Homeಕರ್ನಾಟಕತಂದೆಯ ಹತ್ಯೆ ನಂತರ ಬಂಧನಕ್ಕೊಳಗಾಗಿದ್ದ ಯುವತಿ ಜಾಮೀನಿನ ಮೇಲೆ ಬಿಡುಗಡೆ

ತಂದೆಯ ಹತ್ಯೆ ನಂತರ ಬಂಧನಕ್ಕೊಳಗಾಗಿದ್ದ ಯುವತಿ ಜಾಮೀನಿನ ಮೇಲೆ ಬಿಡುಗಡೆ

ಆಕೆಯ ವಿರುದ್ಧದ ಪ್ರಕರಣಕ್ಕೆ ಸೆಕ್ಷನ್ 100 (ಆತ್ಮರಕ್ಷಣೆ) ಸೇರಿಸಬಹುದೇ ಎಂದು ಪೊಲೀಸರು ಇನ್ನೂ ಯೋಚಿಸುತ್ತಿದ್ದಾರೆ ಎನ್ನಲಾಗಿದೆ.

- Advertisement -
- Advertisement -

ತನ್ನ ತಂದೆಯೊಂದಿಗೆ ಜಗಳವಾಡಿ ಕತ್ತರಿ ಚುಚ್ಚಿದ ನಂತರ ಬಂಧನಕ್ಕೊಳಗಾಗಿದ್ದ 15 ವರ್ಷದ ಬೆಂಗಳೂರು ಬಾಲಕಿಯನ್ನು ಒಂದು ವಾರದ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಆಕೆಯನ್ನು ಬಾಲಾಪರಾಧಿ ಜೈಲಿನಲ್ಲಿ ಇರಿಸಿದ್ದು, ಗುರುವಾರ ಬಾಲಾಪರಾಧಿ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಯಿತು. ಆ ಸಮಯದಲ್ಲಿ ಆಕೆಗೆ ಜಾಮೀನು ನೀಡಲಾಯಿತು.

ಜುಲೈ 23, ಗುರುವಾರ ಬಾಲಕಿಯನ್ನು ವಶಕ್ಕೆ ಪಡೆಯಲಾಯಿತು. ಆಕೆ, ತಂದೆಯ ಮೇಲೆ ಗಲಾಟೆಯ ಸಮಯದಲ್ಲಿ ಕತ್ತರಿಗಳಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಳು. ನಂತರ ಆಕೆಯ ತಂದೆ ಸಾವನ್ನಪ್ಪಿದ್ದರು.

ಐಪಿಸಿಯ ಸೆಕ್ಷನ್ 304 ರ ಅಡಿಯಲ್ಲಿ ಆಕೆಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಇದು ಕೊಲೆಯ ಉದ್ದೇಶವಲ್ಲದ ನರಹತ್ಯೆಯಾಗಿದೆ ಎನ್ನಲಾಗಿದೆ.

ಜನವರಿಯಲ್ಲಿ ಈ ಹಿಂದೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಪ್ರಕಾರ, ಬಾಲಾಪರಾಧಿಗಳು ಕನಿಷ್ಠ ಏಳು ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸುವ ಅಪರಾಧದ ಆರೋಪಗಳನ್ನು ಹೊತ್ತಿದ್ದರೆ, ಅದನ್ನು ‘ಘೋರ ಅಥವಾ ಗಂಭೀರ’ ಎಂದು ಪರಿಗಣಿಸಲಾಗುತ್ತದೆ.

ಐಪಿಸಿ  ಸೆಕ್ಷನ್ 304 ರ ಪ್ರಕಾರ ಗರಿಷ್ಠ 10 ವರ್ಷ ಶಿಕ್ಷೆ ವಿಧಿಸಲಾಗಿದ್ದರೂ, ಅದು ಕನಿಷ್ಠ ಶಿಕ್ಷೆಯನ್ನು ಸೂಚಿಸುವುದಿಲ್ಲ, ಆದ್ದರಿಂದ ಬಾಲಕಿ ಜಾಮೀನು ಪಡೆಯಲು ಅರ್ಹಳಾಗಿದ್ದಳು.

ಬಾಲಕಿ ಪ್ರಸ್ತುತ ತನ್ನ ಕುಟುಂಬಕ್ಕೆ ಮರಳಿದ್ದಾಳೆ. ಆಕೆಯ ಅಜ್ಜಿ ಮತ್ತು ಚಿಕ್ಕಪ್ಪ ಅವರೊಂದಿಗೆ ಇರಲು ಬೆಂಗಳೂರಿನಲ್ಲಿದ್ದಾಳೆ. ಈ ನಡುವೆ ಆಕೆಯ ವಿರುದ್ಧದ ಪ್ರಕರಣಕ್ಕೆ ಸೆಕ್ಷನ್ 100 (ಆತ್ಮರಕ್ಷಣೆ) ಸೇರಿಸಬಹುದೇ ಎಂದು ಪೊಲೀಸರು ಇನ್ನೂ ಯೋಚಿಸುತ್ತಿದ್ದಾರೆ ಎನ್ನಲಾಗಿದೆ.

ಘಟನೆಯ ವಿವರ

ಜುಲೈ 22 ರಂದು ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಕುಟುಂಬವು ಈ ಹಿಂದೆ ತಿಳಿಸಿತ್ತು. ಬಾಲಕಿಯು ಪ್ರತಿನಿತ್ಯ ಅತಿಯಾಗಿ ಕುಡಿಯುತ್ತಿದ್ದ ತನ್ನ ತಂದೆಗೆ ಬುದ್ಧಿ ಹೇಳಲು ಪ್ರಯತ್ನಿಸಿದ್ದಳು. ತನ್ನ ಅಧ್ಯಯನಕ್ಕೆ ತೊಂದರೆಯಾಗುವಂತೆ ಜೋರಾಗಿ ಪಿಯಾನೋ ನುಡಿಸಬಾರದೆಂದು ಹೇಳಿದ್ದಳು ಎನ್ನಲಾಗಿದೆ.

ಇದರಿಂದ ಕೋಪಗೊಂಡು ಆಕೆಯ ತಂದೆ ಯುವತಿಯನ್ನು ಹೊಡೆದು ಆಕ್ರಮಣ ಮಾಡಲು ಪ್ರಯತ್ನಿಸಿದನು. ನಂತರ ತೀಕ್ಷ್ಣವಾದ ವಸ್ತುವನ್ನು ಎತ್ತಿಕೊಂಡನು. ತನ್ನನ್ನು ರಕ್ಷಿಸಿಕೊಳ್ಳಲು ಹುಡುಗಿ ಕೈಗೆ ಸಿಕ್ಕ ಕತ್ತರಿಗಳನ್ನು ತೆಗೆದುಕೊಂಡು ಚುಚ್ಚಿದ್ದಾಳೆ ಎಂದು ಕುಟುಂಬ ಹೇಳಿದೆ.

ಮತ್ತೊಂದು ಕೋಣೆಯಲ್ಲಿದ್ದ ಹುಡುಗಿಯ ಕಿರಿಯ ಸಹೋದರ ನೆರೆಹೊರೆಯವರನ್ನು ಕರೆತರಲು ಓಡಿಹೋದನು. ನಂತರ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ತಂದೆ ಕುಡಿಯುತ್ತಿದ್ದರು, ಆಗಾಗ್ಗೆ ಹಿಂಸೆ ನಿಡುತ್ತಿದ್ದರು. ಕೆಲವು ವರ್ಷಗಳ ಹಿಂದೆ ನಮ್ಮ ತಾಯಿಯ ಮರಣದ ನಂತರ ಹೀಗೆ ಮಾಡುತ್ತಿದ್ದರು ಎಂದು ಕುಟುಂಬವು ತಿಳಿಸಿದೆ.

“ಅವನು ತುಂಬಾ ಓದಿದ್ದ ಮತ್ತು ಬುದ್ಧಿವಂತ. ಐಟಿ ಮೇಜರ್‌ನಲ್ಲಿ 12 ವರ್ಷಗಳ ಕಾಲ ಕೆಲಸ ಮಾಡಿದ ನಂತರ ಕೆಲಸ ಬಿಟ್ಟಿದ್ದ. 2011 ರ ಸುಮಾರಿಗೆ ಅವರ ಪತ್ನಿ ಎರಡನೇ ಮಗುವಿಗೆ ಜನ್ಮ ನಿಡಿದ್ದಳು. ಮಗುವಿಗೆ ಹತ್ತು ದಿನಗಳಿದ್ದಾಗ, ತಾಯಿ ತೀರಿಕೊಂಡಳು. ಇದು ಆತನ ಜೀವನದಲ್ಲಿ ಮಹತ್ವದ ತಿರುವು ಎಂದು ಸಂಬಂಧಿಯೊಬ್ಬರು ಹೇಳಿದ್ದಾರೆ.

ನೆರೆಹೊರೆಯವರು ತಮ್ಮ ಹೇಳಿಕೆಯಲ್ಲಿ ಇಬ್ಬರು ಮಕ್ಕಳು ಸಾಕಷ್ಟು ಕಷ್ಟಗಳನ್ನು ಅನುಭವಿಸಿದ್ದಾರೆ. ಹಾಗಾಗಿ ಸಹಾನುಭೂತಿಯ ದೃಷ್ಟಿಕೋನದಿಂದ ಕ್ರಮ ತೆಗೆದುಕೊಳ್ಳಬೇಕು ಎಂದು ಉಲ್ಲೇಖಿಸಿದ್ದಾರೆ.


ಇದನ್ನೂ ಓದಿ: ವಾಡಿಕೆಯ ಆರೋಗ್ಯ ಪರೀಕ್ಷೆಗಾಗಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...