Homeಮುಖಪುಟಸೋಂಕಿತರಿಗೆ ಉಚಿತ ಊಟ ನೀಡುವ ಮೂಲಕ ಇತರರಿಗೆ ಸ್ಫೂರ್ತಿಯಾದ ಮೂವರು ಬಾಲ್ಯಸ್ನೇಹಿತರು!

ಸೋಂಕಿತರಿಗೆ ಉಚಿತ ಊಟ ನೀಡುವ ಮೂಲಕ ಇತರರಿಗೆ ಸ್ಫೂರ್ತಿಯಾದ ಮೂವರು ಬಾಲ್ಯಸ್ನೇಹಿತರು!

- Advertisement -
- Advertisement -

ಕೋವಿಡ್-19 ಎರಡನೇ ಅಲೆ ಇಡೀ ದೇಶವನ್ನೇ ತಲ್ಲಣಗೊಳಿಸಿದೆ. ದೇಶಾದ್ಯಂತ ದಿನಕ್ಕೆ ಮೂರು ಲಕ್ಷಕ್ಕೂ ಅಧಿಕ ಪ್ರಕರಣಗಳು ವರಿದಿಯಾಗುತ್ತಿದ್ದರೆ, ಬೆಂಗಳೂರಿನಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 30 ಸಾವಿರ ದಾಟಿದೆ. ಆಸ್ಪತ್ರೆಗಳಲ್ಲಿ ಬೆಡ್ ಕೊರತೆ, ಆಮ್ಲಜನಕದ ಕೊರತೆ ಉಂಟಾಗಿದ್ದು, ಕೋವಿಡ್ ಸೋಂಕಿತರು ಬೆಡ್ ಸಿಗದೆ ಮನೆಗೆ ಮರಳಿ ಕ್ವಾರಂಟೈನ್ ಗೆ ಒಳಗಾಗಬೇಕಾದ ಪರಿಸ್ಥಿತಿ ಬಂದಿದೆ. ಹಲವಾರು ಸ್ಥಳಗಳಲ್ಲಿ ಇಡೀ ಕುಟುಂಬವೇ ಕೊರೋನಾದಿಂದ ತತ್ತರಿಸಿದ್ದು, ಆರೈಕೆ ಮಾಡಲು ಯಾರು ಇಲ್ಲದಂತಾಗಿದೆ. ಇಂತಹದ್ದೇ ಸಮಸ್ಯೆಯನ್ನು ಎದುರಿಸಿದ ಯುವಕರಿಬ್ಬರು ಇತರರಿಗೆ ನೆರವಾಗುವ ಉದ್ದೇಶದಿಂದ ಬೆಂಗಳೂರಿನಲ್ಲಿ ಕೋವಿಡ್ ಸೋಂಕಿಗೆ ಒಳಗಾಗಿ ಕ್ವಾರಂಟೈನ್ ಮತ್ತು ಆಸ್ಪತ್ರೆಯಲ್ಲಿರುವ ಜನರಿಗೆ ಉಚಿತವಾಗಿ ಊಟದ ವ್ಯವಸ್ಥೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಇಂತಹ ಸಾಮಾಜಿಕ ಕೆಲಸದಲ್ಲಿ ತೊಡಗಿಸಿಕೊಂಡಿರುವವರು ಸಿದ್ದಾರ್ಥ್, ಅಂಕಿತ್ ಮತ್ತು ನಿಖಿಲ್. ಮೂಲತಃ ಪಶ್ಚಿಮ ಬಂಗಾಳದವರಾದ ಇವರು 20ಕ್ಕೂ ವರ್ಷಕ್ಕಿಂತ ಹೆಚ್ಚು ಕಾಲ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಬಾಲ್ಯ ಸ್ನೇಹಿತರಾದ ಈ ಮೂವರು ವೃತ್ತಿಯಲ್ಲಿ ಉದ್ಯಮಿಗಳಾಗಿದ್ದು ಬೆಂಗಳೂರಿನಲ್ಲಿ ಕ್ವಾರಂಟೈನ್ ಆಗಿರುವ ಜನರಿಗೆ ಮತ್ತು ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಉಚಿತವಾಗಿ ಮಧ್ಯಾಹ್ನ ಮತ್ತು ರಾತ್ರಿ ಊಟ ವಿತರಿಸುತ್ತಿದ್ದಾರೆ. ಊಟಕ್ಕೆ 3 ಚಪಾತಿ, ದಾಲ್, ತರಕಾರಿ ಪಲ್ಯ, ಅನ್ನ ಸಾಂಬರ್ ಮತ್ತು ಬಾಳೆಹಣ್ಣು ಇವರ ಮುಖ್ಯ ಮೆನು.

ಕೋವಿಡ್ ಸೋಂಕಿಗೆ ಒಳಗಾಗಿರುವ ಕ್ವಾರಂಟೈನ್‌ನಲ್ಲಿರುವ ಇವರು ಕೋವಿಡ್‌ನಿಂದ ಉಂಟಾಗುವ ಸಮಸ್ಯೆಗಳನ್ನು ಅನುಭವಿಸಿದ್ದಾರೆ. ಸೋಂಕಿತರು ಮೈಕೈ ನೋವು, ಬೇದಿ, ತಲೆನೋವು ಸೇರಿದಂತೆ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿರುತ್ತಾರೆ. ಈ ಸಮಯದಲ್ಲಿ ಅಡುಗೆ, ಊಟ ಮಾಡಿಕೊಳ್ಳುವುದು ಕಷ್ಟ ಸಾಧ್ಯ ಎನ್ನುವುದನ್ನು ಅರಿತ ಈ ಉದ್ಯಮಿಗಳು ಇದೇ ಸಮಯದಲ್ಲಿ ತಾವೇನಾದರೂ ಮಾಡಬೇಕೆಂಬ ಅಭಿಲಾಷೆಯೊಂದಿಗೆ ಬೆಂಗಳೂರಿನಲ್ಲಿ ವಾಸವಿರುವ ಕೋವಿಡ್ ಸೋಂಕಿಗೆ ಒಳಗಾಗಿರುವವರಿಗೆ ಈಗಾಗಲೇ ನೂರಾರು ಜನರಿಗೆ ಪೌಷ್ಟಿಕಾಂಶಯುಕ್ತ ಅಹಾರವನ್ನು ಉಚಿತವಾಗಿ ಸರಬರಾಜು ಮಾಡಿದ್ದಾರೆ.

ಈ ಯೋಜನೆ ಕುರಿತು ಮಾತನಾಡಿದ ಸಿದ್ದಾರ್ಥ್, “ನಾನು ಕೂಡ ಕೋವಿಡ್ ಸೋಂಕಿಗೆ ಒಳಗಾಗಿದ್ದೇನೆ. ಪ್ರಸ್ತುತ ಕ್ವಾರಂಟೈನ್‌ನಲ್ಲಿದ್ದು, ಇನ್ನೊಂದು ದಿನದಲ್ಲಿ ಹೊರಬರಲಿದ್ದೇನೆ. ಮೊದಲು ನನಗೂ ಮನೆ ಕೆಲಸ ಮಾಡಿಕೊಳ್ಳುವುದು ತೀರ ಕಷ್ಟ ಎನಿಸುತಿತ್ತು. ನನ್ನಂತೆಯೇ ನನ್ನ ಸ್ನೇಹಿತನಿಗೂ ಅನ್ನಿಸಿತು. ಮೂವರು ಮಾತನಾಡಿಕೊಂಡು ಇತರರಿಗೆ ನೆರವು ಮಾಡುತ್ತಿದ್ದೇವೆ. ನಾವಿಬ್ಬರು ಸ್ಟೆಗಿ ಎಂಬ ರೆಸ್ಟೋರೆಂಟ್ ನಡೆಸುತ್ತಿದ್ದೇವೆ. ನಮ್ಮ ರೆಸ್ಟೋರೆಂಟ್‌ನಲ್ಲಿ ಕೆಲಸ ಮಾಡುತ್ತಿರುವ ಹುಡುಗರು ಅಡುಗೆ ತಯಾರಿಸಿ ಪ್ಯಾಕ್ ಮಾಡುತ್ತಾರೆ. ಉಳಿದಂತೆ ಯಾರೆಲ್ಲರಿಗೂ ಊಟ ಬೇಕು ಎಂದು ತಿಳಿಸಿರುತ್ತಾರೋ ಅವರು ಯಾರನ್ನಾದರೂ ಕಳಿಸಿ ಅಥವಾ ಡೆನ್ಸೋ ಮೂಲಕ ಆರ್ಡರ್ ಮಾಡಿ ಊಟ ತರಿಸಿಕೊಳ್ಳುತ್ತಾರೆ” ಎಂದರು.

ಮೊನ್ನೆಯಷ್ಟೆ (ಗುರುವಾರ) ಅರಂಭವಾಗಿರುವ ಊಟ ವಿತರಣೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಮಧ್ಯಾಹ್ನ ಸುಮಾರು 165 ಜನರಿಗೆ ಊಟ ವಿತರಿಸಿದ್ದಾರೆ. ಅಲ್ಲಿಂದ ಪ್ರತಿ ವೇಳೆ ಊಟ ಬೇಕು ಎಂದು ಸುಮಾರು 500 ಜನರು ಫೋನ್ ಕರೆಗಳು ಬರುತ್ತಿದ್ದು ಅವರಿಗೆ ಒದಗಿಸುತ್ತಿದ್ಧೇವೆ, ಫೋನ್‌ಗಳನ್ನು ಸ್ವೀಕರಿಸದಷ್ಟು ಕರೆಗಳು ಬರುತ್ತಿವೆ ಎನ್ನುತ್ತಾರೆ. ಆಸ್ಪತ್ರೆಗಳಿಗೂ ಊಟ ತಲುಪಿಸಲು ಮುಂದಾಗಿರುವ ಅವರು, ಕೊರೊನಾಗೆ ಭಯ ಪಡದಿರಿ. ಮನೆಯಲ್ಲೇ ಸೂಕ್ತ ಚಿಕಿತ್ಸೆ ಪಡೆಯಿರಿ, ವಿಶ್ರಾಂತಿ ಪಡೆಯುವುದೇ ಸೂಕ್ತವಾದ ಚಿಕಿತ್ಸೆ ಎನ್ನುತ್ತಾರೆ ಸಿದ್ದಾರ್ಥ್.

ಸೋಂಕಿತರಾಗಿ ಯಾರಿಗಾದರೂ ಆಹಾರದ ಅಗತ್ಯವಿದ್ದರೆ ಈ ವಿಧಾನದ ಮೂಲಕ ಊಟ ತರಿಸಿಕೊಳ್ಳಬಹುದು.

ಮಧ್ಯಾಹ್ನದ ಊಟ ಬೇಕಿದ್ದರೆ ಬೆಳಿಗ್ಗೆ 10 ಗಂಟೆ ಒಳಗೆ ಫೋನ್ ಮೂಲಕ ಅಥವಾ ವಾಟ್ಸಾಪ್ ಮಾಡುವ ಮೂಲಕ ಆರ್ಡರ್ ಮಾಡಬೇಕು. ಮಧ್ಯಾಹ್ನ 12:30 ರಿಂದ 2:00 ಗಂಟೆಯೊಳಗೆ ಊಟ ತೆಗೆದುಕೊಂಡು ಹೋಗಲು ವ್ಯವಸ್ಥೆ ಮಾಡಿಕೊಳ್ಳಬೇಕು. (ಜಯನಗರದ ಸ್ಟೆಗಿ ರೆಸ್ಟೋರೆಂಟ್‌ನಿಂದ ನೇರವಾಗಿ ತೆಗೆದುಕೊಂಡು ಹೋಗಬಹುದು ಅಥವಾ ಡೆಂಜೋ ಅಥವಾ ಸ್ವಿಗ್ಗಿ ಸೇರಿದಂತೆ ಇತರ ಆಹಾರ ಸರಬರಾಜು ಆಪ್ ಗಳ ಮೂಲಕ ಆರ್ಡರ್ ಮಾಡಬಹುದು. ಅದಕ್ಕೆ ಹಣ ಅವರೇ ಭರಸಿಬೇಕು) ಅದೇ ರೀತಿ ರಾತ್ರಿ ಊಟಕ್ಕೆ ಸಂಜೆ 5 ಗಂಟೆಯೊಳಗೆ ಆರ್ಡರ್ ಮಾಡಬೇಕು. ರಾತ್ರಿ 7 ರಿಂದ 8:30ರ ಒಳಗೆ ಊಟ ತರಿಸಿಕೊಳ್ಳಲು ವ್ಯವಸ್ಥೆ ಮಾಡಿಕೊಳ್ಳಬೇಕು. ಅಗತ್ಯವಿದ್ದವರು ಈ ನಂಬರ್‌ಗಳಿಗೆ ಸಂಪರ್ಕಿಸಿ. ಸಿದ್ಧಾರ್ಥ್: 9986694781, ನಿಖಿಲ್: 9663313417 ಅಂಕಿತ್: 8553389893

ಈ ಸಂಕಷ್ಟದ ಸಮಯದಲ್ಲಿ ಇವರ ಈ ಮಾನವೀಯ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ. ಕೈಲಾಗದು ಎಂದು ಕುಳಿತುಕೊಳ್ಳುವ ಬದಲು ಮನಸ್ಸು ಮಾಡಿದರೆ ಹೇಗೆಲ್ಲಾ ನೆರವಾಗಬಹುದು ಎಂಬುದಕ್ಕೆ ಈ ಯುವ ಉದ್ಯಮಿಗಳು ಮಾದರಿಯಾಗಿದ್ದಾರೆ. ಈ ಕುರಿತು ನಿಮ್ಮಗಳ ಫೋಟೊ ಕೊಡಿ ನಮ್ಮ ವರದಿಯಲ್ಲಿ ಪ್ರಕಟಿಸುತ್ತೇವೆ ಎಂದಾಗ ಅವರು ಪ್ರೀತಿಯಿಂದಲೇ ಅದನ್ನು ನಿರಾಕರಿಸಿದ್ದಾರೆ. ‘ಇದು ನಮ್ಮ ಜವಾಬ್ದಾರಿ, ಇದರಲ್ಲಿ ನಮ್ಮ ಫೋಟೊ ಹಾಕಿಕೊಳ್ಳುವ ಅಗತ್ಯವಿಲ್ಲ, ನಮ್ಮ ರೆಸ್ಟೋರೆಂಟ್‌ನಲ್ಲಿ ಇದಕ್ಕಾಗಿ ದುಡಿಯುತ್ತಿರುವ ಕಾರ್ಮಿಕರ ಫೋಟೊ ಹಾಕಿ” ಎಂದು ಹೇಳುವ ಮೂಲಕ ತಮ್ಮ ದೊಡ್ಡತನ ಮೆರೆದಿದ್ದಾರೆ. ಇವರಿಗೆ ನಮ್ಮ ಪರವಾಗಿ ಒಂದು ಸಲಾಂ…


ಇದನ್ನೂ ಓದಿ: ರಂಜಾನ್ ಉಪವಾಸ ಮುರಿದು ಪ್ಲಾಸ್ಮಾ ದಾನಮಾಡಿ ಕೊರೊನಾಪೀಡಿತ ಮಹಿಳೆಯರಿಬ್ಬರ ಜೀವ ಉಳಿಸಿದ ಮನ್ಸೂರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....