Homeಕರ್ನಾಟಕಬೆಂಗಳೂರಿನಲ್ಲಿ ನಾಲ್ವರು ಕಾಮುಕರಿಂದ ಯುವತಿಯ ಮೇಲೆ ಗ್ಯಾಂಗ್ ರೇಪ್; ಆರೋಪಿಗಳ ಬಂಧನ

ಬೆಂಗಳೂರಿನಲ್ಲಿ ನಾಲ್ವರು ಕಾಮುಕರಿಂದ ಯುವತಿಯ ಮೇಲೆ ಗ್ಯಾಂಗ್ ರೇಪ್; ಆರೋಪಿಗಳ ಬಂಧನ

- Advertisement -
- Advertisement -

ಪಾರ್ಕ್​ನಲ್ಲಿ ಸ್ನೇಹಿತನ ಜೊತೆ ಕುಳಿತಿದ್ದ ಯುವತಿಯನ್ನು ನಾಲ್ವರು ಕಾಮುಕರು ಎಳೆದೊಯ್ದು ಚಲಿಸುತ್ತಿರುವ ಕಾರ್‌ನಲ್ಲಿಯೇ ಸಾಮೂಹಿಕ ಅತ್ಯಾಚಾರ ನಡೆಸಿದ ಪೈಶಾಚಿಕ ಕೃತ್ಯ ನಗರದ ಕೋರಮಂಗಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಈ ಘಟನೆ ಮಾರ್ಚ್ 25ರ ರಾತ್ರಿ 10 ಗಂಟೆಗೆ ಘಟನೆ ನಡೆದಿದೆ. ಸರ್ಕಾರಿ ನೌಕರರು ಇರುವ ನ್ಯಾಷನಲ್ ಗೇಮ್ಸ್ ವಿಲೇಜ್​​​​ ಪಾರ್ಕ್​ನಲ್ಲಿ ಯುವತಿ ಹಾಗೂ ಆಕೆಯ ಸ್ನೇಹಿತ ಕುಳಿತುಕೊಂಡಿದ್ದರು. ಈ ವೇಳೆ ಅಲ್ಲಿಗೆ ಬಂದ ನಾಲ್ವರು ಯುವಕರು ಆಕೆಯ ಸ್ನೇಹಿತನನ್ನು ಬೆದರಿಸಿ, ಯುವತಿಯನ್ನು ಎಳೆದೊಯ್ದು ಚಲಿಸುತ್ತಿದ್ದ ಕಾರಿನಲ್ಲಿಯೇ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ.

ಈ ಕುರಿತು ಯುವತಿ ಪೊಲೀಸ್​ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ಆರೋಪಿಗಳನ್ನ ಬಂಧಿಸಿದ್ದಾರೆ.

ಆರೋಪಿಗಳಾದ ಸತೀಶ್, ವಿಜಯ್, ಶ್ರೀಧರ್, ಕಿರಣ್ ಎಂಬುವವರು ಈ ಕೃತ್ಯವೆಸಗಿದ್ದಾರೆ ಎಂದು ಹೇಳಲಾಗಿದೆ. ಆರೋಪಿಗಳ ಪೈಕಿ ಇಬ್ಬರು ಆಫಿಸ್ ಬಾಯ್, ಒಬ್ಬ ಕಾಲ್‌ ಸೆಂಟರ್ ಉದ್ಯೋಗಿ, ಮತ್ತೊಬ್ಬ ಇಲೆಸ್ಟ್ರಿಷಿಯನ್ ವೃತ್ತಿ ಮಾಡುತ್ತಿದ್ದಾನೆ.

ಇದನ್ನೂ ಓದಿ: ಎರಡನೇ ರೇಪ್ ಕೇಸ್‌ನಲ್ಲೂ ಅಸಾರಾಂಗೆ ಜೀವಾವಧಿ ಶಿಕ್ಷೆ ಘೋಷಣೆ

ಈ ಕಾಮುಕರು ಕೆಎ 01 ಎಂಬಿ 6169 ಸಂಖ್ಯೆಯ ಕಾರಿನಲ್ಲಿ ಕಿಡ್ನ್ಯಾಪ್ ಮಾಡಿ ದೊಮ್ಮಲೂರು, ಇಂದಿರಾನಗರ, ಆನೇಕಲ್, ನೈಸ್ ರಸ್ತೆ ಸೇರಿದಂತೆ ಹಲವೆಡೆ ಕಾರಿನಲ್ಲಿ ಸುತ್ತಾಟ ನಡೆಸಿ ಕೃತ್ಯವೆಸಗಿದ್ದಾರೆ. ಬಳಿಕ ಮಾರ್ಚ್ 26ರ ಬೆಳಗ್ಗೆ 4 ಗಂಟೆಗೆ ಯುವತಿಯನ್ನು ಮನೆ ಬಳಿ ಬಿಟ್ಟು ಪರಾರಿಯಾಗಿದ್ದರು.

ನಂತರ ಯುವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಅದೇ ದಿನ ಪೊಲೀಸರು ದೂರು ನೀಡಿದ್ದಳು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಇದೀಗ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಡಿಪಿಸಿ (ಆಗ್ನೇಯ) ಸಿ.ಕೆ.ಬಾಬಾ ಅವರು, ”ಪ್ರಕರಣ ದಾಖಲಾದ ಎಂಟು ಗಂಟೆಗಳ ನಂತರ ಎಲ್ಲಾ ನಾಲ್ವರು ಆರೋಪಿಗಳನ್ನು ಬಂಧಿಸಲಾಯಿತು. ನಾವು ವೈದ್ಯಕೀಯ ವರದಿಗಳಿಗಾಗಿ ಕಾಯುತ್ತಿದ್ದೇವೆ ಮತ್ತು ತನಿಖೆ ಇನ್ನೂ ನಡೆಯುತ್ತಿರುವುದರಿಂದ ಹೆಚ್ಚಿನ ವಿವರಗಳನ್ನು ನೀಡಲು ಸಾಧ್ಯವಿಲ್ಲ” ಎಂದು ತಿಳಿಸಿದ್ದಾರೆ.

ಸಂತ್ರಸ್ತ ಯುವತಿಯು ಕೂಡ ಅದೇ ಪ್ರದೇಶದ ನಿವಾಸಿಯಾಗಿದ್ದು, ಆರೋಪಿಗಳು ಆಕೆಗೆ ಪರಿಚಯಸ್ಥರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇನ್ನು ಈ ಘಟನೆಯಲ್ಲಿ ಆಕೆಯ ಪುರುಷ ಸ್ನೇಹಿತನ ಪಾತ್ರವಿರುವ ಸಾಧ್ಯತೆ ಇಲ್ಲ ಎನ್ನಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...