Homeಕರ್ನಾಟಕಬೆಂಗಳೂರಿನಲ್ಲಿ ನಾಲ್ವರು ಕಾಮುಕರಿಂದ ಯುವತಿಯ ಮೇಲೆ ಗ್ಯಾಂಗ್ ರೇಪ್; ಆರೋಪಿಗಳ ಬಂಧನ

ಬೆಂಗಳೂರಿನಲ್ಲಿ ನಾಲ್ವರು ಕಾಮುಕರಿಂದ ಯುವತಿಯ ಮೇಲೆ ಗ್ಯಾಂಗ್ ರೇಪ್; ಆರೋಪಿಗಳ ಬಂಧನ

- Advertisement -
- Advertisement -

ಪಾರ್ಕ್​ನಲ್ಲಿ ಸ್ನೇಹಿತನ ಜೊತೆ ಕುಳಿತಿದ್ದ ಯುವತಿಯನ್ನು ನಾಲ್ವರು ಕಾಮುಕರು ಎಳೆದೊಯ್ದು ಚಲಿಸುತ್ತಿರುವ ಕಾರ್‌ನಲ್ಲಿಯೇ ಸಾಮೂಹಿಕ ಅತ್ಯಾಚಾರ ನಡೆಸಿದ ಪೈಶಾಚಿಕ ಕೃತ್ಯ ನಗರದ ಕೋರಮಂಗಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಈ ಘಟನೆ ಮಾರ್ಚ್ 25ರ ರಾತ್ರಿ 10 ಗಂಟೆಗೆ ಘಟನೆ ನಡೆದಿದೆ. ಸರ್ಕಾರಿ ನೌಕರರು ಇರುವ ನ್ಯಾಷನಲ್ ಗೇಮ್ಸ್ ವಿಲೇಜ್​​​​ ಪಾರ್ಕ್​ನಲ್ಲಿ ಯುವತಿ ಹಾಗೂ ಆಕೆಯ ಸ್ನೇಹಿತ ಕುಳಿತುಕೊಂಡಿದ್ದರು. ಈ ವೇಳೆ ಅಲ್ಲಿಗೆ ಬಂದ ನಾಲ್ವರು ಯುವಕರು ಆಕೆಯ ಸ್ನೇಹಿತನನ್ನು ಬೆದರಿಸಿ, ಯುವತಿಯನ್ನು ಎಳೆದೊಯ್ದು ಚಲಿಸುತ್ತಿದ್ದ ಕಾರಿನಲ್ಲಿಯೇ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ.

ಈ ಕುರಿತು ಯುವತಿ ಪೊಲೀಸ್​ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ಆರೋಪಿಗಳನ್ನ ಬಂಧಿಸಿದ್ದಾರೆ.

ಆರೋಪಿಗಳಾದ ಸತೀಶ್, ವಿಜಯ್, ಶ್ರೀಧರ್, ಕಿರಣ್ ಎಂಬುವವರು ಈ ಕೃತ್ಯವೆಸಗಿದ್ದಾರೆ ಎಂದು ಹೇಳಲಾಗಿದೆ. ಆರೋಪಿಗಳ ಪೈಕಿ ಇಬ್ಬರು ಆಫಿಸ್ ಬಾಯ್, ಒಬ್ಬ ಕಾಲ್‌ ಸೆಂಟರ್ ಉದ್ಯೋಗಿ, ಮತ್ತೊಬ್ಬ ಇಲೆಸ್ಟ್ರಿಷಿಯನ್ ವೃತ್ತಿ ಮಾಡುತ್ತಿದ್ದಾನೆ.

ಇದನ್ನೂ ಓದಿ: ಎರಡನೇ ರೇಪ್ ಕೇಸ್‌ನಲ್ಲೂ ಅಸಾರಾಂಗೆ ಜೀವಾವಧಿ ಶಿಕ್ಷೆ ಘೋಷಣೆ

ಈ ಕಾಮುಕರು ಕೆಎ 01 ಎಂಬಿ 6169 ಸಂಖ್ಯೆಯ ಕಾರಿನಲ್ಲಿ ಕಿಡ್ನ್ಯಾಪ್ ಮಾಡಿ ದೊಮ್ಮಲೂರು, ಇಂದಿರಾನಗರ, ಆನೇಕಲ್, ನೈಸ್ ರಸ್ತೆ ಸೇರಿದಂತೆ ಹಲವೆಡೆ ಕಾರಿನಲ್ಲಿ ಸುತ್ತಾಟ ನಡೆಸಿ ಕೃತ್ಯವೆಸಗಿದ್ದಾರೆ. ಬಳಿಕ ಮಾರ್ಚ್ 26ರ ಬೆಳಗ್ಗೆ 4 ಗಂಟೆಗೆ ಯುವತಿಯನ್ನು ಮನೆ ಬಳಿ ಬಿಟ್ಟು ಪರಾರಿಯಾಗಿದ್ದರು.

ನಂತರ ಯುವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಅದೇ ದಿನ ಪೊಲೀಸರು ದೂರು ನೀಡಿದ್ದಳು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಇದೀಗ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಡಿಪಿಸಿ (ಆಗ್ನೇಯ) ಸಿ.ಕೆ.ಬಾಬಾ ಅವರು, ”ಪ್ರಕರಣ ದಾಖಲಾದ ಎಂಟು ಗಂಟೆಗಳ ನಂತರ ಎಲ್ಲಾ ನಾಲ್ವರು ಆರೋಪಿಗಳನ್ನು ಬಂಧಿಸಲಾಯಿತು. ನಾವು ವೈದ್ಯಕೀಯ ವರದಿಗಳಿಗಾಗಿ ಕಾಯುತ್ತಿದ್ದೇವೆ ಮತ್ತು ತನಿಖೆ ಇನ್ನೂ ನಡೆಯುತ್ತಿರುವುದರಿಂದ ಹೆಚ್ಚಿನ ವಿವರಗಳನ್ನು ನೀಡಲು ಸಾಧ್ಯವಿಲ್ಲ” ಎಂದು ತಿಳಿಸಿದ್ದಾರೆ.

ಸಂತ್ರಸ್ತ ಯುವತಿಯು ಕೂಡ ಅದೇ ಪ್ರದೇಶದ ನಿವಾಸಿಯಾಗಿದ್ದು, ಆರೋಪಿಗಳು ಆಕೆಗೆ ಪರಿಚಯಸ್ಥರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇನ್ನು ಈ ಘಟನೆಯಲ್ಲಿ ಆಕೆಯ ಪುರುಷ ಸ್ನೇಹಿತನ ಪಾತ್ರವಿರುವ ಸಾಧ್ಯತೆ ಇಲ್ಲ ಎನ್ನಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...