Homeಮುಖಪುಟಸೋಂಕಿತರಿಗೆ ಉಚಿತ ಊಟ ನೀಡುವ ಮೂಲಕ ಇತರರಿಗೆ ಸ್ಫೂರ್ತಿಯಾದ ಮೂವರು ಬಾಲ್ಯಸ್ನೇಹಿತರು!

ಸೋಂಕಿತರಿಗೆ ಉಚಿತ ಊಟ ನೀಡುವ ಮೂಲಕ ಇತರರಿಗೆ ಸ್ಫೂರ್ತಿಯಾದ ಮೂವರು ಬಾಲ್ಯಸ್ನೇಹಿತರು!

- Advertisement -
- Advertisement -

ಕೋವಿಡ್-19 ಎರಡನೇ ಅಲೆ ಇಡೀ ದೇಶವನ್ನೇ ತಲ್ಲಣಗೊಳಿಸಿದೆ. ದೇಶಾದ್ಯಂತ ದಿನಕ್ಕೆ ಮೂರು ಲಕ್ಷಕ್ಕೂ ಅಧಿಕ ಪ್ರಕರಣಗಳು ವರಿದಿಯಾಗುತ್ತಿದ್ದರೆ, ಬೆಂಗಳೂರಿನಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 30 ಸಾವಿರ ದಾಟಿದೆ. ಆಸ್ಪತ್ರೆಗಳಲ್ಲಿ ಬೆಡ್ ಕೊರತೆ, ಆಮ್ಲಜನಕದ ಕೊರತೆ ಉಂಟಾಗಿದ್ದು, ಕೋವಿಡ್ ಸೋಂಕಿತರು ಬೆಡ್ ಸಿಗದೆ ಮನೆಗೆ ಮರಳಿ ಕ್ವಾರಂಟೈನ್ ಗೆ ಒಳಗಾಗಬೇಕಾದ ಪರಿಸ್ಥಿತಿ ಬಂದಿದೆ. ಹಲವಾರು ಸ್ಥಳಗಳಲ್ಲಿ ಇಡೀ ಕುಟುಂಬವೇ ಕೊರೋನಾದಿಂದ ತತ್ತರಿಸಿದ್ದು, ಆರೈಕೆ ಮಾಡಲು ಯಾರು ಇಲ್ಲದಂತಾಗಿದೆ. ಇಂತಹದ್ದೇ ಸಮಸ್ಯೆಯನ್ನು ಎದುರಿಸಿದ ಯುವಕರಿಬ್ಬರು ಇತರರಿಗೆ ನೆರವಾಗುವ ಉದ್ದೇಶದಿಂದ ಬೆಂಗಳೂರಿನಲ್ಲಿ ಕೋವಿಡ್ ಸೋಂಕಿಗೆ ಒಳಗಾಗಿ ಕ್ವಾರಂಟೈನ್ ಮತ್ತು ಆಸ್ಪತ್ರೆಯಲ್ಲಿರುವ ಜನರಿಗೆ ಉಚಿತವಾಗಿ ಊಟದ ವ್ಯವಸ್ಥೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಇಂತಹ ಸಾಮಾಜಿಕ ಕೆಲಸದಲ್ಲಿ ತೊಡಗಿಸಿಕೊಂಡಿರುವವರು ಸಿದ್ದಾರ್ಥ್, ಅಂಕಿತ್ ಮತ್ತು ನಿಖಿಲ್. ಮೂಲತಃ ಪಶ್ಚಿಮ ಬಂಗಾಳದವರಾದ ಇವರು 20ಕ್ಕೂ ವರ್ಷಕ್ಕಿಂತ ಹೆಚ್ಚು ಕಾಲ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಬಾಲ್ಯ ಸ್ನೇಹಿತರಾದ ಈ ಮೂವರು ವೃತ್ತಿಯಲ್ಲಿ ಉದ್ಯಮಿಗಳಾಗಿದ್ದು ಬೆಂಗಳೂರಿನಲ್ಲಿ ಕ್ವಾರಂಟೈನ್ ಆಗಿರುವ ಜನರಿಗೆ ಮತ್ತು ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಉಚಿತವಾಗಿ ಮಧ್ಯಾಹ್ನ ಮತ್ತು ರಾತ್ರಿ ಊಟ ವಿತರಿಸುತ್ತಿದ್ದಾರೆ. ಊಟಕ್ಕೆ 3 ಚಪಾತಿ, ದಾಲ್, ತರಕಾರಿ ಪಲ್ಯ, ಅನ್ನ ಸಾಂಬರ್ ಮತ್ತು ಬಾಳೆಹಣ್ಣು ಇವರ ಮುಖ್ಯ ಮೆನು.

ಕೋವಿಡ್ ಸೋಂಕಿಗೆ ಒಳಗಾಗಿರುವ ಕ್ವಾರಂಟೈನ್‌ನಲ್ಲಿರುವ ಇವರು ಕೋವಿಡ್‌ನಿಂದ ಉಂಟಾಗುವ ಸಮಸ್ಯೆಗಳನ್ನು ಅನುಭವಿಸಿದ್ದಾರೆ. ಸೋಂಕಿತರು ಮೈಕೈ ನೋವು, ಬೇದಿ, ತಲೆನೋವು ಸೇರಿದಂತೆ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿರುತ್ತಾರೆ. ಈ ಸಮಯದಲ್ಲಿ ಅಡುಗೆ, ಊಟ ಮಾಡಿಕೊಳ್ಳುವುದು ಕಷ್ಟ ಸಾಧ್ಯ ಎನ್ನುವುದನ್ನು ಅರಿತ ಈ ಉದ್ಯಮಿಗಳು ಇದೇ ಸಮಯದಲ್ಲಿ ತಾವೇನಾದರೂ ಮಾಡಬೇಕೆಂಬ ಅಭಿಲಾಷೆಯೊಂದಿಗೆ ಬೆಂಗಳೂರಿನಲ್ಲಿ ವಾಸವಿರುವ ಕೋವಿಡ್ ಸೋಂಕಿಗೆ ಒಳಗಾಗಿರುವವರಿಗೆ ಈಗಾಗಲೇ ನೂರಾರು ಜನರಿಗೆ ಪೌಷ್ಟಿಕಾಂಶಯುಕ್ತ ಅಹಾರವನ್ನು ಉಚಿತವಾಗಿ ಸರಬರಾಜು ಮಾಡಿದ್ದಾರೆ.

ಈ ಯೋಜನೆ ಕುರಿತು ಮಾತನಾಡಿದ ಸಿದ್ದಾರ್ಥ್, “ನಾನು ಕೂಡ ಕೋವಿಡ್ ಸೋಂಕಿಗೆ ಒಳಗಾಗಿದ್ದೇನೆ. ಪ್ರಸ್ತುತ ಕ್ವಾರಂಟೈನ್‌ನಲ್ಲಿದ್ದು, ಇನ್ನೊಂದು ದಿನದಲ್ಲಿ ಹೊರಬರಲಿದ್ದೇನೆ. ಮೊದಲು ನನಗೂ ಮನೆ ಕೆಲಸ ಮಾಡಿಕೊಳ್ಳುವುದು ತೀರ ಕಷ್ಟ ಎನಿಸುತಿತ್ತು. ನನ್ನಂತೆಯೇ ನನ್ನ ಸ್ನೇಹಿತನಿಗೂ ಅನ್ನಿಸಿತು. ಮೂವರು ಮಾತನಾಡಿಕೊಂಡು ಇತರರಿಗೆ ನೆರವು ಮಾಡುತ್ತಿದ್ದೇವೆ. ನಾವಿಬ್ಬರು ಸ್ಟೆಗಿ ಎಂಬ ರೆಸ್ಟೋರೆಂಟ್ ನಡೆಸುತ್ತಿದ್ದೇವೆ. ನಮ್ಮ ರೆಸ್ಟೋರೆಂಟ್‌ನಲ್ಲಿ ಕೆಲಸ ಮಾಡುತ್ತಿರುವ ಹುಡುಗರು ಅಡುಗೆ ತಯಾರಿಸಿ ಪ್ಯಾಕ್ ಮಾಡುತ್ತಾರೆ. ಉಳಿದಂತೆ ಯಾರೆಲ್ಲರಿಗೂ ಊಟ ಬೇಕು ಎಂದು ತಿಳಿಸಿರುತ್ತಾರೋ ಅವರು ಯಾರನ್ನಾದರೂ ಕಳಿಸಿ ಅಥವಾ ಡೆನ್ಸೋ ಮೂಲಕ ಆರ್ಡರ್ ಮಾಡಿ ಊಟ ತರಿಸಿಕೊಳ್ಳುತ್ತಾರೆ” ಎಂದರು.

ಮೊನ್ನೆಯಷ್ಟೆ (ಗುರುವಾರ) ಅರಂಭವಾಗಿರುವ ಊಟ ವಿತರಣೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಮಧ್ಯಾಹ್ನ ಸುಮಾರು 165 ಜನರಿಗೆ ಊಟ ವಿತರಿಸಿದ್ದಾರೆ. ಅಲ್ಲಿಂದ ಪ್ರತಿ ವೇಳೆ ಊಟ ಬೇಕು ಎಂದು ಸುಮಾರು 500 ಜನರು ಫೋನ್ ಕರೆಗಳು ಬರುತ್ತಿದ್ದು ಅವರಿಗೆ ಒದಗಿಸುತ್ತಿದ್ಧೇವೆ, ಫೋನ್‌ಗಳನ್ನು ಸ್ವೀಕರಿಸದಷ್ಟು ಕರೆಗಳು ಬರುತ್ತಿವೆ ಎನ್ನುತ್ತಾರೆ. ಆಸ್ಪತ್ರೆಗಳಿಗೂ ಊಟ ತಲುಪಿಸಲು ಮುಂದಾಗಿರುವ ಅವರು, ಕೊರೊನಾಗೆ ಭಯ ಪಡದಿರಿ. ಮನೆಯಲ್ಲೇ ಸೂಕ್ತ ಚಿಕಿತ್ಸೆ ಪಡೆಯಿರಿ, ವಿಶ್ರಾಂತಿ ಪಡೆಯುವುದೇ ಸೂಕ್ತವಾದ ಚಿಕಿತ್ಸೆ ಎನ್ನುತ್ತಾರೆ ಸಿದ್ದಾರ್ಥ್.

ಸೋಂಕಿತರಾಗಿ ಯಾರಿಗಾದರೂ ಆಹಾರದ ಅಗತ್ಯವಿದ್ದರೆ ಈ ವಿಧಾನದ ಮೂಲಕ ಊಟ ತರಿಸಿಕೊಳ್ಳಬಹುದು.

ಮಧ್ಯಾಹ್ನದ ಊಟ ಬೇಕಿದ್ದರೆ ಬೆಳಿಗ್ಗೆ 10 ಗಂಟೆ ಒಳಗೆ ಫೋನ್ ಮೂಲಕ ಅಥವಾ ವಾಟ್ಸಾಪ್ ಮಾಡುವ ಮೂಲಕ ಆರ್ಡರ್ ಮಾಡಬೇಕು. ಮಧ್ಯಾಹ್ನ 12:30 ರಿಂದ 2:00 ಗಂಟೆಯೊಳಗೆ ಊಟ ತೆಗೆದುಕೊಂಡು ಹೋಗಲು ವ್ಯವಸ್ಥೆ ಮಾಡಿಕೊಳ್ಳಬೇಕು. (ಜಯನಗರದ ಸ್ಟೆಗಿ ರೆಸ್ಟೋರೆಂಟ್‌ನಿಂದ ನೇರವಾಗಿ ತೆಗೆದುಕೊಂಡು ಹೋಗಬಹುದು ಅಥವಾ ಡೆಂಜೋ ಅಥವಾ ಸ್ವಿಗ್ಗಿ ಸೇರಿದಂತೆ ಇತರ ಆಹಾರ ಸರಬರಾಜು ಆಪ್ ಗಳ ಮೂಲಕ ಆರ್ಡರ್ ಮಾಡಬಹುದು. ಅದಕ್ಕೆ ಹಣ ಅವರೇ ಭರಸಿಬೇಕು) ಅದೇ ರೀತಿ ರಾತ್ರಿ ಊಟಕ್ಕೆ ಸಂಜೆ 5 ಗಂಟೆಯೊಳಗೆ ಆರ್ಡರ್ ಮಾಡಬೇಕು. ರಾತ್ರಿ 7 ರಿಂದ 8:30ರ ಒಳಗೆ ಊಟ ತರಿಸಿಕೊಳ್ಳಲು ವ್ಯವಸ್ಥೆ ಮಾಡಿಕೊಳ್ಳಬೇಕು. ಅಗತ್ಯವಿದ್ದವರು ಈ ನಂಬರ್‌ಗಳಿಗೆ ಸಂಪರ್ಕಿಸಿ. ಸಿದ್ಧಾರ್ಥ್: 9986694781, ನಿಖಿಲ್: 9663313417 ಅಂಕಿತ್: 8553389893

ಈ ಸಂಕಷ್ಟದ ಸಮಯದಲ್ಲಿ ಇವರ ಈ ಮಾನವೀಯ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ. ಕೈಲಾಗದು ಎಂದು ಕುಳಿತುಕೊಳ್ಳುವ ಬದಲು ಮನಸ್ಸು ಮಾಡಿದರೆ ಹೇಗೆಲ್ಲಾ ನೆರವಾಗಬಹುದು ಎಂಬುದಕ್ಕೆ ಈ ಯುವ ಉದ್ಯಮಿಗಳು ಮಾದರಿಯಾಗಿದ್ದಾರೆ. ಈ ಕುರಿತು ನಿಮ್ಮಗಳ ಫೋಟೊ ಕೊಡಿ ನಮ್ಮ ವರದಿಯಲ್ಲಿ ಪ್ರಕಟಿಸುತ್ತೇವೆ ಎಂದಾಗ ಅವರು ಪ್ರೀತಿಯಿಂದಲೇ ಅದನ್ನು ನಿರಾಕರಿಸಿದ್ದಾರೆ. ‘ಇದು ನಮ್ಮ ಜವಾಬ್ದಾರಿ, ಇದರಲ್ಲಿ ನಮ್ಮ ಫೋಟೊ ಹಾಕಿಕೊಳ್ಳುವ ಅಗತ್ಯವಿಲ್ಲ, ನಮ್ಮ ರೆಸ್ಟೋರೆಂಟ್‌ನಲ್ಲಿ ಇದಕ್ಕಾಗಿ ದುಡಿಯುತ್ತಿರುವ ಕಾರ್ಮಿಕರ ಫೋಟೊ ಹಾಕಿ” ಎಂದು ಹೇಳುವ ಮೂಲಕ ತಮ್ಮ ದೊಡ್ಡತನ ಮೆರೆದಿದ್ದಾರೆ. ಇವರಿಗೆ ನಮ್ಮ ಪರವಾಗಿ ಒಂದು ಸಲಾಂ…


ಇದನ್ನೂ ಓದಿ: ರಂಜಾನ್ ಉಪವಾಸ ಮುರಿದು ಪ್ಲಾಸ್ಮಾ ದಾನಮಾಡಿ ಕೊರೊನಾಪೀಡಿತ ಮಹಿಳೆಯರಿಬ್ಬರ ಜೀವ ಉಳಿಸಿದ ಮನ್ಸೂರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...