Homeಮುಖಪುಟಗೆಳೆಯನಿಂದ ಬಾಲಕಿಯ ಕೊಲೆ; ಘಟನೆ ಕಣ್ಮುಂದೆ ನಡೆದರೂ ನಿಲ್ಲಿಸದ ಜನತೆ

ಗೆಳೆಯನಿಂದ ಬಾಲಕಿಯ ಕೊಲೆ; ಘಟನೆ ಕಣ್ಮುಂದೆ ನಡೆದರೂ ನಿಲ್ಲಿಸದ ಜನತೆ

- Advertisement -
- Advertisement -

ಒಬ್ಬ ಬಾಲಕಿಗೆ ಅನೇಕ ಬಾರಿ ಇರಿದು, ಕಲ್ಲಿನ ಚಪ್ಪಡಿಯಿಂದ ಹೊಡೆದು ಕೊಲ್ಲುತ್ತಿದ್ದರೂ ಸುತ್ತಲಿದ್ದ ಜನರು ಏನನ್ನೂ ಮಾಡದೆ ನೋಡುತ್ತಾ ನಿಂತಿದ್ದ ಘಟನೆ ಕ್ಯಾಮೆರಾದಲ್ಲಿ ವರದಿಯಾಗಿದೆ.

ಉತ್ತರ ದೆಹಲಿಯ ರೋಹಿಣಿಯಲ್ಲಿ ಇದು ವರದಿಯಾಗಿದೆ. “ಜನರು ಅಲ್ಲಿಯೇ ಹಾದು ಹೋಗುತ್ತಾರೆ, ಅದನ್ನು ನೋಡುತ್ತಿದ್ದರೂ ಘಟನೆಯನ್ನು ನಿಲ್ಲಿಸಲು ಯಾವುದೇ ಕ್ರಮ ಜರುಗಿಸಲಿಲ್ಲ” ಎಂದು ಎನ್‌ಡಿಟಿವಿ ವರದಿ ಮಾಡಿದೆ.

16 ವರ್ಷದ ಬಾಲಕಿ ನಡೆದು ಹೋಗುತ್ತಿದ್ದಾಗ ದಾಳಿಯಾಯಿತು. ಇದು ಉತ್ತರ ದೆಹಲಿಯ ರೋಹಿಣಿಯಲ್ಲಿ ಭದ್ರತಾ ಕ್ಯಾಮರಾದಲ್ಲಿ ಸೆರೆಯಾಗಿದೆ. ದೃಶ್ಯಗಳು ಅಸ್ಪಷ್ಟವಾಗಿಯೂ, ಗೊಂದಲಕಾರಿಯಾಗಿಯೂ ಗೋಚರಿಸಿವೆ.

ಜನನಿಬಿಡ ಪ್ರದೇಶದಲ್ಲಿಯೇ ಆಕೆಯ ಗೆಳೆಯ ಸಾಹಿಲ್‌ ಕೊಂದಿದ್ದಾನೆ. ಆದರೆ ಯಾರೂ ಆಕೆಯನ್ನು ಉಳಿಸಲು ಸಾಧ್ಯವಾಗಲಿಲ್ಲ. ಇಂದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಹಿಂದಿನ ದಿನ ಸಂಜೆ ಇಬ್ಬರೂ ಜಗಳವಾಡಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಭಾನುವಾರ ಸಂಜೆ ಸಾಹಿಲ್‌, ಬಾಲಕಿಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಪದೇ ಪದೇ ಇರಿದಿದ್ದಾನೆ. ಒಂದು ಹಂತದಲ್ಲಿ, ಚಾಕು ಸಿಕ್ಕಿಹಾಕಿಕೊಂಡಾಗ ಕೊಲೆಗಾರ ಅದನ್ನು ಮತ್ತೆ ತೆಗೆದು ಚುಚ್ಚಿದ್ದಾನೆ. ನಂತರ ಆತ ಕಲ್ಲಿನ ಚಪ್ಪಡಿ ಎತ್ತಿಕೊಂಡು ಹೋಗಿ ಆಕೆಗೆ ಪದೇ ಪದೇ ಹೊಡೆದಿರುವುದು ವಿಡಿಯೊದಲ್ಲಿ ಸೆರೆಯಾಗಿದೆ.

ಸಂತ್ರಸ್ತ ಬಾಲಕಿ ತನ್ನ ಸ್ನೇಹಿತನ ಮಗನ ಹುಟ್ಟುಹಬ್ಬಕ್ಕೆ ತೆರಳುತ್ತಿದ್ದಾಗ ಹಿಂದಿನಿಂದ ಬಂದು ಕೃತ್ಯ ಎಸಗಲಾಗಿದೆ.

“ಬಾಲಕಿ ಮತ್ತು ಆರೋಪಿ ಇಬ್ಬರೂ ರಿಲೇಷನ್‌ ಶಿಪ್‌ನಲ್ಲಿ ಇದ್ದರು. ಆದರೆ ನಿನ್ನೆ ಇಬ್ಬರೂ ಜಗಳವಾಡಿದ್ದರು. ಇಬ್ಬರೂ ತನ್ನ ಸ್ನೇಹಿತನ ಮಗನ ಹುಟ್ಟುಹಬ್ಬಕ್ಕೆ ಹಾಜರಾಗಲು ಯೋಜಿಸಿದ್ದರು. ಆ ವ್ಯಕ್ತಿ ಆಕೆಯನ್ನು ಹಿಂಬಾಲಿಸಿ ಕೃತ್ಯ ಎಸಗಿದ್ದಾನೆ” ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿರಿ: ಕುಸ್ತಿಪಟುಗಳಿಗೆ ಸವಾಲಾಗಿರುವ ‘ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌’ ಯಾರು? ಆತನ ಹಿನ್ನಲೆ, ಪ್ರಭಾವವೇನು?

ಸ್ಥಳೀಯರಿಂದ ಮಾಹಿತಿ ಪಡೆದು ಎಚ್ಚೆತ್ತ ಪೊಲೀಸರು ಸ್ಥಳಕ್ಕೆ ಆಗಮಿಸಿ ಬಾಲಕಿಯ ಶವ ಹಾಗೂ ಸುತ್ತ ರಕ್ತ ಮಡುಗಟ್ಟಿರುವುದನ್ನು ಪತ್ತೆ ಹಚ್ಚಿದ್ದಾರೆ. ಪೊಲೀಸ್ ತಂಡಗಳು ಇನ್ನುಳಿದ ಹಂತಕರಿಗಾಗಿ ಶೋಧ ನಡೆಸುತ್ತಿವೆ.

ಘಟನೆಯ ಕುರಿತು ಪೊಲೀಸರಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ದೆಹಲಿ ಮಹಿಳಾ ಸಮಿತಿ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಹೇಳಿದ್ದಾರೆ.

“ಅಪರಾಧವನ್ನು ಸಿಸಿಟಿವಿಯಲ್ಲಿ ಸೆರೆಹಿಡಿಯಲಾಗಿದೆ. ಹಲವಾರು ಜನರು ಇದನ್ನು ನೋಡಿದ್ದಾರೆ, ಆದರೆ ಗಮನ ಹರಿಸಲಿಲ್ಲ. ಮಹಿಳೆಯರು ಮತ್ತು ಯುವತಿಯರಿಗೆ ದೆಹಲಿ ಅತ್ಯಂತ ಅಸುರಕ್ಷಿತವಾಗಿದೆ” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...