Homeಕರ್ನಾಟಕಬೆಂಗಳೂರು: ಪೋಷಕರು ಫೋಟೋಶೂಟ್‌ಗೆ ಹೋಗಬೇಡ ಎಂದಿದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ!

ಬೆಂಗಳೂರು: ಪೋಷಕರು ಫೋಟೋಶೂಟ್‌ಗೆ ಹೋಗಬೇಡ ಎಂದಿದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ!

- Advertisement -
- Advertisement -

ಬೆಂಗಳೂರಿನಲ್ಲಿ ಎಲ್ಲರೂ ಹೊಸ ವರ್ಷದ ಸಂಭ್ರಮದಲ್ಲಿದ್ದರೆ, ವಿದ್ಯಾರ್ಥಿನಿಯೋರ್ವಳು ಮಾಲ್‌ನಲ್ಲಿ ಹೊಸ ವರ್ಷದ ಮುನ್ನಾದಿನ ಫೋಟೋಶೂಟ್ ಮಾಡಲು ಪೋಷಕರು ಅನುಮತಿ ಕೊಟ್ಟಿಲ್ಲ ಎಂದು ಮನನೊಂದು  ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರಿನ ಸುಧಾಮನಗರ ನಿವಾಸಿ ಬಿಬಿಎ ವಿದ್ಯಾರ್ಥಿನಿ ವರ್ಷಿಣಿ(21) ಭಾನುವಾರ ಬೆಳಗ್ಗೆ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ವರ್ಷಿಣಿ ಫೋಟೋಗ್ರಫಿ ಕೋರ್ಸ್ ಮುಗಿಸಿದ್ದು, ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದಳು. ಮಾಲ್‌ನಲ್ಲಿ ಪೋಟೋಶೂಟ್‌ ಇದೆ ನಾನು ಹೋಗುತ್ತೇನೆ ಎಂದು ಪೋಷಕರಲ್ಲಿ ಹೇಳಿದ್ದಾಳೆ. ಇದಕ್ಕೆ ಪೋಷಕರು ಅನುಮತಿ ಕೊಟ್ಟಿರಲಿಲ್ಲ. ಮಾಲ್​ಗೆ ಹೋಗಬೇಡ ಎಂದು ಬುದ್ಧಿವಾದ ಹೇಳಿದ್ದರು. ಇದರಿಂದ ನೊಂದ ವರ್ಷಿಣಿ ಮನೆಯ ಕೋಣೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಈ ಕುರಿತು ಪೊಲೀಸ್‌ ಅಧಿಕಾರಿಯೋರ್ವರು ಮಾಹಿತಿ ನೀಡಿದ್ದು, ಹೊಸ ವರ್ಷದ ಮುನ್ನಾ ದಿನದಂದು ಮಾಲ್‌ನಲ್ಲಿ ಫೋಟೋಶೂಟ್ ಮಾಡಲು ವರ್ಷಿಣಿ ಪೋಷಕರ ಜೊತೆ ಅನುಮತಿ ಕೇಳಿದ್ದಾರೆ. ಪೋಷಕರು ಅನುಮತಿ ನಿರಾಕರಿಸಿದ ನಂತರ ಆಕೆ ತನ್ನ ಕೋಣೆಗೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ನಮಗೆ ಯಾವುದೇ ಸೂಸೈಡ್ ನೋಟ್ ಸಿಕ್ಕಿಲ್ಲ. ಆದರೆ ಘಟನೆಯ ಮೊದಲು ಅವರು ಯಾರಿಗಾದರೂ ಸಂದೇಶ ಕಳುಹಿಸಿದ್ದಾರಾ ಎಂದು ನೋಡಲು ಅವರ ಮೊಬೈಲ್ ಫೋನ್ ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಈ ಕುರಿತು ಪೋಷಕರ ದೂರಿನ ಮೇರೆಗೆ ವಿಲ್ಸನ್‌ ಗಾರ್ಡನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಡಿಸಿಪಿ ಶೇಖರ್ ಎಚ್‌ಟಿ ಈ ಕುರಿತು ಮಾದ್ಯಮಗಳ ಜೊತೆ ಮಾತನಾಡಿದ್ದು, ವರ್ಷಿಣಿ ಅವರ ತಂದೆ ಪೊಲೀಸ್ ದೂರು ದಾಖಲಿಸಿದ್ದಾರೆ ಮತ್ತು ಮರಣೋತ್ತರ ಪರೀಕ್ಷೆಯ ನಂತರ ಆಕೆಯ ದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಈ ಕುರಿತು ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

 

ಇದನ್ನು ಓದಿ: ನರೇಗಾ ಯೋಜನೆಯಡಿ ಆಧಾರ್ ಆಧಾರಿತ ಪಾವತಿ ವ್ಯವಸ್ಥೆ: ಮೋದಿಯ ‘ಹೊಸ ವರ್ಷದ ಕ್ರೂರ ಉಡುಗೊರೆ’ ಎಂದ ಕಾಂಗ್ರೆಸ್‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...