Homeಕರ್ನಾಟಕತಂದೆಯ ಹತ್ಯೆ ನಂತರ ಬಂಧನಕ್ಕೊಳಗಾಗಿದ್ದ ಯುವತಿ ಜಾಮೀನಿನ ಮೇಲೆ ಬಿಡುಗಡೆ

ತಂದೆಯ ಹತ್ಯೆ ನಂತರ ಬಂಧನಕ್ಕೊಳಗಾಗಿದ್ದ ಯುವತಿ ಜಾಮೀನಿನ ಮೇಲೆ ಬಿಡುಗಡೆ

ಆಕೆಯ ವಿರುದ್ಧದ ಪ್ರಕರಣಕ್ಕೆ ಸೆಕ್ಷನ್ 100 (ಆತ್ಮರಕ್ಷಣೆ) ಸೇರಿಸಬಹುದೇ ಎಂದು ಪೊಲೀಸರು ಇನ್ನೂ ಯೋಚಿಸುತ್ತಿದ್ದಾರೆ ಎನ್ನಲಾಗಿದೆ.

- Advertisement -
- Advertisement -

ತನ್ನ ತಂದೆಯೊಂದಿಗೆ ಜಗಳವಾಡಿ ಕತ್ತರಿ ಚುಚ್ಚಿದ ನಂತರ ಬಂಧನಕ್ಕೊಳಗಾಗಿದ್ದ 15 ವರ್ಷದ ಬೆಂಗಳೂರು ಬಾಲಕಿಯನ್ನು ಒಂದು ವಾರದ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಆಕೆಯನ್ನು ಬಾಲಾಪರಾಧಿ ಜೈಲಿನಲ್ಲಿ ಇರಿಸಿದ್ದು, ಗುರುವಾರ ಬಾಲಾಪರಾಧಿ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಯಿತು. ಆ ಸಮಯದಲ್ಲಿ ಆಕೆಗೆ ಜಾಮೀನು ನೀಡಲಾಯಿತು.

ಜುಲೈ 23, ಗುರುವಾರ ಬಾಲಕಿಯನ್ನು ವಶಕ್ಕೆ ಪಡೆಯಲಾಯಿತು. ಆಕೆ, ತಂದೆಯ ಮೇಲೆ ಗಲಾಟೆಯ ಸಮಯದಲ್ಲಿ ಕತ್ತರಿಗಳಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಳು. ನಂತರ ಆಕೆಯ ತಂದೆ ಸಾವನ್ನಪ್ಪಿದ್ದರು.

ಐಪಿಸಿಯ ಸೆಕ್ಷನ್ 304 ರ ಅಡಿಯಲ್ಲಿ ಆಕೆಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಇದು ಕೊಲೆಯ ಉದ್ದೇಶವಲ್ಲದ ನರಹತ್ಯೆಯಾಗಿದೆ ಎನ್ನಲಾಗಿದೆ.

ಜನವರಿಯಲ್ಲಿ ಈ ಹಿಂದೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಪ್ರಕಾರ, ಬಾಲಾಪರಾಧಿಗಳು ಕನಿಷ್ಠ ಏಳು ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸುವ ಅಪರಾಧದ ಆರೋಪಗಳನ್ನು ಹೊತ್ತಿದ್ದರೆ, ಅದನ್ನು ‘ಘೋರ ಅಥವಾ ಗಂಭೀರ’ ಎಂದು ಪರಿಗಣಿಸಲಾಗುತ್ತದೆ.

ಐಪಿಸಿ  ಸೆಕ್ಷನ್ 304 ರ ಪ್ರಕಾರ ಗರಿಷ್ಠ 10 ವರ್ಷ ಶಿಕ್ಷೆ ವಿಧಿಸಲಾಗಿದ್ದರೂ, ಅದು ಕನಿಷ್ಠ ಶಿಕ್ಷೆಯನ್ನು ಸೂಚಿಸುವುದಿಲ್ಲ, ಆದ್ದರಿಂದ ಬಾಲಕಿ ಜಾಮೀನು ಪಡೆಯಲು ಅರ್ಹಳಾಗಿದ್ದಳು.

ಬಾಲಕಿ ಪ್ರಸ್ತುತ ತನ್ನ ಕುಟುಂಬಕ್ಕೆ ಮರಳಿದ್ದಾಳೆ. ಆಕೆಯ ಅಜ್ಜಿ ಮತ್ತು ಚಿಕ್ಕಪ್ಪ ಅವರೊಂದಿಗೆ ಇರಲು ಬೆಂಗಳೂರಿನಲ್ಲಿದ್ದಾಳೆ. ಈ ನಡುವೆ ಆಕೆಯ ವಿರುದ್ಧದ ಪ್ರಕರಣಕ್ಕೆ ಸೆಕ್ಷನ್ 100 (ಆತ್ಮರಕ್ಷಣೆ) ಸೇರಿಸಬಹುದೇ ಎಂದು ಪೊಲೀಸರು ಇನ್ನೂ ಯೋಚಿಸುತ್ತಿದ್ದಾರೆ ಎನ್ನಲಾಗಿದೆ.

ಘಟನೆಯ ವಿವರ

ಜುಲೈ 22 ರಂದು ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಕುಟುಂಬವು ಈ ಹಿಂದೆ ತಿಳಿಸಿತ್ತು. ಬಾಲಕಿಯು ಪ್ರತಿನಿತ್ಯ ಅತಿಯಾಗಿ ಕುಡಿಯುತ್ತಿದ್ದ ತನ್ನ ತಂದೆಗೆ ಬುದ್ಧಿ ಹೇಳಲು ಪ್ರಯತ್ನಿಸಿದ್ದಳು. ತನ್ನ ಅಧ್ಯಯನಕ್ಕೆ ತೊಂದರೆಯಾಗುವಂತೆ ಜೋರಾಗಿ ಪಿಯಾನೋ ನುಡಿಸಬಾರದೆಂದು ಹೇಳಿದ್ದಳು ಎನ್ನಲಾಗಿದೆ.

ಇದರಿಂದ ಕೋಪಗೊಂಡು ಆಕೆಯ ತಂದೆ ಯುವತಿಯನ್ನು ಹೊಡೆದು ಆಕ್ರಮಣ ಮಾಡಲು ಪ್ರಯತ್ನಿಸಿದನು. ನಂತರ ತೀಕ್ಷ್ಣವಾದ ವಸ್ತುವನ್ನು ಎತ್ತಿಕೊಂಡನು. ತನ್ನನ್ನು ರಕ್ಷಿಸಿಕೊಳ್ಳಲು ಹುಡುಗಿ ಕೈಗೆ ಸಿಕ್ಕ ಕತ್ತರಿಗಳನ್ನು ತೆಗೆದುಕೊಂಡು ಚುಚ್ಚಿದ್ದಾಳೆ ಎಂದು ಕುಟುಂಬ ಹೇಳಿದೆ.

ಮತ್ತೊಂದು ಕೋಣೆಯಲ್ಲಿದ್ದ ಹುಡುಗಿಯ ಕಿರಿಯ ಸಹೋದರ ನೆರೆಹೊರೆಯವರನ್ನು ಕರೆತರಲು ಓಡಿಹೋದನು. ನಂತರ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ತಂದೆ ಕುಡಿಯುತ್ತಿದ್ದರು, ಆಗಾಗ್ಗೆ ಹಿಂಸೆ ನಿಡುತ್ತಿದ್ದರು. ಕೆಲವು ವರ್ಷಗಳ ಹಿಂದೆ ನಮ್ಮ ತಾಯಿಯ ಮರಣದ ನಂತರ ಹೀಗೆ ಮಾಡುತ್ತಿದ್ದರು ಎಂದು ಕುಟುಂಬವು ತಿಳಿಸಿದೆ.

“ಅವನು ತುಂಬಾ ಓದಿದ್ದ ಮತ್ತು ಬುದ್ಧಿವಂತ. ಐಟಿ ಮೇಜರ್‌ನಲ್ಲಿ 12 ವರ್ಷಗಳ ಕಾಲ ಕೆಲಸ ಮಾಡಿದ ನಂತರ ಕೆಲಸ ಬಿಟ್ಟಿದ್ದ. 2011 ರ ಸುಮಾರಿಗೆ ಅವರ ಪತ್ನಿ ಎರಡನೇ ಮಗುವಿಗೆ ಜನ್ಮ ನಿಡಿದ್ದಳು. ಮಗುವಿಗೆ ಹತ್ತು ದಿನಗಳಿದ್ದಾಗ, ತಾಯಿ ತೀರಿಕೊಂಡಳು. ಇದು ಆತನ ಜೀವನದಲ್ಲಿ ಮಹತ್ವದ ತಿರುವು ಎಂದು ಸಂಬಂಧಿಯೊಬ್ಬರು ಹೇಳಿದ್ದಾರೆ.

ನೆರೆಹೊರೆಯವರು ತಮ್ಮ ಹೇಳಿಕೆಯಲ್ಲಿ ಇಬ್ಬರು ಮಕ್ಕಳು ಸಾಕಷ್ಟು ಕಷ್ಟಗಳನ್ನು ಅನುಭವಿಸಿದ್ದಾರೆ. ಹಾಗಾಗಿ ಸಹಾನುಭೂತಿಯ ದೃಷ್ಟಿಕೋನದಿಂದ ಕ್ರಮ ತೆಗೆದುಕೊಳ್ಳಬೇಕು ಎಂದು ಉಲ್ಲೇಖಿಸಿದ್ದಾರೆ.


ಇದನ್ನೂ ಓದಿ: ವಾಡಿಕೆಯ ಆರೋಗ್ಯ ಪರೀಕ್ಷೆಗಾಗಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಾಗ್ಪುರದ ಸ್ಫೋಟಕ ಕಾರ್ಖಾನೆಯಲ್ಲಿ ಸ್ಫೋಟ, 17ಸಾವು, 18 ಜನರಿಗೆ ಗಂಭೀರ ಗಾಯ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಭಾರಿ ಸ್ಫೋಟದಲ್ಲಿ ಕನಿಷ್ಠ 17 ಜನರು ಸಾವನ್ನಪ್ಪಿದ್ದು, 18 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ (ನಾಗ್ಪುರ...

ಮಧ್ಯಪ್ರಾಚ್ಯ ಉದ್ವಿಗ್ನತೆ: ಯುದ್ಧ ಪೀಡಿತ ಸ್ಥಳಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಸ್ಥಳಾಂತರಿಸಲು ತುರ್ತು ಕ್ರಮಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಹೆಚ್ಚುತ್ತಿರುವ ಮಧ್ಯೆ, ಇಸ್ರೇಲ್, ಯುಎಇ, ಇರಾನ್ ಮತ್ತು ಕತಾರ್ ಸೇರಿದಂತೆ ಪೀಡಿತ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ವಾಸಿಸುವ ಕನ್ನಡಿಗರ ಸುರಕ್ಷತೆ ಮತ್ತು ಸ್ಥಳಾಂತರಿಸುವಿಕೆಗೆ ಆದ್ಯತೆ ನೀಡುವಂತೆ ಮುಖ್ಯಮಂತ್ರಿ...

ಅಮೆರಿಕ-ಇಸ್ರೇಲ್-ಇರಾನ್ ಉದ್ವಿಗ್ನತೆ: ಖಮೇನಿ ಹತ್ಯೆಯ ನಂತರ ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಭುಗಿಲೆದ್ದ ಪ್ರತಿಭಟನೆಗಳು

ಶ್ರೀನಗರ: ಅಮೆರಿಕ-ಇಸ್ರೇಲ್ ಬಾಂಬ್ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿದ ನಂತರ ಶ್ರೀನಗರ ನಗರದ ಕೆಲವು ಭಾಗಗಳಲ್ಲಿ ಭಾನುವಾರ ಸ್ವಯಂಪ್ರೇರಿತ ಪ್ರತಿಭಟನೆಗಳು ನಡೆದವು. ಜಮ್ಮು ಮತ್ತು ಕಾಶ್ಮೀರದ...

ದೇವನಹಳ್ಳಿ | ವಿದ್ಯಾರ್ಥಿನಿ ಮೇಲೆ ಅತ್ಯಾಚಾರ : ಖಾಸಗಿ ವಸತಿ ಶಾಲೆಯ ಮಾಲೀಕ, ಪ್ರಾಂಶುಪಾಲೆಯ ಬಂಧನ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ಖಾಸಗಿ ವಸತಿ ಶಾಲೆಯಲ್ಲಿ ಒಬ್ಬಳು ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ, ಮತ್ತೊಬ್ಬಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಲೆಯ ಮಾಲೀಕ ಹಾಗೂ ಪ್ರಾಂಶುಪಾಲೆಯಾಗಿರುವ ಆತನ...

‘ನಾಗರಿಕರ ಹತ್ಯೆ, ಹೊಸ ಯುದ್ದವನ್ನು ಅಮೆರಿಕ ಜನತೆ ಬಯಸುವುದಿಲ್ಲ’ : ಇರಾನ್‌ ಮೇಲಿನ ದಾಳಿಯನ್ನು ಖಂಡಿಸಿದ ನ್ಯೂಯಾರ್ಕ್ ಮೇಯರ್‌ ಝೊಹ್ರಾನ್ ಮಮ್ದಾನಿ

ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲಿ ಮಿಲಿಟರಿ ನಡೆಸಿದ ದಾಳಿಗಳನ್ನು ನ್ಯೂಯಾರ್ಕ್ ನಗರದ ಮೇಯರ್ ಝೊಹ್ರಾನ್ ಮಮ್ದಾನಿ ಖಂಡಿಸಿದ್ದು, "ಅಕ್ರಮ ಆಕ್ರಮಣಕಾರಿ ಯುದ್ಧದಲ್ಲಿ ದುರಂತದ ಉಲ್ಬಣ" ಎಂದು ಹೇಳಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಇರಾನ್‌ನ ಶಾಲೆಗಳ ಮೇಲೆ ಇಸ್ರೇಲ್ ದಾಳಿ : ಮಕ್ಕಳು ಸೇರಿ 100ಕ್ಕೂ ಹೆಚ್ಚು ಜನರು ಸಾವು

ದಕ್ಷಿಣ ಇರಾನ್‌ನ ಹಾರ್ಮೋಜ್ಗನ್ ಪ್ರಾಂತ್ಯದ ಮಿನಾಬ್ ನಗರದ ಪ್ರಾಥಮಿಕ ಬಾಲಕಿಯರ ಶಾಲೆಯ ಮೇಲೆ ಶನಿವಾರ (ಫೆ.28) ಇಸ್ರೇಲ್ ನಡೆಸಿದ ದಾಳಿಯಲ್ಲಿ 108 ಜನರು ಸಾವನ್ನಪ್ಪಿದ್ದಾರೆ ಎಂದು ಅಲ್‌-ಜಝೀರಾ ವರದಿ ಮಾಡಿದೆ. ಮಿನಾಬ್‌ನಲ್ಲಿರುವ ಶಜರೆಹ್...

ಅಮೆರಿಕ- ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಪರಮೋಚ್ಚ ನಾಯಕ ಆಯತುಲ್ಲಾ ಅಲಿ ಖಮೇನಿ ಸಾವು : ದೃಢಪಡಿಸಿದ ಇರಾನ್

ಇಸ್ರೇಲ್- ಅಮೆರಿಕ ಶನಿವಾರ (ಫೆ.28) ಇರಾನ್‌ ಮೇಲೆ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಇರಾನ್‌ನ ಪರಮೋಚ್ಚ ನಾಯಕ ಆಯಾತುಲ್ಲಾ ಅಲಿ ಖಮೇನಿ ಸಾವಿಗೀಡಾಗಿದ್ದಾರೆ ಎಂದು ಇರಾನ್ ಸರ್ಕಾರಿ ಮಾಧ್ಯಮ ದೃಢಪಡಿಸಿರುವುದಾಗಿ Al Jazeera...

ಅಮೆರಿಕ, ಇಸ್ರೇಲ್, ಇರಾನ್ ದಾಳಿ-ಪ್ರತಿ ದಾಳಿ : ಈವರೆಗೆ ಕನಿಷ್ಠ 8 ಸಾವು

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿ ಹಾಗೂ ಅದಕ್ಕೆ ಪ್ರತಿಯಾಗಿ ಇರಾನ್ ನಡೆಸಿದ ಪ್ರತಿ-ದಾಳಿಗಳಲ್ಲಿ ಹಲವು ಸಾವು-ನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿದೆ. ದಕ್ಷಿಣ ಇರಾನ್‌ನ ಮಿನಾಬ್‌ನಲ್ಲಿರುವ ಹೆಣ್ಣು...

ಮಧ್ಯಪ್ರಾಚ್ಯ ಉದ್ವಿಗ್ನ : ಯುಎಇ, ಬಹ್ರೇನ್‌, ಕತಾರ್, ಕುವೈತ್‌ನ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ಪ್ರತಿ ದಾಳಿ!

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಜಂಟಿ ದಾಳಿಗೆ ಪ್ರತಿಯಾಗಿ, ಇರಾನ್ ಅಮೆರಿಕದ ಮಿಲಿಟರಿ ನೆಲೆಗಳಿರುವ ಹಲವು ಅರಬ್ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಇರಾನ್ ಉಡಾಯಿಸಿದ ಬ್ಯಾಲಿಸ್ಟಿಕ್...

ರಾಜ್ಯಸಭೆಗೆ ಮೇನಕಾ ಗುರುಸ್ವಾಮಿ : ದೇಶದ ಮೊದಲ LGBTQ+ ಸಂಸದೆಯಾಗಲು ಅಣಿಯಾದ ಹಿರಿಯ ವಕೀಲೆ

ರಾಜ್ಯಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶುಕ್ರವಾರ (ಫೆ.27) ವಕೀಲೆ ಮೇನಕಾ ಗುರುಸ್ವಾಮಿ, ಪಶ್ಚಿಮ ಬಂಗಾಳದ ಮಾಜಿ ಪೊಲೀಸ್ ಮುಖ್ಯಸ್ಥ ರಾಜೀವ್ ಕುಮಾರ್, ರಾಜ್ಯ ಸಂಪುಟ ಸಚಿವ ಬಾಬುಲ್ ಸುಪ್ರಿಯೋ ಮತ್ತು ನಟಿ...