Homeಮುಖಪುಟಉತ್ತರ ಪ್ರದೇಶ: ಕೆಲಸ ಹುಡುಕಿ ಬಂದ ಯುವತಿಯನ್ನು ಕಂಬಕ್ಕೆ ಕಟ್ಟಿ ಥಳಿಸಿದ ದುಷ್ಕರ್ಮಿಗಳು

ಉತ್ತರ ಪ್ರದೇಶ: ಕೆಲಸ ಹುಡುಕಿ ಬಂದ ಯುವತಿಯನ್ನು ಕಂಬಕ್ಕೆ ಕಟ್ಟಿ ಥಳಿಸಿದ ದುಷ್ಕರ್ಮಿಗಳು

- Advertisement -
- Advertisement -

ಕೆಲಸ ಹುಡುಕಿಕೊಂಡು ಉತ್ತರ ಪ್ರದೇಶದ ಬರೇಲಿಗೆ ಬಂದಿದ್ದ ನೇಪಾಳ ಮೂಲದ ಯುವತಿಯನ್ನು ಕಳ್ಳತನದ ಶಂಕೆ ಮೇಲೆ ಕಟ್ಟಿ ಹಾಕಿ ಥಳಿಸಿದ ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ನೇಪಾಳದ ಪೋಖರಾ ಜಿಲ್ಲೆಯ ಸುಶ್ಮಿತಾ ಸರು ಮಗರ್ ಅಲಿಯಾಸ್ ಕಾಜಲ್ ಹಲ್ಲೆಗೊಳಗಾದ ಯುವತಿ. ಪ್ರಸ್ತುತ ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಗಳು ಹೇಳಿವೆ.

ಪೊಲೀಸರ ಪ್ರಕಾರ, ಶುಕ್ರವಾರ ರಾತ್ರಿ ಯುವತಿ ಬರದಾರಿಯಲ್ಲಿರುವ ಪರಿಚಯಸ್ಥ ವಿನಯ್ ಗಂಗ್ವಾರ್ ಎಂಬವರ ಮನೆಯಲ್ಲಿ ತಂಗಿದ್ದಾಗ ಘಟನೆ ನಡೆದಿದೆ.

ಬೆಳಗಿನ ಜಾವ 1 ಗಂಟೆ ಸುಮಾರಿಗೆ ಯುವತಿ ಫೋನ್‌ನಲ್ಲಿ ಮಾತನಾಡುತ್ತಾ ಮನೆಯ ಟೆರೇಸ್ ಮೇಲೆ ಹೋಗಿದ್ದರು. ಈ ವೇಳೆ ಸ್ಥಳೀಯರು ಆಕೆಯನ್ನು ಕಳ್ಳಿ ಎಂದು ಶಂಕಿಸಿ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದಾರೆ.

ಯುವತಿ ಟೆರೇಸ್ ಮೇಲೆ ನಿಂತಿದ್ದಾಗ ಕೆಲ ವ್ಯಕ್ತಿಗಳು ಆಕೆಯ ಕಡೆ ಟಾರ್ಚ್ ಹಾಕಿ ಕಳ್ಳಿ ಎಂದು ಕೂಗಿದ್ದರು. ಧಾವಿಸಿ ಬಂದ ಸ್ಥಳೀಯರೆಲ್ಲ ಆಕೆಯ ಕಡೆಗೆ ಓಡಿ ಹೋಗಿದ್ದಾರೆ. ಈ ವೇಳೆ ಯುವತಿ ಟೆರೇಸ್ ಬಾಗಿಲು ತೆರೆದು ಮನೆಯೊಳಗೆ ಹೋಗಲು ನೋಡಿದ್ದರು. ಆದರೆ, ಅದು ಸಾಧ್ಯವಾಗಿಲ್ಲ. ಹಾಗಾಗಿ, ಹೆದರಿದ ಯುವತಿ ಟೆರೇಸ್‌ನಿಂದ ಕೆಳಗೆ ಹಾರಿದ್ದರು. ಈ ವೇಳೆ ಆಕೆಯನ್ನು ಬೆನ್ನಟ್ಟಿದ ಸ್ಥಳೀಯರು ಕಂಬಕ್ಕೆ ಕಟ್ಟಿ ಹಾಕಿ ಕೋಲಿನಿಂದ ಥಳಿಸಿದ್ದಾರೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅದರಲ್ಲಿ ಯುವತಿ ಕೈಮುಗಿದು “ನಾನು ಕಳ್ಳಿ ಅಲ್ಲ, ಪೊಲೀಸರನ್ನು ಕರೆಯಿರಿ” ಎಂದು ಪದೇ ಪದೇ ಹೇಳುತ್ತಿರುವುದು ಮತ್ತು ಅದನ್ನು ಕೇಳಿಸಿಕೊಳ್ಳದೆ ಸ್ಥಳೀಯರ ಗುಂಪು ಆಕೆಗೆ ಥಳಿಸುವುದನ್ನು ನೋಡಬಹುದು.

ವಿಡಿಯೋ ಸಾಕ್ಷ್ಯ ಮತ್ತು ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಬರದಾರಿಯ ನಿವಾಸಿಗಳಾದ ಗೌರವ್ ಸಕ್ಸೇನಾ, ಶಿವಂ ಸಕ್ಸೇನಾ, ಅಮನ್ ಸಕ್ಸೇನಾ ಮತ್ತು ಅರುಣ್ ಸೈನಿ ಎಂಬ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಮಾನುಷ್ ಪರೀಕ್ ತಿಳಿಸಿದ್ದಾರೆ.

ಉಳಿದ ಆರೋಪಿಗಳನ್ನು ಗುರುತಿಸಿ ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ. ತಾನು ನೋಯ್ಡಾದಲ್ಲಿ ಕೆಲಸ ಮಾಡುತ್ತಿದ್ದೆ. ಆದರೆ, ಕೆಲಸ ಕಳೆದುಕೊಂಡ ಕಾರಣ ಪರಿಚಿತ ವ್ಯಕ್ತಿಯ ಮೂಲಕ ಕೆಲಸ ಹುಡುಕಿಕೊಂಡು ಬರೇಲಿಗೆ ಬಂದಿದ್ದೆ ಎಂದು ಸಂತ್ರಸ್ತೆ ಹೇಳಿದ್ದಾರೆ. ಹಲ್ಲೆಯಿಂದ ಆಕೆಯ ಎರಡು ಹಲ್ಲುಗಳು ಮುರಿದಿವೆ. ಕಾಲಿಗೆ ಗಾಯಗಳಾಗಿವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ವಿವರಿಸಿದ್ದಾರೆ.

ಕಾನೂನನ್ನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಭರವಸೆ ನೀಡಿದ್ದಾರೆ.

ದುಷ್ಕರ್ಮಿಗಳು ಅಪಹರಿಸಿ ಬೆಂಕಿ ಹಚ್ಚಿದ್ದ 15 ವರ್ಷದ ಬಾಲಕಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...