Homeಚಳವಳಿರೈತ ಹೋರಾಟಕ್ಕೆ ಬೆಂಬಲ: ದೇಶಪ್ರೇಮಿ ಯುವಾಂದೋಲನ ಹೆಸರಿನಲ್ಲಿ ಹಳ್ಳಿಗಳಿಗೆ ಹೊರಟ ಯುವಜನತೆ

ರೈತ ಹೋರಾಟಕ್ಕೆ ಬೆಂಬಲ: ದೇಶಪ್ರೇಮಿ ಯುವಾಂದೋಲನ ಹೆಸರಿನಲ್ಲಿ ಹಳ್ಳಿಗಳಿಗೆ ಹೊರಟ ಯುವಜನತೆ

2021ರ ಹೊಸವರ್ಷಕ್ಕೆ ರೈತಪರವಾದ ಹೊಸ ವರ್ಷದ ನಿರ್ಣಯಗಳನ್ನು ಕೈಗೊಂಡಿರುವ ಯುವಜನರು ಸೈಕಲ್ ಜಾಥ ಮೂಲಕ ಹಳ್ಳಿ ಹಳ್ಳಿಗಳಿಗೆ ಹೊರಟಿದ್ದಾರೆ.

- Advertisement -
- Advertisement -

ದೇಶಕ್ಕೆ ಅನ್ನ ಕೊಡುವ ರೈತರು ಇಂದು ತಮ್ಮ ಉಳಿವಿಗಾಗಿ ಹೋರಾಡುತ್ತಿದ್ದಾರೆ. ದೆಹಲಿಯ ಕೊರೆಯುವ ಚಳಿಯಲ್ಲಿ ಸತತ 37 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಅನ್ನದಾತರು ಸಂಕಷ್ಟದಲ್ಲಿರುವಾಗ ಅವರ ಬೆಂಬಲಕ್ಕೆ ನಿಲ್ಲುವುದು ನಮ್ಮ ಕರ್ತವ್ಯ ಎಂದು ಘೋಷಿಸಿರುವ ಯುವಜನರು ರೈತರ ಸಂಕಷ್ಟಗಳು ಅರಿತು ರೈತರಿಂದ ಕಲಿಯಲು ಮತ್ತು ಕೃಷಿ ಕಾಯ್ದೆಗಳ ಅಪಾಯಗಳ ಬಗ್ಗೆ ಜನರಿಗೆ ತಿಳಿಸಲು ಹಳ್ಳಿಗಳಿಗೆ ಹೊರಟಿದ್ದಾರೆ.

ರಾಜ್ಯದಲ್ಲಿ ದೇಶಪ್ರೇಮಿ ಯುವಾಂದೋಲನ ಹೆಸರಿನಲ್ಲಿ ಸೈಕಲ್ ಜಾಥದ ಮೂಲಕ ಒಂದು ವಾರಗಳ ಕಾಲ ಹಲವು ಹಳ್ಳಿಗಳನ್ನು ತಲುಪಲು ವಿದ್ಯಾರ್ಥಿ – ಯುವಜನರು ನಿರ್ಧರಿಸದ್ದಾರೆ. ರಾಮನಗರ ಮತ್ತು ಗಂಗಾವತಿಯಲ್ಲಿ ಇಂದು ಸೈಕಲ್ ಜಾಥ ಉದ್ಘಾಟನೆಯಾಗಿದ್ದು ಹತ್ತಾರು ಯುವಕರು ಎರಡು ತಂಡಗಳಲ್ಲಿ ಪ್ರಚಾರಾಂದೋಲನ ಆರಂಭಿಸಿದ್ದಾರೆ.

ದೇಶಕ್ಕೆ ಈತನಕ ಅನ್ನ ಕೊಟ್ಟ ಅನ್ನದಾತರಿಂದ ಪ್ರತಿಭಟನೆಗೆ ಇಳಿದು, ದೆಹಲಿಯ ಬೀದಿಗಳಲ್ಲಿ ಪ್ರಾಣ ಕೊಡುತ್ತಿದ್ದಾರೆ. ಅವರು ಬೆವರು ರಕ್ತ ಬಸಿದು ಕೊಟ್ಟ ಅನ್ನ ತಿಂದು ಬೆಳೆದ ನಮ್ಮೆಲ್ಲರ ಮೇಲೂ ಅನ್ನದ ಋಣ ಇದೆ. ಇದರ ನಡುವೆಯೂ ಹೊಸ ವರ್ಷ ಬರುತ್ತಿದೆ. ಪ್ರತಿ ಹೊಸವರ್ಷಕ್ಕೆ ನಾವು ಸಾಧಿಸಬೇಕಾದ ನಿರ್ಣಯಗಳನ್ನು ತೆಗೆದುಕೊಳ್ಳುವುದು ರೂಢಿ. ರೈತರ ಹೋರಾಟದ ನಡುವೆ ಬರುತ್ತಿರುವ 2021ರ ಹೊಸವರ್ಷಕ್ಕೆ ರೈತಪರವಾದ ಹೊಸ ವರ್ಷದ ನಿರ್ಣಯಗಳನ್ನು ಕೈಗೊಳ್ಳೋಣ ಬನ್ನಿ ಎಂದು ಯುವಜನರು ಕರೆ ನೀಡಿದ್ದಾರೆ.

1. ಅನ್ನದಾತರು ಬೀದಿಗಿಳಿಯಲು ಕಾರಣವೇನೆಂದು ಸಮಗ್ರವಾಗಿ ಎಲ್ಲ ಆಯಾಮಗಳಿಂದ ಅಧ್ಯಯನ ಮಾಡುತ್ತೇನೆ. ಸಂಪೂರ್ಣ ವಿಚಾರ ತಿಳಿದುಕೊಳ್ಳುತ್ತೇನೆ.
2. ರೈತರ ಹಿತಾಸಕ್ತಿಯನ್ನು ಮಣ್ಣುಪಾಲು ಮಾಡಿ, ಚಿನ್ನದ ಅರಮನೆಗಳಲ್ಲಿ ಮೆರೆಯುತ್ತಿರುವ ರಿಲಾಯನ್ಸ್ ಅಂಬಾನಿಗಳಂತಹ ಕಾರ್ಪೊರೇಟ್ ಕಂಪೆನಿಗಳ ಕುರಿತ ಸತ್ಯಾಂಶಗಳನ್ನು ತಿಳಿದುಕೊಳ್ಳುತ್ತೇನೆ.
3. ನನಗೆ ಪರಿಚಿತರಾಗಿರುವ 10 ಜನರಿಗೆ ಈ ಎಲ್ಲ ವಿಚಾರದ ಕುರಿತಾಗಿ ಮಾಹಿತಿ ನೀಡುತ್ತೇನೆ.
4. ಹೊಸ ವರ್ಷದಲ್ಲಾದರೂ ಹೋರಾಡುತ್ತಿರುವ ರೈತರು ಹಿಂತಿರುಗಿ ಹೋಗಿ ತಮ್ಮ ಕುಟುಂಬಗಳನ್ನು ಸುರಕ್ಷಿತವಾಗಿ ಸೇರುವಂತೆ ರೈತರ ಹಕ್ಕೊತ್ತಾಯಗಳನ್ನು ಈಡೇರಿಸಬೇಕೆಂಬ ಆಗ್ರಹವನ್ನು ಯಾವ ರೀತಿಯಲ್ಲಿ ಸಾಧ್ಯವೋ ಹಾಗೆ ಸರ್ಕಾರಕ್ಕೆ ಮುಟ್ಟಿಸುತ್ತೇನೆ.
5. ದೆಹಲಿಯ ಹೋರಾಟನಿರತ ರೈತರು ನೀಡಿರುವ ಕರೆಗೆ ಓಗೊಡುತ್ತಾ ಜಿಯೋ ಸಿಮ್ ಗಳನ್ನೂ, ರಿಲಾಯನ್ಸ್ ಉತ್ಪನ್ನಗಳನ್ನೂ ತಿರಸ್ಕರಿಸುತ್ತೇನೆ ಎಂಬ 5 ನಿರ್ಣಯಗಳನ್ನು ಈ ಯುವಜನರು ಕೈಗೊಂಡಿದ್ದಾರೆ.

ದೇಶಪ್ರೇಮಿ ಯುವಾಂದೋಲನದ “ಹಳ್ಳಿಗಳಿಗೆ ವಿದ್ಯಾರ್ಥಿ-ಯುವಜನರ ಸೈಕಲ್ ಜಾಥಾ” ಗೆ ರಾಮನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಮಲ್ಲಯ್ಯನವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಹಲವಾರು ರೈತ ಮುಖಂಡರು, ದೇಶಪ್ರೇಮಿ ಯುವಾಂದೋಲನದ ಸರೋವರ್ ಬೆಂಕಿಕೆರೆ, ಮನೋಜ್, ಪುಷ್ಪಲತಾ, ರವಿ, ರಾಜಶೇಖರ್ ಅಂಗಡಿ, ಬಸವರಾಜ್, ಮಮತ ಇದ್ದರು.

ಜಾಥಾ ಚಾಲನೆ ಹಾಗೂ ಸಭೆಯ ನಂತರ ರಾಮನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ದೇಶಪ್ರೇಮಿ ಯುವಾಂದೋಲನ ತಂಡ ಕರಪತ್ರಗಳನ್ನು ಹಂಚಿ ಪ್ರಚಾರ ನಡೆಸಿತು. ನಂತರ ಚನ್ನಮಾನಹಳ್ಳಿ ಮತ್ತು ಚಿಕ್ಕೇನಹಳ್ಳಿಯಲ್ಲಿ ಮನೆ ಮನೆಗೂ ತೆರಳಿದ ಯುವಜನರು ಜನರಿಗೆ ರೈತ ಹೋರಾಟ ಮಾಹಿತಿ ನೀಡುತ್ತಿದ್ದಾರೆ.

ಇನ್ನೊಂದೆಡೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಸೈಕಲ್ ಜಾಥ ಉದ್ಘಾಟನೆಗೊಂಡು ಕಂಪ್ಲಿ ಕಡೆ ಹೊರಟಿದೆ. ಜಾಥಾಗೆ ಚಿಂತಕರಾದ ಬಿ.ಪೀರ್‌ಭಾಷಾ, ಹೋರಾಟಗಾರರಾದ ಡಿ.ಎಚ್ ಪೂಜಾರ್ ಚಾಲನೆ ನೀಡಿದರು. ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸಂತೋಷ್ ಎಚ್. ಎಂ, ರಾಜೇಂದ್ರ, ಗುರುಬಸವ, ಮರಿಸ್ವಾಮಿ, ದುರ್ಗೇಶ್, ಶರಣಬಸವ ಮತ್ತಿತರರು ಜಾಥದಲ್ಲಿದ್ದಾರೆ.


ಇದನ್ನೂ ಓದಿ: ರಿಲಾಯನ್ಸ್ ಬಹಿಷ್ಕರಿಸಲು ಕರೆ: ರೈತ ಹೋರಾಟ ಬೆಂಬಲಿಸಿ ಸಿಂಧನೂರಿನಲ್ಲಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...