Homeಮುಖಪುಟಸೋಂಕಿತರಿಗೆ ಉಚಿತ ಊಟ ನೀಡುವ ಮೂಲಕ ಇತರರಿಗೆ ಸ್ಫೂರ್ತಿಯಾದ ಮೂವರು ಬಾಲ್ಯಸ್ನೇಹಿತರು!

ಸೋಂಕಿತರಿಗೆ ಉಚಿತ ಊಟ ನೀಡುವ ಮೂಲಕ ಇತರರಿಗೆ ಸ್ಫೂರ್ತಿಯಾದ ಮೂವರು ಬಾಲ್ಯಸ್ನೇಹಿತರು!

- Advertisement -
- Advertisement -

ಕೋವಿಡ್-19 ಎರಡನೇ ಅಲೆ ಇಡೀ ದೇಶವನ್ನೇ ತಲ್ಲಣಗೊಳಿಸಿದೆ. ದೇಶಾದ್ಯಂತ ದಿನಕ್ಕೆ ಮೂರು ಲಕ್ಷಕ್ಕೂ ಅಧಿಕ ಪ್ರಕರಣಗಳು ವರಿದಿಯಾಗುತ್ತಿದ್ದರೆ, ಬೆಂಗಳೂರಿನಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 30 ಸಾವಿರ ದಾಟಿದೆ. ಆಸ್ಪತ್ರೆಗಳಲ್ಲಿ ಬೆಡ್ ಕೊರತೆ, ಆಮ್ಲಜನಕದ ಕೊರತೆ ಉಂಟಾಗಿದ್ದು, ಕೋವಿಡ್ ಸೋಂಕಿತರು ಬೆಡ್ ಸಿಗದೆ ಮನೆಗೆ ಮರಳಿ ಕ್ವಾರಂಟೈನ್ ಗೆ ಒಳಗಾಗಬೇಕಾದ ಪರಿಸ್ಥಿತಿ ಬಂದಿದೆ. ಹಲವಾರು ಸ್ಥಳಗಳಲ್ಲಿ ಇಡೀ ಕುಟುಂಬವೇ ಕೊರೋನಾದಿಂದ ತತ್ತರಿಸಿದ್ದು, ಆರೈಕೆ ಮಾಡಲು ಯಾರು ಇಲ್ಲದಂತಾಗಿದೆ. ಇಂತಹದ್ದೇ ಸಮಸ್ಯೆಯನ್ನು ಎದುರಿಸಿದ ಯುವಕರಿಬ್ಬರು ಇತರರಿಗೆ ನೆರವಾಗುವ ಉದ್ದೇಶದಿಂದ ಬೆಂಗಳೂರಿನಲ್ಲಿ ಕೋವಿಡ್ ಸೋಂಕಿಗೆ ಒಳಗಾಗಿ ಕ್ವಾರಂಟೈನ್ ಮತ್ತು ಆಸ್ಪತ್ರೆಯಲ್ಲಿರುವ ಜನರಿಗೆ ಉಚಿತವಾಗಿ ಊಟದ ವ್ಯವಸ್ಥೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಇಂತಹ ಸಾಮಾಜಿಕ ಕೆಲಸದಲ್ಲಿ ತೊಡಗಿಸಿಕೊಂಡಿರುವವರು ಸಿದ್ದಾರ್ಥ್, ಅಂಕಿತ್ ಮತ್ತು ನಿಖಿಲ್. ಮೂಲತಃ ಪಶ್ಚಿಮ ಬಂಗಾಳದವರಾದ ಇವರು 20ಕ್ಕೂ ವರ್ಷಕ್ಕಿಂತ ಹೆಚ್ಚು ಕಾಲ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಬಾಲ್ಯ ಸ್ನೇಹಿತರಾದ ಈ ಮೂವರು ವೃತ್ತಿಯಲ್ಲಿ ಉದ್ಯಮಿಗಳಾಗಿದ್ದು ಬೆಂಗಳೂರಿನಲ್ಲಿ ಕ್ವಾರಂಟೈನ್ ಆಗಿರುವ ಜನರಿಗೆ ಮತ್ತು ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಉಚಿತವಾಗಿ ಮಧ್ಯಾಹ್ನ ಮತ್ತು ರಾತ್ರಿ ಊಟ ವಿತರಿಸುತ್ತಿದ್ದಾರೆ. ಊಟಕ್ಕೆ 3 ಚಪಾತಿ, ದಾಲ್, ತರಕಾರಿ ಪಲ್ಯ, ಅನ್ನ ಸಾಂಬರ್ ಮತ್ತು ಬಾಳೆಹಣ್ಣು ಇವರ ಮುಖ್ಯ ಮೆನು.

ಕೋವಿಡ್ ಸೋಂಕಿಗೆ ಒಳಗಾಗಿರುವ ಕ್ವಾರಂಟೈನ್‌ನಲ್ಲಿರುವ ಇವರು ಕೋವಿಡ್‌ನಿಂದ ಉಂಟಾಗುವ ಸಮಸ್ಯೆಗಳನ್ನು ಅನುಭವಿಸಿದ್ದಾರೆ. ಸೋಂಕಿತರು ಮೈಕೈ ನೋವು, ಬೇದಿ, ತಲೆನೋವು ಸೇರಿದಂತೆ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿರುತ್ತಾರೆ. ಈ ಸಮಯದಲ್ಲಿ ಅಡುಗೆ, ಊಟ ಮಾಡಿಕೊಳ್ಳುವುದು ಕಷ್ಟ ಸಾಧ್ಯ ಎನ್ನುವುದನ್ನು ಅರಿತ ಈ ಉದ್ಯಮಿಗಳು ಇದೇ ಸಮಯದಲ್ಲಿ ತಾವೇನಾದರೂ ಮಾಡಬೇಕೆಂಬ ಅಭಿಲಾಷೆಯೊಂದಿಗೆ ಬೆಂಗಳೂರಿನಲ್ಲಿ ವಾಸವಿರುವ ಕೋವಿಡ್ ಸೋಂಕಿಗೆ ಒಳಗಾಗಿರುವವರಿಗೆ ಈಗಾಗಲೇ ನೂರಾರು ಜನರಿಗೆ ಪೌಷ್ಟಿಕಾಂಶಯುಕ್ತ ಅಹಾರವನ್ನು ಉಚಿತವಾಗಿ ಸರಬರಾಜು ಮಾಡಿದ್ದಾರೆ.

ಈ ಯೋಜನೆ ಕುರಿತು ಮಾತನಾಡಿದ ಸಿದ್ದಾರ್ಥ್, “ನಾನು ಕೂಡ ಕೋವಿಡ್ ಸೋಂಕಿಗೆ ಒಳಗಾಗಿದ್ದೇನೆ. ಪ್ರಸ್ತುತ ಕ್ವಾರಂಟೈನ್‌ನಲ್ಲಿದ್ದು, ಇನ್ನೊಂದು ದಿನದಲ್ಲಿ ಹೊರಬರಲಿದ್ದೇನೆ. ಮೊದಲು ನನಗೂ ಮನೆ ಕೆಲಸ ಮಾಡಿಕೊಳ್ಳುವುದು ತೀರ ಕಷ್ಟ ಎನಿಸುತಿತ್ತು. ನನ್ನಂತೆಯೇ ನನ್ನ ಸ್ನೇಹಿತನಿಗೂ ಅನ್ನಿಸಿತು. ಮೂವರು ಮಾತನಾಡಿಕೊಂಡು ಇತರರಿಗೆ ನೆರವು ಮಾಡುತ್ತಿದ್ದೇವೆ. ನಾವಿಬ್ಬರು ಸ್ಟೆಗಿ ಎಂಬ ರೆಸ್ಟೋರೆಂಟ್ ನಡೆಸುತ್ತಿದ್ದೇವೆ. ನಮ್ಮ ರೆಸ್ಟೋರೆಂಟ್‌ನಲ್ಲಿ ಕೆಲಸ ಮಾಡುತ್ತಿರುವ ಹುಡುಗರು ಅಡುಗೆ ತಯಾರಿಸಿ ಪ್ಯಾಕ್ ಮಾಡುತ್ತಾರೆ. ಉಳಿದಂತೆ ಯಾರೆಲ್ಲರಿಗೂ ಊಟ ಬೇಕು ಎಂದು ತಿಳಿಸಿರುತ್ತಾರೋ ಅವರು ಯಾರನ್ನಾದರೂ ಕಳಿಸಿ ಅಥವಾ ಡೆನ್ಸೋ ಮೂಲಕ ಆರ್ಡರ್ ಮಾಡಿ ಊಟ ತರಿಸಿಕೊಳ್ಳುತ್ತಾರೆ” ಎಂದರು.

ಮೊನ್ನೆಯಷ್ಟೆ (ಗುರುವಾರ) ಅರಂಭವಾಗಿರುವ ಊಟ ವಿತರಣೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಮಧ್ಯಾಹ್ನ ಸುಮಾರು 165 ಜನರಿಗೆ ಊಟ ವಿತರಿಸಿದ್ದಾರೆ. ಅಲ್ಲಿಂದ ಪ್ರತಿ ವೇಳೆ ಊಟ ಬೇಕು ಎಂದು ಸುಮಾರು 500 ಜನರು ಫೋನ್ ಕರೆಗಳು ಬರುತ್ತಿದ್ದು ಅವರಿಗೆ ಒದಗಿಸುತ್ತಿದ್ಧೇವೆ, ಫೋನ್‌ಗಳನ್ನು ಸ್ವೀಕರಿಸದಷ್ಟು ಕರೆಗಳು ಬರುತ್ತಿವೆ ಎನ್ನುತ್ತಾರೆ. ಆಸ್ಪತ್ರೆಗಳಿಗೂ ಊಟ ತಲುಪಿಸಲು ಮುಂದಾಗಿರುವ ಅವರು, ಕೊರೊನಾಗೆ ಭಯ ಪಡದಿರಿ. ಮನೆಯಲ್ಲೇ ಸೂಕ್ತ ಚಿಕಿತ್ಸೆ ಪಡೆಯಿರಿ, ವಿಶ್ರಾಂತಿ ಪಡೆಯುವುದೇ ಸೂಕ್ತವಾದ ಚಿಕಿತ್ಸೆ ಎನ್ನುತ್ತಾರೆ ಸಿದ್ದಾರ್ಥ್.

ಸೋಂಕಿತರಾಗಿ ಯಾರಿಗಾದರೂ ಆಹಾರದ ಅಗತ್ಯವಿದ್ದರೆ ಈ ವಿಧಾನದ ಮೂಲಕ ಊಟ ತರಿಸಿಕೊಳ್ಳಬಹುದು.

ಮಧ್ಯಾಹ್ನದ ಊಟ ಬೇಕಿದ್ದರೆ ಬೆಳಿಗ್ಗೆ 10 ಗಂಟೆ ಒಳಗೆ ಫೋನ್ ಮೂಲಕ ಅಥವಾ ವಾಟ್ಸಾಪ್ ಮಾಡುವ ಮೂಲಕ ಆರ್ಡರ್ ಮಾಡಬೇಕು. ಮಧ್ಯಾಹ್ನ 12:30 ರಿಂದ 2:00 ಗಂಟೆಯೊಳಗೆ ಊಟ ತೆಗೆದುಕೊಂಡು ಹೋಗಲು ವ್ಯವಸ್ಥೆ ಮಾಡಿಕೊಳ್ಳಬೇಕು. (ಜಯನಗರದ ಸ್ಟೆಗಿ ರೆಸ್ಟೋರೆಂಟ್‌ನಿಂದ ನೇರವಾಗಿ ತೆಗೆದುಕೊಂಡು ಹೋಗಬಹುದು ಅಥವಾ ಡೆಂಜೋ ಅಥವಾ ಸ್ವಿಗ್ಗಿ ಸೇರಿದಂತೆ ಇತರ ಆಹಾರ ಸರಬರಾಜು ಆಪ್ ಗಳ ಮೂಲಕ ಆರ್ಡರ್ ಮಾಡಬಹುದು. ಅದಕ್ಕೆ ಹಣ ಅವರೇ ಭರಸಿಬೇಕು) ಅದೇ ರೀತಿ ರಾತ್ರಿ ಊಟಕ್ಕೆ ಸಂಜೆ 5 ಗಂಟೆಯೊಳಗೆ ಆರ್ಡರ್ ಮಾಡಬೇಕು. ರಾತ್ರಿ 7 ರಿಂದ 8:30ರ ಒಳಗೆ ಊಟ ತರಿಸಿಕೊಳ್ಳಲು ವ್ಯವಸ್ಥೆ ಮಾಡಿಕೊಳ್ಳಬೇಕು. ಅಗತ್ಯವಿದ್ದವರು ಈ ನಂಬರ್‌ಗಳಿಗೆ ಸಂಪರ್ಕಿಸಿ. ಸಿದ್ಧಾರ್ಥ್: 9986694781, ನಿಖಿಲ್: 9663313417 ಅಂಕಿತ್: 8553389893

ಈ ಸಂಕಷ್ಟದ ಸಮಯದಲ್ಲಿ ಇವರ ಈ ಮಾನವೀಯ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ. ಕೈಲಾಗದು ಎಂದು ಕುಳಿತುಕೊಳ್ಳುವ ಬದಲು ಮನಸ್ಸು ಮಾಡಿದರೆ ಹೇಗೆಲ್ಲಾ ನೆರವಾಗಬಹುದು ಎಂಬುದಕ್ಕೆ ಈ ಯುವ ಉದ್ಯಮಿಗಳು ಮಾದರಿಯಾಗಿದ್ದಾರೆ. ಈ ಕುರಿತು ನಿಮ್ಮಗಳ ಫೋಟೊ ಕೊಡಿ ನಮ್ಮ ವರದಿಯಲ್ಲಿ ಪ್ರಕಟಿಸುತ್ತೇವೆ ಎಂದಾಗ ಅವರು ಪ್ರೀತಿಯಿಂದಲೇ ಅದನ್ನು ನಿರಾಕರಿಸಿದ್ದಾರೆ. ‘ಇದು ನಮ್ಮ ಜವಾಬ್ದಾರಿ, ಇದರಲ್ಲಿ ನಮ್ಮ ಫೋಟೊ ಹಾಕಿಕೊಳ್ಳುವ ಅಗತ್ಯವಿಲ್ಲ, ನಮ್ಮ ರೆಸ್ಟೋರೆಂಟ್‌ನಲ್ಲಿ ಇದಕ್ಕಾಗಿ ದುಡಿಯುತ್ತಿರುವ ಕಾರ್ಮಿಕರ ಫೋಟೊ ಹಾಕಿ” ಎಂದು ಹೇಳುವ ಮೂಲಕ ತಮ್ಮ ದೊಡ್ಡತನ ಮೆರೆದಿದ್ದಾರೆ. ಇವರಿಗೆ ನಮ್ಮ ಪರವಾಗಿ ಒಂದು ಸಲಾಂ…


ಇದನ್ನೂ ಓದಿ: ರಂಜಾನ್ ಉಪವಾಸ ಮುರಿದು ಪ್ಲಾಸ್ಮಾ ದಾನಮಾಡಿ ಕೊರೊನಾಪೀಡಿತ ಮಹಿಳೆಯರಿಬ್ಬರ ಜೀವ ಉಳಿಸಿದ ಮನ್ಸೂರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...