Homeಕರ್ನಾಟಕತಂದೆಯ ಹತ್ಯೆ ನಂತರ ಬಂಧನಕ್ಕೊಳಗಾಗಿದ್ದ ಯುವತಿ ಜಾಮೀನಿನ ಮೇಲೆ ಬಿಡುಗಡೆ

ತಂದೆಯ ಹತ್ಯೆ ನಂತರ ಬಂಧನಕ್ಕೊಳಗಾಗಿದ್ದ ಯುವತಿ ಜಾಮೀನಿನ ಮೇಲೆ ಬಿಡುಗಡೆ

ಆಕೆಯ ವಿರುದ್ಧದ ಪ್ರಕರಣಕ್ಕೆ ಸೆಕ್ಷನ್ 100 (ಆತ್ಮರಕ್ಷಣೆ) ಸೇರಿಸಬಹುದೇ ಎಂದು ಪೊಲೀಸರು ಇನ್ನೂ ಯೋಚಿಸುತ್ತಿದ್ದಾರೆ ಎನ್ನಲಾಗಿದೆ.

- Advertisement -
- Advertisement -

ತನ್ನ ತಂದೆಯೊಂದಿಗೆ ಜಗಳವಾಡಿ ಕತ್ತರಿ ಚುಚ್ಚಿದ ನಂತರ ಬಂಧನಕ್ಕೊಳಗಾಗಿದ್ದ 15 ವರ್ಷದ ಬೆಂಗಳೂರು ಬಾಲಕಿಯನ್ನು ಒಂದು ವಾರದ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಆಕೆಯನ್ನು ಬಾಲಾಪರಾಧಿ ಜೈಲಿನಲ್ಲಿ ಇರಿಸಿದ್ದು, ಗುರುವಾರ ಬಾಲಾಪರಾಧಿ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಯಿತು. ಆ ಸಮಯದಲ್ಲಿ ಆಕೆಗೆ ಜಾಮೀನು ನೀಡಲಾಯಿತು.

ಜುಲೈ 23, ಗುರುವಾರ ಬಾಲಕಿಯನ್ನು ವಶಕ್ಕೆ ಪಡೆಯಲಾಯಿತು. ಆಕೆ, ತಂದೆಯ ಮೇಲೆ ಗಲಾಟೆಯ ಸಮಯದಲ್ಲಿ ಕತ್ತರಿಗಳಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಳು. ನಂತರ ಆಕೆಯ ತಂದೆ ಸಾವನ್ನಪ್ಪಿದ್ದರು.

ಐಪಿಸಿಯ ಸೆಕ್ಷನ್ 304 ರ ಅಡಿಯಲ್ಲಿ ಆಕೆಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಇದು ಕೊಲೆಯ ಉದ್ದೇಶವಲ್ಲದ ನರಹತ್ಯೆಯಾಗಿದೆ ಎನ್ನಲಾಗಿದೆ.

ಜನವರಿಯಲ್ಲಿ ಈ ಹಿಂದೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಪ್ರಕಾರ, ಬಾಲಾಪರಾಧಿಗಳು ಕನಿಷ್ಠ ಏಳು ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸುವ ಅಪರಾಧದ ಆರೋಪಗಳನ್ನು ಹೊತ್ತಿದ್ದರೆ, ಅದನ್ನು ‘ಘೋರ ಅಥವಾ ಗಂಭೀರ’ ಎಂದು ಪರಿಗಣಿಸಲಾಗುತ್ತದೆ.

ಐಪಿಸಿ  ಸೆಕ್ಷನ್ 304 ರ ಪ್ರಕಾರ ಗರಿಷ್ಠ 10 ವರ್ಷ ಶಿಕ್ಷೆ ವಿಧಿಸಲಾಗಿದ್ದರೂ, ಅದು ಕನಿಷ್ಠ ಶಿಕ್ಷೆಯನ್ನು ಸೂಚಿಸುವುದಿಲ್ಲ, ಆದ್ದರಿಂದ ಬಾಲಕಿ ಜಾಮೀನು ಪಡೆಯಲು ಅರ್ಹಳಾಗಿದ್ದಳು.

ಬಾಲಕಿ ಪ್ರಸ್ತುತ ತನ್ನ ಕುಟುಂಬಕ್ಕೆ ಮರಳಿದ್ದಾಳೆ. ಆಕೆಯ ಅಜ್ಜಿ ಮತ್ತು ಚಿಕ್ಕಪ್ಪ ಅವರೊಂದಿಗೆ ಇರಲು ಬೆಂಗಳೂರಿನಲ್ಲಿದ್ದಾಳೆ. ಈ ನಡುವೆ ಆಕೆಯ ವಿರುದ್ಧದ ಪ್ರಕರಣಕ್ಕೆ ಸೆಕ್ಷನ್ 100 (ಆತ್ಮರಕ್ಷಣೆ) ಸೇರಿಸಬಹುದೇ ಎಂದು ಪೊಲೀಸರು ಇನ್ನೂ ಯೋಚಿಸುತ್ತಿದ್ದಾರೆ ಎನ್ನಲಾಗಿದೆ.

ಘಟನೆಯ ವಿವರ

ಜುಲೈ 22 ರಂದು ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಕುಟುಂಬವು ಈ ಹಿಂದೆ ತಿಳಿಸಿತ್ತು. ಬಾಲಕಿಯು ಪ್ರತಿನಿತ್ಯ ಅತಿಯಾಗಿ ಕುಡಿಯುತ್ತಿದ್ದ ತನ್ನ ತಂದೆಗೆ ಬುದ್ಧಿ ಹೇಳಲು ಪ್ರಯತ್ನಿಸಿದ್ದಳು. ತನ್ನ ಅಧ್ಯಯನಕ್ಕೆ ತೊಂದರೆಯಾಗುವಂತೆ ಜೋರಾಗಿ ಪಿಯಾನೋ ನುಡಿಸಬಾರದೆಂದು ಹೇಳಿದ್ದಳು ಎನ್ನಲಾಗಿದೆ.

ಇದರಿಂದ ಕೋಪಗೊಂಡು ಆಕೆಯ ತಂದೆ ಯುವತಿಯನ್ನು ಹೊಡೆದು ಆಕ್ರಮಣ ಮಾಡಲು ಪ್ರಯತ್ನಿಸಿದನು. ನಂತರ ತೀಕ್ಷ್ಣವಾದ ವಸ್ತುವನ್ನು ಎತ್ತಿಕೊಂಡನು. ತನ್ನನ್ನು ರಕ್ಷಿಸಿಕೊಳ್ಳಲು ಹುಡುಗಿ ಕೈಗೆ ಸಿಕ್ಕ ಕತ್ತರಿಗಳನ್ನು ತೆಗೆದುಕೊಂಡು ಚುಚ್ಚಿದ್ದಾಳೆ ಎಂದು ಕುಟುಂಬ ಹೇಳಿದೆ.

ಮತ್ತೊಂದು ಕೋಣೆಯಲ್ಲಿದ್ದ ಹುಡುಗಿಯ ಕಿರಿಯ ಸಹೋದರ ನೆರೆಹೊರೆಯವರನ್ನು ಕರೆತರಲು ಓಡಿಹೋದನು. ನಂತರ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ತಂದೆ ಕುಡಿಯುತ್ತಿದ್ದರು, ಆಗಾಗ್ಗೆ ಹಿಂಸೆ ನಿಡುತ್ತಿದ್ದರು. ಕೆಲವು ವರ್ಷಗಳ ಹಿಂದೆ ನಮ್ಮ ತಾಯಿಯ ಮರಣದ ನಂತರ ಹೀಗೆ ಮಾಡುತ್ತಿದ್ದರು ಎಂದು ಕುಟುಂಬವು ತಿಳಿಸಿದೆ.

“ಅವನು ತುಂಬಾ ಓದಿದ್ದ ಮತ್ತು ಬುದ್ಧಿವಂತ. ಐಟಿ ಮೇಜರ್‌ನಲ್ಲಿ 12 ವರ್ಷಗಳ ಕಾಲ ಕೆಲಸ ಮಾಡಿದ ನಂತರ ಕೆಲಸ ಬಿಟ್ಟಿದ್ದ. 2011 ರ ಸುಮಾರಿಗೆ ಅವರ ಪತ್ನಿ ಎರಡನೇ ಮಗುವಿಗೆ ಜನ್ಮ ನಿಡಿದ್ದಳು. ಮಗುವಿಗೆ ಹತ್ತು ದಿನಗಳಿದ್ದಾಗ, ತಾಯಿ ತೀರಿಕೊಂಡಳು. ಇದು ಆತನ ಜೀವನದಲ್ಲಿ ಮಹತ್ವದ ತಿರುವು ಎಂದು ಸಂಬಂಧಿಯೊಬ್ಬರು ಹೇಳಿದ್ದಾರೆ.

ನೆರೆಹೊರೆಯವರು ತಮ್ಮ ಹೇಳಿಕೆಯಲ್ಲಿ ಇಬ್ಬರು ಮಕ್ಕಳು ಸಾಕಷ್ಟು ಕಷ್ಟಗಳನ್ನು ಅನುಭವಿಸಿದ್ದಾರೆ. ಹಾಗಾಗಿ ಸಹಾನುಭೂತಿಯ ದೃಷ್ಟಿಕೋನದಿಂದ ಕ್ರಮ ತೆಗೆದುಕೊಳ್ಳಬೇಕು ಎಂದು ಉಲ್ಲೇಖಿಸಿದ್ದಾರೆ.


ಇದನ್ನೂ ಓದಿ: ವಾಡಿಕೆಯ ಆರೋಗ್ಯ ಪರೀಕ್ಷೆಗಾಗಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...