Homeಮುಖಪುಟಸೋಂಕಿತರಿಗೆ ಉಚಿತ ಊಟ ನೀಡುವ ಮೂಲಕ ಇತರರಿಗೆ ಸ್ಫೂರ್ತಿಯಾದ ಮೂವರು ಬಾಲ್ಯಸ್ನೇಹಿತರು!

ಸೋಂಕಿತರಿಗೆ ಉಚಿತ ಊಟ ನೀಡುವ ಮೂಲಕ ಇತರರಿಗೆ ಸ್ಫೂರ್ತಿಯಾದ ಮೂವರು ಬಾಲ್ಯಸ್ನೇಹಿತರು!

- Advertisement -
- Advertisement -

ಕೋವಿಡ್-19 ಎರಡನೇ ಅಲೆ ಇಡೀ ದೇಶವನ್ನೇ ತಲ್ಲಣಗೊಳಿಸಿದೆ. ದೇಶಾದ್ಯಂತ ದಿನಕ್ಕೆ ಮೂರು ಲಕ್ಷಕ್ಕೂ ಅಧಿಕ ಪ್ರಕರಣಗಳು ವರಿದಿಯಾಗುತ್ತಿದ್ದರೆ, ಬೆಂಗಳೂರಿನಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 30 ಸಾವಿರ ದಾಟಿದೆ. ಆಸ್ಪತ್ರೆಗಳಲ್ಲಿ ಬೆಡ್ ಕೊರತೆ, ಆಮ್ಲಜನಕದ ಕೊರತೆ ಉಂಟಾಗಿದ್ದು, ಕೋವಿಡ್ ಸೋಂಕಿತರು ಬೆಡ್ ಸಿಗದೆ ಮನೆಗೆ ಮರಳಿ ಕ್ವಾರಂಟೈನ್ ಗೆ ಒಳಗಾಗಬೇಕಾದ ಪರಿಸ್ಥಿತಿ ಬಂದಿದೆ. ಹಲವಾರು ಸ್ಥಳಗಳಲ್ಲಿ ಇಡೀ ಕುಟುಂಬವೇ ಕೊರೋನಾದಿಂದ ತತ್ತರಿಸಿದ್ದು, ಆರೈಕೆ ಮಾಡಲು ಯಾರು ಇಲ್ಲದಂತಾಗಿದೆ. ಇಂತಹದ್ದೇ ಸಮಸ್ಯೆಯನ್ನು ಎದುರಿಸಿದ ಯುವಕರಿಬ್ಬರು ಇತರರಿಗೆ ನೆರವಾಗುವ ಉದ್ದೇಶದಿಂದ ಬೆಂಗಳೂರಿನಲ್ಲಿ ಕೋವಿಡ್ ಸೋಂಕಿಗೆ ಒಳಗಾಗಿ ಕ್ವಾರಂಟೈನ್ ಮತ್ತು ಆಸ್ಪತ್ರೆಯಲ್ಲಿರುವ ಜನರಿಗೆ ಉಚಿತವಾಗಿ ಊಟದ ವ್ಯವಸ್ಥೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಇಂತಹ ಸಾಮಾಜಿಕ ಕೆಲಸದಲ್ಲಿ ತೊಡಗಿಸಿಕೊಂಡಿರುವವರು ಸಿದ್ದಾರ್ಥ್, ಅಂಕಿತ್ ಮತ್ತು ನಿಖಿಲ್. ಮೂಲತಃ ಪಶ್ಚಿಮ ಬಂಗಾಳದವರಾದ ಇವರು 20ಕ್ಕೂ ವರ್ಷಕ್ಕಿಂತ ಹೆಚ್ಚು ಕಾಲ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಬಾಲ್ಯ ಸ್ನೇಹಿತರಾದ ಈ ಮೂವರು ವೃತ್ತಿಯಲ್ಲಿ ಉದ್ಯಮಿಗಳಾಗಿದ್ದು ಬೆಂಗಳೂರಿನಲ್ಲಿ ಕ್ವಾರಂಟೈನ್ ಆಗಿರುವ ಜನರಿಗೆ ಮತ್ತು ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಉಚಿತವಾಗಿ ಮಧ್ಯಾಹ್ನ ಮತ್ತು ರಾತ್ರಿ ಊಟ ವಿತರಿಸುತ್ತಿದ್ದಾರೆ. ಊಟಕ್ಕೆ 3 ಚಪಾತಿ, ದಾಲ್, ತರಕಾರಿ ಪಲ್ಯ, ಅನ್ನ ಸಾಂಬರ್ ಮತ್ತು ಬಾಳೆಹಣ್ಣು ಇವರ ಮುಖ್ಯ ಮೆನು.

ಕೋವಿಡ್ ಸೋಂಕಿಗೆ ಒಳಗಾಗಿರುವ ಕ್ವಾರಂಟೈನ್‌ನಲ್ಲಿರುವ ಇವರು ಕೋವಿಡ್‌ನಿಂದ ಉಂಟಾಗುವ ಸಮಸ್ಯೆಗಳನ್ನು ಅನುಭವಿಸಿದ್ದಾರೆ. ಸೋಂಕಿತರು ಮೈಕೈ ನೋವು, ಬೇದಿ, ತಲೆನೋವು ಸೇರಿದಂತೆ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿರುತ್ತಾರೆ. ಈ ಸಮಯದಲ್ಲಿ ಅಡುಗೆ, ಊಟ ಮಾಡಿಕೊಳ್ಳುವುದು ಕಷ್ಟ ಸಾಧ್ಯ ಎನ್ನುವುದನ್ನು ಅರಿತ ಈ ಉದ್ಯಮಿಗಳು ಇದೇ ಸಮಯದಲ್ಲಿ ತಾವೇನಾದರೂ ಮಾಡಬೇಕೆಂಬ ಅಭಿಲಾಷೆಯೊಂದಿಗೆ ಬೆಂಗಳೂರಿನಲ್ಲಿ ವಾಸವಿರುವ ಕೋವಿಡ್ ಸೋಂಕಿಗೆ ಒಳಗಾಗಿರುವವರಿಗೆ ಈಗಾಗಲೇ ನೂರಾರು ಜನರಿಗೆ ಪೌಷ್ಟಿಕಾಂಶಯುಕ್ತ ಅಹಾರವನ್ನು ಉಚಿತವಾಗಿ ಸರಬರಾಜು ಮಾಡಿದ್ದಾರೆ.

ಈ ಯೋಜನೆ ಕುರಿತು ಮಾತನಾಡಿದ ಸಿದ್ದಾರ್ಥ್, “ನಾನು ಕೂಡ ಕೋವಿಡ್ ಸೋಂಕಿಗೆ ಒಳಗಾಗಿದ್ದೇನೆ. ಪ್ರಸ್ತುತ ಕ್ವಾರಂಟೈನ್‌ನಲ್ಲಿದ್ದು, ಇನ್ನೊಂದು ದಿನದಲ್ಲಿ ಹೊರಬರಲಿದ್ದೇನೆ. ಮೊದಲು ನನಗೂ ಮನೆ ಕೆಲಸ ಮಾಡಿಕೊಳ್ಳುವುದು ತೀರ ಕಷ್ಟ ಎನಿಸುತಿತ್ತು. ನನ್ನಂತೆಯೇ ನನ್ನ ಸ್ನೇಹಿತನಿಗೂ ಅನ್ನಿಸಿತು. ಮೂವರು ಮಾತನಾಡಿಕೊಂಡು ಇತರರಿಗೆ ನೆರವು ಮಾಡುತ್ತಿದ್ದೇವೆ. ನಾವಿಬ್ಬರು ಸ್ಟೆಗಿ ಎಂಬ ರೆಸ್ಟೋರೆಂಟ್ ನಡೆಸುತ್ತಿದ್ದೇವೆ. ನಮ್ಮ ರೆಸ್ಟೋರೆಂಟ್‌ನಲ್ಲಿ ಕೆಲಸ ಮಾಡುತ್ತಿರುವ ಹುಡುಗರು ಅಡುಗೆ ತಯಾರಿಸಿ ಪ್ಯಾಕ್ ಮಾಡುತ್ತಾರೆ. ಉಳಿದಂತೆ ಯಾರೆಲ್ಲರಿಗೂ ಊಟ ಬೇಕು ಎಂದು ತಿಳಿಸಿರುತ್ತಾರೋ ಅವರು ಯಾರನ್ನಾದರೂ ಕಳಿಸಿ ಅಥವಾ ಡೆನ್ಸೋ ಮೂಲಕ ಆರ್ಡರ್ ಮಾಡಿ ಊಟ ತರಿಸಿಕೊಳ್ಳುತ್ತಾರೆ” ಎಂದರು.

ಮೊನ್ನೆಯಷ್ಟೆ (ಗುರುವಾರ) ಅರಂಭವಾಗಿರುವ ಊಟ ವಿತರಣೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಮಧ್ಯಾಹ್ನ ಸುಮಾರು 165 ಜನರಿಗೆ ಊಟ ವಿತರಿಸಿದ್ದಾರೆ. ಅಲ್ಲಿಂದ ಪ್ರತಿ ವೇಳೆ ಊಟ ಬೇಕು ಎಂದು ಸುಮಾರು 500 ಜನರು ಫೋನ್ ಕರೆಗಳು ಬರುತ್ತಿದ್ದು ಅವರಿಗೆ ಒದಗಿಸುತ್ತಿದ್ಧೇವೆ, ಫೋನ್‌ಗಳನ್ನು ಸ್ವೀಕರಿಸದಷ್ಟು ಕರೆಗಳು ಬರುತ್ತಿವೆ ಎನ್ನುತ್ತಾರೆ. ಆಸ್ಪತ್ರೆಗಳಿಗೂ ಊಟ ತಲುಪಿಸಲು ಮುಂದಾಗಿರುವ ಅವರು, ಕೊರೊನಾಗೆ ಭಯ ಪಡದಿರಿ. ಮನೆಯಲ್ಲೇ ಸೂಕ್ತ ಚಿಕಿತ್ಸೆ ಪಡೆಯಿರಿ, ವಿಶ್ರಾಂತಿ ಪಡೆಯುವುದೇ ಸೂಕ್ತವಾದ ಚಿಕಿತ್ಸೆ ಎನ್ನುತ್ತಾರೆ ಸಿದ್ದಾರ್ಥ್.

ಸೋಂಕಿತರಾಗಿ ಯಾರಿಗಾದರೂ ಆಹಾರದ ಅಗತ್ಯವಿದ್ದರೆ ಈ ವಿಧಾನದ ಮೂಲಕ ಊಟ ತರಿಸಿಕೊಳ್ಳಬಹುದು.

ಮಧ್ಯಾಹ್ನದ ಊಟ ಬೇಕಿದ್ದರೆ ಬೆಳಿಗ್ಗೆ 10 ಗಂಟೆ ಒಳಗೆ ಫೋನ್ ಮೂಲಕ ಅಥವಾ ವಾಟ್ಸಾಪ್ ಮಾಡುವ ಮೂಲಕ ಆರ್ಡರ್ ಮಾಡಬೇಕು. ಮಧ್ಯಾಹ್ನ 12:30 ರಿಂದ 2:00 ಗಂಟೆಯೊಳಗೆ ಊಟ ತೆಗೆದುಕೊಂಡು ಹೋಗಲು ವ್ಯವಸ್ಥೆ ಮಾಡಿಕೊಳ್ಳಬೇಕು. (ಜಯನಗರದ ಸ್ಟೆಗಿ ರೆಸ್ಟೋರೆಂಟ್‌ನಿಂದ ನೇರವಾಗಿ ತೆಗೆದುಕೊಂಡು ಹೋಗಬಹುದು ಅಥವಾ ಡೆಂಜೋ ಅಥವಾ ಸ್ವಿಗ್ಗಿ ಸೇರಿದಂತೆ ಇತರ ಆಹಾರ ಸರಬರಾಜು ಆಪ್ ಗಳ ಮೂಲಕ ಆರ್ಡರ್ ಮಾಡಬಹುದು. ಅದಕ್ಕೆ ಹಣ ಅವರೇ ಭರಸಿಬೇಕು) ಅದೇ ರೀತಿ ರಾತ್ರಿ ಊಟಕ್ಕೆ ಸಂಜೆ 5 ಗಂಟೆಯೊಳಗೆ ಆರ್ಡರ್ ಮಾಡಬೇಕು. ರಾತ್ರಿ 7 ರಿಂದ 8:30ರ ಒಳಗೆ ಊಟ ತರಿಸಿಕೊಳ್ಳಲು ವ್ಯವಸ್ಥೆ ಮಾಡಿಕೊಳ್ಳಬೇಕು. ಅಗತ್ಯವಿದ್ದವರು ಈ ನಂಬರ್‌ಗಳಿಗೆ ಸಂಪರ್ಕಿಸಿ. ಸಿದ್ಧಾರ್ಥ್: 9986694781, ನಿಖಿಲ್: 9663313417 ಅಂಕಿತ್: 8553389893

ಈ ಸಂಕಷ್ಟದ ಸಮಯದಲ್ಲಿ ಇವರ ಈ ಮಾನವೀಯ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ. ಕೈಲಾಗದು ಎಂದು ಕುಳಿತುಕೊಳ್ಳುವ ಬದಲು ಮನಸ್ಸು ಮಾಡಿದರೆ ಹೇಗೆಲ್ಲಾ ನೆರವಾಗಬಹುದು ಎಂಬುದಕ್ಕೆ ಈ ಯುವ ಉದ್ಯಮಿಗಳು ಮಾದರಿಯಾಗಿದ್ದಾರೆ. ಈ ಕುರಿತು ನಿಮ್ಮಗಳ ಫೋಟೊ ಕೊಡಿ ನಮ್ಮ ವರದಿಯಲ್ಲಿ ಪ್ರಕಟಿಸುತ್ತೇವೆ ಎಂದಾಗ ಅವರು ಪ್ರೀತಿಯಿಂದಲೇ ಅದನ್ನು ನಿರಾಕರಿಸಿದ್ದಾರೆ. ‘ಇದು ನಮ್ಮ ಜವಾಬ್ದಾರಿ, ಇದರಲ್ಲಿ ನಮ್ಮ ಫೋಟೊ ಹಾಕಿಕೊಳ್ಳುವ ಅಗತ್ಯವಿಲ್ಲ, ನಮ್ಮ ರೆಸ್ಟೋರೆಂಟ್‌ನಲ್ಲಿ ಇದಕ್ಕಾಗಿ ದುಡಿಯುತ್ತಿರುವ ಕಾರ್ಮಿಕರ ಫೋಟೊ ಹಾಕಿ” ಎಂದು ಹೇಳುವ ಮೂಲಕ ತಮ್ಮ ದೊಡ್ಡತನ ಮೆರೆದಿದ್ದಾರೆ. ಇವರಿಗೆ ನಮ್ಮ ಪರವಾಗಿ ಒಂದು ಸಲಾಂ…


ಇದನ್ನೂ ಓದಿ: ರಂಜಾನ್ ಉಪವಾಸ ಮುರಿದು ಪ್ಲಾಸ್ಮಾ ದಾನಮಾಡಿ ಕೊರೊನಾಪೀಡಿತ ಮಹಿಳೆಯರಿಬ್ಬರ ಜೀವ ಉಳಿಸಿದ ಮನ್ಸೂರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...