್ಳಿ ಹಳ್ಳಿಗಳಿಗೆ ಹೊರಟಿದ್ದಾರೆ.

- Advertisement -
- Advertisement -

ದೇಶಕ್ಕೆ ಅನ್ನ ಕೊಡುವ ರೈತರು ಇಂದು ತಮ್ಮ ಉಳಿವಿಗಾಗಿ ಹೋರಾಡುತ್ತಿದ್ದಾರೆ. ದೆಹಲಿಯ ಕೊರೆಯುವ ಚಳಿಯಲ್ಲಿ ಸತತ 37 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಅನ್ನದಾತರು ಸಂಕಷ್ಟದಲ್ಲಿರುವಾಗ ಅವರ ಬೆಂಬಲಕ್ಕೆ ನಿಲ್ಲುವುದು ನಮ್ಮ ಕರ್ತವ್ಯ ಎಂದು ಘೋಷಿಸಿರುವ ಯುವಜನರು ರೈತರ ಸಂಕಷ್ಟಗಳು ಅರಿತು ರೈತರಿಂದ ಕಲಿಯಲು ಮತ್ತು ಕೃಷಿ ಕಾಯ್ದೆಗಳ ಅಪಾಯಗಳ ಬಗ್ಗೆ ಜನರಿಗೆ ತಿಳಿಸಲು ಹಳ್ಳಿಗಳಿಗೆ ಹೊರಟಿದ್ದಾರೆ.

ರಾಜ್ಯದಲ್ಲಿ ದೇಶಪ್ರೇಮಿ ಯುವಾಂದೋಲನ ಹೆಸರಿನಲ್ಲಿ ಸೈಕಲ್ ಜಾಥದ ಮೂಲಕ ಒಂದು ವಾರಗಳ ಕಾಲ ಹಲವು ಹಳ್ಳಿಗಳನ್ನು ತಲುಪಲು ವಿದ್ಯಾರ್ಥಿ – ಯುವಜನರು ನಿರ್ಧರಿಸದ್ದಾರೆ. ರಾಮನಗರ ಮತ್ತು ಗಂಗಾವತಿಯಲ್ಲಿ ಇಂದು ಸೈಕಲ್ ಜಾಥ ಉದ್ಘಾಟನೆಯಾಗಿದ್ದು ಹತ್ತಾರು ಯುವಕರು ಎರಡು ತಂಡಗಳಲ್ಲಿ ಪ್ರಚಾರಾಂದೋಲನ ಆರಂಭಿಸಿದ್ದಾರೆ.

ದೇಶಕ್ಕೆ ಈತನಕ ಅನ್ನ ಕೊಟ್ಟ ಅನ್ನದಾತರಿಂದ ಪ್ರತಿಭಟನೆಗೆ ಇಳಿದು, ದೆಹಲಿಯ ಬೀದಿಗಳಲ್ಲಿ ಪ್ರಾಣ ಕೊಡುತ್ತಿದ್ದಾರೆ. ಅವರು ಬೆವರು ರಕ್ತ ಬಸಿದು ಕೊಟ್ಟ ಅನ್ನ ತಿಂದು ಬೆಳೆದ ನಮ್ಮೆಲ್ಲರ ಮೇಲೂ ಅನ್ನದ ಋಣ ಇದೆ. ಇದರ ನಡುವೆಯೂ ಹೊಸ ವರ್ಷ ಬರುತ್ತಿದೆ. ಪ್ರತಿ ಹೊಸವರ್ಷಕ್ಕೆ ನಾವು ಸಾಧಿಸಬೇಕಾದ ನಿರ್ಣಯಗಳನ್ನು ತೆಗೆದುಕೊಳ್ಳುವುದು ರೂಢಿ. ರೈತರ ಹೋರಾಟದ ನಡುವೆ ಬರುತ್ತಿರುವ 2021ರ ಹೊಸವರ್ಷಕ್ಕೆ ರೈತಪರವಾದ ಹೊಸ ವರ್ಷದ ನಿರ್ಣಯಗಳನ್ನು ಕೈಗೊಳ್ಳೋಣ ಬನ್ನಿ ಎಂದು ಯುವಜನರು ಕರೆ ನೀಡಿದ್ದಾರೆ.

1. ಅನ್ನದಾತರು ಬೀದಿಗಿಳಿಯಲು ಕಾರಣವೇನೆಂದು ಸಮಗ್ರವಾಗಿ ಎಲ್ಲ ಆಯಾಮಗಳಿಂದ ಅಧ್ಯಯನ ಮಾಡುತ್ತೇನೆ. ಸಂಪೂರ್ಣ ವಿಚಾರ ತಿಳಿದುಕೊಳ್ಳುತ್ತೇನೆ.
2. ರೈತರ ಹಿತಾಸಕ್ತಿಯನ್ನು ಮಣ್ಣುಪಾಲು ಮಾಡಿ, ಚಿನ್ನದ ಅರಮನೆಗಳಲ್ಲಿ ಮೆರೆಯುತ್ತಿರುವ ರಿಲಾಯನ್ಸ್ ಅಂಬಾನಿಗಳಂತಹ ಕಾರ್ಪೊರೇಟ್ ಕಂಪೆನಿಗಳ ಕುರಿತ ಸತ್ಯಾಂಶಗಳನ್ನು ತಿಳಿದುಕೊಳ್ಳುತ್ತೇನೆ.
3. ನನಗೆ ಪರಿಚಿತರಾಗಿರುವ 10 ಜನರಿಗೆ ಈ ಎಲ್ಲ ವಿಚಾರದ ಕುರಿತಾಗಿ ಮಾಹಿತಿ ನೀಡುತ್ತೇನೆ.
4. ಹೊಸ ವರ್ಷದಲ್ಲಾದರೂ ಹೋರಾಡುತ್ತಿರುವ ರೈತರು ಹಿಂತಿರುಗಿ ಹೋಗಿ ತಮ್ಮ ಕುಟುಂಬಗಳನ್ನು ಸುರಕ್ಷಿತವಾಗಿ ಸೇರುವಂತೆ ರೈತರ ಹಕ್ಕೊತ್ತಾಯಗಳನ್ನು ಈಡೇರಿಸಬೇಕೆಂಬ ಆಗ್ರಹವನ್ನು ಯಾವ ರೀತಿಯಲ್ಲಿ ಸಾಧ್ಯವೋ ಹಾಗೆ ಸರ್ಕಾರಕ್ಕೆ ಮುಟ್ಟಿಸುತ್ತೇನೆ.
5. ದೆಹಲಿಯ ಹೋರಾಟನಿರತ ರೈತರು ನೀಡಿರುವ ಕರೆಗೆ ಓಗೊಡುತ್ತಾ ಜಿಯೋ ಸಿಮ್ ಗಳನ್ನೂ, ರಿಲಾಯನ್ಸ್ ಉತ್ಪನ್ನಗಳನ್ನೂ ತಿರಸ್ಕರಿಸುತ್ತೇನೆ ಎಂಬ 5 ನಿರ್ಣಯಗಳನ್ನು ಈ ಯುವಜನರು ಕೈಗೊಂಡಿದ್ದಾರೆ.

ದೇಶಪ್ರೇಮಿ ಯುವಾಂದೋಲನದ “ಹಳ್ಳಿಗಳಿಗೆ ವಿದ್ಯಾರ್ಥಿ-ಯುವಜನರ ಸೈಕಲ್ ಜಾಥಾ” ಗೆ ರಾಮನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಮಲ್ಲಯ್ಯನವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಹಲವಾರು ರೈತ ಮುಖಂಡರು, ದೇಶಪ್ರೇಮಿ ಯುವಾಂದೋಲನದ ಸರೋವರ್ ಬೆಂಕಿಕೆರೆ, ಮನೋಜ್, ಪುಷ್ಪಲತಾ, ರವಿ, ರಾಜಶೇಖರ್ ಅಂಗಡಿ, ಬಸವರಾಜ್, ಮಮತ ಇದ್ದರು.

ಜಾಥಾ ಚಾಲನೆ ಹಾಗೂ ಸಭೆಯ ನಂತರ ರಾಮನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ದೇಶಪ್ರೇಮಿ ಯುವಾಂದೋಲನ ತಂಡ ಕರಪತ್ರಗಳನ್ನು ಹಂಚಿ ಪ್ರಚಾರ ನಡೆಸಿತು. ನಂತರ ಚನ್ನಮಾನಹಳ್ಳಿ ಮತ್ತು ಚಿಕ್ಕೇನಹಳ್ಳಿಯಲ್ಲಿ ಮನೆ ಮನೆಗೂ ತೆರಳಿದ ಯುವಜನರು ಜನರಿಗೆ ರೈತ ಹೋರಾಟ ಮಾಹಿತಿ ನೀಡುತ್ತಿದ್ದಾರೆ.

ಇನ್ನೊಂದೆಡೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಸೈಕಲ್ ಜಾಥ ಉದ್ಘಾಟನೆಗೊಂಡು ಕಂಪ್ಲಿ ಕಡೆ ಹೊರಟಿದೆ. ಜಾಥಾಗೆ ಚಿಂತಕರಾದ ಬಿ.ಪೀರ್‌ಭಾಷಾ, ಹೋರಾಟಗಾರರಾದ ಡಿ.ಎಚ್ ಪೂಜಾರ್ ಚಾಲನೆ ನೀಡಿದರು. ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸಂತೋಷ್ ಎಚ್. ಎಂ, ರಾಜೇಂದ್ರ, ಗುರುಬಸವ, ಮರಿಸ್ವಾಮಿ, ದುರ್ಗೇಶ್, ಶರಣಬಸವ ಮತ್ತಿತರರು ಜಾಥದಲ್ಲಿದ್ದಾರೆ.


ಇದನ್ನೂ ಓದಿ: ರಿಲಾಯನ್ಸ್ ಬಹಿಷ್ಕರಿಸಲು ಕರೆ: ರೈತ ಹೋರಾಟ ಬೆಂಬಲಿಸಿ ಸಿಂಧನೂರಿನಲ್ಲಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...