Homeಮುಖಪುಟಗೆಳೆಯನಿಂದ ಬಾಲಕಿಯ ಕೊಲೆ; ಘಟನೆ ಕಣ್ಮುಂದೆ ನಡೆದರೂ ನಿಲ್ಲಿಸದ ಜನತೆ

ಗೆಳೆಯನಿಂದ ಬಾಲಕಿಯ ಕೊಲೆ; ಘಟನೆ ಕಣ್ಮುಂದೆ ನಡೆದರೂ ನಿಲ್ಲಿಸದ ಜನತೆ

- Advertisement -
- Advertisement -

ಒಬ್ಬ ಬಾಲಕಿಗೆ ಅನೇಕ ಬಾರಿ ಇರಿದು, ಕಲ್ಲಿನ ಚಪ್ಪಡಿಯಿಂದ ಹೊಡೆದು ಕೊಲ್ಲುತ್ತಿದ್ದರೂ ಸುತ್ತಲಿದ್ದ ಜನರು ಏನನ್ನೂ ಮಾಡದೆ ನೋಡುತ್ತಾ ನಿಂತಿದ್ದ ಘಟನೆ ಕ್ಯಾಮೆರಾದಲ್ಲಿ ವರದಿಯಾಗಿದೆ.

ಉತ್ತರ ದೆಹಲಿಯ ರೋಹಿಣಿಯಲ್ಲಿ ಇದು ವರದಿಯಾಗಿದೆ. “ಜನರು ಅಲ್ಲಿಯೇ ಹಾದು ಹೋಗುತ್ತಾರೆ, ಅದನ್ನು ನೋಡುತ್ತಿದ್ದರೂ ಘಟನೆಯನ್ನು ನಿಲ್ಲಿಸಲು ಯಾವುದೇ ಕ್ರಮ ಜರುಗಿಸಲಿಲ್ಲ” ಎಂದು ಎನ್‌ಡಿಟಿವಿ ವರದಿ ಮಾಡಿದೆ.

16 ವರ್ಷದ ಬಾಲಕಿ ನಡೆದು ಹೋಗುತ್ತಿದ್ದಾಗ ದಾಳಿಯಾಯಿತು. ಇದು ಉತ್ತರ ದೆಹಲಿಯ ರೋಹಿಣಿಯಲ್ಲಿ ಭದ್ರತಾ ಕ್ಯಾಮರಾದಲ್ಲಿ ಸೆರೆಯಾಗಿದೆ. ದೃಶ್ಯಗಳು ಅಸ್ಪಷ್ಟವಾಗಿಯೂ, ಗೊಂದಲಕಾರಿಯಾಗಿಯೂ ಗೋಚರಿಸಿವೆ.

ಜನನಿಬಿಡ ಪ್ರದೇಶದಲ್ಲಿಯೇ ಆಕೆಯ ಗೆಳೆಯ ಸಾಹಿಲ್‌ ಕೊಂದಿದ್ದಾನೆ. ಆದರೆ ಯಾರೂ ಆಕೆಯನ್ನು ಉಳಿಸಲು ಸಾಧ್ಯವಾಗಲಿಲ್ಲ. ಇಂದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಹಿಂದಿನ ದಿನ ಸಂಜೆ ಇಬ್ಬರೂ ಜಗಳವಾಡಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಭಾನುವಾರ ಸಂಜೆ ಸಾಹಿಲ್‌, ಬಾಲಕಿಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಪದೇ ಪದೇ ಇರಿದಿದ್ದಾನೆ. ಒಂದು ಹಂತದಲ್ಲಿ, ಚಾಕು ಸಿಕ್ಕಿಹಾಕಿಕೊಂಡಾಗ ಕೊಲೆಗಾರ ಅದನ್ನು ಮತ್ತೆ ತೆಗೆದು ಚುಚ್ಚಿದ್ದಾನೆ. ನಂತರ ಆತ ಕಲ್ಲಿನ ಚಪ್ಪಡಿ ಎತ್ತಿಕೊಂಡು ಹೋಗಿ ಆಕೆಗೆ ಪದೇ ಪದೇ ಹೊಡೆದಿರುವುದು ವಿಡಿಯೊದಲ್ಲಿ ಸೆರೆಯಾಗಿದೆ.

ಸಂತ್ರಸ್ತ ಬಾಲಕಿ ತನ್ನ ಸ್ನೇಹಿತನ ಮಗನ ಹುಟ್ಟುಹಬ್ಬಕ್ಕೆ ತೆರಳುತ್ತಿದ್ದಾಗ ಹಿಂದಿನಿಂದ ಬಂದು ಕೃತ್ಯ ಎಸಗಲಾಗಿದೆ.

“ಬಾಲಕಿ ಮತ್ತು ಆರೋಪಿ ಇಬ್ಬರೂ ರಿಲೇಷನ್‌ ಶಿಪ್‌ನಲ್ಲಿ ಇದ್ದರು. ಆದರೆ ನಿನ್ನೆ ಇಬ್ಬರೂ ಜಗಳವಾಡಿದ್ದರು. ಇಬ್ಬರೂ ತನ್ನ ಸ್ನೇಹಿತನ ಮಗನ ಹುಟ್ಟುಹಬ್ಬಕ್ಕೆ ಹಾಜರಾಗಲು ಯೋಜಿಸಿದ್ದರು. ಆ ವ್ಯಕ್ತಿ ಆಕೆಯನ್ನು ಹಿಂಬಾಲಿಸಿ ಕೃತ್ಯ ಎಸಗಿದ್ದಾನೆ” ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿರಿ: ಕುಸ್ತಿಪಟುಗಳಿಗೆ ಸವಾಲಾಗಿರುವ ‘ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌’ ಯಾರು? ಆತನ ಹಿನ್ನಲೆ, ಪ್ರಭಾವವೇನು?

ಸ್ಥಳೀಯರಿಂದ ಮಾಹಿತಿ ಪಡೆದು ಎಚ್ಚೆತ್ತ ಪೊಲೀಸರು ಸ್ಥಳಕ್ಕೆ ಆಗಮಿಸಿ ಬಾಲಕಿಯ ಶವ ಹಾಗೂ ಸುತ್ತ ರಕ್ತ ಮಡುಗಟ್ಟಿರುವುದನ್ನು ಪತ್ತೆ ಹಚ್ಚಿದ್ದಾರೆ. ಪೊಲೀಸ್ ತಂಡಗಳು ಇನ್ನುಳಿದ ಹಂತಕರಿಗಾಗಿ ಶೋಧ ನಡೆಸುತ್ತಿವೆ.

ಘಟನೆಯ ಕುರಿತು ಪೊಲೀಸರಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ದೆಹಲಿ ಮಹಿಳಾ ಸಮಿತಿ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಹೇಳಿದ್ದಾರೆ.

“ಅಪರಾಧವನ್ನು ಸಿಸಿಟಿವಿಯಲ್ಲಿ ಸೆರೆಹಿಡಿಯಲಾಗಿದೆ. ಹಲವಾರು ಜನರು ಇದನ್ನು ನೋಡಿದ್ದಾರೆ, ಆದರೆ ಗಮನ ಹರಿಸಲಿಲ್ಲ. ಮಹಿಳೆಯರು ಮತ್ತು ಯುವತಿಯರಿಗೆ ದೆಹಲಿ ಅತ್ಯಂತ ಅಸುರಕ್ಷಿತವಾಗಿದೆ” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...