Homeಚಳವಳಿರೈತ ಹೋರಾಟಕ್ಕೆ ಬೆಂಬಲ: ದೇಶಪ್ರೇಮಿ ಯುವಾಂದೋಲನ ಹೆಸರಿನಲ್ಲಿ ಹಳ್ಳಿಗಳಿಗೆ ಹೊರಟ ಯುವಜನತೆ

ರೈತ ಹೋರಾಟಕ್ಕೆ ಬೆಂಬಲ: ದೇಶಪ್ರೇಮಿ ಯುವಾಂದೋಲನ ಹೆಸರಿನಲ್ಲಿ ಹಳ್ಳಿಗಳಿಗೆ ಹೊರಟ ಯುವಜನತೆ

2021ರ ಹೊಸವರ್ಷಕ್ಕೆ ರೈತಪರವಾದ ಹೊಸ ವರ್ಷದ ನಿರ್ಣಯಗಳನ್ನು ಕೈಗೊಂಡಿರುವ ಯುವಜನರು ಸೈಕಲ್ ಜಾಥ ಮೂಲಕ ಹಳ್ಳಿ ಹಳ್ಳಿಗಳಿಗೆ ಹೊರಟಿದ್ದಾರೆ.

- Advertisement -
- Advertisement -

ದೇಶಕ್ಕೆ ಅನ್ನ ಕೊಡುವ ರೈತರು ಇಂದು ತಮ್ಮ ಉಳಿವಿಗಾಗಿ ಹೋರಾಡುತ್ತಿದ್ದಾರೆ. ದೆಹಲಿಯ ಕೊರೆಯುವ ಚಳಿಯಲ್ಲಿ ಸತತ 37 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಅನ್ನದಾತರು ಸಂಕಷ್ಟದಲ್ಲಿರುವಾಗ ಅವರ ಬೆಂಬಲಕ್ಕೆ ನಿಲ್ಲುವುದು ನಮ್ಮ ಕರ್ತವ್ಯ ಎಂದು ಘೋಷಿಸಿರುವ ಯುವಜನರು ರೈತರ ಸಂಕಷ್ಟಗಳು ಅರಿತು ರೈತರಿಂದ ಕಲಿಯಲು ಮತ್ತು ಕೃಷಿ ಕಾಯ್ದೆಗಳ ಅಪಾಯಗಳ ಬಗ್ಗೆ ಜನರಿಗೆ ತಿಳಿಸಲು ಹಳ್ಳಿಗಳಿಗೆ ಹೊರಟಿದ್ದಾರೆ.

ರಾಜ್ಯದಲ್ಲಿ ದೇಶಪ್ರೇಮಿ ಯುವಾಂದೋಲನ ಹೆಸರಿನಲ್ಲಿ ಸೈಕಲ್ ಜಾಥದ ಮೂಲಕ ಒಂದು ವಾರಗಳ ಕಾಲ ಹಲವು ಹಳ್ಳಿಗಳನ್ನು ತಲುಪಲು ವಿದ್ಯಾರ್ಥಿ – ಯುವಜನರು ನಿರ್ಧರಿಸದ್ದಾರೆ. ರಾಮನಗರ ಮತ್ತು ಗಂಗಾವತಿಯಲ್ಲಿ ಇಂದು ಸೈಕಲ್ ಜಾಥ ಉದ್ಘಾಟನೆಯಾಗಿದ್ದು ಹತ್ತಾರು ಯುವಕರು ಎರಡು ತಂಡಗಳಲ್ಲಿ ಪ್ರಚಾರಾಂದೋಲನ ಆರಂಭಿಸಿದ್ದಾರೆ.

ದೇಶಕ್ಕೆ ಈತನಕ ಅನ್ನ ಕೊಟ್ಟ ಅನ್ನದಾತರಿಂದ ಪ್ರತಿಭಟನೆಗೆ ಇಳಿದು, ದೆಹಲಿಯ ಬೀದಿಗಳಲ್ಲಿ ಪ್ರಾಣ ಕೊಡುತ್ತಿದ್ದಾರೆ. ಅವರು ಬೆವರು ರಕ್ತ ಬಸಿದು ಕೊಟ್ಟ ಅನ್ನ ತಿಂದು ಬೆಳೆದ ನಮ್ಮೆಲ್ಲರ ಮೇಲೂ ಅನ್ನದ ಋಣ ಇದೆ. ಇದರ ನಡುವೆಯೂ ಹೊಸ ವರ್ಷ ಬರುತ್ತಿದೆ. ಪ್ರತಿ ಹೊಸವರ್ಷಕ್ಕೆ ನಾವು ಸಾಧಿಸಬೇಕಾದ ನಿರ್ಣಯಗಳನ್ನು ತೆಗೆದುಕೊಳ್ಳುವುದು ರೂಢಿ. ರೈತರ ಹೋರಾಟದ ನಡುವೆ ಬರುತ್ತಿರುವ 2021ರ ಹೊಸವರ್ಷಕ್ಕೆ ರೈತಪರವಾದ ಹೊಸ ವರ್ಷದ ನಿರ್ಣಯಗಳನ್ನು ಕೈಗೊಳ್ಳೋಣ ಬನ್ನಿ ಎಂದು ಯುವಜನರು ಕರೆ ನೀಡಿದ್ದಾರೆ.

1. ಅನ್ನದಾತರು ಬೀದಿಗಿಳಿಯಲು ಕಾರಣವೇನೆಂದು ಸಮಗ್ರವಾಗಿ ಎಲ್ಲ ಆಯಾಮಗಳಿಂದ ಅಧ್ಯಯನ ಮಾಡುತ್ತೇನೆ. ಸಂಪೂರ್ಣ ವಿಚಾರ ತಿಳಿದುಕೊಳ್ಳುತ್ತೇನೆ.
2. ರೈತರ ಹಿತಾಸಕ್ತಿಯನ್ನು ಮಣ್ಣುಪಾಲು ಮಾಡಿ, ಚಿನ್ನದ ಅರಮನೆಗಳಲ್ಲಿ ಮೆರೆಯುತ್ತಿರುವ ರಿಲಾಯನ್ಸ್ ಅಂಬಾನಿಗಳಂತಹ ಕಾರ್ಪೊರೇಟ್ ಕಂಪೆನಿಗಳ ಕುರಿತ ಸತ್ಯಾಂಶಗಳನ್ನು ತಿಳಿದುಕೊಳ್ಳುತ್ತೇನೆ.
3. ನನಗೆ ಪರಿಚಿತರಾಗಿರುವ 10 ಜನರಿಗೆ ಈ ಎಲ್ಲ ವಿಚಾರದ ಕುರಿತಾಗಿ ಮಾಹಿತಿ ನೀಡುತ್ತೇನೆ.
4. ಹೊಸ ವರ್ಷದಲ್ಲಾದರೂ ಹೋರಾಡುತ್ತಿರುವ ರೈತರು ಹಿಂತಿರುಗಿ ಹೋಗಿ ತಮ್ಮ ಕುಟುಂಬಗಳನ್ನು ಸುರಕ್ಷಿತವಾಗಿ ಸೇರುವಂತೆ ರೈತರ ಹಕ್ಕೊತ್ತಾಯಗಳನ್ನು ಈಡೇರಿಸಬೇಕೆಂಬ ಆಗ್ರಹವನ್ನು ಯಾವ ರೀತಿಯಲ್ಲಿ ಸಾಧ್ಯವೋ ಹಾಗೆ ಸರ್ಕಾರಕ್ಕೆ ಮುಟ್ಟಿಸುತ್ತೇನೆ.
5. ದೆಹಲಿಯ ಹೋರಾಟನಿರತ ರೈತರು ನೀಡಿರುವ ಕರೆಗೆ ಓಗೊಡುತ್ತಾ ಜಿಯೋ ಸಿಮ್ ಗಳನ್ನೂ, ರಿಲಾಯನ್ಸ್ ಉತ್ಪನ್ನಗಳನ್ನೂ ತಿರಸ್ಕರಿಸುತ್ತೇನೆ ಎಂಬ 5 ನಿರ್ಣಯಗಳನ್ನು ಈ ಯುವಜನರು ಕೈಗೊಂಡಿದ್ದಾರೆ.

ದೇಶಪ್ರೇಮಿ ಯುವಾಂದೋಲನದ “ಹಳ್ಳಿಗಳಿಗೆ ವಿದ್ಯಾರ್ಥಿ-ಯುವಜನರ ಸೈಕಲ್ ಜಾಥಾ” ಗೆ ರಾಮನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಮಲ್ಲಯ್ಯನವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಹಲವಾರು ರೈತ ಮುಖಂಡರು, ದೇಶಪ್ರೇಮಿ ಯುವಾಂದೋಲನದ ಸರೋವರ್ ಬೆಂಕಿಕೆರೆ, ಮನೋಜ್, ಪುಷ್ಪಲತಾ, ರವಿ, ರಾಜಶೇಖರ್ ಅಂಗಡಿ, ಬಸವರಾಜ್, ಮಮತ ಇದ್ದರು.

ಜಾಥಾ ಚಾಲನೆ ಹಾಗೂ ಸಭೆಯ ನಂತರ ರಾಮನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ದೇಶಪ್ರೇಮಿ ಯುವಾಂದೋಲನ ತಂಡ ಕರಪತ್ರಗಳನ್ನು ಹಂಚಿ ಪ್ರಚಾರ ನಡೆಸಿತು. ನಂತರ ಚನ್ನಮಾನಹಳ್ಳಿ ಮತ್ತು ಚಿಕ್ಕೇನಹಳ್ಳಿಯಲ್ಲಿ ಮನೆ ಮನೆಗೂ ತೆರಳಿದ ಯುವಜನರು ಜನರಿಗೆ ರೈತ ಹೋರಾಟ ಮಾಹಿತಿ ನೀಡುತ್ತಿದ್ದಾರೆ.

ಇನ್ನೊಂದೆಡೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಸೈಕಲ್ ಜಾಥ ಉದ್ಘಾಟನೆಗೊಂಡು ಕಂಪ್ಲಿ ಕಡೆ ಹೊರಟಿದೆ. ಜಾಥಾಗೆ ಚಿಂತಕರಾದ ಬಿ.ಪೀರ್‌ಭಾಷಾ, ಹೋರಾಟಗಾರರಾದ ಡಿ.ಎಚ್ ಪೂಜಾರ್ ಚಾಲನೆ ನೀಡಿದರು. ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸಂತೋಷ್ ಎಚ್. ಎಂ, ರಾಜೇಂದ್ರ, ಗುರುಬಸವ, ಮರಿಸ್ವಾಮಿ, ದುರ್ಗೇಶ್, ಶರಣಬಸವ ಮತ್ತಿತರರು ಜಾಥದಲ್ಲಿದ್ದಾರೆ.


ಇದನ್ನೂ ಓದಿ: ರಿಲಾಯನ್ಸ್ ಬಹಿಷ್ಕರಿಸಲು ಕರೆ: ರೈತ ಹೋರಾಟ ಬೆಂಬಲಿಸಿ ಸಿಂಧನೂರಿನಲ್ಲಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...