Homeಚಳವಳಿರೈತ ಹೋರಾಟಕ್ಕೆ ಬೆಂಬಲ: ದೇಶಪ್ರೇಮಿ ಯುವಾಂದೋಲನ ಹೆಸರಿನಲ್ಲಿ ಹಳ್ಳಿಗಳಿಗೆ ಹೊರಟ ಯುವಜನತೆ

ರೈತ ಹೋರಾಟಕ್ಕೆ ಬೆಂಬಲ: ದೇಶಪ್ರೇಮಿ ಯುವಾಂದೋಲನ ಹೆಸರಿನಲ್ಲಿ ಹಳ್ಳಿಗಳಿಗೆ ಹೊರಟ ಯುವಜನತೆ

2021ರ ಹೊಸವರ್ಷಕ್ಕೆ ರೈತಪರವಾದ ಹೊಸ ವರ್ಷದ ನಿರ್ಣಯಗಳನ್ನು ಕೈಗೊಂಡಿರುವ ಯುವಜನರು ಸೈಕಲ್ ಜಾಥ ಮೂಲಕ ಹಳ್ಳಿ ಹಳ್ಳಿಗಳಿಗೆ ಹೊರಟಿದ್ದಾರೆ.

- Advertisement -
- Advertisement -

ದೇಶಕ್ಕೆ ಅನ್ನ ಕೊಡುವ ರೈತರು ಇಂದು ತಮ್ಮ ಉಳಿವಿಗಾಗಿ ಹೋರಾಡುತ್ತಿದ್ದಾರೆ. ದೆಹಲಿಯ ಕೊರೆಯುವ ಚಳಿಯಲ್ಲಿ ಸತತ 37 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಅನ್ನದಾತರು ಸಂಕಷ್ಟದಲ್ಲಿರುವಾಗ ಅವರ ಬೆಂಬಲಕ್ಕೆ ನಿಲ್ಲುವುದು ನಮ್ಮ ಕರ್ತವ್ಯ ಎಂದು ಘೋಷಿಸಿರುವ ಯುವಜನರು ರೈತರ ಸಂಕಷ್ಟಗಳು ಅರಿತು ರೈತರಿಂದ ಕಲಿಯಲು ಮತ್ತು ಕೃಷಿ ಕಾಯ್ದೆಗಳ ಅಪಾಯಗಳ ಬಗ್ಗೆ ಜನರಿಗೆ ತಿಳಿಸಲು ಹಳ್ಳಿಗಳಿಗೆ ಹೊರಟಿದ್ದಾರೆ.

ರಾಜ್ಯದಲ್ಲಿ ದೇಶಪ್ರೇಮಿ ಯುವಾಂದೋಲನ ಹೆಸರಿನಲ್ಲಿ ಸೈಕಲ್ ಜಾಥದ ಮೂಲಕ ಒಂದು ವಾರಗಳ ಕಾಲ ಹಲವು ಹಳ್ಳಿಗಳನ್ನು ತಲುಪಲು ವಿದ್ಯಾರ್ಥಿ – ಯುವಜನರು ನಿರ್ಧರಿಸದ್ದಾರೆ. ರಾಮನಗರ ಮತ್ತು ಗಂಗಾವತಿಯಲ್ಲಿ ಇಂದು ಸೈಕಲ್ ಜಾಥ ಉದ್ಘಾಟನೆಯಾಗಿದ್ದು ಹತ್ತಾರು ಯುವಕರು ಎರಡು ತಂಡಗಳಲ್ಲಿ ಪ್ರಚಾರಾಂದೋಲನ ಆರಂಭಿಸಿದ್ದಾರೆ.

ದೇಶಕ್ಕೆ ಈತನಕ ಅನ್ನ ಕೊಟ್ಟ ಅನ್ನದಾತರಿಂದ ಪ್ರತಿಭಟನೆಗೆ ಇಳಿದು, ದೆಹಲಿಯ ಬೀದಿಗಳಲ್ಲಿ ಪ್ರಾಣ ಕೊಡುತ್ತಿದ್ದಾರೆ. ಅವರು ಬೆವರು ರಕ್ತ ಬಸಿದು ಕೊಟ್ಟ ಅನ್ನ ತಿಂದು ಬೆಳೆದ ನಮ್ಮೆಲ್ಲರ ಮೇಲೂ ಅನ್ನದ ಋಣ ಇದೆ. ಇದರ ನಡುವೆಯೂ ಹೊಸ ವರ್ಷ ಬರುತ್ತಿದೆ. ಪ್ರತಿ ಹೊಸವರ್ಷಕ್ಕೆ ನಾವು ಸಾಧಿಸಬೇಕಾದ ನಿರ್ಣಯಗಳನ್ನು ತೆಗೆದುಕೊಳ್ಳುವುದು ರೂಢಿ. ರೈತರ ಹೋರಾಟದ ನಡುವೆ ಬರುತ್ತಿರುವ 2021ರ ಹೊಸವರ್ಷಕ್ಕೆ ರೈತಪರವಾದ ಹೊಸ ವರ್ಷದ ನಿರ್ಣಯಗಳನ್ನು ಕೈಗೊಳ್ಳೋಣ ಬನ್ನಿ ಎಂದು ಯುವಜನರು ಕರೆ ನೀಡಿದ್ದಾರೆ.

1. ಅನ್ನದಾತರು ಬೀದಿಗಿಳಿಯಲು ಕಾರಣವೇನೆಂದು ಸಮಗ್ರವಾಗಿ ಎಲ್ಲ ಆಯಾಮಗಳಿಂದ ಅಧ್ಯಯನ ಮಾಡುತ್ತೇನೆ. ಸಂಪೂರ್ಣ ವಿಚಾರ ತಿಳಿದುಕೊಳ್ಳುತ್ತೇನೆ.
2. ರೈತರ ಹಿತಾಸಕ್ತಿಯನ್ನು ಮಣ್ಣುಪಾಲು ಮಾಡಿ, ಚಿನ್ನದ ಅರಮನೆಗಳಲ್ಲಿ ಮೆರೆಯುತ್ತಿರುವ ರಿಲಾಯನ್ಸ್ ಅಂಬಾನಿಗಳಂತಹ ಕಾರ್ಪೊರೇಟ್ ಕಂಪೆನಿಗಳ ಕುರಿತ ಸತ್ಯಾಂಶಗಳನ್ನು ತಿಳಿದುಕೊಳ್ಳುತ್ತೇನೆ.
3. ನನಗೆ ಪರಿಚಿತರಾಗಿರುವ 10 ಜನರಿಗೆ ಈ ಎಲ್ಲ ವಿಚಾರದ ಕುರಿತಾಗಿ ಮಾಹಿತಿ ನೀಡುತ್ತೇನೆ.
4. ಹೊಸ ವರ್ಷದಲ್ಲಾದರೂ ಹೋರಾಡುತ್ತಿರುವ ರೈತರು ಹಿಂತಿರುಗಿ ಹೋಗಿ ತಮ್ಮ ಕುಟುಂಬಗಳನ್ನು ಸುರಕ್ಷಿತವಾಗಿ ಸೇರುವಂತೆ ರೈತರ ಹಕ್ಕೊತ್ತಾಯಗಳನ್ನು ಈಡೇರಿಸಬೇಕೆಂಬ ಆಗ್ರಹವನ್ನು ಯಾವ ರೀತಿಯಲ್ಲಿ ಸಾಧ್ಯವೋ ಹಾಗೆ ಸರ್ಕಾರಕ್ಕೆ ಮುಟ್ಟಿಸುತ್ತೇನೆ.
5. ದೆಹಲಿಯ ಹೋರಾಟನಿರತ ರೈತರು ನೀಡಿರುವ ಕರೆಗೆ ಓಗೊಡುತ್ತಾ ಜಿಯೋ ಸಿಮ್ ಗಳನ್ನೂ, ರಿಲಾಯನ್ಸ್ ಉತ್ಪನ್ನಗಳನ್ನೂ ತಿರಸ್ಕರಿಸುತ್ತೇನೆ ಎಂಬ 5 ನಿರ್ಣಯಗಳನ್ನು ಈ ಯುವಜನರು ಕೈಗೊಂಡಿದ್ದಾರೆ.

ದೇಶಪ್ರೇಮಿ ಯುವಾಂದೋಲನದ “ಹಳ್ಳಿಗಳಿಗೆ ವಿದ್ಯಾರ್ಥಿ-ಯುವಜನರ ಸೈಕಲ್ ಜಾಥಾ” ಗೆ ರಾಮನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಮಲ್ಲಯ್ಯನವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಹಲವಾರು ರೈತ ಮುಖಂಡರು, ದೇಶಪ್ರೇಮಿ ಯುವಾಂದೋಲನದ ಸರೋವರ್ ಬೆಂಕಿಕೆರೆ, ಮನೋಜ್, ಪುಷ್ಪಲತಾ, ರವಿ, ರಾಜಶೇಖರ್ ಅಂಗಡಿ, ಬಸವರಾಜ್, ಮಮತ ಇದ್ದರು.

ಜಾಥಾ ಚಾಲನೆ ಹಾಗೂ ಸಭೆಯ ನಂತರ ರಾಮನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ದೇಶಪ್ರೇಮಿ ಯುವಾಂದೋಲನ ತಂಡ ಕರಪತ್ರಗಳನ್ನು ಹಂಚಿ ಪ್ರಚಾರ ನಡೆಸಿತು. ನಂತರ ಚನ್ನಮಾನಹಳ್ಳಿ ಮತ್ತು ಚಿಕ್ಕೇನಹಳ್ಳಿಯಲ್ಲಿ ಮನೆ ಮನೆಗೂ ತೆರಳಿದ ಯುವಜನರು ಜನರಿಗೆ ರೈತ ಹೋರಾಟ ಮಾಹಿತಿ ನೀಡುತ್ತಿದ್ದಾರೆ.

ಇನ್ನೊಂದೆಡೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಸೈಕಲ್ ಜಾಥ ಉದ್ಘಾಟನೆಗೊಂಡು ಕಂಪ್ಲಿ ಕಡೆ ಹೊರಟಿದೆ. ಜಾಥಾಗೆ ಚಿಂತಕರಾದ ಬಿ.ಪೀರ್‌ಭಾಷಾ, ಹೋರಾಟಗಾರರಾದ ಡಿ.ಎಚ್ ಪೂಜಾರ್ ಚಾಲನೆ ನೀಡಿದರು. ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸಂತೋಷ್ ಎಚ್. ಎಂ, ರಾಜೇಂದ್ರ, ಗುರುಬಸವ, ಮರಿಸ್ವಾಮಿ, ದುರ್ಗೇಶ್, ಶರಣಬಸವ ಮತ್ತಿತರರು ಜಾಥದಲ್ಲಿದ್ದಾರೆ.


ಇದನ್ನೂ ಓದಿ: ರಿಲಾಯನ್ಸ್ ಬಹಿಷ್ಕರಿಸಲು ಕರೆ: ರೈತ ಹೋರಾಟ ಬೆಂಬಲಿಸಿ ಸಿಂಧನೂರಿನಲ್ಲಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...